BELTHANGADY
ಬೆಳ್ತಂಗಡಿ : ದೈವಸ್ಥಾನ ದ ಟ್ರಸ್ಟಿಗೆ ಜಯಾನಂದ ಪಿಲಿಕಳಗೆ ಶಾಸಕ ಪೂಂಜರಿಂದ ಅವಮಾನದ ಆರೋಪ.. ದೂರು ದಾಖಲು..!
ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾ ಅವರು ತಮ್ಮನ್ನು ಮನೆಗೆ ಕೆರೆಸಿ ಸಾರ್ವಜನಿಕರ ಎದುರು ಅವಮಾನಿಸಿದ್ದಾರೆ ಎಂದು ಬೆಳ್ತಂಗಡಿಯ ಶ್ರೀ ಬೈರವ, ಮೂಜಿಲಾಯ ಪುರುಷರಾಯ ದೈವಗಳ ಸೇವಾ ಟ್ರಸ್ಟ್ ನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಳ ಆರೋಪಿಸಿದ್ದಾರೆ.
ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳ್ತಂಗಡಿಯ ಶ್ರೀ ಬೈರವ, ಮೂಜಿಲಾಯ ಪುರುಷರಾಯ ದೈವಗಳ ಸೇವಾ ಟ್ರಸ್ಟ್, ಬೈರವಕಲ್ಲು ಸವಣಾಲು ಗ್ರಾಮ ಇದರ ವತಿಯಿಂದ ನಮ್ಮ ದೈವಸ್ಥಾನವು ಜೀರ್ಣೋದ್ಧಾರಗೊಳ್ಳುತ್ತಿದೆ.
ಈ ಬಗ್ಗೆ ಸರ್ಕಾರದ ಅನುದಾನ ಪಡೆಯುವ ಉದ್ದೇಶದಿಂದ ಹಾಗೂ ಮೂರು ವರ್ಷಗಳ ಹಿಂದೆ 14 ಲಕ್ಷ ರೂಪಾಯಿ ನೀಡುವ ಭರವಸೆಯ ಈಡೇರದ ಹಿನ್ನಲೆಯಲ್ಲಿ ಮಾತನಾಡಲು ಶಾಸಕರ ಮನೆಗೆ ಹೋದಾಗ ನನಗೆ ಸಾರ್ವಜನಿಕರ ಎದುರು ಶಾಸಕರು ಅವಮಾನ ಮಾಡಿದ್ದಾರೆ ಎಂದು ಆರೋಪಿದರು.
ಶಾಸಕರ ಆಹ್ವಾನದ ಮೇರೆಗೆ ಅವರ ಗರ್ಡಾಡಿಯ ಮನೆಗೆ ಪದಾಧಿಕಾರಿಗಳ ನೇತೃತ್ವದಲ್ಲಿ ಜನವರಿ 20 ರಂದು ಬೆಳಗ್ಗೆ 8.30 ರ ಸುಮಾರಿಗೆ ತೆರಳಿದ್ದೆ.
ಶಾಸಕರ ಮನೆಯಲ್ಲಿ ಆಗಲೇ ವಿವಿಧ ಊರಿನ ಹತ್ತಾರು ಜನರಿದ್ದರು . ನಮ್ಮ ಸಮಿತಿಯ ಪದಾಧಿಕಾರಿಗಳ ಜೊತೆಗೆ ಶಾಸಕರೊಂದಿಗೆ ಮಾತನಾಡುತ್ತಿದ್ದಾಗ ಫೇಸ್ ಬುಕ್ ನಲ್ಲಿ ನಾನು ಹಾಕಿದ ಪೋಸ್ಟ್ ವೊಂದರ ವಿಷಯವನ್ನು ಮುಂದಿಟ್ಟುಕೊಂಡು ಶಾಸಕರು ನನ್ನ ಜೊತೆಗೆ ವಾಗ್ವಾದ ನಡೆಸಿದರಲ್ಲದೆ, ಸಾರ್ವಜನಿಕವಾಗಿ ನಿಂದಿಸಿ, ಅವಮಾನ ಮಾಡಿರುತ್ತಾರೆ ಎಂದು ಆರೋಪಿಸಿದರು.
