Connect with us

    LATEST NEWS

    ಸೂರ್ಯಕಾಂತ್‌ ಜಯ ಸುವರ್ಣರಿಗೆ ಬೆಸ್ಟ್‌ ಚೇರ್‌ಮೆನ್ ಪ್ರಶಸ್ತಿ..! ಭಾರತ್‌ಬ್ಯಾಂಕ್‌ಗೆ ಹೆಮ್ಮೆಯ ಗರಿ

    Published

    on

    ಮಂಗಳೂರು:   ಸೂರ್ಯಕಾಂತ್ ಜಯಸುವರ್ಣ ಅವರ ಅಧ್ಯಕ್ಷತೆಯಲ್ಲಿ ಅಭಿವೃದ್ದಿಯ ಪಥದಲ್ಲಿ ಸಾಗುತ್ತಿರುವ ಭಾರತ್‌ ಬ್ಯಾಂಕ್‌ ಗೆ ಮತ್ತೊಂದು ಪ್ರಶಸ್ತಿಯ ಗರಿ ಸೇರಿದೆ. “ಭಾರತ ರತ್ನ ಸಹಕಾರಿತ ಸನ್ಮಾನ-2024” ರಲ್ಲಿ ಬಹು-ರಾಜ್ಯ ಅನುಸೂಚಿತ ಸಹಕಾರಿ ಬ್ಯಾಂಕ್‌ಗಳ ವಿಭಾಗದಲ್ಲಿ “ಕೊ-ಅಪರೇಟಿವ್‌ ಬ್ಯಾಂಕ್‌ ಸಮ್ಮಿಟ್‌” ನಲ್ಲಿ ಬೆಸ್ ಚೇರ್‌ಮೆನ್‌ ಅವಾರ್ಡ್‌ಅನ್ನು ಸೂರ್ಯಕಾಂತ್‌ ಜಯಸುವರ್ಣ ಪಡೆದುಕೊಂಡಿದ್ದಾರೆ. ಮುಂಬೈನ ಗ್ರ್ಯಾಂಡ್ ಲಲಿತ್ ಹೋಟೆಲ್‌ನಲ್ಲಿ ನಡೆದ ಪ್ರಶಸ್ತಿ ಸಮಾರಂಭ ಕಾರ್ಯಕ್ರಮದಲ್ಲಿ ಭಾರತ ಸರಕಾರದ ಸಂವಹನ ಸಚಿವಾಲಯದ ಮಹಾನಿರ್ದೇಶಕ ಸುಮ್ನೇಶ್ ಜೋಶಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.

    suryakanth jaya suvarna

    ಈ ಹಿಂದೆ 1991ರಲ್ಲಿ ಬ್ಯಾಂಕ್ ಜವಬ್ದಾರಿಯನ್ನು ಹೊತ್ತಿದ್ದ ಜಯ ಸುವರ್ಣರವರಿಗೆ ‘ಬೆಸ್ಟ್ ಚ್ಯಾರ್‌ಮ್ಯಾನ್ ಅವಾರ್ಡ್‌’ ಲಭಿಸಿತ್ತು. ಕೊ-ಅಪರೇಟಿವ್‌ ಬ್ಯಾಂಕ್‌ಗಳಲ್ಲಿ ಭಾರತ್ ಬ್ಯಾಂಕ್  ಮೊಟ್ಟ ಮೊದಲು ಆರ್‌ಬಿಐನಿಂದ ಮಾನ್ಯತೆ ಪಡೆದ ಹೆಗ್ಗಳಿಕೆ ಕೂಡಾ ಇದೆ. ಇದೀಗ ಜಯ ಸುವರ್ಣರವರ ಬಳಿಕ ಕಾರ್ಪರೇಟ್‌ ಬ್ಯಾಂಕ್‌ ವಲಯದಲ್ಲಿ ಬೆಸ್ಟ್ ಚ್ಯಾರ್‌ಮ್ಯಾನ್ ಅವಾರ್ಡ್‌ ಅನ್ನು ಸೂರ್ಯಕಾಂತ್ ಜಯಸುವರ್ಣ ತಮ್ಮದಾಗಿಸಿಕೊಂಡಿದ್ದಾರೆ.

    ನಿನ್ನೆ(23) ಭಾರತ್‌ ಬ್ಯಾಂಕ್‌ ಗೆ 25 ವರ್ಷ ಪೂರೈಸಿದ ಸಂಭದ್ರದ ದಿನವಾಗಿದ್ದು ಅಂದೇ ಈ ಪ್ರಶಸ್ತಿ ಲಭಿಸಿರುವುದು ಬಹಳ ವಿಶೇಷ. ಭಾರತ್ ಬ್ಯಾಂಕ್ ಇಂದು ದೇಶದ ಹಲವು ರಾಜ್ಯಗಳಲ್ಲಿ 100 ಕ್ಕೂ ಅಧಿಕ ಬ್ರಾಂಚ್‌ಗಳನ್ನು ಹೊಂದಿದ್ದು ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಾ ಬಂದಿದೆ.

    Read More..; ಭಾರತ್ ಬ್ಯಾಂಕ್ ಗೆ ಅತ್ಯುತ್ತಮ ‘ಐಟಿ ರಿಸ್ಕ್ ಮ್ಯಾನೇಜ್ಮೆಂಟ್’ ಪ್ರಶಸ್ತಿಯ ಗರಿ

    ಬ್ಯಾಂಕ್‌ನ ಹಿನ್ನೆಲೆ:

    1978 ರಲ್ಲಿ ನಾರಾಯಣಗುರುಗಳ ಆಶಯದಂತೆ ಸಮಾಜದ ಜನರ ಆರ್ಥಿಕ ಸಬಲೀಕರಣಕ್ಕಾಗಿ ಭಾರತ್ ಬ್ಯಾಂಕ್‌ ಮುಂಬೈನಲ್ಲಿ ಹುಟ್ಟು ಪಡೆದಿತ್ತು.  1991 ರಲ್ಲಿ ಜಯ ಸುವರ್ಣ ಅವರು ಬ್ಯಾಂಕ್ ಜವಾಬ್ದಾರಿಯನ್ನು ಹೆಗಲಿಗೇರಿಸಿಕೊಂಡ ಬಳಿಕ ಬ್ಯಾಂಕ್‌ನ ಸರ್ವತೋಮುಖ ಅಭಿವೃದ್ದಿಯತ್ತ ಮುಖ ಮಾಡಿತ್ತು.  ಈ ಕಾರಣದಿಂದಾಗಿ 1996 ರಲ್ಲಿ 193 ಕೋಟಿಯ ವ್ಯವಹಾರ ನಡೆಸುವುದರೊಂದಿಗೆ ಅತ್ಯಂತ ಕಡಿಮೆ ಅವಧಿಯಲ್ಲಿ ರಿಸರ್ವ್‌ ಬ್ಯಾಂಕ್ ಆಫ್‌ ಇಂಡಿಯಾದ  ಶೆಡ್ಯೂಲ್ ಬ್ಯಾಂಕ್‌ ಸ್ಥಾನಮಾನ ಪಡೆದ ಕೋಪರೇಟಿವ್ ಬ್ಯಾಂಕ್‌ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು. 1998 ರಲ್ಲಿ ಕರ್ನಾಟಕ್ಕೆ ಪಾದಾರ್ಪಣೆ ಮಾಡಿದ ಭಾರತ್ ಕೋಪರೇಟಿವ್‌ ಬ್ಯಾಂಕ್‌ ಬೆಂಗಳೂರಿನಲ್ಲಿ ತನ್ನ ಬ್ರಾಂಚ್ ತೆಗೆದು, 1999 ರಲ್ಲಿ ಮಂಗಳೂರಿನ ಹಂಪನಕಟ್ಟೆಯಲ್ಲಿ ತನ್ನ 25 ನೇ ಬ್ರಾಂಚ್ ಆರಂಭಿಸಿತ್ತು. ಜಯ ಸುವರ್ಣ ಅವರ ನೇತೃತ್ವದಲ್ಲಿ ಅಭಿವೃದ್ದಿಯ ಪಥದಲ್ಲಿ ಸಾಗಿದ ಭಾರತ್ ಬ್ಯಾಂಕ್ ಇಂದು ದೇಶದ ಅನೇಕ ರಾಜ್ಯಗಳಲ್ಲಿ ತನ್ನ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ.  ಇದೀಗ ಸೂರ್ಯಕಾಂತ ಜಯ ಸುವರ್ಣ ಅವರು ಭಾರತ್ ಬ್ಯಾಂಕ್‌ನ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಬ್ಯಾಂಕ್‌ ನ ಅಭಿವೃದ್ದಿಯೊಂದಿಗೆ ದೇಶದಲ್ಲಿ ನೂರಕ್ಕೂ ಹೆಚ್ಚು ಬ್ರಾಂಚ್‌ಗಳನ್ನು ಸ್ಥಾಪಿಸಿ ಸಾವಿರಾರು ಜನರಿಗೆ ಉದ್ಯೋಗ ಒದಗಿಸಿದ್ದಾರೆ.  ಜೊತೆಗೆ ಲಕ್ಷಾಂತರ ಗ್ರಾಹಕರಿಗೆ ತನ್ನ ಉತ್ತಮ ಸೇವೆಯ ಮೂಲಕ ಮೆಚ್ಚುಗೆಯನ್ನು ಭಾರತ್ ಬ್ಯಾಂಕ್ ಗಳಿಸಿಕೊಂಡಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಸ್ಟಾರ್ ಆಲ್​ ರೌಂಡರ್!

