LATEST NEWS
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮೀಟರ್ ಬಡ್ಡಿ ದಂಧೆ ಫೈನಾನ್ಷಿಯರ್ ಮನೆ ಮೇಲೆ ಸಿಸಿಬಿ ದಾಳಿ:
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮೀಟರ್ ಬಡ್ಡಿ ದಂಧೆ ಫೈನಾನ್ಷಿಯರ್ ಮನೆ ಮೇಲೆ ಸಿಸಿಬಿ ದಾಳಿ:
ಬೆಂಗಳೂರು: ಮೀಟರ್ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಹಾಗೂ ಬಡ್ಡಿ ಪಾವತಿಸದ ಸಾರ್ವಜನಿಕರಿಗೆ ಜೀವ ಬೆದರಿಕೆಯೊಡ್ಡುತ್ತಿದ್ದ ಆರೋಪದಡಿ ನಾಗರಾಜ್ ಶೆಟ್ಟಿ ಎಂಬುವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಶೆಟ್ಟಿ’ಮಲ್ಲೇಶ್ವರ ನಿವಾಸಿ ನಾಗರಾಜ್, ‘ಬಾಲಾಜಿ ಫೈನಾನ್ಸ್’ ಹೆಸರಿನಲ್ಲಿ ಕಚೇರಿ ಇಟ್ಟುಕೊಂಡಿದ್ದರು. ಮಲ್ಲೇಶ್ವರ ಹಾಗೂ ವೈಯಾಲಿಕಾವಲ್ ಸುತ್ತಮುತ್ತಲಿನ ವ್ಯಾಪಾರಿಗಳಿಗೆ ಬಡ್ಡಿಗೆ ಸಾಲ ಕೊಡುತ್ತಿದ್ದರು.ಶೆಟ್ಟಿ ವಿರುದ್ಧ ಇತ್ತೀಚೆಗೆ ದೂರು ಬಂದಿತ್ತು. ಅದರ ತನಿಖೆ ಕೈಗೊಂಡ ವಿಶೇಷ ತಂಡ, ಆರೋಪಿಯನ್ನು ಬಂಧಿಸಿದೆ’ ‘ನ್ಯಾಯಾಲಯದ ಶೋಧನಾ ವಾರೆಂಟ್ ಪಡೆದು ನಾಗರಾಜ್ ಮನೆ ಮೇಲೂ ದಾಳಿ ಮಾಡಲಾಯಿತು.₹ 22 ಲಕ್ಷ ನಗದು, 164 ಚೆಕ್ಗಳು, 84 ಡಿ.ಡಿ.ಗಳು ಹಾಗೂ ಲಕ್ಷಾಂತರ ಮೌಲ್ಯದ ಆಸ್ತಿ ಪತ್ರಗಳು ಪತ್ತೆಯಾಗಿವೆ’ ‘ಹಲವು ವರ್ಷಗಳಿಂದ ಮೀಟರ್ ಬಡ್ಡಿ ವ್ಯವಹಾರ ನಡೆಸುತ್ತಿದ್ದ ನಾಗರಾಜ್, ಶ್ಯೂರಿಟಿ ಇಟ್ಟುಕೊಂಡು ಸಾಲ ಕೊಡುತ್ತಿದ್ದರು.
ಸಾರ್ವಜನಿಕರಿಂದ ಶೇ 6ರಿಂದ ಶೇ 10ರಷ್ಟು ಬಡ್ಡಿ ವಸೂಲಿ ಮಾಡುತ್ತಿದ್ದರು. ಅಸಲು ಹಾಗೂ ನಿಗದಿತ ಬಡ್ಡಿ ಪಾವತಿ ಮಾಡಿದರೂ ಮತ್ತಷ್ಟು ಬಡ್ಡಿ ಪಾವತಿಸುವಂತೆ ಬೆದರಿಸುತ್ತಿದ್ದರು’ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.‘ಮಲ್ಲೇಶ್ವರ ಬಟ್ಟೆ ವ್ಯಾಪಾರಿ ಸುನೀಲ್ಕುಮಾರ್ ಎಂಬುವರು 2017ರಲ್ಲಿ ನಾಗರಾಜ್ ಶೆಟ್ಟಿ ಬಳಿ ₹ 5 ಲಕ್ಷ ಸಾಲ ಪಡೆದಿದ್ದರು. ನಿಗದಿತ ಸಮಯಕ್ಕೆ ಅದನ್ನು ಮರು ಪಾವತಿ ಮಾಡಿದ್ದರು. ಅಷ್ಟಾದರೂ ಆರೋಪಿ, ಮತ್ತಷ್ಟು ಹಣ ನೀಡುವಂತೆ ಪೀಡಿಸಲಾರಂಭಿಸಿದ್ದರು.
