Connect with us

    ಹೆತ್ತು ಹೊತ್ತ ತಾಯಿಯೊಂದಿಗೆ ಮೃಗೀಯ ವರ್ತನೆ..! ಆರೋಪಿಗಳ ಬಂಧನ..!   

    Published

    on

    ಹೆತ್ತು ಹೊತ್ತ ತಾಯಿಯೊಂದಿಗೆ ಮೃಗೀಯ ವರ್ತನೆ..! ಆರೋಪಿಗಳ ಬಂಧನ..!   

    ಬೆಳ್ತಂಗಡಿ : ವೃದ್ಧೆ ತಾಯಿಗೆ ಮಗ ಹಾಗೂ ಮೊಮ್ಮಗ ಸೇರಿ ಹಿಗ್ಗಾಮುಗ್ಗಾ ಥಳಿಸಿ ಮೃಗೀಯ ವರ್ತನೆ ತೋರಿಸಿದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯ ಸವಣಾಲು ಎಂಬಲ್ಲಿ ನಡೆದಿದೆ.

    ಸವಣಾಲು ಹಲಸಿನಕಟ್ಟೆ ಎಂಬಲ್ಲಿನ ನಿವಾಸಿ ವೃದ್ಧೆ ಅಪ್ಪಿ ಶೆಟ್ಟಿ ಎಂಬರಿಗೆ ಅವರ ಮಗ ಶ್ರೀನಿವಾಸ ಶೆಟ್ಟಿ ಹಾಗೂ ಮೊಮ್ಮಗ ಪ್ರದೀಪ್ ಶೆಟ್ಟಿ ಕಂಠಪೂರ್ತಿ ಕುಡಿದು ಮಲಗಿದಲ್ಲೇ ಇರುವ ಹಿರಿ ಜೀವ ಅಪ್ಪಿ ಶೆಟ್ಟಿಯವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ.

    ಅದೂ ಅಲ್ಲದೇ ಆ ಹಿರಿ ಜೀವವನ್ನು ಅಮಾನುಷವಾಗಿ ಎತ್ತಿ ಬಿಸಾಡಿದ್ದಾರೆ. ಈ ದೃಶ್ಯವನ್ನು ಅಲ್ಲೇ ಇದ್ದ ಇನ್ನೋರ್ವ‌ ಮೊಮ್ಮಗ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ.

    ಅನಾರೋಗ್ಯದಿಂದ ಇರುವ ಅಪ್ಪಿಶೆಟ್ಟಿ ಕಳೆದ ಕೆಲ ವರ್ಷದಿಂದ ಮಲಗಿದಲ್ಲೇ ಇದ್ದಾರೆ. ಹೀಗಾಗಿ ಪ್ರತಿದಿನ ಈ ಇಬ್ಬರು ಇದೇ ರೀತಿ ಕುಡಿದು ಬಂದು ಹಲ್ಲೆ ನಡೆಸುತ್ತಿದ್ದು, ಇದರಿಂದ ನೊಂದ ಅಸಹಾಯಕ‌ ಮೊಮ್ಮಗ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾನೆ.

    ವಿಡಿಯೋ ದೃಶ್ಯವಳಿ ಗಮನಿಸಿದ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲು ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

    ಕಲಂ:323, 504 IPC & 24 senior citizen act 2007ರಂತೆ ಪ್ರಕರಣ ದಾಖಲಿಸಲಾಗಿದೆ

    ಮತ್ತು ಹಲ್ಲೆಗೊಳಗಾಗ ಅಪ್ಪಿ ಶೆಟ್ಟಿಯನ್ನು ಸಂಬಂಧಿಕರ ಮನೆಗೆ ಶಿಫ್ಟ್‌ ಮಾಡಿದ್ದಾರೆ. ಅಪ್ಪ ಮಗನ ಈ ಮೃಗೀಯ ವರ್ತನೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ.

    ವಿಷಯ ತಿಳಿದ ಬೆಳ್ತಂಗಡಿಯ ಬಿಜೆಪಿ ಕಾರ್ಯಕರ್ತರು ಅಪ್ಪಿ ಶೆಟ್ಟಿ ಅವರು ಇದ್ದ ಮನೆಗೆ ಹೋಗಿ ಉಪಚರಿಸಿ ಸಹಾಯ ಹಸ್ತ ನೀಡಿ. ಧೈರ್ಯ ತುಂಬಿದ್ದಾರೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಹೆಣ್ಣು ಕೊಟ್ಟ ಅತ್ತೆ-ಮಾಮನನ್ನೇ ಕೊಂ*ದ ಪಾಪಿ ಅಳಿಯ

    Published

    on

    ಚಿತ್ರದುರ್ಗ: ಅಳಿಯನೇ ತನ್ನ ಅತ್ತೆ ಮಾವನನ್ನು ಕೊಚ್ಚಿ ಕೊ*ಲೆ ಮಾಡಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಬೊಮ್ಮಕ್ಕನ ಹಳ್ಳಿಯಲ್ಲಿ ನಡೆದಿದೆ.

