Connect with us

LATEST NEWS

ಬೆಂಗಳೂರು : ಬೈಕ್‌ ಸವಾರನಿಗೆ ಚಾಕು ತೋರಿಸಿ ಬೆದರಿಸಿದ ಮಿನಿ ಟ್ರಕ್‌ ಡ್ರೈವರ್‌ ಬಂಧನ..!

Published

on

ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಟಾಟಾ ಏಸ್‌ ಚಾಲಕನೊಬ್ಬ ಬೈಕ್‌ ಸವಾರನೊಬ್ಬನಿಗೆ ಚಾಕು ತೋರಿಸಿ ಬೆದರಿಸಿದ ವಿಡಿಯೋ ವೈರಲ್‌ ಆಗಿದ್ದು, ಇದೀಗ ಪೊಲೀಸರು ಆ ಚಾಲಕನನ್ನು ಬಂಧಿಸಿದ್ದಾರೆ.

ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಟಾಟಾ ಏಸ್‌ ಚಾಲಕನೊಬ್ಬ ಬೈಕ್‌ ಸವಾರನೊಬ್ಬನಿಗೆ ಚಾಕು ತೋರಿಸಿ ಬೆದರಿಸಿದ ವಿಡಿಯೋ ವೈರಲ್‌ ಆಗಿದ್ದು, ಇದೀಗ ಪೊಲೀಸರು ಆ ಚಾಲಕನನ್ನು ಬಂಧಿಸಿದ್ದಾರೆ.

ಈ ಘಟನೆ ಇದೇ ಶನಿವಾರ ನಡೆದಿತ್ತು. ಅಂದು ರಾಮಮೂರ್ತಿ ನಗರದ ಸೇತುವೆ ಬಳಿ ಈ ಚಾಲಕನು ಮೊಬೈಲ್‌ನಲ್ಲಿ ಮಾತನಾಡುತ್ತ ವಾಹನ ಚಲಾಯಿಸುತ್ತಿದ್ದನು. ಇದೇ ಸಂದರ್ಭದಲ್ಲಿ ಬಲಭಾಗದಲ್ಲಿ ಬರುತ್ತಿದ್ದ ಸ್ಕೂಟರ್‌ಗೆ ಆತನ ಟಾಟಾ ಏಸ್‌ ತಾಗಿದೆ.

ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿರುವ ಕುರಿತು ಸ್ಕೂಟರ್‌ ಚಾಲಕ ಪ್ರಕಾಶ್‌ ಪ್ರಶ್ನಿಸಿದ್ದಾರೆ. ಆ ಸಂದರ್ಭದಲ್ಲಿ ಟ್ರಾಫಿಕ್‌ ಇರುವ ರಸ್ತೆಯಲ್ಲಿಯೇ ಏಸ್‌ ನಿಲ್ಲಿಸಿದ ಆ ಚಾಲಕನು ಚಾಕು ಹಿಡಿದುಕೊಂಡು ಕೆಳಕ್ಕೆ ಇಳಿದು ದ್ವಿಚಕ್ರವಾಹನ ಸವಾರನಿಗೆ ಜೀವ ಬೆದರಿಕೆ ಹಾಕಿದ್ದಾನೆ.

ಈ ಸಂದರ್ಭದಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆಯುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ಗಮನಿಸಬಹುದು. ಈ ಘಟನೆಯ ಕುರಿತು ಆ ದ್ವಿಚಕ್ರ ವಾಹನದಲ್ಲಿದ್ದ ಪ್ರಕಾಶ್‌ ಅವರ ಪುತ್ರ ವಿಡಿಯೋ ಮಾಡಿಕೊಂಡಿದ್ದು, ಈ ಘಟನೆಯ ಕುರಿತು ಟ್ವೀಟ್‌ ಮಾಡಿದ್ದಾರೆ.

“ನಾನು ಇಂದು ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದೆ. ಈ ಸಂದರ್ಭದಲ್ಲಿ ಮೊಬೈಲ್‌ ಫೋನ್‌ನಲ್ಲಿ ಮಾತನಾಡುತ್ತ ಟಾಟಾ ಏಸ್‌ ಚಾಲಕನೊಬ್ಬ ನಮ್ಮ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ.

ಇದನ್ನು ಸ್ಕೂಟರ್‌ನ ಹಿಂದೆ ಕುಳಿತಿದ್ದ ನನ್ನ ತಂದೆ ಪ್ರಶ್ನಿಸಿದ್ದಾರೆ. ಆ ಸಮಯದಲ್ಲಿ ಟಾಟಾ ಏಸ್‌ ಚಾಲಕ ವಾಹನದಿಂದ ಇಳಿದು ಚಾಕು ತೋರಿಸಿ ಬೆದರಿಕೆ ಹಾಕಿದ್ದಾನೆ. ಇದು ಖಂಡಿತವಾಗಿಯೂ ಪೊಲೀಸರ ಗಮನಕ್ಕೆ ಬರಬೇಕು” ಎಂದು ಟ್ವೀಟ್‌ ಮಾಡಿದ್ದಾರೆ.

ಈ ಟ್ವೀಟ್‌ ಗಮನಿಸಿದ ಬೆಂಗಳೂರು ಪೊಲೀಸರು ಟಾಟಾ ಏಸ್‌ ಚಾಲಕನನ್ನು ಹುಡುಕಿ ಬಂಧಿಸಿದ್ದಾರೆ. ಈ ಕುರಿತು ಬೆಂಗಳೂರು ಪೊಲೀಸ್‌ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಬರೆಯಲಾಗಿದೆ.

“ರೋಡ್‌ ರೇಜ್‌ ಘಟನೆಯಲ್ಲಿ ಗೂಡ್ಸ್‌ ವಾಹನ ಚಾಲಕನೊಬ್ಬ ದ್ವಿಚಕ್ರವಾಹನ ಸವಾರರಿಗೆ ಚಾಕು ತೋರಿಸಿ ಜಗಳ ಮಾಡುತ್ತಿರುವ ವಿಡಿಯೋ ಹರಿದಾಡುತ್ತಿದೆ.

ಈ ಕುರಿತು ಎಫ್‌ಐಆರ್‌ ದಾಖಲಿಸಲಾಗಿದೆ. ಆರೋಪಿಯನ್ನು ರಾಮಮೂರ್ತಿ ನಗರ ಪೊಲೀಸರು ಹುಡುಕಿ ಹಿಡಿದ್ದಾರೆ” ಎಂದು ಟ್ವೀಟ್‌ ಮಾಡಲಾಗಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

LATEST NEWS

60ನೇ ವಯಸ್ಸಿಗೆ “ಮಿಸ್ ಯುನಿವರ್ಸ್” ಕಿರೀಟ ಮುಡಿಗೇರಿಸಿಕೊಂಡ ಈಕೆ ಯಾರು ಗೊತ್ತಾ? ಈಕೆಯ ಸೌಂದರ್ಯಕ್ಕೆ ಬೆರಗಾದ್ರು ಜನ..!!

Published

on

ಹೆಚ್ಚಾಗಿ ಮಿಸ್​ ವರ್ಲ್ಡ್​​​, ಮಿಸ್​​ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಎಂಬ ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ.

ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಪಡೆದುಕೊಂಡಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್​​ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ.

ಇನ್ನೂ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್​ ಶಾಕ್​ ಆಗಿದ್ದಾರೆ. ಅನೇಕರು ಆಕೆ ಮಿಸ್​​ ಯುನಿವರ್ಸ್​​ ಕಿರೀಟ ಪಡೆದುಕೊಂಡಿರೋದಕ್ಕೆ ಶುಭಾಶಯ ತಿಳಿಸುತ್ತಿದ್ದು ಇನ್ನೂ ಕೆಲವರು ಕಮೆಂಟ್ಸ್‌ಗಳನ್ನು ಹಾಕುತ್ತಿದ್ದಾರೆ.

Continue Reading

LATEST NEWS

ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

Published

on

ಪುತ್ತೂರು :  ಬೊಳ್ವಾರ್ ಬಸ್ ತಂಗುದಾಣದ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ವಾಹನ ಮಾಲಕರು ವಾಹನಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಯಿತು.

ಬಿದ್ದ ಮರದಲ್ಲಿದ್ದ ಮಾವಿನಕಾಯಿಗಳನ್ನು ಕೊಯ್ಯಲು ಜನ ಮುಗಿಬಿದ್ದ ಘಟನೆಯೂ ನಡೆಯಿತು. ಬಳಿಕ ಸ್ಥಳೀಯರು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸಿದರು.

ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ಭಾರೀ ದುರಂತವೊಂದು ತಪ್ಪಿದೆ.

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Continue Reading

LATEST NEWS

Trending