Connect with us

    LATEST NEWS

    ಪೊಲೀಸ್‌ ಸಿಬಂದಿಯ ಸ್ಕೂಟರನ್ನೇ ಕದ್ದು ಹರಾಜು ಹಾಕಿದ ಪೊಲೀಸರು..!

    Published

    on

    ನಾಲ್ವರು ಪೊಲೀಸರ ನಡುವೆ ಒಂದು ಸ್ಕೂಟರ್ ವಿವಾದ ಸೃಷ್ಟಿಸಿದೆ. ಇಲ್ಲಿ ಪೊಲೀಸರೇ ಮತ್ತೋರ್ವ ಪೊಲೀಸರಿಗೆ ಅನ್ಯಾಯ ಎಸಗಿದ್ದಾರೆ.

    ಬೆಂಗಳೂರು: ಪೊಲೀಸರು ಅಂದರೆ ಸಮಾಜದಲ್ಲಿ ಗೌರವದ ಸ್ಥಾನವಿದೆ. ಅವರು ಕಾನೂನು ಪಾಲಕರು, ನ್ಯಾಯ ಒದಗಿಸುತ್ತಾರೆ, ಕಷ್ಟ ಬಂದಾಗ ನೆರವಾಗುತ್ತಾರೆ ಎಂಬಿತ್ಯಾದಿ ಭಾವನೆ ಜನರಲ್ಲಿದೆ.

    ಅದಕ್ಕೆ ತಕ್ಕಂತೆ ನ್ಯಾಯ ಒದಗಿಸಿ ಜನರ ವಿಶ್ವಾಸಕ್ಕೆ ಪಾತ್ರರಾದ ಪೊಲೀಸರು ನಮ್ಮ ನಡುವೆ ಸಾಕಷ್ಟು ಮಂದಿ ಇದ್ದಾರೆ.

    ಆದರೆ ಇದಕ್ಕೆ ವ್ಯತಿರಿಕ್ತವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಾಲ್ವರು ಪೊಲೀಸರ ನಡುವೆ ಒಂದು ಸ್ಕೂಟರ್ ವಿವಾದ ಸೃಷ್ಟಿಸಿದೆ. ಇಲ್ಲಿ ಪೊಲೀಸರೇ ಮತ್ತೋರ್ವ ಪೊಲೀಸರಿಗೆ ಅನ್ಯಾಯ ಎಸಗಿದ್ದಾರೆ.

    ಕಳೆದು ಹೋದ ಸ್ಕೂಟರ್ ಪತ್ತೆಯೇ ಆಗಿಲ್ಲ ಎಂದು ಸುಳ್ಳು ಹೇಳಿದ್ದಲ್ಲದೆ ಅದನ್ನು ಹರಾಜಿನಲ್ಲಿ ಮತ್ತೋರ್ವ ಸಿಬಂದಿಯ ಪತ್ನಿಗೆ 4000 ರೂಪಾಯಿಗೆ ಮಾರಾಟ ಮಾಡಿದ್ದಾರೆ. 3 ವರ್ಷಗಳ ಹಿಂದೆ ನಡೆದ ಕಳವು ಪ್ರಕರಣ ಇದೀಗ ಸರಕಾರ ಸಂಚಾರ ನಿಯಮ ಉಲ್ಲಂಘನೆಯ ದಂಡದಲ್ಲಿ ಶೇ.50 ರಿಯಾಯತಿ ಘೋಷಿಸಿದ ಹಿನ್ನೆಲೆಯಲ್ಲಿ ಬೆಳಕಿಗೆ ಬಂದಿದೆ.

    ಹಾಗಾದರೆ ಏನಿದು ಘಟನೆ… ಈ ಸ್ಟೋರಿ ನೋಡಿ..
    ಕಸ್ಟಮ್ಸ್ ಮತ್ತು ಸೆಂಟ್ರಲ್ ಎಕ್ಸೈಸ್‍ ಕಾನ್‍ಸ್ಟೆಬಲ್ ಆಗಿದ್ದ ಎ. ನಾಗರಾಜು ಅವರ ಗಿಯರ್‌ ಲೆಸ್‌ ಸ್ಕೂಟರ್ 2020 ಆಗಸ್ಟ್‌ 12 ರಂದು ಬೆಂಗಳೂರಿನ ಕೆಮ್ಮಗೊಂಡನಹಳ್ಳಿಯಲ್ಲಿರುವ ಅವರ ನಿವಾಸದ ಆವರಣದಿಂದ ಕಳವಾಗಿತ್ತು.

    ಈ ಬಗ್ಗೆ ನಾಗರಾಜು 2020 ನವೆಂಬರ್ 8 ರಂದು ಗಂಗಮ್ಮನಗುಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಆದರೆ ನಾಗರಾಜು ದೂರು ನೀಡುವ ಮೊದಲೇ ಅಂದರೆ ನವೆಂಬರ್‌ 4 ರಂದೇ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸ್ಕೂಟರ್ ಅನ್ನು ಹರಾಜು ಮಾಡಲಾಗುತ್ತದೆ.

    ಆಶಾ ರವಿ ಎಂಬ ಮಹಿಳೆ 4,000 ರೂಪಾಯಿಗೆ ಬಿಡ್ ಮಾಡಿ ಸ್ಕೂಟರ್ ಪಡೆಯುತ್ತಾರೆ. ಆಕೆ ಬೇರೆ ಯಾರೂ ಅಲ್ಲ, ಬ್ಯಾಡರಹಳ್ಳಿಯಲ್ಲಿ ಆಗ ಹೆಡ್ ಕಾನ್‍ಸ್ಟೆಬಲ್ ಆಗಿದ್ದ ರವಿ ಅವರ ಪತ್ನಿ. ರಾಜೀವ್ ಎನ್ನುವವರು ಆಗ ಪೊಲೀಸ್ ಇನ್‍ಸ್ಪೆಕ್ಟರ್ ಆಗಿದ್ದರು.

    2021ರ ಮಾರ್ಚ್‍ನಲ್ಲಿ ಗಂಗಮ್ಮನಗುಡಿ ಪೊಲೀಸರು ನಾಗರಾಜು ಅವರ ಸ್ಕೂಟರ್ ಪತ್ತೆಯಾಗಿಲ್ಲ ಎಂದು ಹೇಳಿ ಪ್ರಕರಣವನ್ನು ಕ್ಲೋಸ್‌ ಮಾಡಿದ್ದರು.

    ಇತ್ತೀಚೆಗೆ ಸರಕಾರ ಸಂಚಾರ ನಿಯಮ ಉಲ್ಲಂಘನೆ ದಂಡದಲ್ಲಿ ಶೇ.50 ರಿಯಾಯತಿ ಘೋಷಿಸಿತ್ತು. ಸ್ಕೂಟರ್ ಮಾಲಕ ನಾಗರಾಜು ಅವರು ಕುತೂಹಲದಿಂದ ತನ್ನ ಕಳವಾಗಿದ್ದ ಸ್ಕೂಟರಿನ ನೋಂದಣಿ ಸಂಖ್ಯೆಯನ್ನು ನಮೂದಿಸಿದಾಗ ಅವರಿಗೆ ಅಚ್ಚರಿ ಕಾದಿತ್ತು.

    ಕಳವಾಗಿದ್ದ ತನ್ನ ಸ್ಕೂಟರ್‌ ವಿರುದ್ಧ ಇತ್ತೀಚೆಗೆ ದಾಖಲಾಗಿದ್ದ ಸಂಚಾರ ಉಲ್ಲಂಘನೆ ಪ್ರಕರಣ ಅವರ ಗಮನಕ್ಕೆ ಬಂದಿದೆ. ಮಹಿಳೆಯೊಬ್ಬರು ಹೆಲ್ಮೆಟ್ ಇಲ್ಲದೆ ಈ ಸ್ಕೂಟರ್‌ ಚಲಾಯಿಸಿದ ಬಗ್ಗೆ ಕೇಸ್ ಬಿದ್ದಿತ್ತು.

    ನಾಗರಾಜು ಕೂಡಲೇ ಮಹಿಳೆಯ ವಿಳಾಸ ಪತ್ತೆ ಹಚ್ಚಿದಾಗ ಆಕೆ ಹೆಡ್ ಕಾನ್‍ಸ್ಟೆಬಲ್ ರವಿಯ ಪತ್ನಿ ಎಂದು ತಿಳಿದು ಬಂತು.

    ಕೂಡಲೇ ಅವರು ರವಿ ಮತ್ತು ರಾಜೀವ್ ಅವರಿಂದ ವಿವರಣೆ ಕೋರಿದರು. ಈ ಸಂದರ್ಭದಲ್ಲಿ ನಾಗಾರಾಜು, ರವಿ ಮತ್ತು ರಾಜೀವ್ ನಡುವೆ ತೀವ್ರ ವಾಗ್ವಾದ ನಡೆಯಿತು, ಆದರೆ ನಾಗರಾಜು ಯಾವುದೇ ದೂರು ದಾಖಲಿಸಲಿಲ್ಲ.

    ನಾಜರಾಜು ಪ್ರಕರಣ ದಾಖಲಿಸದಿದ್ದರೂ ಈ ಘಟನೆ ನಡೆದ ಮರುದಿನ ಈ ಕುರಿತು ಸ್ಥಳೀಯ ದಿನಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಯಿತು.

    ಅದನ್ನು ಓದಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಈ ಬಗ್ಗೆ ಸ್ವಯಂಪ್ರೇರಿತ ಕ್ರಮ ಕೈಗೊಂಡು, ಮೂವರನ್ನೂ ವಿಚಾರಣೆಗೆ ಒಳಪಡಿಸಿದರು.

    ಸ್ಕೂಟರ್‌ ಕದ್ದು ಹರಾಜಿಗೆ ಹಾಕಿದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಅಮಾನತು ಶಿಕ್ಷೆಗೆ ಒಳಪಡಿಸ ಬೇಕೆಂಬ ಒತ್ತಾಯ ಕೇಳಿ ಬಂದಿದೆ.

    ಕದ್ದ ಸ್ಕೂಟರ್ ಅನ್ನು ನಿಗದಿತ ನಿಯಮಾವಳಿಗಳನ್ನು ಪಾಲಿಸದೆ ಹರಾಜು ಹಾಕಿ ನ್ಯಾಯಾಲಯಕ್ಕೆ ಸುಳ್ಳು ಹೇಳಿದ್ದ ಆರೋಪದ ಮೇಲೆ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರವಿ ಮತ್ತು ನೆಲಮಂಗಲ ಟೌನ್ ಪೊಲೀಸ್ ಇನ್ಸ್ ಪೆಕ್ಟರ್ ರಾಜೀವ್ ವಿರುದ್ಧ ಪೊಲೀಸರು ವಿಚಾರಣೆ ನಡೆಸಿದ್ದಾರೆ.

    ತನಿಖಾ ವರದಿಯು ಈಗ ನೃಪತುಂಗ ರಸ್ತೆಯ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರ ಕಚೇರಿಯಲ್ಲಿದೆ.

    ದ್ವಿಚಕ್ರ ವಾಹನವನ್ನು ಈಗ ಅದರ ನಿಜವಾದ ಮಾಲಕರಿಗೆ ಹಿಂತಿರುಗಿಸಲಾಗಿದೆ. ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಮಾಲಕರು ಹೇಳಿದ್ದಾರೆ. ಹಾಗಾಗಿ ಪ್ರಕರಣವು ನ್ಯಾಯಾಲಯದ ಮೆಟ್ಟಲೇರುವ ಸಾಧ್ಯತೆ ಇದೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಬಂಟ್ವಾಳ :ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾ*ತ; ಪತ್ನಿ ಸಾ*ವು; ಪತಿ ಗಂಭೀ*ರ

    Published

    on

    ಬಂಟ್ವಾಳ : ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸಾ*ವನ್ನಪ್ಪಿದ್ದು, ಪತಿ ಗಂ*ಭೀರವಾಗಿ ಗಾ*ಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾ*ವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಅನಿಶ್ ಕೃಷ್ಣ ಗಂಭೀ*ರವಾಗಿ ಗಾ*ಯಗೊಂಡಿದ್ದಾರೆ.

    ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿಯ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿದೆ. ಬಳಿಕ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿ*ಕ್ಕಿ ಹೊಡೆದಿದೆ.

    ಡಿ*ಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

    ಎರಡು ದಿನದ ಹಿಂದಷ್ಟೇ ಮದುವೆ : 

    ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮಾನಸ ಹಾಗೂ ಅನಿಶ್ ಕೃಷ್ಣ  ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ ‌ಘ‌ಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ

    Continue Reading

    LATEST NEWS

    ಲಿಫ್ಟ್ ಕೊಡುವ ಮುನ್ನ ಎಚ್ಚರ: ಡ್ರಾಪ್ ಕೇಳಿ ಚಾಕು ಇರಿದ ದು*ಷ್ಕರ್ಮಿ

    Published

    on

    ಮಂಗಳೂರು/ಬೆಂಗಳೂರು : ಇತ್ತೀಚಿಗೆ ಕ್ರೈಂ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಕೊ*ಲೆ ಮಾಡೋದಕ್ಕಂತೂ ಕಾರಣವೇ ಬೇಡ. ಕ್ಷುಲ್ಲಕ ಕಾರಣಕ್ಕಾಗಿ ಒಬ್ಬ ವ್ಯಕ್ತಿಯನ್ನು ಹ*ತ್ಯೆ ಮಾಡಲು ಹೇಸುವುದಿಲ್ಲ. ಅಂತಹುದೇ ಕೃ*ತ್ಯ ಬೆಂಗಳೂರಿನಲ್ಲಿ ನಡೆದಿದೆ. ಬೈಕ್ ನಲ್ಲಿ ಲಿಫ್ಟ್ ಕೊಟ್ಟಾತನಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ.

    ಖಾಸಗಿ ಬ್ಯಾಂಕ್ ಉದ್ಯೋಗಿ ಪಿ.ಈಶ್ವರಗೌಡ(38) ಚೂ*ರಿ ಇರಿತಕ್ಕೊಳಗಾದವರು. ರೋಹಿತ್ ಗೌಡ (24) ಚೂ*ರಿ ಇರಿದಾತ. ಈಶ್ವರಗೌಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ರೋಹಿತ್ ಗೌಡನನ್ನು ಬಂಧಿಸಲಾಗಿದೆ.

    ಅವಮಾನಕ್ಕೆ ಪ್ರತೀಕಾರ :

    ಸಾಲ ವಸೂಲಾತಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪಿ.ಈಶ್ವರಗೌಡ ಕ್ರಿಕೆಟ್ ಟೂರ್ನಮೆಂಟ್ ವೇಳೆ ರೋಹಿತ್ ಗೌಡನನ್ನು ಸಾರ್ವಜನಿಕವಾಗಿ ಅವಮಾನಿಸಿದ್ದ ಎನ್ನಲಾಗಿದೆ. ಇದಕ್ಕೆ ಪ್ರತೀಕಾರವಾಗಿ ಆರೋಪಿ ಆತನನ್ನು ಕೊ*ಲ್ಲಲು ಸಂಚು ರೂಪಿಸಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.