ಇನ್ನು ಶಾಸಕರು ತಮ್ಮನ್ನು ಅವರ ಮನೆಗೆ ಕರೆಸಿಕೊಂಡು, ಈ ರೀತಿ ನಡೆದುಕೊಂಡಿರುವುದು ಸರಿಯಲ್ಲ.
ಈ ಘಟನೆಯ ಬಗ್ಗೆ ನಾನು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸುವ ಬಗ್ಗೆ ಭರವಸೆ ನೀಡಿದ್ದಾರೆ.
ಪ್ರಕರಣ ದಾಖಲಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳದಿದ್ದರೆ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದರು.
BELTHANGADY
Belthangady: ಕಾರಿನ ಮೇಲೆ ಕಾಡಾನೆ ದಾಳಿ- 6 ಮಂದಿಗೆ ಗಾಯ..!
ಬೆಳ್ತಂಗಡಿ: ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿ ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯಾ ಎಂಬಲ್ಲಿ ನಡೆದಿದ್ದು, ಅಲ್ಟೋ ಕಾರಿನ ಮೇಲೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಆರು ಮಂದಿಗೆ ಗಾಯವಾಗಿದೆ.
ಈ ಘಟನೆ ನೆರಿಯಾದ ಪೋಸ್ಟ್ ಆಫೀಸ್ ಬಳಿ ನಡೆದಿದೆ. ನೆರಿಯಾ ಗ್ರಾಮ ಕಾಡಿನ ಅಂಚಿನಲ್ಲಿರೋ ಕಾರಣ ಕಾಡಾನೆ ಆತಂಕ ಹೆಚ್ಚಾಗಿದೆ. ಕಾಡಾನೆ ದಾಳಿಯಿಂದ ಕಾರಿಗೆ ಹಾನಿಯಾಗಿದ್ದು, ಗಾಯಗೊಂಡವರಿಗೆ ಬೆಳ್ತಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
BELTHANGADY
Belthangady: ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಕಾರು ಕಳವು- ನಾಲ್ವರು ಅರೆಸ್ಟ್..!
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯಲ್ಲಿ ಮನೆಯ ಶೆಡ್ನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಿನ್ನಿಗೋಳಿಯ ತಾಳಿಪಾಡಿ ಗ್ರಾಮದ ಉಮಾ ಅಜಯ್ ಶೆಟ್ಟಿ(32), ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಗಾಣದಬೆಟ್ಟು ನಿವಾಸಿ ಸೂರಜ್ ಶೆಟ್ಟಿ(23), ಇಳಂತಿಲ ಗ್ರಾಮದ ಎನ್ಮಾಡಿ ನಿವಾಸಿ ಮಂಜುನಾಥ ಪೂಜಾರಿ (30) ಮತ್ತು ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಪರೆಕಲ್ ನಿವಾಸಿ ಕಿಶೋರ್ ಟಿ.(32) ಬಂಧಿತ ಆರೋಪಿಗಳು.
