BELTHANGADY
ಬೆಳ್ತಂಗಡಿ : ಕೆರೆಗೆ ಬಿದ್ದು ನವವಿವಾಹಿತ ಸಾ*ವು
ಬೆಳ್ತಂಗಡಿ : ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತ ಮನೆಯ ಕೆರೆಗೆ ಜಾರಿ ಬಿದ್ದು ಸಾ*ವನ್ನಪ್ಪಿದ ಘಟನೆ ಶನಿವಾರ ರಾತ್ರಿ ಬೆಳ್ತಂಗಡಿಯ ನಂದಿಬೆಟ್ಟದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊಕ್ಕು ನಿವಾಸಿ 38 ವರ್ಷದ ಶೈಲೇಶ್ ಶೆಟ್ಟಿ ಮೃ*ತಪಟ್ಟವರು.
ಅವರು ಶನಿವಾರ ರಾತ್ರಿ 8:30 ಕ್ಕೆ ತನ್ನ ಮನೆಯ ಕೆರೆಗೆ ಜಾರಿ ಬಿದ್ದು ಕೆಸರಿನಲ್ಲಿ ಮುಳುಗಿ ಸಾ*ವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಶೈಲೇಶ್ ಶ*ವವನ್ನು ಮೇಲಕ್ಕೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಇದನ್ನೂ ಓದಿ : ಗೂಗಲ್ ಮ್ಯಾಪ್ ನಂಬಿ ಸಂಕಷ್ಟ; ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿದ ಕಾರು!
ಹೊಸಹೊಕ್ಕು ನಿವಾಸಿ ಸದಾಶಿವ ಶೆಟ್ಟಿ ಅವರ ಒಬ್ಬನೇ ಮಗನಾಗಿರುವ ಶೈಲೇಶ್ ಕಳೆದ ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಕೃಷಿ ಕೆಲಸ ಮಾಡಿಕೊಂಡಿದ್ದರು. ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
BELTHANGADY
ಅನಂತಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಕೊಕ್ಕಡ ಸತ್ಯನಾರಾಯಣ ತೋಡ್ತಿಲ್ಲಾಯ
ಬೆಳ್ತಂಗಡಿ: ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೇರಳದ ತಿರುವನಂತಪುರದ ಪ್ರಸಿದ್ಧ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಜೂ.16ರಂದು ನೇಮಕಗೊಂಡಿದ್ದಾರೆ.
ಇವರು ಮೂಲತಃ ಕೊಕ್ಕಡ ಗ್ರಾಮದ ಬಡೆಕ್ಕರ ನಿವಾಸಿಯಾಗಿದ್ದು, ದಿ. ಸುಬ್ರಾಯ ತೋಡ್ತಿಲ್ಲಾಯ ಮತ್ತು ದಿ.ಯಶೋಧ ದಂಪತಿ ಪುತ್ರರಾಗಿದ್ದಾರೆ. ಹಿಂದೆ ಸುಬ್ರಾಯ ತೋಡ್ತಿಲ್ಲಾಯರು ಕೂಡ ಇದೇ ದೇವಸ್ಥಾನದಲ್ಲಿ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.
ಅವರ ಅಜ್ಜ ದಿ.ನಾರಾಯಣ ತೋಡ್ತಿಲ್ಲಾಯರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹಲವು ವರ್ಷಗಳ ಕಾಲ ಪೂಜಾ ಸೇವೆಯನ್ನು ಸಲ್ಲಿಸಿದ್ದರು.
Read More..; ದೇವಸ್ಥಾನದ ಗೋಶಾಲೆಯಿಂದ ಗೋ ಕಳವಿಗೆ ಯತ್ನ..!
ಪಾಲಾಲೆ ದಿ. ಸತೀಶ ಯಡಪಡಿತ್ತಾಯರಲ್ಲಿ ವೇದ ಅಭ್ಯಾಸವನ್ನು ಮಾಡಿದ್ದ ಸತ್ಯನಾರಾಯಣ ತೋಡ್ತಿಲ್ಲಾಯರು ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದು, ಪೂಜಾ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಪತ್ನಿ ಸ್ನೇಹ ಹಾಗೂ ಪುತ್ರ ಸೌರಭ್ ಬೆಂಗಳೂರಿನಲ್ಲಿಯೇ ನೆಲೆಸಿದ್ದಾರೆ.
