Connect with us

    LATEST NEWS

    ತಿಮ್ಮಪ್ಪನ ದರ್ಶನಕ್ಕೆ ಬಂದ ಕರಡಿ…ಭಕ್ತರಲ್ಲಿ ಆತಂಕ!

    Published

    on

    ತಿರುಮಲ ತಿರುಪತಿಯಲ್ಲಿ ಇತ್ತೀಚೆಗಡ ಕಾಡು ಪ್ರಾಣಿಗಳ ಭೀತಿ ಹೆಚ್ಚಾಗಿದೆ. ದೇವಸ್ಥಾನದ ಸುತ್ತಲ ಪ್ರದೇಶದಲ್ಲಿ ಆಗಾಗ ಕಾಣ ಸಿಗುತ್ತಿವೆ. ಸದ್ಯ ತಿರುಮಲಕ್ಕೆ ತೆರಳುವ ಅಲಿಪಿರಿ ರಸ್ತೆಯಲ್ಲಿ ಮತ್ತೆ ಕರಡಿಯ ಚಲನವಲನ ಕಂಡುಬಂದಿದೆ. ಹೀಗಾಗಿ ಆತಂಕ ಸೃಷ್ಟಿಸಿದೆ.


    ತಿರುಪತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಹುಲಿ, ಸಿಂಹ, ಕರಡಿ, ಚಿರತೆ, ಕಾಡು ಹಂದಿಗಳು ಆಗಾಗ ಭಕ್ತರಿಗೆ ಕಾಣಿಸಿಕೊಳ್ಳುತ್ತಲೇ ಇರುತ್ತವೆ. ಕೆಲ ಬಾರಿ ಇವು ದಾಳಿ ಮಾಡಿರುವುದು ಇದೆ. ಹೀಗಾಗಿ ಅರಣ್ಯ ಪ್ರದೇಶದಲ್ಲಿ ಪಾದಯಾತ್ರೆ ಮೂಲಕ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಟಿಟಿಡಿ ಜಾಗರೂಕರಾಗಿರಲು ಮನವಿ ಮಾಡಿದೆ.
    ಭಕ್ತರ ಹಿತದೃಷ್ಟಿಯಿಂದ ಮೆಟ್ಟಿಲುಗಳ ಉದ್ದಕ್ಕೂ ಕಾವಲು ಸಿಬ್ಬಂದಿ ಹಾಗೂ ಪೊಲೀಸರನ್ನು ನೇಮಿಸಲಾಗಿದೆ. ಹೀಗಿದ್ದರೂ ಸಿಸಿ ಕ್ಯಾಮರಾದಲ್ಲಿ ಕಾಡು ಪ್ರಾಣಿಗಳ ಚಲನವಲಗಳು ಕಾಣಿಸಿಕೊಳ್ಳುತ್ತಿವೆ. ಅಲ್ಲದೇ, ತಿರುಪತಿಯಲ್ಲಿ ಕರಡಿ ಕಾಣಿಸಿಕೊಂಡ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

    ಅಲಿಪಿರಿ ಪಥದ ಮಧ್ಯಭಾಗದಲ್ಲಿರುವ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಬಳಿ ಮಂಗಳವಾರ ಮಧ್ಯಾಹ್ನ 12.48ರ ಸುಮಾರಿಗೆ ಕ್ಯಾಮರಾದಲ್ಲಿ ಕರಡಿ ಸೆರೆಯಾಗಿದೆ. ವಾಕ್ ವೇ ಬಳಿ ಈ ಕರಡಿ ಕಾಣಿಸಿದೆ. ಈ ಭಾಗದಲ್ಲಿ ಈ ಹಿಂದೆಯೂ ಚಿರತೆ, ಕರಡಿಗಳು ಕಾಣಿಸಿಕೊಂಡಿದ್ದವು ಎಂದು ತಿಳಿದುಬಂದಿದೆ.

    ಹೀಗಾಗಿ ನಡೆದುಕೊಂಡು ಹೋಗುವ ಭಕ್ತರಿಗೆ ಅರಣ್ಯಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಗಾಳಿಗೋಪುರದಿಂದ ಮೊಕಲ್ಲಮಿಟ್ಟಕ್ಕೆ ಭಕ್ತರನ್ನು ಗುಂಪು ಗುಂಪಾಗಿ ಕಳುಹಿಸಲಾಗುತ್ತಿದೆ. ಪ್ರತಿ ಗುಂಪಿನೊಂದಿಗೆ ಇಬ್ಬರು ವಿಜಿಲೆನ್ಸ್ ಸಿಬ್ಬಂದಿಯನ್ನು ಕಳುಹಿಸಲಾಗುತ್ತದೆ ಮತ್ತು ಅವರಿಗೆ ಊರುಗೋಲು ನೀಡಿ ಎಚ್ಚರಿಕೆಯಿಂದ ಕಳುಹಿಸಲಾಗುತ್ತದೆ. ಜನಸಂದಣಿ ತಪ್ಪಿಸಲು ಕರಡಿಗಳು ಸದ್ದು ಮಾಡುವ ಮೂಲಕ ಭೀತಿ ಹುಟ್ಟಿಸುತ್ತಿವೆ. ಇದರಿಂದ ಭಕ್ತರು ಹೆದರಿ ಚದುರಿ ಹೋಗದಂತೆ ಗುಂಪು ಗುಂಪಾಗಿರಲು ತಿಳಿಸಲಾಗಿದೆ. ಟಿಟಿಡಿ ಅಧಿಕಾರಿಗಳ ಜೊತೆಗೆ ವಿಜಿಲೆನ್ಸ್ ಮತ್ತು ಅರಣ್ಯಾಧಿಕಾರಿಗಳು ಎಚ್ಚೆತ್ತು ಭಕ್ತಾದಿಗಳಿಗೆ ಯಾವುದೇ ಅಪಾಯವಾಗದಂತೆ ಸಾಕಷ್ಟು ಮುಂಜಾಗ್ರತೆ ಕ್ರಮಗಳನ್ನು ವಹಿಸಿದ್ದಾರೆ.