ಬೇಸತ್ತ ಸುನೀಲ್, ವೈಯಾಲಿಕಾವಲ್ ಠಾಣೆಗೆ ದೂರು ನೀಡಿದ್ದರು. ಅದರ ತನಿಖೆಯನ್ನು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ಸಿಸಿಬಿಗೆ ವರ್ಗಾಯಿಸಿದ್ದರು’ ಈ ತನಿಖೆಯ ಜಾಡು ಹಿಡಿದು ಸಿಸಿಬಿ ಪೊಲೀಸರು ನಾಗರಾಜ ಶೆಟ್ಟಿಯನ್ನು ಬಂಧಿಸಿದ್ದಾರೆ.
LATEST NEWS
ಉಡುಪಿ: ಅನ್ಯಕೋಮಿನವರ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತವೇ ಮುಖ್ಯ ಕಾರಣ : ಸುನಿಲ್ ಕುಮಾರ್
ಉಡುಪಿ : ರಾಜ್ಯದಲ್ಲಿ ಅನ್ಯಕೋಮಿನವರು ದೊಡ್ಡ ಪ್ರಮಾಣದಲ್ಲಿ ವಿಜ್ರಂಭಿಸಲು ಆರಂಭ ಮಾಡಿದ್ದಾರೆ. ರಾಜ್ಯದಲ್ಲಿ ಒಂದಾದ ನಂತರ ಒಂದು ಘಟನೆಗಳು ನಡೆಯುತ್ತಿದೆ. ಅನ್ಯಕೋಮಿನವರ ಈ ಪ್ರಮಾಣದ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತ ಮತ್ತು ಧೋರಣೆಯೇ ಮುಖ್ಯ ಕಾರಣ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದರು.
ಹುಬ್ಬಳ್ಳಿಯ ನೇಹಾ ಹಿರೇಮಠ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿಯಲ್ಲಿ ಶನಿವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯನವರು ನೇಹಾ ಕುಟುಂಬಕ್ಕೆ ಸಾಂತ್ವನ ಹೇಳುವ ಬದಲು ವೈಯಕ್ತಿಕ ಘಟನೆ ಎಂದು ಹೇಳುತ್ತಾರೆ.
ಇದನ್ನೂ ಓದಿ : ನೇಹಾ ಹ*ತ್ಯೆ ಪ್ರಕರಣ : ಆಕ್ರೋಶ ಹೊರ ಹಾಕಿದ ಸಿನಿತಾರೆಯರು
ಮುಖ್ಯಮಂತ್ರಿಯಾದವರು ಇಂತಹ ಘಟನೆಯಾದಾಗ ಜಾರಿಕೊಂಡರೆ ರಾಜ್ಯದ ರಕ್ಷಣೆ ಯಾರು ಮಾಡಬೇಕು? ರಾಮೇಶ್ವರಂ ಬಾಂಬ್ ಸ್ಫೋಟ, ಪಾಕ್ ಜಿಂದಾಬಾದ್, ಕೊ*ಲೆ ಸಂದರ್ಭದಲ್ಲಿ ಸಿಎಂ ಮಾತನಾಡುವುದಿಲ್ಲ. ಹಾಡು ಹಗಲೇ ಹ*ತ್ಯೆಯಾದಾಗ ಕಠಿಣ ಧೋರಣೆ ವಹಿಸಬೇಕಿತ್ತು. ಲವ್ ಜಿ*ಹಾದ್, ಮತಾಂ*ಧತೆ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗರಿಗೆದರಿದೆ. ರಾಜ್ಯದ ರಕ್ಷಣೆ ಕಾಂಗ್ರೆಸ್ ನಿಂದ ಅಸಾಧ್ಯ. ಸಮಾಜ ದೊಡ್ಡ ಪ್ರಮಾಣದಲ್ಲಿ ಜಾಗೃತವಾಗ ಬೇಕಾದ ಅನಿವಾರ್ಯತೆ ಇದೆ ಎಂದರು.
FILM
ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!
ಮಲಯಾಳಂನ ಮಂಜುಮ್ಮೆಲ್ ಬಾಯ್ಸ್ ಭಾರೀ ಯಶಸ್ಸನ್ನು ಗಳಿಸಿದ ಚಿತ್ರ. ಚಿತ್ರ ನೋಡಿ ಮತ್ತೆ ಮತ್ತೆ ವೀಕ್ಷಿಸಲು ಥಿಯೇಟರ್ ಗೆ ಜನ ಲಗ್ಗೆ ಇಡುತ್ತಿದ್ದಾರೆ. ಮಲಯಾಳಂ ಸಿನಿ ಪ್ರಿಯರು ಚಿತ್ರ ನೋಡಿ ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಯಾವುದೇ ಸಿನಿಮಾ ಬಂದ್ರೂ ಅದು ಓಟಿಟಿಯಲ್ಲಿ ಯಾವಾಗ ಬರುತ್ತೆ ಅಂತ ಕಾಯೋದು ಸಹಜ. ಇದೀಗ ‘ಮಂಜುಮ್ಮೆಲ್ ಬಾಯ್ಸ್’ ಸರದಿ.
ಅತಿ ಹೆಚ್ಚು ಗಳಿಕೆ :
‘ಮಂಜುಮ್ಮೆಲ್ ಬಾಯ್ಸ್’ ಸರಳ ಕಥಾಹಂದರ ಹೊಂದಿದ್ದರೂ ಅದ್ಭುತವಾಗಿ ಕಟ್ಟಿಕೊಡಲಾಗಿದೆ. ಚಿತ್ರವನ್ನು ಚಿದಂಬರಂ ಮನೋಜ್ಞವಾಗಿ ಚಿತ್ರಿಸಿದ್ದಾರೆ. ಫೆಬ್ರವರಿ 22 ರಂದು ಈ ಚಿತ್ರ ತೆರೆಕಂಡಿತ್ತು. ಬಾಕ್ಸ್ ಆಫೀಸ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಗ್ರಾಸ್ ಕಲೆಕ್ಷನ್ 200 ಕೋಟಿ ರೂಪಾಯಿ ದಾಟಿದೆ. ಮಲಯಾಳಂನಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಸಿನಿಮಾ ಎಂಬ ಹೆಗ್ಗಳಿಕೆ ಗಳಿಸಿದೆ.
ಶೌಬಿನ್ ಶಾಹಿರ್, ಶ್ರೀನಾಥ್ ಬಾಸಿ, ಬಾಲು ವರ್ಗೀಸ್, ಗಣಪತಿ ಸೇರಿದಂತೆ ಸಾಕಷ್ಟು ಜನ ಕಲಾವಿದರು ಚಿತ್ರದಲ್ಲಿ ಪಾತ್ರವಾಗಿದ್ದಾರೆ. ಅಂದಾಜು 20 ಕೋಟಿ ರೂ. ಬಜೆಟ್ನಲ್ಲಿ ನಿರ್ಮಾಣವಾಗಿದ್ದ ಸ್ಟಾರ್ ನಟರಿಲ್ಲದ ಈ ಸಿನಿಮಾ 200 ಕೋಟಿ ರೂ. ಕಲೆಕ್ಷನ್ ಮಾಡಿರೋದು ಆಶ್ಚರ್ಯ ಹುಟ್ಟು ಹಾಕಿದೆ.
ಓಟಿಟಿಯಲ್ಲಿ ಯಾವಾಗ ?