ಅಕ್ಕರ ದೇಸಿ ಸಮುದಾಯ ಸಂಘವು ಸತ್ಯನಾರಾಯಣರವರ ನೇಮಕಕ್ಕೆ ಶಿಫಾರಸು ಮಾಡಿತ್ತು. ಕೊಕ್ಕಡದ ಎಡಪಡಿತ್ತಾಯ, ಬಾಳ್ತಿಲ್ಲಾಯ, ಶಬರಾಯ, ಉಪ್ಪಾರ್ಣ, ತೋಡ್ತಿಲ್ಲಾಯ ಕುಲದ ಸದಸ್ಯರಿಗೆ ಈ ಹಿಂದಿನಿಂದಲೂ ಶ್ರೀಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುವ ಹಕ್ಕು ಇದೆ.
BELTHANGADY
ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ..! ಬಿಜೆಪಿ ಮುಖಂಡ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಬೆಳ್ತಂಗಡಿ: ಗಲಾಟೆ ವೇಳೆ ಅಪ್ರಾಪ್ತೆ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ್ದಾನೆ ಎಂದು ಆರೋಪಿಸಿ ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ ಟಿ ಮೋರ್ಚಾದ ಅಧ್ಯಕ್ಷನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂದೆ ಓದಿ..; ಬೈಕ್ – ಕಾರು ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃ*ತ್ಯು
ಬೆಳ್ತಂಗಡಿ ಕಳೆಂಜ ಗ್ರಾಮದ ನಿವಾಸಿ ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್ ಕೆ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ, ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಪೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
BANTWAL
ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ನೋಟಾಗೆ ದಾಖಲೆಯ ಮತ ಚಲಾವಣೆ
ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹೊರತುಪಡಿಸಿ ನೋಟಾಗೆ ಅತೀ ಹೆಚ್ಚು ಮತ ಚಲಾವಣೆಯಾಗಿದೆ. ಈ ಮೂಲಕ ಉಭಯ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಮತ ಗಳಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ನೋಟಾ ಮೂರನೇ ಸ್ಥಾನ ಪಡೆದುಕೊಂಡಿದೆ.
ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನೋಟಾಗೆ 23,576 ಮತಗಳು ಚಲಾವಣೆಯಾಗಿದೆ. ಇನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ನೋಟಾಗೆ 11,269 ಮತಗಳು ಬಿದ್ದಿದೆ.
ದಕ್ಷಿಣ ಕನ್ನಡ ಕ್ಷೇತ್ರದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಮತಗಳು ನೋಟಾಕ್ಕೆ ಚಲಾವಣೆಯಾಗಿವೆ. ಬೆಳ್ತಂಗಡಿಯಲ್ಲಿ 7,691 ಮತ, ಮೂಡುಬಿದಿರೆ 2,166, ಮಂಗಳೂರು ನಗರ ಉತ್ತರ 2,019, ಮಂಗಳೂರು ನಗರ ದಕ್ಷಿಣ 1,551, ಮಂಗಳೂರು 892, ಬಂಟ್ವಾಳ 2,353, ಪುತ್ತೂರು 2302, ಸುಳ್ಯ 4,541 ಮತಗಳು ನೋಟಾಕ್ಕೆ ಬಿದ್ದಿದೆ. ಅಂಚೆ ಮತದಾನದಲ್ಲೂ 61 ಮತಗಳು ನೋಟಾಕ್ಕೆ ಬಂದಿದೆ.
ಇನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕುಂದಾಪುರ 1,578, ಉಡುಪಿ 1,778, ಕಾಪು 1,523, ಕಾರ್ಕಳ 2,780, ಶೃಂಗೇರಿ 943, ಮೂಡಿಗೆರೆ 1,135, ಚಿಕ್ಕಮಗಳೂರು 814, ತರಿಕೆರೆ 684 ನೋಟ ಮತ ಚಲಾವಣೆಯಾಗಿರುತ್ತದೆ.
Pingback: ಹಾಸನದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾ*ತ; ಮಗು ಸೇರಿ 6 ಜನ ಸಾ*ವು - NAMMAKUDLA NEWS - ನಮ್ಮಕುಡ್ಲ ನ್ಯೂಸ್