    ಕಾಲುದಾರಿಯಿಂದ ಸ್ವಲ್ಪ ದೂರದಲ್ಲಿ ಚಿರತೆ ಮತ್ತು ಕರಡಿಗಳು ಸಂಚರಿಸುತ್ತಿರುವುದು ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಆದರೆ, ಅವು ಮೆಟ್ಟಿಲುಗಳ ಕಡೆಗೆ ಬಂದಿಲ್ಲ ಎನ್ನಲಾಗುತ್ತಿದೆ. ಆದರೂ ಬಿಗಿ ಭದ್ರತೆಯಲ್ಲಿ ಭಕ್ತರನ್ನು ಮುಂದೆ ಕಳುಹಿಸಲಾಗುತ್ತಿದೆ. ಭಕ್ತರು ಎಚ್ಚರಿಕೆ ವಹಿಸುವಂತೆಯೂ ಸೂಚಿಸಲಾಗಿದೆ.

    ಮಗು ಕೊಂ*ದಿದ್ದ ಚಿರತೆ:

    ತಿರುಮಲಕ್ಕೆ ತೆರಳುವ ಮಾರ್ಗಮಧ್ಯೆ ಅಲಿಪಿರಿ ನಡಿಗೆದಾರಿಯಲ್ಲಿ ಚಿರತೆಯೊಂದು ಮಗುವನ್ನು ಕೊಂದಿತ್ತು. ಲಕ್ಷಿತಾ ಎಂಬ ಮಗುವಿನ ಮೇಲೆ ದಾಳಿ ನಡೆಸಿ ಕೊಂದಿತ್ತು. ಕಳೆದ ವರ್ಷ ಆಗಸ್ಟ್‌ನಲ್ಲಿ ಈ ಘಟನೆ ನಡೆದಿದ್ದು, ಅಲಿಪಿರಿ ವಾಕ್‌ವೇನಲ್ಲಿ ಚಿರತೆ ದಾಳಿ ಮಾಡಿ ಮಗು ಲಕ್ಷಿತಾ ಕೊಂದಿದ್ದನ್ನು ಅರಣ್ಯಾಧಿಕಾರಿಗಳು ಪತ್ತೆ ಹಚ್ಚಿದ್ದರು.

    ಅಲಿಪಿರಿ ವಾಕ್‌ವೇಯಲ್ಲಿ ಸೆರೆ ಸಿಕ್ಕ ನಾಲ್ಕನೇ ಚಿರತೆ ಟಿಟಿಡಿ ಮತ್ತು ಅರಣ್ಯಾಧಿಕಾರಿಗಳ ಜತೆ ಸೇರಿ ಲಕ್ಷಿತಾ ಮೇಲೆ ದಾಳಿ ನಡೆಸಿ ಕೊಂದಿರುವುದು ಗೊತ್ತಾಗಿದೆ. ಟಿಟಿಡಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಒಟ್ಟು ಆರು ಚಿರತೆಗಳನ್ನು ಸೆರೆ ಹಿಡಿದಿದ್ದಾರೆ.

    ಮೃಗಾಲಯದಲ್ಲಿ ಲಕ್ಷಿತಾ ಮೇಲೆ ದಾಳಿ ಮಾಡಿ ಕೊಂದ ಈ ಚಿರತೆಯನ್ನು ಸಂರಕ್ಷಿಸಲು ಟಿಟಿಡಿ ನಿರ್ಧರಿಸಿದೆ.

