LATEST NEWS
ಐಪಿಎಲ್ ಗೆ 11 ಸಾವಿರ ಹಣ ಬೆಟ್ಟಿಂಗ್ – ಗೆದ್ದ ಹಣ ಕೇಳಿದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿ ಕೊಂದ ಪಾಪಿಗಳು..!
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕರಸಿನಕೆರೆಯಲ್ಲಿ ಬೆಟ್ಟಿಂಗ್ ಕಟ್ಟಿ ಗೆದ್ದ ಹಣ ಕೇಳಿದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿ ಕೊಂದು ಹಾಕಿದ್ದಾರೆ.
ಮಂಡ್ಯ: ಐಪಿಎಲ್ ಸುರುವಾದರೆ ಸಾಕು ಯುವಕರೆಲ್ಲ ಬೆಟ್ಟಿಂಗ್ ಕಟ್ಟಲು ಶುರುಮಾಡುತ್ತಾರೆ. ಅದೇ ರೀತಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕರಸಿನಕೆರೆಯಲ್ಲಿ ಬೆಟ್ಟಿಂಗ್ ಕಟ್ಟಿ ಗೆದ್ದ ಹಣ ಕೇಳಿದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿ ಕೊಂದು ಹಾಕಿದ್ದಾರೆ.
ಎಳೆನೀರು ವ್ಯಾಪಾರಿಯಾಗಿದ್ದ ಪುನಿತ್ ಮೃತ ಪಟ್ಟ ದುರ್ದೈವಿಯಾಗಿದ್ದಾನೆ.
ಪುನಿತ್ ಸ್ನೇಹಿತ ದರ್ಶನ್ ಶರತ್ ಜೊತೆ ಗುಜರಾತ್ ಹಾಗೂ ಚೆನ್ನೈ ತಂಡಗದ ನಡುವಿನ ಕ್ವಾಲಿಫಯರ್ ಮ್ಯಾಚ್ ಗೆ ಬೆಟ್ಟಿಂಗ್ ಕಟ್ಟಿದ್ದರು.
ಅದರಲ್ಲಿ ದರ್ಶನ್ ಚೆನ್ನೈ ಪರ ಬೆಟ್ ಕಟ್ಟಿದ್ದರೆ, ಶರತ್ ಗುಜರಾತ್ ಟೈಟನ್ ಪರ ಬೆಟ್ಟಿಂಗ್ ಕಟ್ಟಿದ್ದ.
ಕೊನೆಗೆ ಚೆನ್ನೈ ತಂಡ ಗೆದ್ದಿತ್ತು. ಹಾಗಾಗಿ ದರ್ಶನ್ ಗೆ ಶರತ್ 11 ಸಾವಿರ ಹಣ ನೀಡಬೇಕಿತ್ತು.
ಆದರೆ ಶರತ್ ಹಣ ನೀಡಿರಲಿಲ್ಲ. ಹಾಗಾಗಿ ದರ್ಶನ್ ಹಾಗೂ ಶರತ್ ನಡುವೆ ಮಾತುಕತೆ ಜೋರಾಗಿತ್ತು. ಮಾತಿಗೆ ಮಾತು ಬೆಳೆದು ದರ್ಶನ್ ಗೆ ಶರತ್ ಹಲ್ಲೆ ನಡೆಸಿದ್ದಾನೆ.
ಈ ವಿಷಯವನ್ನು ದರ್ಶನ್ ತನ್ನ ಗೆಳೆಯ ಪುನೀತ್ ಗೆ ತಿಳಿಸಿದ್ದನು.
ಸಿಟ್ಟಿಗೆದ್ದ ಪುನಿತ್ ಶರತ್ ಬಳಿ ಹೋಗಿ ನ್ಯಾಯ ಸರಿಪಡಿಸಲು ಹೋದಾಗ ಜಗಳ ಜೊರಾಗಿ ಶರತ್ ನ ಗ್ಯಾಂಗ್ ಪುನೀತ್ ತಲೆಗೆ ಕಟ್ಟಿಗೆ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ.
ಈ ವೇಳೆ ಪುನಿತ್ ನ ಸ್ಥಿತಿ ಗಂಬೀರವಾಗಿದ್ದು, ಆತನನ್ನು ಕೂಡಲೇ ಆಸ್ಪತ್ರೆಗೆ ರವಾನಿಸಿದ್ದಾರೆ.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಪುನಿತ್ ಸಾವನ್ನಪಿದ್ದಾರೆ.
