Connect with us

    LATEST NEWS

    ಯುವತಿಯ ಅಶ್ಲೀಲ ಫೋಟೊ,ವಿಡಿಯೋ ಮಾಡಿ ಹಣಕ್ಕೆ ಡಿಮ್ಯಾಂಡ್ : ಹನಿಟ್ರಾಫ್ ಕಪಲ್ಸ್ ಬೆನ್ನು ಬಿದ್ದ ಬೆಂಗಳೂರು ಪೊಲೀಸರು..!

    Published

    on

    ಬೆಂಗಳೂರು : ಬೆಂಗಳೂರು ನಗರದಲ್ಲಿ ಅಮಾಯಕ ಯುವತಿಯರನ್ನು ಹನಿಟ್ರಾಫ್ ಮಾಡೊ ಖರ್ತನಾಕ್ ಕಪಲ್ಸ್ ಗಳ ಸಕ್ರೀಯಾ ಜಾಲವೊಂದು ಪತ್ತೆಯಾಗಿದೆ. ಈ ಜಾಲದಲ್ಲಿ ಸಿಕ್ಕಿ ನೊಂದ ಯುವತಿಯೊಬ್ಬಳು ದಂಪತಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ.

    ಚಂದ್ರಾಲೇಔಟ್ ನ ಕಾವ್ಯ ಕೃಷ್ಣ ಎಂಬ ಕಪಲ್ಸ್ ನಿಂದ ಅಮಾಯಕ ಯುವತಿಯರನ್ನು ಟ್ರಾಫ್ ಮಾಡುತ್ತಿದ್ದಾರೆ.

    ಹೆಂಡತಿ ಚೆಂದವಾದ ಯುವತಿಯರನ್ನ ಫೇಸ್ಬುಕ್ ನಲ್ಲಿ ಪರಿಚಯ ಮಾಡ್ಕೊಳ್ತಾಳೆ,ಹಬ್ಬಕ್ಕೆ ಮನೆಗೆ ಬನ್ನಿ ಅಂತ ಕರೆದು ಜ್ಯೂಸ್ ಕೊಡ್ತಾಳೆ,ನಂತರ ಗಂಡ ಮನೆಗೆ ಬಂದ ಯುವತಿಯರ ಅಶ್ಲೀಲ ಪೊಟೊಶೂಟ್ ಮಾಡ್ತಾನೆ,ಯುವತಿಯ ಖಾಸಗಿ ಅಶ್ಲೀಲ ಪೊಟೊ ವಿಡಿಯೋ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಾರೆ.

    ಫೇಸ್ಬುಕ್ ನಲ್ಲಿ ಪರಿಚಯವಾದ ಗೆಳೆಯರಿಂದಲೇ ಯುವತಿಯ ಅಶ್ಲೀಲ ಪೊಟೋಶೂಟ್,ಚಂದ್ರಲೇಔಟ್ ನ ಯುವತಿಗೆ ಎಫ್‌.ಬಿ ಯಲ್ಲಿ ಕಾವ್ಯ ಎಂಬಾಕೆಯ ಪರಿಚಯವಾಗಿತ್ತು,

    ಹಬ್ಬಕ್ಕೆ ಮನೆಗೆ ಬಾ ಎಂದು ಸಂತ್ರಸ್ಥ ಯುವತಿಯನ್ನ ಮನೆಗೆ ಕರೆದಿರೋ ಕಾವ್ಯ,ಗೆಳತಿ ಕರೆದಳು ಎಂದು ಚಂದ್ರಾಲೇಔಟ್ ನ ಮನೆಗೆ ತೆರಳಿದ ಸಂತ್ರಸ್ಥ ಯುವತಿ.

