Connect with us

    BELTHANGADY

    ಬೆಳ್ತಂಗಡಿ ಹಾಲಿ ಶಾಸಕರ ಮೇಲೆ ಏರಿ ಹೋದ ಮಾಜಿ ಶಾಸಕ

    Published

    on

    ಬೆಳ್ತಂಗಡಿ: ತಾಲೂಕಿನಲ್ಲಿ ಸ್ವಾತಂತ್ರ್ಯದ ಅಮೃತಮಹೋತ್ಸವ ಕಾರ್ಯಕ್ರಮಕ್ಕೆ ಶಾಸಕ ಮದ್ಯ ಮಾರಾಟಗಾರರು, ವ್ಯಾಪಾರಿಗಳು, ಅಧಿಕಾರಿ ವರ್ಗದಿಂದ ಹಪ್ತಾ ವಸೂಲಿ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ವಸಂತ ಬಂಗೇರ ಗಂಭೀರ ಆರೋಪ ಮಾಡಿದ್ದಾರೆ.


    ಈ ಬಗ್ಗೆ ಬೆಳ್ತಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇಂತಹ ವಸೂಲಿ ಮೂಲಕ ಅಮೃತಮಹೋತ್ಸವದ ಕಾರ್ಯಕ್ರಮಕ್ಕೆ ಮಾಡುತ್ತೇನೆಂದರೆ ನಮ್ಮ ದೇಶಕ್ಕೆ ನಾಚಿಕೆ ಹಾಗೂ ಅವಮಾನ ಎಂದರು. ಒಂದು ಬಾರಿ ಶಾಸಕರಾಗಿ ಮಾಡಿದ ಕಾರು ಬಾರು ಐದು ಬಾರಿ ಶಾಸಕನಾದರೂ ನನ್ನಿಂದ ಆಗಲಿಲ್ಲ.

    ನನ್ನಿಂದ ಆಗೋದು ಇಲ್ಲ. ಮಾಡೋದು ಇಲ್ಲ. ಅಮೃತ ಮಹೋತ್ಸವ ಪ್ರಯುಕ್ತ ಇತ್ತಿಚೆಗೆ ನನ್ನನ್ನು ಸನ್ಮಾನ ಮಾಡಬೇಕೆಂದು ಆಹ್ವಾನಿಸಲು ಕಚೇರಿಗೆ ತಹಶೀಲ್ದಾರ್‌ ಸಹಿತ ಹಲವು ಅಧಿಕಾರಿಗಳು ಬಂದಿದ್ದರು. ನಾನು ಆಹ್ವಾನ ಪತ್ರಿಕೆ ಸ್ವೀಕರಿಸಿ ಕಾರ್ಯಕ್ರಮಕ್ಕೆ ಬರುವುದಿಲ್ಲವೆಂದು ಹೇಳಿದ್ದೇನೆ.

    ಇಂದು ಬೆಳ್ತಂಗಡಿಗೆ ವರ್ಗಾವಣೆಯಾಗಿ ಬರುವ ಮತ್ತು ಹೋಗುವ ಅಧಿಕಾರಿಗಳು ಹಣ ಕೊಡಬೇಕು. ಬೆಳ್ತಂಗಡಿಯಲ್ಲಿ ದೊಡ್ಡದಾದ ಸರ್ಕಾರಿ ಕಚೇರಿ ಇದ್ದರೂ ಇತ್ತೀಚೆಗೆ ಸರ್ಕಾರಿ ಅಧಿಕಾರಿಗಳನ್ನು ಗುರುವಾಯನಕೆರೆಯ ಬಾರ್‌ಗೆ ಕರೆದುಕೊಂಡು ಹೋಗಿ ಪತ್ರಿಕಾಗೋಷ್ಠಿ ಕರೆದಿದ್ದಾರೆ.

    ಇಂತಹ ಕಾರ್ಯವನ್ನು ಯಾವ ಶಾಸಕನೂ ಮಾಡಬಾರದು. ಅಕ್ರಮ ಸಕ್ರಮ ಆಸ್ತಿ ಮಂಜೂರಿಗೆ ಒಂದು ಎಕರೆಗೆ ಶಾಸಕರು ಒಂದು ಲಕ್ಷ ರೂ ಡಿಮ್ಯಾಂಡ್‌ ಮಾಡುತ್ತಿದ್ದಾರೆ. ಶಕ್ತಿ ಕೇಂದ್ರ ಮುಖಂಡ ಹಾಗೂ ಗ್ರಾಮ ಪಂಚಾಯತ್‌ನ ಗ್ರಾಮಕರಣಿಕನ ಮೂಲಕ ಈ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.


    ಇನ್ನು 15 ದಿನದೊಳಗೆ ನೊಟೀಸ್‌ ಮಾಡಿ ಅಕ್ರಮ ಸಕ್ರಮ ಬೈಠಕ್‌ ಪ್ರಾರಂಭ ಮಾಡಿದ್ದರೆ ತಾಲೂಕು ಆಫೀಸ್‌ಗೆ ನುಗ್ಗುತ್ತೇನೆ ಎಂದು ಎಚ್ಚರಿಕೆ ನೀಡಿದ ಅವರು, ತಾಲೂಕು ಆಫೀಸಿನಲ್ಲಿ ಶಾಸಕರ ಪಿಎ ಎಂದು ಹೇಳಿಕೊಂಡು ಒಬ್ಬ ವಸೂಲಿ ಮಾಡುತ್ತಿದ್ದಾನೆ.

    ತಹಶೀಲ್ದಾರರು ಆತನನ್ನು ತುಳಿದು ಹೊರಗೆ ಹಾಕಬೇಕು. ಮರ, ಮರಳು ಸಾಗಾಟ ನಡೆಯುತ್ತಿದೆ. ಅದ್ಯಾವೂದನ್ನು ಕೇಳುತ್ತಿಲ್ಲ. ನಾನು ಈ ಹಿಂದೆ ಒಂದು ರೂಪಾಯಿ ಭ್ರಷ್ಟಾಚಾರ ಮಾಡಿದ್ದರೆ ನಿಮ್ಮ ಚಪ್ಪಲಿ ಹೊತ್ತು ತಿರುಗುತ್ತೇನೆ. ಪತ್ರಿಕಾ ಮಾಧ್ಯಮದವರು ಇಂತಹ ಹಲವು ಭ್ರಷ್ಟಾಚಾರಗಳನ್ನು ಸುದ್ದಿ ಮಾಡಿ ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಮುಖಂಡ ಬಿ.ಎಂ ಭಟ್‌, ಶೇಖರ್‌ ಲಾಯಿಲ, ಮನೋಹರ್‌ ಮತ್ತಿರರು ಇದ್ದರು.

    BELTHANGADY

    ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

    Published

    on

    ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

    ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.

    ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.

    Continue Reading

    BELTHANGADY

    ಬೆಳ್ತಂಗಡಿ: ವಿದ್ಯುತ್‌ ತಗುಲಿ ಯುವಕ ಮೃ*ತ್ಯು

    Published

    on

    ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.

    ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.

    Continue Reading

    BELTHANGADY

    ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ

    Published

    on

    ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.

    ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್‌ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.

    ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.

    Continue Reading

    LATEST NEWS

    Trending