    ಪಾದಾಚಾರಿ ಮಾರ್ಗದಲ್ಲಿ ಸಾಗುವಾಗ ಘಟನೆ :

    ಕಳೆದ ವರ್ಷ ಆಗಸ್ಟ್ 11 ರಂದು ನೆಲ್ಲೂರು ಜಿಲ್ಲೆಯ ಕೋವೂರು ಮಂಡಲದ ಪೋತಿರೆಡ್ಡಿಪಾಲೆಂನ ದಿನೇಶ್ – ಶಶಿಕಲಾ ದಂಪತಿ ತಮ್ಮ ಕುಟುಂಬ ಸದಸ್ಯರೊಂದಿಗೆ ಅಲಿಪಿರಿ ಪಾದಚಾರಿ ಮಾರ್ಗದಲ್ಲಿ ತಿರುಮಲಕ್ಕೆ ತೆರಳಿದ್ದರು. ದಿನೇಶ್ ಶಶಿಕಲಾ ಅವರ ಪುತ್ರಿ ಲಕ್ಷಿತಾ ರಾತ್ರಿ 7.30ರ ಸುಮಾರಿಗೆ ಅಲಿಪಿರಿ ನಡಿಗೆ ಮಾರ್ಗದಲ್ಲಿರುವ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಬಂದಾಗ ನಾಪತ್ತೆಯಾಗಿದ್ದಳು. ಕಾಡಿನ ಪ್ರಾಣಿಗಳ ಕೈಗೆ ಆಕೆ ಸಿಕ್ಕಿಬಿದ್ದಿರುವುದನ್ನು ಅರಿತ ಕೂಡಲೇ ದಂಪತಿ ಟಿಟಿಡಿ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಅರಣ್ಯಾಧಿಕಾರಿಗಳು ಕೂಡಲೇ ಹುಡುಕಾಟ ಆರಂಭಿಸಿದರು.
    ಆಗಸ್ಟ್ 12ರಂದು ಬೆಳಗ್ಗೆ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಚಿನ್ನಾರಿ ಲಕ್ಷಿತಾ ಶವ ಪತ್ತೆಯಾಗಿತ್ತು. ಘಟನಾ ಸ್ಥಳದಲ್ಲಿದ್ದ ಸುಳಿವು ಆಧರಿಸಿ ಚಿರತೆ ದಾಳಿ ಮಾಡಿ ಕೊಂದಿರುವುದು ಗೊತ್ತಾಗಿತ್ತು. ಕೂಡಲೇ ಟಿಟಿಡಿ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಲಾಯಿತು.
    ಚಿರತೆಗಳನ್ನು ಬಲೆಗೆ ಬೀಳಿಸಲು ಅಲಿಪಿರಿ ವಾಕ್‌ವೇನಲ್ಲಿ ಬೋನ್‌ಗಳನ್ನು ಸ್ಥಾಪಿಸಲಾಗಿಯಿತು. ಈ ಅನುಕ್ರಮದಲ್ಲಿ ಆರು ಚಿರತೆಗಳು ಬೋನಿನಲ್ಲಿ ಸಿಕ್ಕಿಬಿದ್ದಿದ್ದು, ಈ ಪೈಕಿ ನಾಲ್ಕನೇ ಚಿರತೆ ಲಕ್ಷಿತಾಳನ್ನು ಕೊಂದಿರುವುದು ಪತ್ತೆಯಾಗಿದೆ. ಕಳೆದ ವರ್ಷ ಆಗಸ್ಟ್ 27ರಂದು ಬೋನಿನಲ್ಲಿ ಚಿರತೆ ಸಿಕ್ಕಿಬಿದ್ದಿತ್ತು. ಈ ಘಟನೆಯ ನಂತರ ಅಲಿಪಿರಿ ವಾಕ್‌ವೇನಲ್ಲಿ ಕೆಲವು ನಿಯಮಗಳನ್ನು ಜಾರಿಗೊಳಿಸಲಾಗುತ್ತಿದೆ.

    ನಿಯಮ ಜಾರಿ :

    12 ವರ್ಷದೊಳಗಿನ ಮಕ್ಕಳಿಗೆ ಮಧ್ಯಾಹ್ನ 2 ಗಂಟೆಯ ನಂತರ ಫುಟ್‌ಪಾತ್‌ಗಳಲ್ಲಿ ಪ್ರವೇಶವಿಲ್ಲ. ಹಾಗೆಯೇ ರಾತ್ರಿ 10 ಗಂಟೆಯ ನಂತರ ವಯಸ್ಕರಿಗೆ ಪ್ರವೇಶವಿಲ್ಲ. ಕೆಲ ದಿನಗಳಿಂದ ಘಾಟ್ ರಸ್ತೆಗಳಲ್ಲಿಯೂ ಬೈಕ್ ನಲ್ಲಿ ಹೋಗುವವರನ್ನು ಬಿಡುತ್ತಿರಲಿಲ್ಲ.. ನಂತರ ಆ ನಿಯಮವನ್ನು ಸಡಿಲಿಸಲಾಯಿತು. ಇದಲ್ಲದೆ, ವಾಕಿಂಗ್ ಪಾತ್‌ಗಳಲ್ಲಿ ಹೋಗುವ ಭಕ್ತರಿಗೆ ಟಿಟಿಡಿ ಕೈ ಕೋಲುಗಳನ್ನು ನೀಡುತ್ತಿದೆ. ವಾಕ್‌ವೇಗೆ ಬೇಲಿ ಹಾಕುವ ವಿಚಾರದ ಬಗ್ಗೆಯೂ ಗಮನ ಹರಿಸಲಾಗಿದೆ.ಈಗಾಗಲೇ ತಜ್ಞರ ಸಮಿತಿ ಈ ಬಗ್ಗೆ ಪರಿಶೀಲನೆ ನಡೆಸಿದೆ.

     

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending