LATEST NEWS
Bengaluru : ಜ್ಯೂಸ್, ನೀರಿನಲ್ಲಿ ಬೆರೆಸಿ ಕುಡಿದರೆ ಏರುತ್ತೆ ನಶೆ- ಹೊಸ ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು..!
ಜ್ಯೂಸ್, ನೀರಿನಲ್ಲಿ ಬೆರೆಸಿ ಕುಡಿದರೆ ನಶೆ ಏರುವ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಡ್ರಗ್ಸ್ ಜಾಲದ ಸದಸ್ಯನೋರ್ವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು : ಮಾದಕಲೋಕದಲ್ಲಿ ನೂತನ ಶೈಲಿಯ ಡ್ರಗ್ಸ್ ಜಾಲದ ಹಿಂದೆ ಬಿದ್ದಿದ್ದ ಬೆಂಗಳೂರು ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ.
ಜ್ಯೂಸ್ ಮಾದರಿಯಲ್ಲಿ ರೆಡಿ ಆಗ್ತಿರುವ ಜ್ಯೂಸ್, ನೀರಿನಲ್ಲಿ ಬೆರೆಸಿ ಕುಡಿದರೆ ಕಿಕ್ಕೇರಿಸುವ ಡ್ರಗ್ಸ್ ಜಾಲದ ಸದಸ್ಯನೋರ್ವ ವಿವಿಪುರ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ರಾಜಸ್ಥಾನ ಮೂಲದ ಗುನಾಂ ಸಿಂಗ್ ಬಂಧಿತ ಆರೋಪಿಯಾಗಿದ್ದಾನೆ.
ಖಚಿತ ಮಾಹಿತಿ ಮೇರೆಗೆ ಆರೋಪಿಯ ಗೋದಾಮಿನ ಮೇಲೆ ದಾಳಿ ನಡೆಸಿದ ಪೊಲೀಸರು 55 ಕೆಜಿ ತೂಕದ 60 ಲಕ್ಷದ ಮೌಲ್ಯದ ಮಾದಕ ವಸ್ತುವನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಚುರುಕುಗೊಳಿಸಿದ್ದಾರೆ.
ಈ ಮಾದಕ ಪದಾರ್ಥ ಒಂದು ಅಫೀಮು ಸಸ್ಯ. ಇದನ್ನು ಹೆಚ್ಚಾಗಿ ರಾಜಸ್ಥಾನದಲ್ಲಿ ಬೆಳೆಯಲಾಗುತ್ತದೆ.
ಇದರಿಂದ ಅಫೀಮು ತಯಾರು ಮಾಡಿ ಲಕ್ಷ ಲಕ್ಷ ಬೆಲೆಗೆ ಮಾರಾಟ ಮಾಡಲಾಗುತ್ತದೆ.
ಡ್ರಗ್ಸ್ ಅನ್ನು ದೇಶದ ವಿವಿಧ ರಾಜ್ಯಗಳಿಗೆ ಸರಬರಾಜು ಮಾಡಿ ಕೋಟಿ ಕೋಟಿ ವ್ಯವಹಾರ ನಡೆಸಲಾಗುತ್ತದೆ.
ಮೊದಲಿಗೆ ತೋಟದಲ್ಲಿ ಅಫೀಮು ಗಿಡ ಬೆಳೆಸಲಾಗುತ್ತೆ. ಅದೇ ಗಿಡ ದೊಡ್ಡದಾದ ಬಳಿಕ ಗಿಡದಲ್ಲಿ ಬಿಡೋ ಕಾಯಿಯನ್ನು ಬ್ಲೇಡ್ನಿಂದ ಕೆರೆದು ಅದರಿಂದ ಬರುವ ಹಾಲನ್ನ ಸಂಗ್ರಹ ಮಾಡಲಾಗುತ್ತೆ.
ಅದೇ ಅಫೀಮು. ಅದೇ ಡ್ರಗ್ಸ್ ಅನ್ನ ಅಧಿಕ ಬೆಲೆಗೆ ಮಾರಾಟ ಮಾಡಲಾಗುತ್ತೆ.
ನಂತರ ಆ ಕಾಯಿಯನ್ನು ಕತ್ತರಿಸಿ ತರುವ ಆರೋಪಿಗಳು ಅದನ್ನ ಚೆನ್ನಾಗಿ ಒಣಗಿಸಿ ಪುಡಿ ಮಾಡಿ ಅದನ್ನ ಎರಡು ದಿನಗಳ ಕಾಲ ನೀರಿನಲ್ಲಿ ಹಾಕಿ ನೆನೆಸುತ್ತಾರೆ.
ನಂತರ ಅದರ ಪುಡಿಯನ್ನ ಬಟ್ಟೆಯಲ್ಲಿ ಸೋಸಿ ಬಾಟಲ್ನಲ್ಲಿ ಶೇಖರಿಸಲಾಗುತ್ತೆ.
ನಂತರ ಆ ಬಾಟಲ್ ನೀರನ್ನು ಸಾಮಾನ್ಯ ನೀರಿನ ಜೊತೆಗೆ ಬೆರೆಸಿ ಪಾರ್ಟಿಗಳಲ್ಲಿ ಬಳಸುತ್ತಾರೆ.
100 ಲೀಟರ್ ಸಾಮಾನ್ಯ ನೀರಿನ ಜೊತೆಗೆ ಒಂದು ಲೀಟರ್ ಈ ಮಾದಕ ದ್ರಾವಣವನ್ನು ಬೆರೆಸಲಾಗುತ್ತೆ.
ಈ ನೀರು ಹೆಚ್ಚಾಗಿ ಘಾಟು ಇರೋದರಿಂದ ವಿವಿಧ ಕಂಪನಿಗಳ ಜ್ಯೂಸ್ ನೊಳಗೆ ಬೆರೆಸಿ ಕೊಡುತ್ತಿದ್ದರು.
ಹೀಗೆ ಬೆಂಗಳೂರಿನ ವಿವಿ ಪುರಂನಲ್ಲಿ ಶೇಖರಣೆ ಮಾಡಲಾಗಿದ್ದ ಗೋಡೌನ್ ಮೇಲೆ ದಾಳಿ ಮಾಡಿದ ವಿವಿ ಪುರಂ ಪೊಲೀಸರು ಅರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ.
DAKSHINA KANNADA
ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ
ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್ ಹಾನಿಗೊಂಡಿದೆ.
ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!
ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.
LATEST NEWS
60ನೇ ವಯಸ್ಸಿಗೆ “ಮಿಸ್ ಯುನಿವರ್ಸ್” ಕಿರೀಟ ಮುಡಿಗೇರಿಸಿಕೊಂಡ ಈಕೆ ಯಾರು ಗೊತ್ತಾ? ಈಕೆಯ ಸೌಂದರ್ಯಕ್ಕೆ ಬೆರಗಾದ್ರು ಜನ..!!
ಹೆಚ್ಚಾಗಿ ಮಿಸ್ ವರ್ಲ್ಡ್, ಮಿಸ್ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಎಂಬ ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ.
ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಪಡೆದುಕೊಂಡಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ.
ಇನ್ನೂ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ. ಅನೇಕರು ಆಕೆ ಮಿಸ್ ಯುನಿವರ್ಸ್ ಕಿರೀಟ ಪಡೆದುಕೊಂಡಿರೋದಕ್ಕೆ ಶುಭಾಶಯ ತಿಳಿಸುತ್ತಿದ್ದು ಇನ್ನೂ ಕೆಲವರು ಕಮೆಂಟ್ಸ್ಗಳನ್ನು ಹಾಕುತ್ತಿದ್ದಾರೆ.
LATEST NEWS
ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!
ಪುತ್ತೂರು : ಬೊಳ್ವಾರ್ ಬಸ್ ತಂಗುದಾಣದ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ವಾಹನ ಮಾಲಕರು ವಾಹನಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಯಿತು.
ಬಿದ್ದ ಮರದಲ್ಲಿದ್ದ ಮಾವಿನಕಾಯಿಗಳನ್ನು ಕೊಯ್ಯಲು ಜನ ಮುಗಿಬಿದ್ದ ಘಟನೆಯೂ ನಡೆಯಿತು. ಬಳಿಕ ಸ್ಥಳೀಯರು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸಿದರು.
ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ಭಾರೀ ದುರಂತವೊಂದು ತಪ್ಪಿದೆ.
ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM6 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!
- FILM7 days ago
ಶೈನ್ ಶೆಟ್ಟಿ, ಅಂಕಿತಾ ಜಸ್ಟ್ ಮ್ಯಾರೀಡ್..!! ಅಭಿಮಾನಿಗಳಿಗೆ ಖುಷಿ