    ಈಶ್ವರಗೌಡ ತನ್ನ ಸ್ನೇಹಿತನೊಂದಿಗೆ ಢಾಬಾವೊಂದಕ್ಕೆ ಊಟಕ್ಕೆ ಹೋಗಿದ್ದರು. ಅವರು ಢಾಬಾದಿಂದ ಹೊರಬಂದ ನಂತರ, ಗೇಟ್‌ನಲ್ಲಿದ್ದ ಆರೋಪಿ ಡ್ರಾಪ್ ನೀಡುವಂತೆ ವಿನಂತಿಸಿದ್ದ. ಈಶ್ವರ್ ಕೂಡ ಅದೇ ದಾರಿಯಲ್ಲಿ ಹೋಗುತ್ತಿದ್ದರಿಂದ ಅವನು ಡ್ರಾಪ್ ನೀಡಲು ಒಪ್ಪಿದರು. ಸ್ವಲ್ಪ ಹೊತ್ತು ಬೈಕ್ ಹಿಂದೆ ಕುಳಿತು ಸವಾರಿ ಮಾಡಿದ ರೋಹಿತ್, ಸ್ಮಶಾನದ ಬಳಿ ನಿರ್ಜನ ಪ್ರದೇಶದಲ್ಲಿ ತಾನು ತಂದಿದ್ದ ಚಾಕುವಿನಿಂದ ಈಶ್ವರ್ ಗೆ ಇ*ರಿದಿದ್ದಾನೆ.

    ಈ ವೇಳೆ ಬೈಕ್ ಚಲಾಯಿಸುತ್ತಿದ್ದ ಈಶ್ವರ್ ರ ನಿಯಂತ್ರಣ ತಪ್ಪಿದ್ದು,  ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಚಾಕು ಇ*ರಿತದಿಂದ ಈಶ್ವರ್ ಗೆ ಗಾ*ಯವಾಗಿದೆ. ಆದರೂ ರೋಹಿತ್‌ನಿಂದ ಹರಸಾಹಸ ಮಾಡಿ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಆದರೂ ಬಿಡದ ರೋಹಿತ್ ಬೆನ್ನತ್ತಿ ಇ*ರಿದಿದ್ದಾನೆ.

    ಇದನ್ನೂ ಓದಿ : ಗಣೇಶ ವಿಗ್ರಹ ತರಲು ತೆರಳುತ್ತಿದ್ದ ಟಾಟಾ ಏಸ್ ಪಲ್ಟಿ, ಇಬ್ಬರು ಸಾ*ವು

    ಈ ವೇಳೆ ಈಶ್ವರ್ ತಪ್ಪಿಸಿಕೊಂಡು ಮುಖ್ಯರಸ್ತೆಗೆ ಬಂದು ಸಹಾಯಕ್ಕಾಗಿ ತನ್ನ ಸಹೋದರನನ್ನು ಕರೆದಿದ್ದು, ಆತನ ಸಹೋದರ ಆತನನ್ನು ಆಟೋರಿಕ್ಷಾದಲ್ಲಿ ಆಸ್ಪತ್ರೆಗೆ ಸೇರಿಸಿದರು. ಅಷ್ಟು ಹೊತ್ತಿಗಾಗಲೇ ಆರೋಪಿ ರೋಹಿತ್ ಬೈಕ್ ನಲ್ಲಿ ಪರಾರಿಯಾಗಿದ್ದ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

    Continue Reading

    LATEST NEWS

    ಉಡುಪಿ : ಲಲಿತಾ ಕಲ್ಕೂರ ವಿಧಿವಶ

    Published

    on

    ಉಡುಪಿ : ದಿವಂಗತ ಪ್ರೊ. ಮಂಜುನಾಥ ಕಲ್ಕೂರ ಅವರ ಪತ್ನಿ ಲಲಿತಾ ಕಲ್ಕೂರ (83) ವಿ*ಧಿವಶರಾಗಿದ್ದಾರೆ.  ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ(ಸೆ.7) ಉಡುಪಿಯ ಸ್ವಗೃಹದಲ್ಲಿ ನಿಧ*ನ ಹೊಂದಿದರು.

    ಮೃತರು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಸಹಿತ 3ಮಂದಿ ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

    Continue Reading

    LATEST NEWS

    Trending