LATEST NEWS
ಕಂಬಳ ಕ್ಷೇತ್ರಕ್ಕೆ ಮತ್ತೊಂದು ಅಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ
ಮಣಿಪಾಲ: ಕೆಲವು ದಿನಗಳ ಹಿಂದಷ್ಟೇ ಕಂಬಳ ಕ್ಷೇತ್ರದ ಉದಯೋನ್ಮುಖ ತಾರೆ ‘ಲಕ್ಕಿ’ಯ ಅಗಲುವಿಕೆಯಿಂದ ಬೇಸರಗೊಂಡಿದ್ದ ಕಂಬಳಾಭಿಮಾನಿಗಳಿಗೆ ಮತ್ತೊಂದು ಅಘಾ*ತ ಎದುರಾಗಿದೆ. ಉಭಯ ಜಿಲ್ಲೆಯ ಕೂಟಗಳಲ್ಲಿ ಹೆಸರು ಮಾಡಿದ್ದ ‘ನಾಗು’ ಎಂಬ ಕೋಣ ಹೃದಯಾಘಾ*ತದಿಂದ ಕೊನೆ*ಯುಸಿರೆಳೆದಿದೆ.
‘ನಾಗು’ ಕೋಣವು ಜಪ್ಪು ಮಂಕು ತೋಟ ಅನಿಲ್ ಶೆಟ್ಟಿಯವರ ಯಜಮಾನಿಕೆಯಲ್ಲಿ ಹಲವು ಕಂಬಳಗಳಲ್ಲಿ ಭಾಗವಹಿಸಿ ಪ್ರಶಸ್ತಿ ಗೆದ್ದುಕೊಂಡಿತ್ತು.
ಬೈಂದೂರಿನಿಂದ ಬಂಢಾರಮನೆ ಸೇರಿದ್ದ ನಾಗು, ಬಳಿಕ ಚಿತ್ಪಾಡಿ ಅಪ್ಪು ಶೆಟ್ಟಿ ಅವರ ಹಟ್ಟಿ ಸೇರಿದ್ದ. ಎರಡು ವರ್ಷಗಳ ಹಿಂದೆ ನಾಗು ಕೋಣವನ್ನು ಜಪ್ಪು ಮಂಕುತೋಟ ಅನಿಲ್ ಶೆಟ್ಟಿ ಅವರು ಖರೀದಿ ಮಾಡಿದ್ದರು.
ಕೂಟಗಳಲ್ಲಿ ಸಕ್ರಿಯವಾಗಿದ್ದ ಎರಡು ಕೋಣಗಳನ್ನು ಎರಡು ವಾರಗಳ ಅಂತರದಲ್ಲಿ ಕಂಬಳ ಕ್ಷೇತ್ರ ಕಳೆದುಕೊಂಡಿದೆ.
LATEST NEWS
WATCH : UDUPI : ಮನೆಯಂಗಳದಲ್ಲಿ ಚಿರತೆ ಪ್ರತ್ಯಕ್ಷ; ರಾತ್ರಿ ಇಡೀ ಕಣ್ಮರೆಯಾಗಿದ್ದ ಸಾಕು ನಾಯಿ ಬದುಕುಳಿದಿದ್ದು ಹೇಗೆ?
ಉಡುಪಿ : ಮನೆಯೊಂದರ ಅಂಗಳದಲ್ಲಿ ಚಿರತೆಯೊಂದು ಕಾಣಿಸಿಕೊಂಡ ಘಟನೆ ಉಡುಪಿ ಪೆರಂಪಳ್ಳಿಯಲ್ಲಿ ಶುಕ್ರವಾರ(ಜು.27) ತಡರಾತ್ರಿ ನಡೆದಿದೆ. ಚಿರತೆ ಓಡಾಟದ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಬೇಟೆಗಾಗಿ ಚಿರತೆ ಬಂದಿದ್ದು, ನಾಯಿಯನ್ನು ಅಟ್ಟಿಸಿಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ನಾಯಿ ಬೊಗಳಿದರೂ ಮನೆಯವರು ಹೊರಬಂದಿಲ್ಲ. ಕೆಲವು ದಿನಗಳಿಂದ ಮಣಿಪಾಲ ಆಸುಪಾಸಿನಲ್ಲಿ ಚಿರತೆ ಓಡಾಟದ ಮಾಹಿತಿ ತಿಳಿದಿದ್ದ ಮನೆಯವರು ಸುಮ್ಮನಿದ್ದರು ಎನ್ನಲಾಗಿದೆ. ಸ್ವಲ್ಪ ಹೊತ್ತಿನಲ್ಲಿ ನಾಯಿಯ ಶಬ್ದ ಕೂಡ ಕೇಳಿರಲಿಲ್ಲ. ಬೆಳಿಗ್ಗೆ ಮನೆಯ ಸಿಸಿಟಿವಿ ದ್ರಶ್ಯಾವಳಿ ಗಮನಿಸಿದಾಗ ಚಿರತೆ ನಾಯಿಯ ಹಿಂದೆ ಹೋಗುತ್ತಿರುವ ದೃಶ್ಯ ಕಂಡು ಭಯಭೀತರಾಗಿದ್ದಾರೆ.
ಇದನ್ನೂ ಓದಿ : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವು
ಆದರೆ ಅಚ್ಚರಿ ಎಂಬಂತೆ ರಾತ್ರಿ ಇಡೀ ಕಣ್ಮರೆಯಾಗಿದ್ದ ಸಾಕು ನಾಯಿ ಬೆಳಿಗ್ಗೆ ಪ್ರತ್ಯಕ್ಷವಾಗಿದೆ. ಚಿರತೆಯ ಬಾಯಿಯಿಂದ ತಪ್ಪಿಸಿಕೊಂಡು ಪ್ರಾ*ಣ ಉಳಿಸಿಕೊಂಡಿದೆ. ಈ ಘಟನೆ ಮಣಿಪಾಲ, ಪೆರಂಪಳ್ಳಿ ಭಾಗದಲ್ಲಿ ಆತಂಕ ಸೃಷ್ಟಿಸಿದೆ. ಕೂಡಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು, ಚಿರತೆಯನ್ನು ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.
DAKSHINA KANNADA
ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವು
ತೆಲಂಗಾಣ: ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವನ್ನಪ್ಪಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ಶುಕ್ರವಾರ ನಡೆದಿದೆ.
ಅಂಜಲಿ ಕಾರ್ತಿಕಾ (9) ಮೃ*ತ ಬಾಲಕಿ. ಮೊಬೈಲ್ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು, ಅಂಜಲಿ ಮೊಬೈಲ್ ಚಾರ್ಜ್ ಮಾಡಲು ಹೋಗಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದಿದ್ದಾಳೆ.
ಕುಸಿದು ಬಿದ್ದು ಒದ್ದಾಡುತ್ತಿರುವ ಬಾಲಕಿಯನ್ನು ಗಮನಿಸಿದ ಆಕೆಯ ಪೋಷಕರು ತಕ್ಷಣ ಗ್ರಾಮದ ಖಾಸಗಿ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃ*ತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಬಾಲಕಿ ಆಟವಾಡುತ್ತಿದ್ದಂತೆ ಒದ್ದೆ ಕೈಯಲ್ಲಿ ಹೋಗಿ ವಿದ್ಯುತ್ ಸ್ಪರ್ಶಿಸಿರುವುದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಕೆಲ ಹೊತ್ತಿನ ಹಿಂದೆ ಮನೆಯಲ್ಲಿ ಕುಣಿದು ಕುಪ್ಪಳಿಸುತ್ತಾ ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಪ್ರಾ*ಣ ಕಳೆದುಕೊಂಡಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಮೃ*ತ ಬಾಲಕಿ ಅಂಜಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ. ತಂದೆ ರಾಮಕೃಷ್ಣ ದೂರಿನ ಮೇರೆಗೆ ಎಸ್ಎಸ್ಐ ನಾಗುಲ್ಮೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ
- DAKSHINA KANNADA6 days ago
PUTTUR : ನಾಪತ್ತೆಯಾಗಿದ್ದ ಯುವಕನ ಮೃ*ತದೇಹ ಗೌರಿ ಹೊಳೆಯಲ್ಲಿ ಪತ್ತೆ