LATEST NEWS
ನಕಲಿ ಪೊಲೀಸ್ ದಾಳಿ ಮಾಡಿ ದರೋಡೆ ಮಾಡಿದ್ದ ಅಸಲಿ ಪೊಲೀಸರು ಅಂದರ್..!
ನಕಲಿ ಪೊಲೀಸ್ ದಾಳಿ ಮಾಡಿ ದರೋಡೆ ಮಾಡಿದ್ದ ಅಸಲಿ ಪೊಲೀಸರು ಅಂದರ್..!
ಬೆಂಗಳೂರು : ಕಳ್ಳರನ್ನು ಹಿಡಿಯಬೇಕಾದವರು ಪೊಲೀಸರೇ ದುಡ್ಡಿನ ಆಸೆಗೆ ಬಲಿಬಿದ್ದು ದರೋಡೆಗಿಳಿದು ಬಂಧನಕ್ಕೆ ಒಳಗಾದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.
ಅಸಲಿ ಪೊಲೀಸರು ಕಳ್ಳರ ಜತೆಗೆ ಸೇರಿಕೊಂಡು ನಕಲಿ ದಾಳಿ ಮಾಡಿ ಚಿನ್ನದ ಆಭರಣಗಳನ್ನು ದೋಚಿ ಸಿಕ್ಕಿಬಿದ್ದಿದ್ದಾರೆ. ಅಸಲಿ ಪೊಲೀಸರು ಈಗ ದರೋಡೆಕೋರರ ಜತೆಗೆ ಜೈಲು ಪಾಲಾಗಿ ಕಂಬಿ ಎಣಿಸುತ್ತಿದ್ದಾರೆ.
ಅಂದಹಾಗೆ ಕಳ್ಳರು ಮತ್ತು ಪೊಲೀಸರು ಜತೆಗೂಡಿ ನಕಲಿ ಪೊಲೀಸ್ ರೇಡ್ ಮಾಡಿರುವ ದರೋಡೆಯ ರೋಚಕ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ನವೆಂಬರ್ 11 ರಂದು ಈ ಘಟನೆ ನಡೆದಿದೆ. ನಗರದ ನಗರ್ತಪೇಟೆಯ ಅಣ್ಣಯ್ಯ ಬೀದಿಯಲ್ಲಿ ಚಿನ್ನದ ಅಂಗಡಿಗೆ ಏಕಾಏಕಿ ಪೊಲೀಸರು ದಾಳಿ ಮಾಡಿದ್ದರು.
ನೀನು ಪರವಾನಗಿ ಇಲ್ಲದೇ ಅಂಗಡಿ ನಡೆಸುತ್ತಿದ್ದೀಯ. ಕದ್ದ ಚಿನ್ನ ಖರೀದಿಸಿರುವ ಮಾಹಿತಿ ಇದೆ ಎಂದು ಸಿಸಿಬಿ ಪೊಲೀಸರ ಶೈಲಿಯಲ್ಲೇ ದಾಳಿ ನಡೆಸಿ ಬರೋಬ್ಬರಿ 9 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದರು.
ದಾಳಿ ನಡೆದ ಬಳಿಕ ಅಂಗಡಿ ಮಾಲೀಕ ಕಾರ್ತಿಕ್ ಅವರು ಪರಿಚಿತ ಪೊಲೀಸರ ಮೂಲಕ ದಾಳಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ದಾಳಿ ನಡೆಸಿದ್ದು ಅಸಲಿ ಪೊಲೀಸರಲ್ಲ, ದರೋಡೆಕೋರರು ಎಂಬ ಸಂಗತಿ ಅರಿವಿಗೆ ಬಂದಿತ್ತು.
ಕೂಡಲೇ ಹೋಗಿ ಹಲಸೂರು ಗೇಟ್ ಠಾಣೆಗೆ ದೂರು ನೀಡಿದ್ದರು.
ಪೊಲೀಸರ ಸೋಗಿನಲ್ಲಿ ದರೋಡೆಕೋರರು ದಾಳಿ ನಡೆಸಿ ಚಿನ್ನಾಭರಣ ಕದ್ದಿದ್ದ ಸಿಸಿಟಿವಿ ದೃಶ್ಯಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡಸಿದ್ದರು.
ಪ್ರಕರಣದ ತನಿಖೆ ನಡೆಸಿದ ಹಲಸೂರುಗೇಟ್ ಪೊಲೀಸರು ನಕಲಿ ದಾಳಿ ಮಾಡಿದ್ದ ಏಳು ಆರೋಪಿಗಳನ್ನು ಬಂಧಿಸಿದ್ದು, ಅದರಲ್ಲಿ ಇಬ್ಬರು ಅಸಲಿ ಪೊಲೀಸ್ ಕಾನ್ಸ್ಟೇಬಲ್ ಗಳು ನಕಲಿ ದಾಳಿಯಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.
ಪೊಲೀಸ್ ಪೇದೆ ಅಶೋಕ್ ಸೇರಿ ಎಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಕಾನ್ಸ್ಟೇಬಲ್ ಚೌಡೇಗೌಡ ತಲೆಮರೆಸಿಕೊಂಡಿದ್ದಾನೆ.
ಚಿನ್ನದ ಅಂಗಡಿ ಮಾಲೀಕ ಕಾರ್ತೀಕ್ ಪರವನಾಗಿ ಪಡೆಯದೇ ಚಿನ್ನದ ಆಭರಣ ಮಾಡುತ್ತಿದ್ದರು. ಈ ವಿಷಯ ತಿಳಿದಿದ್ದ ಬಿಲ್ಡಿಂಗ್ ಮಾಲೀಕರ ಪುತ್ರ ಸೂರಜ್ ಕಳ್ಳರ ಜತೆ ಸೇರಿ ಪೊಲೀಸರ ಹೆಸರಿನಲ್ಲಿ ದಾಳಿ ನಡೆಸಿ ಹಣ ದೋಚಲು ಸಂಚು ರೂಪಿಸಿದ್ದಾರೆ.
ಅದಕ್ಕೆ ಅಸಲಿ ಪೊಲೀಸರ ನೆರವು ಪಡೆಯಲು ಮುಂದಾಗುವ ದರೋಡೆಕೋರರ ತಂಡ, ಅಪಘಾತ ಪ್ರಕರಣದಲ್ಲಿ ಪ್ರಮುಖ ಆರೋಪಿ ನದೀಮ್ ಗೆ ಪರಿಚಯವಾಗಿದ್ದ ಕಾನ್ಸ್ಟೇಬಲ್ ಗಳಾದ ಚೌಡೇಗೌಡ ಮತ್ತು ಅಶೋಕ್ ಜತೆ ಮಾತನಾಡಿ ಯೋಜನೆ ರೂಪಿಸಿದ್ದಾರೆ.
ಕಾರ್ತೀಕ್ ಪೊಲೀಸರಿಗೆ ದೂರು ಕೊಡಲ್ಲ ಎಂಬ ಧೈರ್ಯದ ಮೇಲೆಯೇ ಪ್ಲಾನ್ ನಂತೆ ನದೀಮ್ ನೇತೃತ್ದದಲ್ಲಿ ದರೋಡೆಕೋರರು ಪೊಲೀಸರ ಸೋಗಿನಲ್ಲಿ ದಾಳಿ ನಡೆಸಿದ್ದಾರೆ.
ಈ ದಾಳಿಯಲ್ಲಿ ಪೇದೆಗಳಾದ ಚೌಡೇಗೌಡ ಮತ್ತು ಅಶೋಕ್ ಪಾಲ್ಗೊಂಡಿದ್ದಾರೆ. ಇದೇ ಕಾರಣಕ್ಕೆ ಭಯ ಬಿದ್ದು ದಾಳಿ ವೇಳೆ ಅಂಗಡಿ ಮಾಲೀಕ ಸುಮ್ಮನಾಗಿದ್ದ. ಪರಿಚಿತ ಪೊಲೀಸರ ಮೂಲಕ ಪೊಲೀಸರ ದಾಳಿ ನಕಲಿ ಎಂದು ಗೊತ್ತಾದ ಬಳಿಕ ದೂರು ನೀಡಿದ್ದು, ಇದೀಗ ಅಸಲಿ ಪೊಲೀಸರ ಜತೆಗೂಡಿ ನಕಲಿ ದಾಳಿ ಮಾಡಿ ದರೋಡೆ ಮಾಡಿದ್ದ ಏಳು ಆರೋಪಿಗಳು ಅಂದರ್ ಆಗಿದ್ದಾರೆ.
ಕಾನ್ಸ್ಟೇಬಲ್ ಚೌಡೇಗೌಡ ತಪ್ಪಿಸಿಕೊಂಡಿದ್ದು,ಆತನಿಗಾಗಿ ಶೋಧ ನಡೆಸುತ್ತಿದ್ದಾರೆ. ದರೋಡೆ ಮಾಡಿದ್ದ 9 ಲಕ್ಷ ರೂ.ಗಳಲ್ಲಿ ತಲಾ ಒಂದೊಂದು ಲಕ್ಷ ಹಂಚಿಕೊಂಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
FILM
ಕೊನೆಗೂ ಉರ್ಫಿ ಜಾವೇದ್ ಇನ್ಸ್ಟಾಗ್ರಾಮ್ ಅಕೌಂಟ್ ಡಿಲೀಟ್…
Urfi javed: ಸೋಷಿಯಲ್ ಮೀಡಿಯಾದಲ್ಲಿ ಮಾಡೆಲ್ ಆಗಿ ಗುರುತಿಸಿಕೊಂಡಿರುವ ಉರ್ಫಿ ಜಾವೇದ್ ಆಕೆಯ ಇನ್ಸ್ಟಾಗ್ರಾಮ್ ಖಾತೆ ಡಿಲೀಟ್ ಆಗಿರುವುದು ಇದೀಗ ಆಕೆಗೆ ಸಂಕಷ್ಟ ಎದುರಾಗಿದೆ.
ಉರ್ಫಿ ಜಾವೇದ್ ಎಂದರೆ ಅವಳ ಡ್ರೇಸ್ ನೋಡಿ.. ಅದೇನು ಡ್ರೇಸ್ ಹಾಕಿದ್ದಾಳೆ ಅಂತಾರೆ ಜನ. ಅಂತೂ ಸಾಮಾಜಿಕ ಜಾಲತಾಣದಲ್ಲಿ ಆಕೆಯು ವಿಚಿತ್ರ ವಿಚಿತ್ರ ಪೋಟೋಗಳನ್ನು ಅಪ್ಲೋಡ್ ಮಾಡ್ತಾ ಇರುತ್ತಾಳೆ.
ಆಕೆ ಫಾಲೋವರ್ಸ್ ಹೆಚ್ಚಾಗಳು ಇಂತಹ ಡ್ರೇಸ್ ಹಾಕ್ತ ಇದ್ದಾಳ…ಎಸ್, ಈಕೆ ಅಂತಹ ವಿಚಿತ್ರವಾದ ಡ್ರೇಸ್ ಗಳನ್ನು ಹಾಕಿ ಫೋಟೊ ಶೂಟ್ ಮಾಡಿದ ಬಳಿಕ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಪ್ಲೋಡ್ ಮಾಡುತ್ತಾಳೆ. ಹಾಗೇ ಫಾಲೋವರ್ಸ್ ಗಳ ಸಂಖ್ಯೆ ಹೆಚ್ಚಾಗುತ್ತಿತ್ತು. ಸುಮಾರು 4 ಮಿಲಿಯನ್ ಗೂ ಅಧಿಕ ಫಾಲೋವರ್ಸ್ ಗಳನ್ನು ಹೊಂದಿದ್ದಳು.
ಅರೆಬರೆ ಡ್ರೇಸ್ ಹಾಕುತ್ತಾ ದಿನದಿಂದ ದಿನಕ್ಕೆ ಹೊಸ ಟ್ರೆಂಡ್ ಗಳನ್ನು ಸೃಷ್ಟಿಸುತ್ತಿದ್ದಳು. ಆದರೆ ಇದೀಗ ಆಕೆಯ ಖಾತೆಯನ್ನು ಇನ್ಸ್ಟಾಗ್ರಾಂ ಅಮಾನತು ಮಾಡಿದೆ. ಡಿಲೀಟ್ ಆಗಿರುವ ಕುರಿತು ಆಕೆ ಮಾಡೆಲ್ ಸ್ಕ್ರೀನ್ ಶಾಟ್ ತೆಗೆಯುವ ಮೂಲಕ ಹಂಚಿಕೊಂಡಿದ್ದಾಳೆ.
ಇನ್ನು ಇನ್ಸ್ಟಾ ಆಕೆಯ ಖಾತೆಯನ್ನು ಅಮಾನತುಗೊಳಿಸಿದ್ದಲ್ಲದೆ, ಈ ನಿರ್ಧಾರವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು 180 ದಿನಗಳ ಕಾಲಾವಕಾಶ ನೀಡಿದೆ. ಆದರೆ ಉರ್ಫಿ ಇವೆಲ್ಲದಕ್ಕೆ ಉತ್ತರ ನೀಡಿ ತನ್ನ ಖಾತೆಯನ್ನು ಮರಳಿ ಪಡೆಯುತ್ತಾಳಾ ಎಂಬ ಪ್ರಶ್ನೆ ಫ್ಯಾನ್ಸ್ಗೆ ಕಾಡಿದೆ. ಇನ್ಸ್ಟಾಗ್ರಾಮ್ ಖಾತೆ ಮರಳಿ ಬಂದರೆ ಆಕೆ ಇನ್ನಾದರೂ ಸರಿಯಾದ ಡ್ರೇಸ್ ಹಾಕುತ್ತಾಳ ಎಂದು ಕಾದು ನೋಡಬೇಕಷ್ಟೇ.
ಆಕೆಯ ಅರೆಬರೆ ಡ್ರೇಸ್ ನೋಡಿ ಕೆಳವರು ಆಕೆಯ ಖಾತೆ ಡಿಲೀಟ್ ಆಗಿದ್ದು, ಒಳ್ಳೆಯದೇ ಎಂದು ಹೆಳುತ್ತಿದ್ದಾರೆ. ಆದರೆ ಆಕೆ ಮಾತ್ರ ನೊಂದುಕೊಂಡಿದ್ದಾಳೆ.
FILM
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
ಬೆಂಗಳೂರು : ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬೃಂದಾವನ ಧಾರವಾಹಿಯ ನಟ ಧಾರವಾಹಿಗೆ ಆಯ್ಕೆಯಾದ ತಮ್ಮ ಅಭಿಪ್ರಾಯವನ್ನು ಕೊನೆಗೂ ಹಂಚಿಕೊಂಡಿದ್ದಾರೆ.
ಎಲ್ಲರಿಗೂ ಗೊತ್ತಿರುವಂತೆ ವರುಣ್ ಸೋಷಿಯಲ್ ಮೀಡಿಯಾದಲ್ಲಿ ಈಗಾಗ್ಲೇ ಜನಪ್ರಿಯತೆ ಪಡೆದುಕೊಂಡವರು. ಅಲ್ಲದೇ ಇತ್ತೀಚೆಗೆ ಗರ್ಲ್ ಫ್ರೆಡ್ ಜೊತೆಗೆ ಬ್ರೇಕಪ್ ಮಾಡಿಕೊಂಡಿದ್ದು ದೊಡ್ಡ ಸುದ್ದಿಯಾಗಿತ್ತು.
ಇದೀಗ ಸೀರಿಯಲ್ ಗೆ ಆಯ್ಕೆಯಾದ ಬಗ್ಗೆ ಮಾತನಾಡಿರುವ ನಟ ವರುಣ್ ಆರಾಧ್ಯ “ದೀಪಾವಳಿ ಹಬ್ಬದ ಊಟ ಮುಗಿಸಿಕೊಂಡು ಮಲಗಿಕೊಂಡಿದ್ದೆ. ರಾತ್ರಿ 12.30ಗೆ ಕರೆ ಮಾಡಿ ಸೀರಿಯಲ್ನಲ್ಲಿ ನಟಿಸುವ ಇಂಟ್ರೆಸ್ಟ್ ಇದ್ಯಾ. ಅವಕಾಶ ಇದೆ ಎಂದು ಫೋನ್ ಮಾಡಿದರು. ರಾತ್ರಿ ಆ ಸಮಯದಲ್ಲಿ ಮಾಡಿದಕ್ಕೆ ನಾನು ಗಾಬರಿ ಆಗಿದೆ ಆ ಸಮಯದಲ್ಲಿ ಆಡಿಷನ್ಗೆ ಬರೆಲು ಹೇಳಿದರು. ನನ್ನ ಸ್ನೇಹಿತರನ್ನು ಕರೆದುಕೊಂಡು ನಾಗರಭಾವಿಯಲ್ಲಿ ನಿರ್ದೇಶಕರಾದ ರಾಮ್ಜೀ ಹೇಳಿದ ಸ್ಥಳಕ್ಕೆ ಹೋದೆ. ಕೈಗೆ ಒಂದು ಸ್ಕ್ರಿಪ್ಟ್ ಕೊಟ್ಟರು ಆಡಿಷನ್ ಮಾಡಿದೆ.
ಮಧ್ಯರಾತ್ರಿ 2.30ಕ್ಕೆ ಸೆಲೆಕ್ಟ್ ಆಗಿರುವೆ ಎಂದು ಹೇಳಿದರು. ನಾನು ಫುಲ್ ಶಾಕ್ ಆಗಿಬಿಟ್ಟಿ..ಅಲ್ಲದೆ ಬೆಳಗ್ಗೆನಿಂದ ಶೂಟಿಂಗ್ ಎಂದು ಹೇಳಿದರು. ಅಷ್ಟೊತ್ತರಲ್ಲಿ ಮನೆಗೆ ಬಂದು ಅಕ್ಕ ಮತ್ತು ಅಮ್ಮ ಮಲಗಿದ್ದರು, ಅವರನ್ನು ಎಬ್ಬಿಸಿ ಸೆಲೆಕ್ಟ್ ಅನ್ನೋ ವಿಚಾರ ಹೇಳಿದೆ. ಬೆಳಗ್ಗೆ ಶೂಟಿಂಗ್ ಇತ್ತು…ಹೇರ್ ಕಟ್ ಮಾಡಿಸಬೇಕು ಮತ್ತು ಗಡ್ಡ ಟ್ರಿಮ್ ಮಾಡಬೇಕು ಎಂದು ಹೇಳಿದರು ಅದೂ ಮಾಡಿಸಿಕೊಂಡು ಬೆಳಗ್ಗೆ ಶೂಟಿಂಗ್ ಸ್ಥಳಕ್ಕೆ ಹೋದೆ ಮರು ದಿನವೇ ಪ್ರಸಾರ ಮಾಡಲು ಶುರು ಮಾಡಿದ್ದರು. ಮೊದಲ ದೃಶ್ಯವೇ ಮದುವೆ ಮನೆ ಸೀನ್ ಅಗಿತ್ತು ಎಂದಿದ್ದಾರೆ.
bengaluru
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್
ಬೆಂಗಳೂರು: ಸೈಬರ್ ಖದೀಮರ ಉಪಟಳ ಎಲ್ಲಿಯವರೆಗೆ ತಲುಪಿದೆ ಎಂದರೆ ಅದು ಇದೀಗ ಕರ್ನಾಟಕ ಹೈಕೋರ್ಟ್ ಕಲಾಪಕ್ಕೂ ತಟ್ಟಿದೆ.
ಮಂಗಳವಾರ ಸಂಜೆ ಹೈಕೋರ್ಟಿನ ಹಾಲ್ ನಂಬರ್ 6, 12, 18, 23, 24, 26 ಮತ್ತು ಇತರ ಹಾಲ್ ಗಳಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿದ್ದಾಗಲೇ ಲಿಂಕ್ ಮೂಲಕ ಭಾಗವಹಿಸಿದ್ದ ಅಪರಿಚಿತ ಆರೋಪಿಗಳು ಅಶ್ಲೀಲ ಚಿತ್ರಗಳನ್ನು ಪ್ರದರ್ಶಿಸಿ ಕಲಾಪಕ್ಕೆ ಅಡ್ಡಿ ಪಡಿಸಿದ್ದಾರೆ. ಈ ಬಗ್ಗೆ ಹೈಕೋರ್ಟಿನ ಕಂಪ್ಯೂಟರ್ ವಿಭಾಗದ ರಿಜಿಸ್ಟ್ರಾರ್ ಅವರು ಸೆಂಟ್ರಲ್ ಸೆನ್ ಕ್ರೈಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಹೈಕೋರ್ಟ್ ಪೀಠಗಳಲ್ಲಿ ಲೈವ್ ಸ್ಟ್ರೀಮಿಂಗ್ ಮತ್ತು ವೀಡಿಯೋ ಕಾನ್ಫರೆನ್ಸ್ ಸೌಲಭ್ಯವನ್ನು ಕೆಲವು ದಿನಗಳ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ. ಬುಧವಾರ ಸಂಜೆ ಹೈಕೋರ್ಟ್ ಕಲಾಪದ ವೇಳೆ ವೀಡಿಯೋ ಕಾನ್ಫರೆನ್ಸ್ ಆ್ಯಪ್ ಅನ್ನು ಹ್ಯಾಕ್ ಮಾಡಿ ಆಶ್ಲೀಲ ದೃಶ್ಯಾವಳಿಯನ್ನು ಅಪ್ ಲೋಡ್ ಮಾಡಲಾಗಿತ್ತು. ಅಶ್ಲೀಲ ವೀಡಿಯೋ ಪ್ರಸಾರವಾಗುತ್ತಿದ್ದಂತೆ ಅದನ್ನು ನಿರ್ವಹಣೆ ಮಾಡುತ್ತಿದ್ದ ಸಿಬಂದಿಯನ್ನು ಕರೆದು ವಿಚಾರಿಸಿದಾಗ ಸೈಬರ್ ಹ್ಯಾಕ್ ಆಗಿರುವ ವಿಷಯ ಗೊತ್ತಾಗಿದೆ. ಕೂಡಲೇ ವೀಡಿಯೋ ಕಾನ್ಫರೆನ್ಸ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ.
- Ancient Mangaluru6 days ago
ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ
- DAKSHINA KANNADA6 days ago
ಉಡುಪಿ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ
- bangalore5 days ago
ಇವ್ರು ಯಾರಂತ ಗೊತ್ತಾಯ್ತ ಫ್ರೆಂಡ್ಸ್? ನ್ಯೂ ಕಪಲ್ಸ್ ಫಾರಿನ್ ಟ್ರಿಪ್ ಅಂತೆ..!
- bangalore4 days ago
ದೈವಕೋಲ ವೀಕ್ಷಣೆಗೆ ಟೂರ್ ಪ್ಯಾಕೇಜ್ – ತುಳುವರ ಧಾರ್ಮಿಕ ಭಾವನೆಗೆ ಪೆಟ್ಟು..!