    ಅಳಿಯ ಮಂಜುನಾಥ ಕೊ*ಲೆ ಮಾಡಿದ ಆರೋಪಿ. ಹನುಮಂತಪ್ಪ ಹಾಗೂ ಆತನ ಪತ್ನಿ ತಿಪ್ಪಮ್ಮ ಕೊ*ಲೆಯಾದವರು. ಅವರದೇ ಜಮೀನಿನಲ್ಲಿ ಹ*ತ್ಯೆ ಮಾಡಲಾಗಿದೆ. ಹನುಮಂತಪ್ಪ ಹಾಗೂ ಪತ್ನಿ ತಿಪ್ಪಮ್ಮ ಜಮೀನಿಗೆ ತೆರಳಿದ್ದರು. ಜಮೀನಿನಲ್ಲಿನ ಈರುಳ್ಳಿ ಬೆಳೆಗೆ ನೀರು ಹಾಯಿಸಲು ಹೋಗಿದ್ದಾಗ ಹ*ತ್ಯೆ ಮಾಡಲಾಗಿದೆ.

    ಒಂದು ವರ್ಷದ ಹಿಂದೆ ಪುತ್ರಿ ಹರ್ಷಿತಾಳನ್ನು ಅದೇ ಗ್ರಾಮದ ತಮ್ಮ ಸಂಬಂಧಿ ಮಂಜುನಾಥ್ ಎಂಬಾತನಿಗೆ ಕೊಟ್ಟು ವಿವಾಹ ಮಾಡಿದ್ದರು. ಪಿಯುಸಿ ವ್ಯಾಸಂಗ ಮಾಡಿದ ಹರ್ಷಿತಾ ಓದಿನ ಕಡೆಗೆ ಹೆಚ್ಚಿನ ಆಸಕ್ತಿ ಹೊಂದಿದ್ದರು. ಹಾಗಾಗಿ ಹೊಲ ಮನೆ ಕೆಲಸದ ಬಗ್ಗೆ ಗಮನ ನೀಡುತ್ತಿರಲಿಲ್ಲ ಎಂದು ಪತಿ ಮಂಜುನಾಥ್ ಆಗಾಗ ಜಗಳ ಮಾಡುತ್ತಿದ್ದ.

    ಇದೇ ವಿಚಾರವಾಗಿ ಮಂಜುನಾಥ್ ತನ್ನ ಪತ್ನಿ ಹರ್ಷಿತಾಗೆ ಪದೇ ಪದೇ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಬೇಸತ್ತ ದಂಪತಿ ತಮ್ಮ ಪುತ್ರಿ ಹರ್ಷಿತಾಳನ್ನು ತವರು ಮನೆಗೆ ಕರೆತಂದಿದ್ದರು. ಇದರಿಂದ ಸಿಟ್ಟಿಗೆದ್ದ ಮಂಜುನಾಥ್ ಕೊ*ಲೆ ಮಾಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    Continue Reading

    LATEST NEWS

    ದಸರಾ ಸಂಭ್ರಮ: ಅಕ್ಟೋಬರ್ 3 ರಿಂದ 20 ರವರೆಗೆ ಶಾಲೆಗಳಿಗೆ ರಜೆ

    Published

    on

    ಬೆಂಗಳೂರು: ದಸರಾ ಹಬ್ಬ ಹಿನ್ನೆಲೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದೆ.

    ಅಕ್ಟೋಬರ್ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ. ಅಕ್ಟೋಬರ್ 21 ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ.

    2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ. ಈಗ ದಸರಾ ರಜೆ ಹಿನ್ನೆಲೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.

    ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ.

    Continue Reading

    LATEST NEWS

    ದಸರಾ ಆನೆಗಳ ಕಾದಾಟ..! ಬೆಚ್ಚಿಬಿದ್ದ ಜನರು, ಅಧಿಕಾರಿಗಳು..!!

