ಉದ್ಯಮಿಯನ್ನು ಹೋಮಕುಂಡದಲ್ಲಿ ಸುಟ್ಟ ಆರೋಪಿಗೆ ನಾಲ್ಕು ವರ್ಷಗಳ ಬಳಿಕ ಜಾಮೀನು..!!
ಉದ್ಯಮಿಯನ್ನು ಹೋಮಕುಂಡದಲ್ಲಿ ಸುಟ್ಟ ಆರೋಪಿಗೆ ನಾಲ್ಕು ವರ್ಷಗಳ ಬಳಿಕ ಜಾಮೀನು..!!
ಉಡುಪಿ : 4 ವರ್ಷಗಳ ಹಿಂದೆ ಕರಾವಳಿಯನ್ನು ತಲ್ಲಣಗೊಳಿಸಿದ್ದ ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳಲ್ಲಿ ಒಬ್ಬನಾದ ನಿರಂಜನ್ ಭಟ್ ಗೆ ಉಡುಪಿ ಜಿಲ್ಲಾ ಸೆಕ್ಷನ್ ಕೋರ್ಟ್ ಇಂದು ಶರತ್ತುಬದ್ಧ ಜಾಮೀನು ನೀಡಿದೆ.
ನಿರಂಜನ್ ಭಟ್ ತಂದೆ ಶ್ರೀನಿವಾಸ್ ಭಟ್ ನಿಧನ ಹಿನ್ನೆಲೆ ಶರತ್ತುಬದ್ಧ ಜಾಮೀನು ನೀಡಲಾಗಿದೆ.
ಜುಲೈ 28, 2016ರಂದು ಉಡುಪಿಯ ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಆತನ ಪತ್ನಿ ರಾಜೇಶ್ವರಿ ಶೆಟ್ಟಿ ಮತ್ತು ಮಗನೊಂದಿಗೆ ಸೇರಿ ನಿರಂಜನ ಭಟ್ಟ ಕೊಲೆ ಮಾಡಿ ನಂದಳಿಕೆಯ ಮನೆಯಲ್ಲಿ ಹೋಮಕುಂಡದಲ್ಲಿ ಸುಟ್ಟಿದ್ದ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿರಂಜನ ಭಟ್ಟನ ತಂದೆ ಶ್ರೀನಿವಾಸ ಭಟ್ಟ ಮತ್ತು ಕಾರಿನ ಚಾಲಕನನ್ನು ಸೇರಿ 5 ಜನ ಆರೋಪಿಗಳನ್ನು ಬಂಧಿಸಲಾಗಿತ್ತು.
ಮುಖ್ಯ ಆರೋಪಿ ರಾಜೇಶ್ವರಿ ಶೆಟ್ಟಿ ಈಗಾಗಲೇ ಜಾಮೀನು ಪಡೆದಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ಕು ಮಂದಿಗೆ ಜಾಮೀನು ದೊರೆತಿದೆ.
ಭಾಸ್ಕರ್ ಶೆಟ್ಟಿ ಮಗ ನವನೀತ್ ಶೆಟ್ಟಿಗೆ ಇನ್ನಷ್ಟೇ ಜಾಮೀನು ದೊರೆಯಬೇಕಾಗಿದೆ.
ಇನ್ನು ನಿರಂಜನ ಭಟ್ಟನ ತಂದೆ ಶ್ರೀನಿವಾಸ ಭಟ್ಟ 2 ದಿನಗಳ ಹಿಂದೆ ಖಿನ್ನತೆ ಮತ್ತು ಅನಾರೋಗ್ಯದಿಂದ ಸಾವನ್ನಪ್ಪಿದ ಹಿನ್ನೆಲೆಯಲ್ಲಿ, ನಿರಂಜನನಿಗೆ ಜುಲೈ 7ರ ತನಕ 5 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಆಧಾರದಲ್ಲಿ ಉಡುಪಿ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
BANTWAL
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.
ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು
ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.
LATEST NEWS
ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು
ಕುಂದಾಪುರ : ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿ*ಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾ*ವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಬಳಿ ನಡೆದಿದೆ. ಕೋಟ ಮಣೂರು ನಿವಾಸಿ ವಿಕಾಸ್ ಆಚಾರ್ಯ(22) ಮೃ*ತಪಟ್ಟ ಯುವಕ.
ಸೋಮವಾರ ರಾತ್ರಿ 1.30ರ ಸುಮಾರಿಗೆ ವಿಕಾಸ್ ಸಾಸ್ತಾನದಿಂದ ಕೋಟ ಮಣೂರು ಕಡೆ ಬರುತ್ತಿದ್ದ
ವೇಳೆ ಈ ದುರಂ*ತ ಸಂಭವಿಸಿದೆ. ಕೋಟ ಗುಜಿರಿ ಅಂಗಡಿ ಸಮೀಪ ಬೈಕ್ ನಿಯಂತ್ರಣ ತಪ್ಪಿದೆ. ಪರಿಣಾಮ ಹೆದ್ದಾರಿಯ ಡಿವೈಡರ್ ಗೆ ಡಿ*ಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ. ಗಂಭೀ*ರವಾಗಿ ಗಾಯಗೊಂಡ ವಿಕಾಸ್ ಸ್ಥಳದಲ್ಲೇ ಮೃ*ತಪಟ್ಟಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ULLALA : ಮಲಗಿದ್ದಲ್ಲೇ ಹೃದಯಾಘಾ*ತಕ್ಕೆ ಬ*ಲಿಯಾದ ಯುವಕ
DAKSHINA KANNADA
ಗಂಡ-ಹೆಂಡತಿ ಬೇರೆ ಬೇರೆ ಮಲಗಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?
