Connect with us

    LATEST NEWS

    Watch video: ವೈರಲ್‌ ಆಗುತ್ತಿದೆ ಬೆಂಗಳೂರಿನ 3D ಬಿಲ್‌ಬೋರ್ಡ್‌

    Published

    on

    ಬೆಂಗಳೂರು: ಪ್ರತಿಯೊಂದು ಬ್ರಾಂಡ್‌, ಕಂಪೆನಿ ಕೂಡಾ ತಮ್ಮ ಉತ್ಪನ್ನಗಳು ಮತ್ತು ತಮ್ಮ ಕಂಪೆನಿಯ ಬಗ್ಗೆ ಪ್ರಚಾರ ಮಾಡಲು ಹಾಗೂ ಗ್ರಾಹಕರನ್ನು ಆಕರ್ಷಿಸಲು ಟಿ.ವಿ ಮತ್ತು ಸೋಷಿಯಲ್‌ ಮೀಡಿಯಾದಲ್ಲಿ ಭಿನ್ನ ವಿಭಿನ್ನ ಜಾಹೀರಾತುಗಳನ್ನು ನೀಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಂದು ರೆಸ್ಟೋರೆಂಟ್‌ ರಸ್ತೆ ಬದಿಯ ಜಾಹೀರಾತು ಬಿಲ್‌ ಬೋರ್ಡ್‌ನಲ್ಲಿಯೇ ವಿಭಿನ್ನ ಜಾಹೀರಾತನ್ನು ನೀಡಿದೆ. ಈ ಕ್ರಿಯೆಟಿವ್‌ 3D ಅಡ್ವರ್‌ಟೈಸ್‌ಮೆಂಟ್‌ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಕೆಲವರು ಇದು ಎಐ ವಿಡಿಯೋ ಎಂದು ಹೇಳಿದ್ರೆ, ಇನ್ನೂ ಕೆಲವರು ಇದು ನಕಲಿ ಎಂದು ಹೇಳಿದ್ದಾರೆ.

    ನಮ್ಮ ಬೆಂಗಳೂರಿನ ʼಬೆಂಗಳೂರು ತಿಂಡೀಸ್‌ʼ ರೆಸ್ಟೋರೆಂಟ್‌ ಈ ಕ್ರಿಯೇಟಿವ್‌ ಜಾಹೀರಾತನ್ನು ನೀಡಿದ್ದು, ಈ ಕುರಿತ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿವೆ. ವೈರಲ್‌ ವಿಡಿಯೋದಲ್ಲಿ ರಸ್ತೆಬದಿಯಲ್ಲಿನ 3D ಬಿಲ್‌ ಬೋರ್ಡ್‌ನಲ್ಲಿ ಹೊಟೇಲ್‌ ಕೆಲಸಗಾರನೊಬ್ಬ ಬಿಸಿ ಬಿಸಿ ಚಹಾವನ್ನು ಗಾಜಿನ ಲೋಟಕ್ಕೆ ಸುರಿದು ಸರ್ವ್‌ ಮಾಡುವಂತಹ ದೃಶ್ಯವನ್ನು ಕಾಣಬಹುದು.

    ಕೆಲವರು ಇದೆಲ್ಲಾ ವಿಶುವಲ್‌ ಇಫೆಕ್ಟ್‌ (VFX) ಮತ್ತು ಕಂಪ್ಯೂಟರ್‌ ಜನರೇಟೆಡ್‌ ಇಮೇಜರಿ (CGI) ತಂತ್ರಜ್ಞಾನದಿಂದ ಮಾಡಿದ ವಿಡಿಯೋ ಅಂತ ಹೇಳಿದ್ರೆ ಕೆಲವರು ಇದನ್ನು ನೋಡಿದಾಗ ನಿಜ ಜಾಹೀರಾತಿನಂತೆ ಕಾಣುತ್ತಿಲ್ಲ ಇದು ನಕಲಿ ವಿಡಿಯೋ ಇದ್ದಂಗೆ ಕಾಣುತ್ತೆ ಎಂದು ಹೇಳಿದ್ದಾರೆ. ಇನ್ನೂ ಕೆಲವರಂತೂ ಈ ಜಾಹೀರಾತು ತುಂಬಾನೇ ಅದ್ಭುತವಾಗಿದೆ ಎಂದು ಹೊಗಳಿಕೆಯ ಮಾತುಗಳನ್ನಾಡಿದ್ದಾರೆ.

    Watch Video:

    LATEST NEWS

    ದೇವರನ್ನು ರಾಜಕೀಯದಿಂದ ದೂರವಿಡಿ ; ಸುಪ್ರೀಂ ಕೋರ್ಟ್ ಸೂಚನೆ..!

    Published

    on

    ನವ ದೆಹಲಿ : ತಿರುಪತಿ ಲಡ್ಡು ವಿವಾದದಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಸುಪ್ರೀಂ ಕೋರ್ಟ್‌ ಚಾಟಿ ಬೀಸಿದೆ. ದೇವರನ್ನು ರಾಜಕೀಯದಿಂದ ಹೊರಗೆ ಇಡಿ ಎಂದು ಕೋರ್ಟ್‌ ಹೇಳಿದೆ. ಕನಿಷ್ಟ ಪಕ್ಷ ದೇವರುಗಳನ್ನು ರಾಜಕೀಯದಿಂದ ದೂರ ಇಡಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್‌, ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಅವರ ಹೇಳಿಕೆಯನ್ನೇ ಪ್ರಶ್ನೆ ಮಾಡಿದೆ. ಸಿಎಂ ಮಾಡಿರುವ ಆರೋಪಕ್ಕೆ ಸಾಕ್ಷಿ ಒದಗಿಸುವಂತೆ ಕೋರ್ಟ್‌ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ ವಿಶ್ವನಾಥನ್‌ ಅವರ ಪೀಠವು ಸಿಎಂ ಚಂದ್ರಬಾಬು ನಾಯ್ಡು ಅವರು ನೀಡಿದ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದೆ.

