BELTHANGADY
ಬೆಳ್ತಂಗಡಿ: ಅಕ್ರಮ ಕಸಾಯಿ ಖಾನೆಗೆ ದಾಳಿ ನಡೆಸಿದ ಕಾರ್ಯಕರ್ತರು- ಆರೋಪಿಗಳ ವಿರುದ್ಧ ದೂರು ದಾಖಲು
ಮರೋಡಿ ಗ್ರಾಮದ ಕಾಂತಾರಬೈಲು ಮನೆಯ ಅಜಿದ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ಸ್ಥಳೀಯ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಪೋಲೀಸರಿಗೆ ಮಾಹಿತಿ ನೀಡಿದ್ದು ಪೋಲೀಸರು ಆಗಮಿಸಿ ಕೇಸು ದಾಖಲಿಸಿದ್ದಾರೆ.
ಬೆಳ್ತಂಗಡಿ: ಮರೋಡಿ ಗ್ರಾಮದ ಕಾಂತಾರಬೈಲು ಮನೆಯ ಅಜಿದ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ಸ್ಥಳೀಯ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಪೋಲೀಸರಿಗೆ ಮಾಹಿತಿ ನೀಡಿದ್ದು, ಪೋಲೀಸರು ಆಗಮಿಸಿ ಕೇಸು ದಾಖಲಿಸಿದ್ದಾರೆ.
ಕ್ರಮ ಕಾವಿಶ್ವ ಹಿಂದು ಪರಿಷತ್ ವೇಣೂರು ಪ್ರಖಂಡದ ಕಾರ್ಯಕರ್ತರಿಂದ ಪೋಲೀಸರಿಗೆ ಮನವಿ ಕೂಡ ಕೊಡಲಾಯಿತು.
ಸಾಯಿ ಖಾನೆ ನಡೆಸುವುವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ಮರೋಡಿ ಗ್ರಾಮದ ಅಜೀದ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಗೋಮಾಂಸವನ್ನು ಮಾಡುತ್ತಿರುವುದು ಸಂಘಟನೆಯ ಗಮನಕ್ಕೆ ಬಂದಿದ್ದು ಕೂಡಲೇ ಪೋಲೀಸ್ ಠಾಣೆಗೆ ತಿಳಿಸಿದ್ದು ಸ್ಥಳಕ್ಕೆ ಆಗಮಿಸಿದ ಪೋಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ.
ತಾಲೂಕಿನ ಕೆಲವಡೆ ನಡೆಯುವ ಅಕ್ರಮ ಕಾಸಾಯಿಖಾನೆ ನಡೆಸುವುವವರನ್ನು ಪತ್ತೆ ಹಚ್ಚಿ ಅವರ ಆವರಣವನ್ನು ಮುಟ್ಟುಗೋಲು ಹಾಕಬೇಕು.
ಅಂತವರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ವೇಣೂರು ಪೋಲೀಸ್ ಠಾಣೆಗೆ ವಿಶ್ವ ಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡ ಮನವಿಯಲ್ಲಿ ಆಗ್ರಹಿಸಿದ್ದಾರೆ.
BELTHANGADY
ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.
ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.
BELTHANGADY
ಬೆಳ್ತಂಗಡಿ: ವಿದ್ಯುತ್ ತಗುಲಿ ಯುವಕ ಮೃ*ತ್ಯು
ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.
ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.
BELTHANGADY
ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ
ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.
ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.
ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