    ಈ ವೇಳೆ ಕಾವ್ಯ ಮನೆಯಲ್ಲಿದ್ದ ಆಕೆಯ ಗಂಡ ಕೃಷ್ಣ ಹಾಗೂ ಸಾಗರ್ ಎಂಬ ಯುವಕ,ಸಂತ್ರಸ್ಥ ಯುವತಿಗೆ ಮೊದಲಿಗೆ ಕುಡಿಯಲಿಕ್ಕೆ ಜ್ಯೂಸ್ ಕೊಟ್ಟಿರುವ ಕಾವ್ಯ,ಜ್ಯೂಸ್ ಕುಡಿದ ನಂತರ ನಿದ್ರಾಣ ಸ್ಥಿತಿಗೆ ತೆರಳಿದ್ದ ಸಂತ್ರಸ್ಥೆ,ನಂತರ ಸಂತ್ರಸ್ಥ ಯುವತಿಯನ್ನ ವಿವಸ್ತ್ರಗೊಳಿಸಿ ಯುವತಿಯ ಜೊತೆ ಪೊಟೊಸ್ ಗೆ ಫೊಸ್ ಕೊಟ್ಟಿರೋ ಕಾವ್ಯಾಳ ಗಂಡ ಕೃಷ್ಣ,ಸಂತ್ರಸ್ಥ ಯುವತಿ ಹಾಗೂ ಆರೋಪಿ ಕೃಷ್ಣ ಇಬ್ಬರ ಪೊಟೊಗಳನ್ನ ಮೊಬೈಲ್ ನಲ್ಲಿ ಸೆರೆಹಿಡಿದಿರೋ ಮತ್ತೊಬ್ಬ ಯುವಕ ಸಾಗರ್,ಕೃತ್ಯದ ನಂತರ ಫೇಸ್ಬುಕ್ ನಲ್ಲಿ ಪರಿಚಿತಳಾದ ಕಾವ್ಯ ಹಾಗೂ ಆಕೆಯ ಗೆಳೆಯರಾದ ಸಾಗರ್, ಕೃಷ್ಣ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ.

    ಯುವತಿ ಬಳಿಯಿದ್ದ ಚಿನ್ನದ ಉಂಗುರ ಚಿನ್ನದ ಚೈನ್ ಎಟಿಎಂ ಕಾರ್ಡ್ ಆರೋಪಿಗಳು ಕಸಿದಿದ್ದಾರೆ.

    ಖಾಸಗಿ ಪೊಟೊ ವಿಡಿಯೋ ಪೊಷಕರಿಗೆ ಕಳಿಸ್ತೀವಿ ಅಂತ ಕಳೆದ ಆರು ತಿಂಗಳಿಂದ 4 ಲಕ್ಷಕ್ಕೂ ಅಧಿಕ ಹಣ ವಸೂಲಿ ಮಾಡಿದ್ದಾರೆ.

    ಕಳೆದ ಜನವರಿಯಲ್ಲಿ ಕಾವ್ಯಳ ಚಂದ್ರಾಲೇಔಟ್ ನಿವಾಸಕ್ಕೆ ತೆರಳಿದ್ದ ಯುವತಿಯ ಆಗ ಮೊದಲ ಬಾರಿ ಯುವತಿ ಜೊತೆ ಅಶ್ಲೀಲ ಪೊಟೊ ಶೂಟ್ ಮಾಡಿದ್ದಾರೆ.

    ನಂತರ ಕಳೆದ ಮೇ ತಿಂಗಳಲ್ಲಿ ಯುವತಿಯ ಹಳೆ ವಿಡಿಯೋ ತೋರಿಸಿ ಯುವತಿ ಮೇಲೆ ಎರಡನೇ ಬಾರಿಗೆ ಕೃಷ್ಣ ಲೈಂಗಿಕ ಕಿರುಕುಳ ನೀಡಿದ್ದಾನೆ.

    ಕೇಳಿದಷ್ಟು ಹಣ ಕೊಟ್ಟರೇ ಸರಿ ಇಲ್ಲ ವಿಡಿಯೋ ಪೊಟೊಸ್ ವೈರಲ್ ಮಾಡೊದಾಗಿ ಸಂತ್ರಸ್ಥ ಯುವತಿಗೆ ಮೆಸೇಜ್ ಮಾಡಿ ಟಾರ್ಚರ್ ಮಾಡಿದ್ದಾರೆ.

    ನೊಂದ ಯುವತಿಯು ಆರೋಪಿಗಳ ವಿರುದ್ಧ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.ಪೊಲೀಸರು ಕೇಸು ದಾಖಲಿಸಿಕೊಂಡು ಹನಿಟ್ರಾಪ್ ದಂಪತಿಯ ಬೆನ್ನು ಬಿದ್ದಿದ್ದಾರೆ.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending