Connect with us

BELTHANGADY

Belthangady: ಅಕ್ರಮ ಮರಳು ಸಾಗಾಟ- ಲಾರಿ ವಶ..!

Published

on

 ಚಾರ್ಮಾಡಿಯಲ್ಲಿ ಪರವಾನಿಗೆ ಇಲ್ಲದೆ ಸಾಗಿಸುತಿದ್ದ ಅಕ್ರಮ ಮರಳು ಸಾಗಾಟದ ಲಾರಿಯನ್ನು ಧರ್ಮಸ್ಥಳ ಪೊಲೀಸರು ವಶ ಪಡಿಸಿಕೊಂಡ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ. 

ಬೆಳ್ತಂಗಡಿ: ಚಾರ್ಮಾಡಿಯಲ್ಲಿ ಪರವಾನಿಗೆ ಇಲ್ಲದೆ ಸಾಗಿಸುತಿದ್ದ ಅಕ್ರಮ ಮರಳು ಸಾಗಾಟದ ಲಾರಿಯನ್ನು ಧರ್ಮಸ್ಥಳ ಪೊಲೀಸರು ವಶ ಪಡಿಸಿಕೊಂಡ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.

ಚಾರ್ಮಾಡಿಯಲ್ಲಿ ವಾಹನಗಳನ್ನು ತಪಾಸಣೆಗೈಯುತ್ತಿರುವ ವೇಳೆ ಮುನೀರ್ ಎಂಬತನಿಗೆ ಸೇರಿದ KA-19-AB-9516 ಸಂಖ್ಯೆಯ ಸುಲ್ತಾನ್ ಎಂಬ ಹೆಸರಿನ ಲಾರಿಯೊಂದನ್ನು ನಿಲ್ಲಿಸಿ ತಪಾಸಣೆ ಮಾಡುವಾಗ ಅದರಲ್ಲಿ ಯಾವುದೇ ಸರಕಾರಕ್ಕೆ ಉಪ ಖನಜ ಪಾವತಿ ಮಾಡದೆ ಪರವಾನಿಗೆ ಪಡೆಯದೆ ಅಕ್ರಮ ಮರಳು ಸಾಗಿಸುತ್ತಿರುವುದು ಪತ್ತೆಯಾಗಿದೆ.

ಲಾರಿ ಚಾಲಕ ಅನ್ಸರ್ ಎಂಬಾತನಲ್ಲಿ ಮರಳು ಸಾಗಾಟದ ಪರವಾನಿಗೆ ಹಾಗೂ ದಾಖಲೆಗಳನ್ನು ಕೇಳಿದಾಗ ಯಾವುದೇ ದಾಖಲೆಗಳಿಲ್ಲ ಎಂದಿದ್ದು, ಅದರಂತೆ ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು ಮುಂದಿನ ಕ್ರಮಕ್ಕಾಗಿ ಗಣಿ ಇಲಾಖೆಗೆ ವರದಿ ಸಲ್ಲಿಸಿದ್ದಾರೆ.

ತಪಾಸಣೆ ವೇಳೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಅನಿಲ್ ಕುಮಾರ್ ಡಿ, ಸಿಬ್ಬಂದಿಯಾದ ಪ್ರಶಾಂತ್, ಮಲ್ಲಿಕಾರ್ಜುನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Click to comment

Leave a Reply

Your email address will not be published. Required fields are marked *

BELTHANGADY

ಧರ್ಮಸ್ಥಳ: ಸರಣಿ ಅಪ*ಘಾತ, 5 ವಾಹನಗಳಿಗೆ ಹಾನಿ

Published

on

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸರಣಿ ಅಪ*ಘಾತ ಸಂಭವಿಸಿದ್ದು ಹಲವು ವಾಹನಗಳು ಜಖಂಗೊಂಡಿವೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಸೋಮವಾರ 4ರ ಸುಮಾರಿಗೆ ನೇತ್ರಾವತಿಯಿಂದ ಧರ್ಮಸ್ಥಳಕ್ಕೆ ಬರುವ ರಸ್ತೆಯಲ್ಲಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿತು. ಅದರ ಹಿಂದೆ ಇದ್ದ ರಿಕ್ಷಾವೊಂದು ಅಪ*ಘಾತ ಸಂಭವಿಸಿದ ರಿಕ್ಷಾಕ್ಕೆ ತಾಗಿ ಜಖಂಗೊಂಡಿತು.

ವೇಗವಾಗಿ ಬರುತ್ತಿದ್ದ ಕಾರು ಮಗುಚಿ ಬಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆಯಿತು. ಅದರ ಹಿಂದಿನಿಂದ ಬರುತ್ತಿದ್ದ ಎರಡು ಕಾರುಗಳು ಒಂದರ ಹಿಂದೆ ಒಂದರಂತೆ ಡಿಕ್ಕಿ ಹೊಡೆದಿವೆ. ಹೀಗೆ ಒಟ್ಟು 2 ರಿಕ್ಷಾಗಳು ಹಾಗೂ 3 ಕಾರುಗಳು ಜಖಂಗೊಂಡಿವೆ. ರಿಕ್ಷಾ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಎಲ್ಲ ಕಾರುಗಳು ಜಖಂಗೊಂಡಿವೆ.

Continue Reading

BELTHANGADY

ಮುಂದಿನ ನಾಲ್ಕು ದಿನ ಕರಾವಳಿಯಲ್ಲಿ ಮಳೆಯ ಸಿಂಚನ..! ಹವಾಮಾನ ಇಲಾಖೆ ಮುನ್ಸೂಚನೆ

Published

on

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿಗೆ ಬಸವಳಿದು ಜನರು ಕಂಗಾಲಾಗಿದ್ದು, ಕೆಲವೊಂದು ಕಡೆ ವರುಣನ ಕೃಪೆಗಾಗಿ ಜನರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ.

rain

ಈ ನಡುವೆ ಬಿಸಿ ಶಾಖದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನರು ನಿನ್ನೆ ಕೆಲವೆಡೆ ಸುರಿದ ಮಳೆಯಿಂದಾಗಿ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಬೆಂಗಳೂರಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅಲ್ಲಲ್ಲಿ ಅಲ್ಪಾ ಸ್ವಲ್ಪ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ರಾಜ್ಯದ ​ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.

ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಅದರಲ್ಲೂ ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಜತೆಗೆ ಅಲ್ಲಲ್ಲಿ ಚದುರಿದ ಮಳೆ ಬೀಳುವ ಸಂಭವವಿದೆ. ಮೇ 6 ಮತ್ತು 7 ರಂದು ಸಾಧಾರಣ ಅಥವಾ ಅದಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಿಸಿಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

BELTHANGADY

ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

Published

on

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.

gangadhar

ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

gangadhar

ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು  ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Continue Reading

LATEST NEWS

Trending