    ಸಾಂವಿಧಾನಕವಾಗಿ ಉನ್ನತ ಹುದ್ದೆಯಲ್ಲಿ ಇರುವ ವ್ಯಕ್ತಿಯಾಗಿ ಈ ರೀತಿ ಕೋಟ್ಯಾಂತರ ಜನರ ಭಾವನೆ ಮೇಲೆ ಪರಿಣಾಮ ಬೀರುವ ಹೇಳಿಕೆ ನೀಡಬಾರದು ಎಂದು ಪೀಠ ಹೇಳಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂಬ ವಿಚಾರವಾಗಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಲು ಕೋರಿ ಸಲ್ಲಿಸಿದ ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ದೇವರನ್ನು ರಾಜಕೀಯದಿಂದ ದೂರ ಇಡಬೇಕು ಎಂದು ನಿರೀಕ್ಷಿಸುವುದಾಗಿ ಪೀಠ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಚಾಟಿ ಬೀಸಿದೆ. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 3 ಕ್ಕೆ ಮುಂದೂಡಲಾಗಿದೆ.

    Continue Reading

    LATEST NEWS

    ಬಾವಿಯ ಕಾಂಪೌಂಡ್‌ ಸ್ವಚ್ಛಗೊಳಿಸುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾ*ವು

    Published

    on

    ಮಂಗಳೂರು: ಬಾವಿಯ ಕಾಂಪೌಂಡ್‌ ಸ್ವಚ್ಛಗೊಳಿಸುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾ*ವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರುನಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನೆತ್ತಿಲ ಎಂಬಲ್ಲಿ ನಡೆದಿದೆ.

    ನವೀನ್ ಬೆಳ್ಳಾಡ(48) ಮೃತ ವ್ಯಕ್ತಿ. ನವೀನ್ ಅವರು ಭಾನುವಾರ ಸಂಜೆ ಮನೆಯ ಹಿಂಭಾಗದ ಬಾವಿಯ ಕಾಂಪೌಂಡ್ ಸ್ವಚ್ಛಗೊಳಿಸುತ್ತಿದ್ದರು. ಈ ವೇಳೆ ಆಯ ತಪ್ಪಿ ಬಾವಿಗೆ ಬಿದ್ದು ಮೃ*ತಪಟ್ಟಿದ್ದಾರೆ. ಮನೆಯೊಳಗೆ ನವೀನ್ ಕಾಣದಾಗ ಪತ್ನಿ ಮತ್ತು ಮಕ್ಕಳು ಹುಡುಕಾಡಿ ಬಾವಿಯ ಬಳಿ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.

    ಸ್ಥಳೀಯರು ಸೇರಿ ನವೀನ್ ರನ್ನು ಬಾವಿಯಿಂದ ಮೇಲಕ್ಕೆತ್ತಿದ್ದು ಅದಾಗಲೇ ಅವರು ಮೃ*ತಪಟ್ಟಿದ್ದರು ಎನ್ನಲಾಗಿದೆ. ಸೆಂಟ್ರಿಗ್ ಕೆಲಸ ಮಾಡುತ್ತಿದ್ದ ನವೀನ್ ಅವರಿಗೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಪುತ್ರಿ ಮತ್ತು ನಾಲ್ಕನೇ ತರಗತಿ ಓದುತ್ತಿರುವ ಪುತ್ರನಿದ್ದಾನೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    Continue Reading

    DAKSHINA KANNADA

    ಕಾರ್ಕಳದಲ್ಲಿ ಭೀಕರ ಅಪಘಾತ; ತಂದೆ ಸಹಿತ ಮೂರು ಮಕ್ಕಳ ದುರ್ಮರಣ

    Published

    on

    ಕಾರ್ಕಳ : ಕಾರ್ಕಳ – ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಇಂದು (ಸೆ.30) ಭೀಕರ ಅಪಘಾತ ಸಂಭವಿಸಿದೆ. ಮಿನಿ ಲಾರಿ ಮತ್ತು ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.


    ವೇಣೂರಿನಿಂದ ನಲ್ಲೂರು ಕಡೆಗೆ ಬರುತ್ತಿದ್ದ ಬೈಕ್‌ಗೆ ಕಾರ್ಕಳದಿಂದ ಗುರುವಾಯನಕೆರೆಯತ್ತ ಸಾಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.
    ಬೈಕ್ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದರು. ತಂದೆ ಸುರೇಶ್ ಆಚಾರ್ಯ (36), ಮಕ್ಕಳಾದ ಸಮಿಕ್ಷಾ (7) ಸುಶ್ಮಿತಾ (5) ಸುಶಾಂತ್ (2) ಮೃತಪಟ್ಟವರು. ತಾಯಿ ಮೀನಾಕ್ಷಿ (32) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    Trending