    Published

    on

    ಮಂಗಳೂರು/ನಮೀಬಿಯಾ  : ನಮೀಬಿಯಾ ತಂಡದ ಸ್ಟಾರ್ ಆಲ್​ ರೌಂಡರ್ ಡೇವಿಡ್ ವೀಝ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಆಂಟಿಗುವಾದ ನಾರ್ತ್ ಸೌಂಡ್‌ನಲ್ಲಿರುವ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕೊನೆಯ ಬಾರಿ ಕಣಕ್ಕಿಳಿಯುವ ಮೂಲಕ ವೀಝ ಇಂಟರ್​ನ್ಯಾಷನಲ್ ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಿದರು.


    2013 ರಿಂದ 2016 ರವರೆಗೆ ಸೌತ್ ಆಫ್ರಿಕಾ ತಂಡವನ್ನು ವೀಝ ಪ್ರತಿನಿಧಿಸಿದ್ದರು. ಆ ಬಳಿಕ ನಮೀಬಿಯಾ ಪರ ಆಡುವ ಮೂಲಕ ಕ್ರಿಕೆಟ್ ಜೀವನದ ಹೊಸ ಇನ್ನಿಂಗ್ಸ್ ಆರಂಭಿಸಿದ್ದರು. ಇದೀಗ ತಮ್ಮ 11 ವರ್ಷಗಳ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ.

    ಇದನ್ನೂ ಓದಿ : ಅಪ್ಪಂದಿರ ದಿನ : ತಂದೆಯನ್ನು ನೆನೆದು ಭಾವುಕ ಪೋಸ್ಟ್ ಹಂಚಿಕೊಂಡ ವಿನೀಶ್ ದರ್ಶನ್

    ಏಕದಿನ ಕ್ರಿಕೆಟ್​ನಲ್ಲಿ 15 ಪಂದ್ಯಗಳನ್ನಾಡಿರುವ ಡೇವಿಡ್ ವೀಝ, 330 ರನ್ ಮತ್ತು 15 ವಿಕೆಟ್​ಗಳನ್ನು ಗಳಿಸಿದ್ದಾರೆ. 54 ಟಿ20 ಪಂದ್ಯಗಳಿಂದ 624 ರನ್​ ಹಾಗೂ 59 ವಿಕೆಟ್ ಪಡೆದಿದ್ದಾರೆ.

    ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆರ್​ಸಿಬಿ, ಕೆಕೆಆರ್ ಪರ ಒಟ್ಟು 18 ಪಂದ್ಯಗಳನ್ನಾಡಿರುವ ಡೇವಿಡ್ ವೀಝ 148 ರನ್​ ಹಾಗೂ 16 ವಿಕೆಟ್ ಕಬಳಿಸಿದ್ದಾರೆ. ವಿಶೇಷ ಅಂದರೆ ಎರಡು ದೇಶಗಳನ್ನು ಪ್ರತಿನಿಧಿಸಿ ಐಪಿಎಲ್​ನಲ್ಲಿ ಸ್ಥಾನ ಪಡೆದ ಏಕೈಕ ಆಟಗಾರ ಎಂಬ ದಾಖಲೆಯನ್ನು ಮಾಡಿದ್ದಾರೆ.