‘ಮಂಜುಮ್ಮೆಲ್ ಬಾಯ್ಸ್’ ಸಿನಿಮಾವನ್ನು ಥಿಯೇಟರ್ ಅಂಗಳದಲ್ಲಿ ನೋಡಿ ಎಂಜಾಯ್ ಮಾಡಿದವರು ಅನೇಕ ಮಂದಿ ಇದ್ದಾರೆ. ಇದೀಗ ಸಿನಿಮಾ ಓಟಿಟಿಯಲ್ಲಿ ಯಾವಾಗ ಅನ್ನೋ ಪ್ರಶ್ನೆ ಹುಟ್ಟಿತ್ತು. ಇದಕ್ಕೆ ಉತ್ತರವೂ ಸಿಕ್ಕಿದೆ.
ಡಿಸ್ನಿ ಪ್ಲಸ್ ಹಾಟ್ಸ್ಟರ್ನಲ್ಲಿ ಮೇ 3 ರಂದು ಸ್ಟ್ರೀಮಿಂಗ್ ಆಗುವುದು ಬಹುತೇಕ ಖಚಿತವಾಗಿದೆ. ಫೆಬ್ರವರಿ 22 ರಂದು ತೆರೆಗೆ ಬಂದಿದ್ದ ಸಿನಿಮಾ ಈಗಾಗಲೇ 50 ದಿನ ಪೂರೈಸಿದೆ. ಸದ್ಯ ತೆಲುಗು, ತಮಿಳು, ಕನ್ನಡಕ್ಕೂ ಸಿನಿಮಾ ಡಬ್ ಆಗಿದ್ದು, ಏಕಕಾಲಕ್ಕೆ ಓಟಿಟಿಯಲ್ಲಿ ಸ್ಕ್ರೀಮಿಂಗ್ ಆಗಲಿದೆಯಾ ಎಂಬುದು ತಿಳಿದು ಬಂದಿಲ್ಲ.
BELTHANGADY
ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!
ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ 8 ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ಏ.19ರಂದು ನಡೆದಿದೆ. ಉಪ್ಪಿನಂಗಡಿಯ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿ ವಿದ್ಯಾರ್ಥಿಯಾಗಿದ್ದ ನಂದನ್ (13) ಎಂಬಾತ ಆತ್ಮಹತ್ಯೆಗೆ ಶರಣಾದ ಬಾಲಕ.
Read More..; ನಗರ ಸಭೆ ಉಪಾಧ್ಯಕ್ಷೆ ಮಗ ಸೇರಿ ನಾಲ್ವರ ಹ*ತ್ಯೆ! ಹಂ*ತಕರ ಪತ್ತೆಗೆ ವಿಶೇಷ ತಂಡ ರಚನೆ
ಪಂಜದ ದಿವಂಗತ ರೋಹಿತ್ ಗೌಡ ಎಂಬವರ ಮಗನಾಗಿದ್ದ ಈತ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ಮಾವನ ಮನೆಯಲ್ಲಿದ್ದ. ಅಲ್ಲಿಂದಲೆ ಉಪ್ಪಿನಂಗಡಿಯ ಖಾಸಗಿ ಶಾಲೆಗೆ ಹೋಗುತ್ತಿದ್ದ. ಈತ ಈ ಬಾರಿ ಏಳನೇ ತರಗತಿ ಉತ್ತೀರ್ಣನಾಗಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ 8 ನೇ ತರಗತಿಗೆ ತೇರ್ಗಡೆ ಹೊಂದಿದ್ದ. ಏ.19ರಂದು ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮನೆಯಲ್ಲಿ ಒತ್ತಾಯಿಸಿದ್ದ. ಮನೆಯ ಇನ್ವಾರ್ಟರ್ ರಿಪೇರಿಗೆ ಬಂದಿರುವುದರಿಂದ ಇವತ್ತು ಬೇಡ ನಾಳೆ ಸೈಕಲ್ ರಿಪೇರಿ ಮಾಡಿಕೊಡಲಾಗುವುದೆಂದು ಮನೆಯವರು ಹೇಳಿದ್ದಾರೆ ಎನ್ನಲಾಗಿದೆ. ಇದೇ ನೆಪವನ್ನು ಇಟ್ಟುಕೊಂಡು ಮನನೊಂದ ಬಾಲಕ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಎಲ್ಲಾ ವಿಚಾರವನ್ನು ಮನೆಯವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಸದ್ಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.