    Published

    on

    ಮೈಸೂರು/ಮಂಗಳೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆಯ ಆನೆಗಳು ಶುಕ್ರವಾರ(ಸೆ.20) ರಾತ್ರಿ ದಿಢೀರ್ ಕಾದಾಟಕ್ಕೆ ಇಳಿದಿದ್ದು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

    ದಸರಾ ಹಬ್ಬದ ಪ್ರಯುಕ್ತ ಆನೆಗಳಿಗೆ ತಾಲೀಮು ನಡೆಸಲಾಗುತ್ತಿದೆ. ಮಳೆಯಿರುವ ಕಾರಣ ಅರಮನೆ ಮೈದಾನದಲ್ಲೇ ಆನೆಗಳಿಗೆ ತಾಲೀಮನ್ನು ಕೈಗೊಳ್ಳಲಾಗಿತ್ತು. ನಿನ್ನೆ ರಾತ್ರಿ 8 ಗಂಟೆಯ ಸುಮಾರಿಗೆ ಧನುಂಜಯ್ ಹಾಗೂ ಕಂಜನ್ ಆನೆಗಳ ಮಧ್ಯೆ ಗುದ್ದಾಟ ಆಋಂಭವಾಗಿದೆ. ಊಟದ ಸಮಯದಲ್ಲಿ  ಈ ಜಗಳ ಶುರುವಾಗಿದ್ದು ಧನುಂಜಯ್ ಆನೆ ಕಂಜನ್‌ನನ್ನು ಅರಮನೆಯಿಂದ ಹೊರಗೆ ಓಡಿಸಿಕೊಂಡು ಬಂದಿದೆ. ಈ ವೇಳೆ ಕಜನ್ ತನನ್ ಮಾವುತನನನ್ಉ ಕೆಳಗೆ ಬೀಳಿಸಿದೆ. ಧನುಂಜಯ್ ಆನೆ ಕಂಜನ್‌ನನ್ನು ಓಡಿಸಿಕೊಂಡು ಹೋಗಿದ್ದು  ಜಯಮಾರ್ತಾಂಡ ದ್ವಾರದಿಂದ ಹೊರಗೆ ಬಂದಿದೆ.  ಇದರಿಂದ‌ ಕೆಲಕಾಲ ಜನ, ಮಾವುತರು, ಅಧಿಕಾರಿಗಳಲ್ಲಿ ಆತಂಕ ಸೃಷ್ಟಿಯಾಯಿತು. ಆನೆಗಳು ದೊಡ್ಡಕೆರೆ ಮೈದಾನ ಬಳಿ ಬ್ಯಾರಿಕೇಡ್ ತಳ್ಳಿಕೊಂಡು ರಸ್ತೆಗೆ ಪ್ರವೇಶಿಸುತ್ತಿದ್ದಂತೆ ಜನರು ಭಯದಿಂದ ದಿಕ್ಕಾಪಾಲಾಗಿ ಓಡಿಹೋದರು.

    ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ : ಸಿಎಂ ಸಿದ್ಧರಾಮಯ್ಯ

    ದೊಡ್ಡಕೆರೆ ಮೈದಾನದ ಬೆಂಗಳೂರು- ನೀಲಗಿರಿ ರಸ್ತೆಯಲ್ಲಿನ ವಾಹನಗಳನ್ನು ನೋಡುತ್ತಿದ್ದಂತೆ ಕಂಜನ್ ಬೆದರಿ ನಿಂತಿತು. ಮಾವುತರು ಕಾವಾಡಿಗರು ಸಮಾಧಾನ ಪಡಿಸಿದರು. ಯಾವುದೇ ಅನಾಹುತ ಸಂಭವಿಸಿಲ್ಲ.  ಕಾವಾಡಿಗಳ ಚಾಣಾಕ್ಷತದಿಂದ ಆನೆಗಳ ಆಟೋಟಕ್ಕೆ ಬ್ರೇಕ್ ಬಿದ್ದಿದೆ. ಬಳಿಕ ಅರಮನೆಗೆ ಆನೆಗಳನ್ನು ಸಿಬ್ಬಂದಿ ಕರೆತಂದಿದ್ದಾರೆ. ಸದ್ಯ ಕೋಡಿಸೋಮೇಶ್ವರ ದೇವಸ್ಥಾನ ಸಮೀಪ ಇರುವ ಆನೆಗಳು ಬಿಡಾರ ಬಿಟ್ಟಿವೆ.

    Continue Reading

    LATEST NEWS

    Trending