    ಸೌತ್ ಆಫ್ರಿಕಾ ತಂಡದಲ್ಲಿದ್ದಾಗ 2015 ರಲ್ಲಿ ಡೇವಿಡ್ ವೀಝ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದರು. ಅಲ್ಲದೆ ಎರಡು ಸೀಸನ್​ಗಳಲ್ಲಿ ಕಣಕ್ಕಿಳಿದಿದ್ದ ವೀಝ ಒಟ್ಟು 15 ಪಂದ್ಯಗಳನ್ನಾಡಿದ್ದಾರೆ. 16 ವಿಕೆಟ್​ಗಳನ್ನು ಪಡೆದಿದ್ದಾರೆ. ಇದಾದ ಬಳಿಕ ನಮೀಬಿಯಾ ತಂಡವನ್ನು ಪ್ರತಿನಿಧಿಸಿದ್ದ ಡೇವಿಡ್ ವೀಝ, ಐಪಿಎಲ್ 2023 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆಯ್ಕೆಯಾಗಿದ್ದರು.
    ಈ ಮೂಲಕ ಎರಡು ದೇಶಗಳನ್ನು ಪ್ರತಿನಿಧಿಸಿ ಐಪಿಎಲ್​ನಲ್ಲಿ ಅವಕಾಶ ಪಡೆದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    Continue Reading

    LATEST NEWS

    ನಕಲಿ ವೈದ್ಯನಿಂದ ಭ್ರೂಣ ಹ*ತ್ಯೆ ..! ತನಿಖೆ ವೇಳೆ ವೈದ್ಯನ ಕರಾಳ ಮುಖ ಬಯಲು..!!

    Published

    on

    ಬೆಳಗಾವಿ/ಮಂಗಳೂರು: ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆಯಾಗಿದ್ದು, ನಕಲಿ ವೈದ್ಯನೊಬ್ಬ ಸಿಕ್ಕಿಬಿದ್ದಿದ್ದಾನೆ. ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಆರೋಪದಡಿ ನಕಲಿ ವೈದ್ಯನನ್ನು ಪೊಲೀಸರು ಬಂಧಿಸಿದ್ದರು. ತನಿಖೆ ವೇಳೆ ನಕಲಿ ವೈದ್ಯನ ಮತ್ತೊಂದು ಕರಾಳ ಮುಖ ಬಯಲಿಗೆ ಬಂದಿದೆ.

    ನಕಲಿ ವೈದ್ಯ ಡಾ.ಅಬ್ದುಲ್ ಗಫಾತ್ ಸೇರಿ ಐವರನ್ನು ಜೂ. 10 ರಂದು ಮಾಳಮಾರುತಿ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದರು. ತನಿಖೆ ವೇಳೆ ಇವನ ಮತ್ತೊಂದು ಕರಾಳ ಮುಖ ಬಯಲಿಗೆ ಬಂದಿದೆ. ಮಕ್ಕಳ ಮಾರಾಟ ಜಾಲ ಪ್ರಕರಣವನ್ನು ಬೆನ್ನು ಹತ್ತಿದ್ದ ಬೆಳಗಾವಿ ಪೊಲೀಸರಿಗೆ ವೈದ್ಯನ ಮತ್ತೊಂದು ಕೃತ್ಯ ಬೆಳಕಿಗೆ ಬಂದಿದೆ. ಈ ವೈದ್ಯ ಮಕ್ಕಳ ಮಾರಾಟ ಸೇರಿದಂತೆ ಭ್ರೂಣಗಳ ಹತ್ಯೆ ಮಾಡಿದ್ದಾನೆ. ಭ್ರೂಣ ಹತ್ಯೆಗೈದು ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದ ಫಾರ್ಮ್‌ ಹೌಸ್‌ನಲ್ಲಿ ಅಂತ್ಯಕ್ರಿಯೆ ಮಾಡಿದ್ದಾನೆ. ಪೊಲೀಸರ ತನಿಖೆ ವೇಳೆ ಅಬ್ದುಲ್ ಭ್ರೂಣ ಹತ್ಯೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಫಾರ್ಮ್‌ ಹೌಸ್‌ನಲ್ಲಿ ಶೋಧಕಾರ್ಯ ನಡೆಸಿದಾಗ ಮೂರು ಭ್ರೂಣಗಳ ಅವಶೇಷ ಪತ್ತೆಯಾಗಿದೆ. ಕಿತ್ತೂರಿನಲ್ಲಿದ್ದ ತನ್ನ ಫಾರ್ಮ್‌ ಹೌಸ್‌ನಲ್ಲಿ ಭ್ರೂಣ ಹತ್ಯೆ ಮಾಡಿ, ಫಾರ್ಮ್‌ಹೌಸ್‌ನಲ್ಲಿ ಹೂತುಹಾಕುತ್ತಿದ್ದ ಎಂದು ತನಿಖೆ ವೇಳೆ ಗೊತ್ತಾಗಿದೆ.

    Read More..; ‘ನನ್ನಿಂದ ಹೀಗೆ ಆಗೋಯ್ತಲ್ಲ’ ತಂದೆ ಶವದ ಮುಂದೆ ಕಣ್ಣೀರಿಟ್ಟ ದರ್ಶನ್ ಕೇಸ್‌ ಆರೋಪಿ..!

    ಡಿಸಿ ನಿತೇಶ ಪಾಟೀಲ್ ಸೂಚನೆ ಮೇರೆಗೆ ಪರಿಶೀಲನೆಗೆ ತಂಡ ರಚನೆ ಮಾಡಲಾಗಿದ್ದು, ಪೊಲೀಸರು, ಆರೋಗ್ಯ ಇಲಾಖೆ, ಎಫ್ ಎಸ್ ಎಲ್ ತಂಡದಿಂದ ಶೋಧ ಕಾರ್ಯ ಮಾಡಲಾಗಿದೆ. ಕಾರ್ಯಾಚರಣೆ ವೇಳೆ ಮೂರು ಭ್ರೂಣಗಳ ಅವಶೇಷಗಳು ಪತ್ತೆಯಾಗಿದ್ದು, ಅವಶೇಷಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಆರೋಪಿಗಳ ವಿಚಾರಣೆಯನ್ನು ಪೊಲೀಸರು ಮುಂದುವರೆಸಿದ್ದಾರೆ.

    Continue Reading

    LATEST NEWS

    ಗಂಗಾ ನದಿಯಲ್ಲಿ ದೋಣಿ ಮಗುಚಿ 6 ಮಂದಿ ನಾಪತ್ತೆ

    Published

    on

    ಪಾಟ್ನಾ: ದೋಣಿಯೊಂದು ಗಂಗಾ ನದಿಯಲ್ಲಿ ಮಗುಚಿ ಬಿದ್ದು, 6 ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಬಿಹಾರದ ರಾಜಧಾನಿ ಪಾಟ್ನಾದ ಬಾರ್ಹ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 17 ಮಂದಿ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು. 11 ಮಂದಿ ಈಜಿ ದಡ ಸೇರಿದ್ದು, 6 ಮಂದಿ ನಾಪತ್ತೆಯಾಗಿದ್ದಾರೆ.


    ನದಿ ಮಧ್ಯದಲ್ಲಿ ದೋಣಿ ಮುಳುಗಿದೆ. ತಕ್ಷಣ ಎಲ್ಲರೂ ನದಿಯಲ್ಲಿ ಮುಳುಗಲು ಪ್ರಾರಂಭಿಸಿದರು. ಈ ವೇಳೆ 11 ಜನ ಈಜಿ ದಡ ಸೇರಿದ್ದರೆ, ಇನ್ನೂ ಆರು ಮಂದಿ ನಾಪತ್ತೆಯಾಗಿದ್ದಾರೆ.

    ಇದನ್ನೂ ಓದಿ : ಐಸ್‌ಕ್ರೀಂ ಪ್ರಿಯರೇ ಎಚ್ಚರ! ಆನ್‌ಲೈನ್‌ನಲ್ಲಿ ತರಿಸಿದ ಐಸ್‌ಕ್ರೀಂನಲ್ಲಿ ಸತ್ತ ಹುಳಗಳು ಪತ್ತೆ!

    ಗಂಗಾ ದಸರಾ ನಿಮಿತ್ತ ಕೆಲವರು ಸ್ನಾನ ಮಾಡಲು ನದಿಗೆ ಅಡ್ಡಲಾಗಿ ದೋಣಿಯಲ್ಲಿ ಹೋಗುತ್ತಿದ್ದರು ಎಂದು ವರದಿಯಾಗಿದೆ. ಈ ವೇಳೆ ಉಮಾ ಘಾಟ್ ಬಳಿ ದೋಣಿ ಪಲ್ಟಿಯಾಗಿದೆ. ದುರಂತದಲ್ಲಿ ಆರು ಮಂದಿ ನೀರಿನಲ್ಲಿ ಮುಳುಗಿ ಮೃ*ತಪಟ್ಟಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡ ಸ್ಥಳಕ್ಕೆ ತಲುಪಿ ಕಾರ್ಯಾಚರಣೆ ನಡೆಸುವ ಬಗ್ಗೆ ವರದಿಯಾಗಿದೆ.

    Continue Reading

    LATEST NEWS

    Trending