Connect with us

    BIG BOSS

    BBK11: ಬಿಗ್​ ಬಾಸ್​ ಇತಿಹಾಸದಲ್ಲೇ ಇದೇ ಮೊದಲು ಮನೆಯೊಳಕ್ಕೆ ನುಗ್ಗಿ ಬಂದ ಜನರು! ಯಾಕೆ ಗೊತ್ತಾ?

    Published

    on

    ಬಿಗ್​ ಬಾಸ್​​ ಕನ್ನಡ ಸೀಸನ್​ 11 ಭಾರೀ ಕುತೂಹಲದಿಂದ ಸಾಗುತ್ತಿದೆ. ಸದ್ಯ ಮನೆಯಲ್ಲಿ ರಾಜಕೀಯ ಟಾಸ್ಕ್​ ನಡೆಯುತ್ತಿದೆ. ಈಗಾಗಲೇ ಮನೆಯಲ್ಲಿ ಎರಡು ಬಣಗಳಾಗಿದ್ದು, ಇತ್ತಂಡಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ನಡೆಸುತ್ತಿವೆ. ಹೀಗಿರುವಾಗ ಬಿಗ್​ ಬಾಸ್​​ ಟಾಸ್ಕ್​ನಲ್ಲಿ ಕೊಂಚ ಟ್ವಿಸ್ಟ್​ ಕೊಟ್ಟಿದ್ದಾರೆ. ಅದೇನೆಂದರೆ ಬಿಗ್​ ಬಾಸ್​ ಮನೆಗೆ ಜನಸಾಮಾನ್ಯರನ್ನು ಕರೆಸಲಾಗಿದೆ.

    ಹೌದು. ರಾಜಕೀಯ ಎಂದ ಮೇಲೆ ಜನರು ಇರಲೇಬೇಕು. ಜನರಿಂದಲೇ ಪ್ರತಿನಿಧಿಯೊಬ್ಬ ರಾಜಕಾರಣಿಯಾಗಿ ಆಯ್ಕೆಯಾಗುತ್ತಾನೆ. ಆದರೀಗ ಜನರನ್ನೇ ಮನೆಯೊಳಕ್ಕೆ ಕರೆಸಿಕೊಂಡಿರುವ ಬಿಗ್​ ಬಾಸ್​ ಸ್ಪರ್ಧಿಗಳಿಗೆ ದೊಡ್ಡ ಟಾಸ್ಕ್​ ನೀಡಿದ್ದಾರೆ. ಆ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ.

    ಬಿಗ್​​ ಬಾಸ್​ ಮನೆಯಲ್ಲಿ ಸ್ಪರ್ಧಿಗಳು ಈಗಾಗಲೇ ಎರಡು ಪಕ್ಷವನ್ನು ರಚಿಸಿದ್ದಾರೆ. ತೋಳ ಮತ್ತು ಹದ್ದು ಎಂಬ ಎರಡು ಪಕ್ಷ ರಚಿಸಿ ಪ್ರಚಾರ ಮಾಡುತ್ತಿದ್ದಾರೆ. ಆದರೀಗ ಜನ ಸಾಮಾನ್ಯರ ಮುಂದೆ ತಮ್ಮ ಪಕ್ಷವನ್ನು ಗೆಲ್ಲಿಸುವುದೇ ಪ್ರಮುಖ ಗುರಿಯಾಗಿದೆ.

    ತೋಳ ಪಕ್ಷವು ಧರ್ಮ ಪರ ಸೇನಾ ಪಕ್ಷ ಎಂಬ ಧ್ಯೇಯದೊಂದಿಗೆ ಪ್ರಚಾರ ಮಾಡಿದರೆ, ಇತ್ತ ಹದ್ದು ಪಕ್ಷವು ಪ್ರಮಾಣಿಕ ಸಮರ್ಥ ನ್ಯಾಯವಾದಿ ಪಕ್ಷ ಹೆಸರಿನಲ್ಲಿ ಪ್ರಚಾರ ಮಾಡುತ್ತಿದೆ.

    ಒಟ್ಟಿನಲ್ಲಿ ಮನೆಯೊಳಕ್ಕೆ ಕಾಲಿಟ್ಟ ಜನರ ಮನಗೆಲ್ಲುವುದೇ ರಾಜಕಾರಣಿಗಳ ಪ್ರಮುಖ ಗುರಿಯಾಗಿದೆ. ಜೊತೆಗೆ ಸ್ಪರ್ಧಿಗಳಿಗೆ ಜನಸಾಮಾನ್ಯರು ನಾನಾ ರೀತಿಯ ಪ್ರಶ್ನೆಯನ್ನು ಕೇಳುವ ಅವಕಾಶವನ್ನು ಕೊಡಲಾಗಿದೆ. ಇಂದಿನ ಎಪಿಸೋಡ್​ ಭಾರೀ ಕುತೂಹಲತೆಯಿಂದ ಕೂಡಿದ್ದು, ಜನಸಾಮಾನ್ಯರು ಮತ್ತು ಪಕ್ಷದ ಪ್ರತಿನಿಧಿಗಳ ಜೊತೆಗಿನ ಮಾತುಕತೆಯನ್ನು ಕಾಣಲು ವೀಕ್ಷಕರು ಕಾದು ಕುಳಿತ್ತಿದ್ದಾರೆ.

    BIG BOSS

    ಬಿಗ್ ಬಾಸ್ ಮನೆಯ ರಾಜಕೀಯ ವಿಚಾರಿಸಲು ನ್ಯೂಸ್ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

    Published

    on

    ಬೆಂಗಳೂರು: ಕಲರ್ಸ್ ಕನ್ನಡದಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಸೀಸನ್ 11 ಬರೀ ಗಲಾಟೆಯಲ್ಲಿ ಮುಂದುವರೆದಿದೆ. ಬಿಗ್ ಬಾಸ್ ನಲ್ಲಿ ಇತ್ತೀಚೆಗೆ ವೈಲ್ಡ್ ಕಾರ್ಡ್ ಎಂಟ್ರಿಯಲ್ಲಿ ಹನುಮಂತು ಅವರು ಆಗಮಿಸಿದ್ದರು. ಇದೀಗ ಮತ್ತೊಬ್ಬರು ಬಿಗ್ ಬಾಸ್ ಮನೆಗೆ ಬಂದಿದ್ದಾರೆ.

    ಬಿಗ್ ಬಾಸ್ ನಲ್ಲಿ ಈ ವಾರ ಸ್ಪರ್ಧಿಗಳಿಗೆ ರಾಜಕೀಯದ ಟಾಸ್ಕ್ ನೀಡಿದ್ದಾರೆ. ಅದರಂತೆ ಎರಡು ಪಕ್ಷಗಳನ್ನು ರಚಿಸಿ ಕೆಲವು ಟಾಸ್ಕ್ ನೀಡಿದ್ದಾರೆ. ಈ ನಡುವೆ ಬಿಗ್ ಬಾಸ್ ನಲ್ಲಿ ನಡೆಯುತ್ತಿರುವ ರಾಜಕೀಯ ವಿಚಾರಿಸಿಕೊಳ್ಳಲು ಬಿಗ್ ಬಾಸ್ ನ್ಯೂಸ್ ಆ್ಯಂಕರ್ ರಾಧಾ ಹಿರೇಗೌಡರ್ ಅವರನ್ನು ಬಿಗ್ ಬಾಸ್ ಮನೆಗೆ ಕಳುಹಿಸಿದೆ. ಬಿಗ್ ಬಾಸ್ ಮನೆಯ ರಾಜಕೀಯ ಆಟವನ್ನು ಪ್ರಶ್ನೆ ಮಾಡೋಕೆ ಬರ್ತಾ ಇದ್ದಾರೆ ರಾಧಾ ಹಿರೇಗೌಡರ್. ನೀವು ಬಂದಿದ್ದೀರಿ ಅಂದರೆ ನಮಗೆ ‌ನೀರು ಕುಡಿಸುತ್ತೀರಿ. ನೀವು ಸ್ಪರ್ಧಿಯಾಗಿ ಬಂದಿದ್ದೀರೋ ಹೇಗೋ ಅಂಥ ಚೈತ್ರಾ ರಾಧಾ ಅವರನ್ನು ಪ್ರಶ್ನಿಸಿದ್ದಾರೆ.

    ನನಗೆ ಪಕ್ಷ ಎಲ್ಲ ಹೊಸತಲ್ಲ. ಭಾಷಣ ರಾಜಕೀಯ. ಐಶ್ವರ್ಯಾ ಅವರೇ ಎದೆ ಮುಟ್ಟಿಕೊಂಡು ಹೇಳಿ ನಿಮ್ಮ ಪಕ್ಷದಲ್ಲಿ ಎಲ್ಲರೂ ಪ್ರಾಮಾಣಿಕರಾಗಿದ್ದಾರಾ? ಏನು ಕೊಡ್ತೀರಾ ಜನರಿಗೆ ಎಂದು ಪ್ರಶ್ನಿಸಿದ್ದಾರೆ‌. ಅದಕ್ಕೆ ತಿವಿಕ್ರಮ್ ಕಾಫಿ ಕೊಡುತ್ತೇವೆ ಅಂದಿದ್ದಾರೆ. ಐಶ್ವರ್ಯಾ ಅವರು ಮನರಂಜನೆ ಕೊಡುತ್ತೇವೆ ಅಂದಿದ್ದಾರೆ. ಅದಕ್ಕೆ ರಾಧಾ ಅವರು ಅದನ್ನು ನಿವೇನು ಕೊಡೋದು ಬಿಗ್ ಬಾಸ್ ಕೊಡುತ್ತಾರೆ. ನನ್ನನ್ನು ನಗಿಸುತ್ತೀರಾ ನಗಿಸಿ ಎಂದು ಮರು ಪ್ರಶ್ನಿಸಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ. ರಾಧಾ ಹಿರೇಗೌಡರ್ ಸ್ಪರ್ಧಿಯಾಗಿ ಬಂದಿದ್ದಾರೋ ಅಥವಾ ಗೆಸ್ಟ್ ಆಗಿ ಬಂದಿದ್ದಾರಾ ಎನ್ನುವುದನ್ನು ಕಾದು‌ ನೋಡಬೇಕಿದೆ.

    Continue Reading

    BIG BOSS

    ಕಲರ್ಸ್​ ಶೋಗೆ ಮರಳಿದ ಲಾಯರ್ ಜಗದೀಶ್; ಫ್ಯಾನ್ಸ್​ಗೆ ಗುಡ್ ನ್ಯೂಸ್

    Published

    on

    ಲಾಯರ್ ಜಗದೀಶ್ ಅವರು ಮಹಿಳೆಯರ ವಿರುದ್ಧ ನಿಂದನೀಯ ಶಬ್ದಗಳ ಬಳಕೆ ಮಾಡಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಈ ಕಾರಣದಿಂದಲೇ ಅವರನ್ನು ಬಿಗ್ ಬಾಸ್​ನಿಂದ ಎಲಿಮಿನೇಟ್ ಕೂಡ ಮಾಡಲಾಯಿತು. ಅವರನ್ನು ಮರಳಿ ಕರೆಸಬೇಕು ಎನ್ನುವ ಆಗ್ರಹ ಬಿಗ್ ಬಾಸ್​ನಲ್ಲಿ ಜೋರಾಗಿದೆ. ಹೀಗಿರುವಾಗಲೇ ಜಗದೀಶ್ ಅವರು ಕಲರ್ಸ್​ ಕನ್ನಡದ ಶೋಗೆ ಅತಿಥಿಯಾಗಿ ಬಂದಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

    ಜಗದೀಶ್ ಬಿಗ್ ಬಾಸ್​ನಲ್ಲಿ ಎಲ್ಲಾ ಸ್ಪರ್ಧಿಗಳಿಗೆ ನಡುಕ ಹುಟ್ಟಿಸಿದ್ದರು. ಈ ಕಾರಣದಿಂದಲೇ 1 Vs 15 ಎಂಬ ವಾತಾವರಣ ಬಿಗ್ ಬಾಸ್ ಮನೆಯಲ್ಲಿ ಸೃಷ್ಟಿ ಆಗಿತ್ತು. ಅವರನ್ನು ಹೊರಕ್ಕೆ ಹಾಕಬೇಕು ಎಂದು ಅನೇಕರು ಪ್ರಯತ್ನಪಟ್ಟರು. ಅವರು ನಿಂದನೀಯ ಶಬ್ದಗಳ ಬಳಕೆ ಮಾಡಿ ಎಲಿಮಿನೇಟ್ ಆಗಿದ್ದಾರೆ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ. ಈಗ ಅವರನ್ನು ಕರೆಸಬೇಕು ಎಂಬ ಕೂಗು ಜೋರಾಗಿದೆ. ಹೀಗಿರುವಾಗಲೇ ಅವರು ಕಲರ್ಸ್​ನ ‘ಸಚಿರುಚಿ ಸೀಸನ್ 3’ ಶೋಗೆ ಶೆಫ್ ಆಗಿ ಬಂದಿದ್ದಾರೆ.

    ಜಗದೀಶ್ ಅವರು ಅಡುಗೆ ಮಾಡುವುದನ್ನು ತೋರಿಸಲಾಗಿದೆ. ಆ್ಯಂಕರ್ ಜಾಹ್ನವಿ ಅವರು ಜಗದೀಶ್​ಗೆ ಒಂದಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ. ಈ ಪ್ರಶ್ನೆಗಳಲ್ಲಿ ಹೈಲೈಟ್ ಆಗಿದ್ದು ‘ಹಂಸ ಮೇಲೆ ನಿಮಗೆ ಕ್ರಶ್’ ಆಗಿತ್ತಾ ಎಂಬುದು. ಇದಕ್ಕೆ ಜಗದೀಶ್ ಅವರು ನಕ್ಕಿದ್ದಾರೆ. ಜಗದೀಶ್ ಅವರು ನಗುವಿನಲ್ಲೇ ಜನರಿಗೆ ಉತ್ತರ ಸಿಕ್ಕಿದೆ.

    ಬಿಗ್ ಬಾಸ್ ಮನೆಯಲ್ಲಿರುವ ಹಂಸ ಹಾಗೂ ಜಗದೀಶ್ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿತ್ತು. ಪದೇ ಪದೇ ಹಂಸ ಅವರನ್ನು ಜಗದೀಶ್ ಕಾಡಿದ್ದರು. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕವೂ ಜಗದೀಶ್​ಗೆ ಈ ಕುರಿತು ಪ್ರಶ್ನೆಗಳು ಎದುರಾಗುತ್ತಿವೆ. ‘ಬಿಗ್ ಬಾಸ್ ಪಾಲಿಗೆ ಜಗದೀಶ್ ಮುಗಿದ ಅಧ್ಯಾಯ. ಹಾಗೆ ಕರೆಸೋದಾದರೆ ಹುಚ್ಚ ವೆಂಕಟ್ ಅವರನ್ನೂ ಕರೆಸಬೇಕಾಗುತ್ತದೆ’ ಎಂದು ಸುದೀಪ್ ಹೇಳಿದ್ದರು. ಈ ಮೂಲಕ ಜಗದೀಶ್ ಅವರನ್ನು ಮರಳಿ ಶೋಗೆ ಕರೆಸೋದೇ ಇಲ್ಲ ಎಂದು ಪರೋಕ್ಷವಾಗಿ ಹೇಳಿದ್ದರು.

    Continue Reading

    BIG BOSS

    ‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ

    Published

    on

    ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಸಾಕಷ್ಟು ಟಾಸ್ಕ್​ಗಳನ್ನು ನೀಡಲಾಗುತ್ತಿದೆ. ಈ ಬಾರಿ ರಾಜಕೀಯ ಮಾಡೋಕೆ ಓಪನ್ ಆಗಿ ಅವಕಾಶ ನೀಡಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

    ಬಿಗ್ ಬಾಸ್’ ಮನೆಯಲ್ಲಿ ರಾಜಕೀಯ ಒಳಗೊಳಗೆ ನಡೆಯೋದು ಕಾಮನ್. ಯಾವುದೂ ಎದುರಿಗೆ ಬರೋದಿಲ್ಲ. ಆದರೆ, ಈಗ ಹಾಗಿಲ್ಲ. ಓಪನ್ ಆಗಿ ರಾಜಕೀಯ ಆರಂಭ ಆಗಿದೆ. ಇದಕ್ಕೆ ಕಾರಣ ಆಗಿರೋದು ‘ಬಿಗ್ ಬಾಸ್’ ಮನೆಯಲ್ಲಿ ನೀಡಿರೋ ಟಾಸ್ಕ್. ಈ ವಾರ ಬಿಗ್ ಬಾಸ್ ಮನೆ ಬಿಗ್ ಬಾಸ್ ಸೌಧವಾಗಿ ಮಾರ್ಪಾಡಾಗಿದೆ. ಎಲ್ಲರೂ ರಾಜಕಾರಣಿಗಳ ಅವತಾರ ತಾಳಿದ್ದಾರೆ. ಆ ಪ್ರೋಮೋವನ್ನು ಕಲರ್ಸ್‌ ಕನ್ನಡ ಪೇಜ್‌ನಲ್ಲಿ ಹಾಕಿದ್ದಾರೆ.

    Continue Reading

    LATEST NEWS

    Trending