bengaluru
Bengaluru: ‘ನಮ್ಮ ಮೆಟ್ರೋ’ ವಿಸ್ತೃತ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆಆರ್ ಪುರ- ಬೈಯಪ್ಪನಹಳ್ಳಿ ಹಾಗೂ ಕೆಂಗೇರಿ-ಚಲ್ಲಘಟ್ಟದವರೆಗೆ ನಮ್ಮ ಮೆಟ್ರೋ ವಿಸ್ತ್ರತ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಿದರು.
ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅವರು ನಮ್ಮ ಮೆಟ್ರೋ ವಿಸ್ತೃತ ಮಾರ್ಗಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಯಶವಂತಪುರ ಶಾಸಕ ಎಸ್.ಟಿ ಸೋಮಶೇಖರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮೆಟ್ರೋ ಎಂಡಿ ಅಂಜುಮ್ ಪರ್ವೇಜ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ಕನ್ನಡದಲ್ಲೇ ಮಾತನಾಡುತ್ತೇನೆ ಎಂದು ಹೇಳಿ, ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಸಲ್ಲಿಸಿದರು.
‘ಬೆಂಗಳೂರು ನಗರದವರ ಪರವಾಗಿ ಪ್ರಧಾನಿ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಟ್ರಾಫಿಕ್ ಸಮಸ್ಯೆ ಹೆಚ್ಚಾಗಿರುವುದರಿಂದ ಮೆಟ್ರೋ ಸೇವೆ ಅತ್ಯಗತ್ಯ. ಕೆ.ಆರ್. ಪುರದಿಂದ ಬೈಯಪ್ಪನಳ್ಳಿ, ಕೆಂಗೇರಿ ಯಿಂದ ಚಲ್ಲಗಟ್ಟದವರೆಗೆ ಮೆಟ್ರೋ ಸೇವೆಯನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಲಾಗಿದೆ. ಕೇಂದ್ರ, ರಾಜ್ಯ ಸರಕಾರ ಜಂಟಿಯಾಗಿ ಮೆಟ್ರೋ ಯೋಜನೆ ಜಾರಿಗೊಳಿಸುತ್ತಿವೆ. ಮೊದಲ ಹಂತದಲ್ಲಿ ಸುಮಾರು 42.3 ಕಿ.ಮೀ. ಉದ್ದದ ಯೋಜನೆ ಜಾರಿ ಮಾಡಲಾಗಿದೆ. ಇದಕ್ಕೆ 5630 ಕೋಟಿ ರೂ. ರಾಜ್ಯ ಸರಕಾರ ಖರ್ಚು ಮಾಡಿದೆ. ಕೇಂದ್ರ ರಾಜ್ಯ ಎರಡೂ ಸರಕಾರಗಳು ಜಂಟಿಯಾಗಿ ಮೆಟ್ರೋ ಯೋಜನೆ ಮಾಡುತ್ತಿವೆ. ಎರಡೂ ಹಂತ ಸೇರಿ ಸುಮಾರು 74 ಕಿಲೋ ಮೀಟರ್ ವಿಸ್ತರಣೆ ಆಗಿದೆ ಎಂದು ಮಾಹಿತಿ ನೀಡಿದರು.
ಇದೇ ವೇಳೆ ಮಾಜಿ ರಾಷ್ಟ್ರಪತಿ ದಿವಂಗತ ಪ್ರಣಬ್ ಮುಖರ್ಜಿ ಅವರನ್ನು ಸ್ಮರಿಸಿದರು. ಇದಕ್ಕೆ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಸಾಹಿಬಾಬಾದ್ ರಾಪಿಡ್ಎಕ್ಸ್ ನಿಲ್ದಾಣದಲ್ಲಿ ದೆಹಲಿ- ಗಾಜಿಯಾಬಾದ್- ಮೀರತ್ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ- ಆರ್ಆರ್ಟಿಎಸ್ ಕಾರಿಡಾರ್ನ ಆದ್ಯತೆಯ ವಿಭಾಗವನ್ನು ಉದ್ಘಾಟಿಸಿದರು. ಇದು ಭಾರತದ ಮೊದಲ ರಾಪಿಡ್ಎಕ್ಸ್ ರೈಲು ಆಗಿದ್ದು ಇದನ್ನು ‘ನಮೋ ಭಾರತ್’ ಎಂಬುದಾಗಿ ಹೆಸರಿಸಲಾಗಿದೆ. ದೆಹಲಿ- ಗಾಜಿಯಾಬಾದ್- ಮೀರತ್ ಆರ್ಆರ್ಟಿಎಸ್ ಕಾರಿಡಾರ್ನ 17 ಕಿ.ಮೀ. ಆದ್ಯತಾ ವಿಭಾಗವು ಸಾಹಿಬಾಬಾದ್ನಿಂದ ದುಹೈ ಡಿಪೋಗೆ ಘಾಜಿಯಾಬಾದ್, ಗುಲ್ಧಾರ್ ಮತ್ತು ದುಹೈ ನಿಲ್ದಾಣಗಳೊಂದಿಗೆ ಸಂಪರ್ಕ ಕಲ್ಪಿಸುತ್ತದೆ. ಈ ಕಾರಿಡಾರ್ಗೆ ಪ್ರಧಾನ ಮೋದಿ 2019ರ ಮಾರ್ಚ್ 8ರಂದು ಶಂಕು ಶಿಲಾನ್ಯಾಸ ನೆರವೇರಿಸಿದ್ದರು.
bangalore
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅಮ್ಮ ನಿಧನ..!
ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅಮ್ಮ ವಯೋಸಹಜದ ಕಾಯಿಲೆಯಿಂದ ಇಂದು ನಿಧನ ಹೊಂದಿದರು.
ಲೀಲಾವತಿ ಅವರು ಕೆಲವು ಸಮಯದ ಹಿಂದೆ ಆರೋಗ್ಯ ಸಮಸ್ಯೆಯಿಂದ ಬಳಳುತ್ತಿದ್ದರು. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಇಂದು ಮಧ್ಯಾಹ್ನ ದಿಢೀರ್ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.
ಲೀಲಾವತಿ ಅವರು ಕೆಲವು ದಿನಗಳಿಂದ ಅನಾರೋಗ್ಯ ಕಾರಣದಿಂದಾಗಿ ಹಾಸಿಗೆ ಹಿಡಿದಿದ್ದರು. ಅವರ ಆರೋಗ್ಯ ಯೋಗ ಕ್ಷೇಮ ವಿಚಾರಿಸಲು ಖುದ್ದು ಸಿಎಂ ಸಿದ್ದರಾಮಯ್ಯ ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ್ದರು.
ಸಿನಿಮಾ ರಂಗಕ್ಕೆ ಕಾಲಿಟ್ಟ ಲೀಲಾವತಿ ಅಮ್ಮ ತಮಿಳು, ತೆಲುಗು, ಕನ್ನಡ, ಮಲೆಯಾಳಂ ಸೇರಿದಂತೆ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಇವರು ನಟಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಹುಟ್ಟಿದ್ದ ಅವರು ಕಿರಿಯ ವಯಸ್ಸಿನಲ್ಲೇ ಸಿನಿಮಾ ರಂಗಕ್ಕೆ ಕಾಲಿಟ್ಟು ಸುಮಾರು ಸಾಧನೆ ಮಾಡಿದ್ದಾರೆ. ಅವರ ಸಾಧನೆಗೆ ಹಲವಾರು ಪುರಸ್ಕಾರಗಳೂ ಸಂದಿವೆ. ಕರ್ನಾಟಕ ಸರಕಾರ ಕೊಡಮಾಡುವ ಜೀವಮಾನ ಸಾಧನೆಗಾಗಿ ಡಾ. ರಾಜ್ ಕುಮಾರ್ ಪ್ರಶಸ್ತಿಯನ್ನು ಪಡೆದಿದ್ದಾರೆ. ತುಮಕೂರ ವಿಶ್ವವಿದ್ಯಾಲಯ ಇವರಿಗೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
bangalore
ದೈವದ ರೀಲ್ಸ್ ಮಾಡಬೇಡಿ ಎಂದು ರಿಕ್ವೆಸ್ಟ್ ಮಾಡಿದ ಕಾಂತಾರ ರಿಷಬ್ ಶೆಟ್ಟಿ..!!
ಇತ್ತೀಚಿನ ದಿನಗಳಲ್ಲಿ ದೈವದ ಬಗ್ಗೆ ರೀಲ್ಸ್ ಮಾಡೋದು ಹೆಚ್ಚಾಗುತ್ತಿದೆ. ಅಲ್ಲದೆ ವೇದಿಕೆಗಳಲ್ಲೂ ದೈವದ ವೇಷ ಹಾಕಿ ನೃತ್ಯ ಮಾಡುತ್ತಿದ್ದಾರೆ. ಇಂತಹ ವೇಷಗಳು, ನೃತ್ಯಗಳು ಹಾಗೂ ರೀಲ್ಸ್ ಗಳನ್ನು ಮಾಡೋದರಿಂದ ದೈವಾರಾಧಕರಿಗೆ, ದೈವ ನರ್ತಕರಿಗೆ ಬೇಸರ ಆಗ್ತಾ ಇದೆ. ಇದರ ಬಗ್ಗೆ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ.
ನಂದಿ ಅವಾರ್ಡ್ ಫಂಕ್ಷನ್ ನಲ್ಲಿ ಮಾತನಾಡಿದ ರಿಷಬ್ ಶೆಟ್ಟಿ, ‘ಕಾಂತಾರ ಚಿತ್ರ ಬಂದ್ಮೇಲೆ ಒಂದಷ್ಟು ಬೇಸರದ ಸಂಗತಿಗಳೂ ನಡೆದವು. ದೈವದ ರೀಲ್ಸ್ ಮಾಡೋರು ಹೆಚ್ಚಾಗಿದ್ದಾರೆ. ಅದರಿಂದ ದೈವವನ್ನ ನಂಬೋ ಜನರಿಗೆ, ದೈವವನ್ನ ಆರಾಧಿಸೋ ನರ್ತಕರಿಗೆ ಬೇಸರ ಕೂಡ ಆಗಿದೆ. ನನಗೆ ಇವರೆಲ್ಲ ಈ ಒಂದು ಸತ್ಯದ ಬಗ್ಗೆ ಹೇಳ್ತಾನೇ ಇದ್ದಾರೆ. ಹಾಗಾಗಿಯೇ ಈ ಒಂದು ವಿಚಾರವನ್ನು ಮಾಧ್ಯಮದ ಮೂಲಕ ತಿಳಿಸೋಕೆ ಇಷ್ಟಪಡುತ್ತೇನೆ. ಇದರಿಂದ ಇದು ಎಲ್ಲೋ ಒಂದು ಕಡೆಗೆ ಇಡೀ ಕಾಂತಾರ ಚಿತ್ರ ಉದ್ದೇಶಕ್ಕೆ ಕಪ್ಪು ಚುಕ್ಕಿ ಆಗುತ್ತಿದೆ ಅನಿಸುತ್ತಿದೆ. ಇದನ್ನ ಯಾರೂ ಮಾಡ್ಬೇಡಿ. ಇದರಿಂದ ಎಲ್ಲರಿಗೂ ಹರ್ಟ್ ಆಗುತ್ತದೆ’ ಎಂದು ರಿಷಬ್ ಶೆಟ್ಟಿ ಹೇಳಿಕೊಂಡಿದ್ದಾರೆ.
ರೀಲ್ಸ್ ಅನ್ನೋದು ಸದ್ಯದ ಅತಿ ದೊಡ್ಡ ಕಿಚ್ಚಾಗಿದೆ. ಇದರಿಂದ ಒಳ್ಳೆಯ ಎಂಜಾಯ್ ಮೆಂಟ್ ಸಿಗುತ್ತಿದೆ. ಆದರೆ ಇದರ ಎಫೆಕ್ಟ್ ಬೇರೆನೆ ಆಗ್ತಾ ಇದೆ. ಕಾಂತಾರ ದೈವದ ರೀಲ್ಸ್ ಮಾಡೋದರಿಂದಲೇ ತುಳುನಾಡ ದೈವಾರಾಧಕರಿಗೆ, ದೈವ ನರ್ತಕರಿಗೆ, ಬೇಸರ ಆಗುತ್ತದೆ. ನಾನು ಒಬ್ಬ ದೈವ ಭಕ್ತನೇ ಆಗಿದ್ದೇನೆ. ಇದು ನನಗೂ ಬೇಸರ ತರಿಸುತ್ತಿದೆ. ಚಿತ್ರದ ಮೂಲ ಉದ್ದೇಶ ದೈವದ ಶಕ್ತಿ ಮತ್ತು ಸಂಸ್ಕೃತಿಯನ್ನ ಎಲ್ಲೆಡೆ ಹೇಳೋದೇ ಆಗಿದೆ. ಆದರೆ ರೀಲ್ಸ್ ಅನ್ನೋದು ಎಲ್ಲೋ ಒಂದು ಕಡೆಗೆ ಕಪ್ಪು ಚುಕ್ಕೆ ಆಗುತ್ತದೆ ಎಂದು ನೊಂದು ಕೊಂಡು ಹೇಳಿದ್ದಾರೆ. ಕಾಂತಾರ ಚಿತ್ರದಲ್ಲಿ ದೈವಾರಾಧನೆ ಇದೆ. ಇದನ್ನ ಅಷ್ಟೆ ಗೌರವದಿಂದಲೇ ಮಾಡಿದ್ದೇವೆ. ದೈವ ನರ್ತಕರನ್ನ ಸಲಹೆ-ಸೂಚನೆಯಂತೆ ಚಿತ್ರೀರಿಸಿದ್ದೇವೆ. ಇಲ್ಲಿ ದೈವಕ್ಕೆ ಮಾಡಬೇಕಿರೋ ಎಲ್ಲ ಪಾವಿತ್ರ್ಯತೆಯನ್ನು ಅಚ್ಚುಕಟ್ಟಾಗಿಯೆ ಮಾಡಿದ್ದೇವೆ. ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಕಾಂತಾರ ಚಿತ್ರ ಮಾಡಿದ್ದೇವೆ ಎಂದಿದ್ದಾರೆ. ಚಿತ್ರಕ್ಕೆ ಬಂದ ಪ್ರಶಸ್ತಿಯನ್ನ ದೈವ ನರ್ತಕರಿಗೆ, ಕನ್ನಡಿಗರಿಗೆ, ಪವರ್ ಸ್ಟಾರ್ ಪುನೀತ್ ಅವರಿಗೆ ಅರ್ಪಿಸಿದ್ದಾರೆ ಎಂದರು. ಜೊತೆಗೆ ದೈವದ ರೀಲ್ಸ್ ಮಾಡ್ಬೇಡಿ ಅಂತಲೂ ರಿಕ್ವೆಸ್ಟ್ ಮಾಡಿದ್ದಾರೆ.
bengaluru
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್
ಬೆಂಗಳೂರು: ಸೈಬರ್ ಖದೀಮರ ಉಪಟಳ ಎಲ್ಲಿಯವರೆಗೆ ತಲುಪಿದೆ ಎಂದರೆ ಅದು ಇದೀಗ ಕರ್ನಾಟಕ ಹೈಕೋರ್ಟ್ ಕಲಾಪಕ್ಕೂ ತಟ್ಟಿದೆ.
ಮಂಗಳವಾರ ಸಂಜೆ ಹೈಕೋರ್ಟಿನ ಹಾಲ್ ನಂಬರ್ 6, 12, 18, 23, 24, 26 ಮತ್ತು ಇತರ ಹಾಲ್ ಗಳಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿದ್ದಾಗಲೇ ಲಿಂಕ್ ಮೂಲಕ ಭಾಗವಹಿಸಿದ್ದ ಅಪರಿಚಿತ ಆರೋಪಿಗಳು ಅಶ್ಲೀಲ ಚಿತ್ರಗಳನ್ನು ಪ್ರದರ್ಶಿಸಿ ಕಲಾಪಕ್ಕೆ ಅಡ್ಡಿ ಪಡಿಸಿದ್ದಾರೆ. ಈ ಬಗ್ಗೆ ಹೈಕೋರ್ಟಿನ ಕಂಪ್ಯೂಟರ್ ವಿಭಾಗದ ರಿಜಿಸ್ಟ್ರಾರ್ ಅವರು ಸೆಂಟ್ರಲ್ ಸೆನ್ ಕ್ರೈಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಹೈಕೋರ್ಟ್ ಪೀಠಗಳಲ್ಲಿ ಲೈವ್ ಸ್ಟ್ರೀಮಿಂಗ್ ಮತ್ತು ವೀಡಿಯೋ ಕಾನ್ಫರೆನ್ಸ್ ಸೌಲಭ್ಯವನ್ನು ಕೆಲವು ದಿನಗಳ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ. ಬುಧವಾರ ಸಂಜೆ ಹೈಕೋರ್ಟ್ ಕಲಾಪದ ವೇಳೆ ವೀಡಿಯೋ ಕಾನ್ಫರೆನ್ಸ್ ಆ್ಯಪ್ ಅನ್ನು ಹ್ಯಾಕ್ ಮಾಡಿ ಆಶ್ಲೀಲ ದೃಶ್ಯಾವಳಿಯನ್ನು ಅಪ್ ಲೋಡ್ ಮಾಡಲಾಗಿತ್ತು. ಅಶ್ಲೀಲ ವೀಡಿಯೋ ಪ್ರಸಾರವಾಗುತ್ತಿದ್ದಂತೆ ಅದನ್ನು ನಿರ್ವಹಣೆ ಮಾಡುತ್ತಿದ್ದ ಸಿಬಂದಿಯನ್ನು ಕರೆದು ವಿಚಾರಿಸಿದಾಗ ಸೈಬರ್ ಹ್ಯಾಕ್ ಆಗಿರುವ ವಿಷಯ ಗೊತ್ತಾಗಿದೆ. ಕೂಡಲೇ ವೀಡಿಯೋ ಕಾನ್ಫರೆನ್ಸ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ.
- bangalore6 days ago
ಆಸ್ಟ್ರೇಲಿಯಾ ಬೀಚ್ ನಲ್ಲಿ ಮಂಗ್ಳೂರು ಬೆಡಗಿ ಅನುಶ್ರೀ…
- bangalore6 days ago
“ಎಂಚ ಉಲ್ಲಾರ್ ಮರ್ರೆ”…. ಎಂದು ತುಳುವಿನಲ್ಲಿ ಮಾತನಾಡಿದ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್
- LATEST NEWS7 days ago
ಪ್ರಿಯತಮೆಯ ಕೊಂದು ಆಕೆಯ ಮೃತದೇಹವನ್ನು ಸ್ಟೇಟಸ್ ಹಾಕಿದ ಕ್ರೂರಿ..!
- DAKSHINA KANNADA6 days ago
Mangaluru: 4 ತಿಂಗಳ ಮಗುವನ್ನು ಉಸಿರುಕಟ್ಟಿಸಿ ಕೊಂದ ತಾಯಿ ಕೂಡ ಜೀವಾಂತ್ಯ..!