ಚಾರ್ಮಾಡಿ ಗ್ರಾಮದ ಕಕ್ಕಿಂಜೆಯಲ್ಲಿ ನ. 9 ರಂದು ರಾತ್ರಿ 10 ಗಂಟೆ ವೇಳೆಗೆ ಇಸಾಕ್ ಅವರ ಅಕ್ಕನ ಮಗ ನೌಫಾಲ್ ತನ್ನ ಕಾರ್ಶೆಡ್ಡಿನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರನ್ನು ಗೆಳೆಯ ಸೈಫುದ್ದಿನ್ನ ಸ್ನೇಹಿತ ಸೂರಜ್ ಶೆಟ್ಟಿ ಮತ್ತು ಅಜಯ್ ಶೆಟ್ಟಿ ಅವರು ಬಾಡಿಗೆಗೆ ನೀಡುವಂತೆ ಕೇಳಿದ್ದರು. ಆದರೆ ಕಾರನ್ನು ನೀಡದ ಕಾರಣ ಅವರೇ ಕಳವು ಮಾಡಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು. ಬೆಳ್ತಂಗಡಿ ಪೊಲೀಸ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿ ಅವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಡಿ. ಮತ್ತು ಸಬ್ ಇನ್ಸ್ಪೆಕ್ಟರ್ ಸಮರ್ಥ ರವೀಂದ್ರ ಗಾಣಿಗೇರ, ಎಎಸ್ಐಗಳಾದ ಸಾಮ್ಯುವೆಲ್ ಮತ್ತು ಪೌಲೋಸ್ ಹಾಗೂ ಸಿಬಂದಿ ರಾಜೇಶ್ ಎನ್., ಪ್ರಶಾಂತ್, ಮಂಜುನಾಥ್, ಮಲ್ಲಿಕಾರ್ಜುನ್ ಅವರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಅವರಿಗೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
BELTHANGADY
ಜನ್ಮ ದಿನಾಚರಣೆಯ ಸಂಭ್ರಮದಲ್ಲಿ ಧರ್ಮಸ್ಥಳದ ಖಾವಂದರು
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು 76ನೇ ವರ್ಷಕ್ಕೆ ನ. 25ರಂದು ಪಾದಾರ್ಪಣೆ ಮಾಡುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ವೀರೇಂದ್ರ ಹೆಗ್ಗಡೆ ಅವರಿಗೆ ವಿವಿಧ ಕ್ಷೇತ್ರಗಳ ಗಣ್ಯರು ಶುಭಾಶಯ ಕೋರಿದ್ದಾರೆ. 1948ರ ನವೆಂಬರ್ 25ರಂದು ಜನಿಸಿದ್ದ ಹೆಗ್ಗಡೆ ಅವರು 1964ರ ಅ. 24ರಂದು ಕ್ಷೇತ್ರದ 21ನೇ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತರಾಗಿದ್ದರು. ಹೆಗ್ಗಡೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ವ ಉದ್ಯೋಗ ತರಬೇತಿ ಕೇಂದ್ರಗಳು, ಸಿರಿ ಸಂಸ್ಥೆಗಳು, ಎಲ್ಲ ಬಗೆಯ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ, ವಿದ್ಯಾ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಉಜಿರೆ ಸೇರಿದಂತೆ ಮಂಗಳೂರು, ಮೈಸೂರು, ಧಾರವಾಡ, ಬೆಂಗಳೂರು, ಉಡುಪಿ ಮೊದಲಾದ ಕಡೆ ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ನಡೆಸುತ್ತಿದ್ದಾರೆ. ಇವರ ಹುಟ್ಟುಹಬ್ಬಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನದ ನೌಕರರು, ಊರಿನ ನಾಗರಿಕರು, ಕ್ಷೇತ್ರದ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲ ಸಂಸ್ಥೆಗಳ ಸಿಬಂದಿಯಿಂದ ವಿಶೇಷ ಗೌರವ ಸಲ್ಲಿಸಿದ್ದಾರೆ.
- bangalore4 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- FILM3 days ago
ಆಲಿಯಾ ಭಟ್ ಡೀಫ್ ಫೇಕ್ ವಿಡಿಯೋ ವೈರಲ್ – ವಿಡಿಯೋ ನೋಡಿದ್ರಾ..?
- bangalore6 days ago
ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ ಕುಮಾರ್
- DAKSHINA KANNADA6 days ago
Puttur: ಮಹಿಳೆಗೆ ಅಮಲು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ..!