ಮಂಗಳೂರು: ಇತ್ತೀಚಿನ ದಿನಗಳಲ್ಲಿ ಜನರು ರಾತ್ರಿಯ ಹೊತ್ತನ್ನು ಮೊಬೈಲ್, ಆನ್ಲೈನ್ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಕಳೆಯುತ್ತಾರೆ. ಇದು ಅವರಿಗೆ ನಿದ್ರಾಹೀನತೆ ಸಮಸ್ಯೆಗೂ ಕಾರಣವಾಗುತ್ತದೆ. ರಾತ್ರಿ ಬೇಗ ಮಲಗದೇ ಇರುವುದು ಮತ್ತು ಮಧ್ಯಾಹ್ನ ನಿದ್ದೆ ಮಾಡುವುದು ಹೀಗೆ ಮಾಡಿದರೆ ಆರೋಗ್ಯ ಹಾಳಾಗುತ್ತದೆ. ರಾತ್ರಿಯ ಹೊತ್ತು ಚಿಕ್ಕ ಮಕ್ಕಳು ಅಪ್ಪ ಅಮ್ಮನ ಒಟ್ಟಿಗೆ ಮಲಗುತ್ತಾರೆ. ಅದೇ ರೀತಿ ಗಂಡ ಹೆಂಡತಿಯರು ಒಟ್ಟಿಗೆ ಮಲಗುವುದು ಸರ್ವೇ ಸಾಮಾನ್ಯ.
ಮದುವೆಯ ನಂತರ ಸಾಮಾನ್ಯವಾಗಿ ಗಂಡ ಹೆಂಡತಿ ಒಟ್ಟಿಗೆ ಮಲಗುತ್ತಾರೆ. ಇದು ಸಮಾಜದ ಸಾಮಾನ್ಯ ನಿಯಮ ಸಹ ಹೌದು ಎನ್ನಬಹುದು. ಮದುವೆಯ ನಂತರ ಪತಿ-ಪತ್ನಿಯರ ನಡುವಿನ ಚರ್ಚೆಗಳು, ಮಾತುಗಳು ಸಾಮಾನ್ಯವಾಗಿ ಮಲಗುವ ಸಮಯದಲ್ಲೇ ಆಗುತ್ತದೆ. ಇನ್ನು ಪತಿ-ಪತ್ನಿಯರು ಪ್ರತ್ಯೇಕವಾಗಿ ಮಲಗುವುದರಿಂದಲೂ ಹಲವಾರು ರೀತಿಯ ಪ್ರಯೋಜನಗಳಿವೆ ಎಂದು ವರದಿ ಮೂಲಕ ತಿಳಿದುಬಂದಿದೆ.
ಮೊದಲಿಗೆ, ಈ ವಿಷಯದ ಬಗ್ಗೆ ಮಾಡಿದ ಎಲ್ಲಾ ಸಂಶೋಧನೆಗಳು ಗಂಡ ಮತ್ತು ಹೆಂಡತಿ ಪ್ರತ್ಯೇಕವಾಗಿ ಮಲಗುವುದು ತಪ್ಪಲ್ಲ ಎಂದು ತೋರಿಸುತ್ತದೆ ಮತ್ತು ಪ್ರತಿ ದಂಪತಿಗಳು ತಮ್ಮದೇ ಆದ ನಿಯಮಗಳನ್ನು ಮಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ತಿಳಿಸಿದೆ. ಆದರೆ ಅನೇಕ ಬಾರಿ ಜನರು ಇಂತಹ ಮಾತುಗಳನ್ನು ಕೇಳಲು ವಿಭಿನ್ನವಾಗಿ ಪ್ರತಿಕ್ರಿಯಿಸುತ್ತಾರೆ ಮತ್ತು ಈ ದಂಪತಿಗಳ ಜೀವನದಲ್ಲಿ ಏನೋ ಸರಿಯಾಗಿಲ್ಲ ಎಂದು ಭಾವಿಸುತ್ತಾರೆ.
ಆದರೆ ಅಷ್ಟೇ ಅಲ್ಲ, ಕೆಲವೊಮ್ಮೆ ಬೇರೆ ಬೇರೆ ಕೋಣೆಗಳಲ್ಲಿ ದಂಪತಿಗಳಿಗೆ ಮಲಗುವುದರಿಂದ ದಂಪತಿಗಳಿಗೆನೇ ಹೆಚ್ಚು ಅನುಕೂಲಕರವಾಗಿರುತ್ತದೆ. ಸಂಶೋಧನೆಯ ಪ್ರಕಾರ ನೀವು ಪ್ರತ್ಯೇಕವಾಗಿ ಏಕೆ ಮಲಗುವುದರಿಂದ ಯಾವುದೇ ನಿದ್ರಾ ಭಂಗವನ್ನು ಉಂಟುಮಾಡುವುದಿಲ್ಲ. ಇದರಿಂದ ಸುಖಕರವಾಗಿ ನಿದ್ರೆ ಮಾಡಬಹುದು.
ರಾತ್ರಿಯಲ್ಲಿ ಗೊರಕೆ ಹೊಡೆಯುವುದು, ಒದೆಯುವುದು, ದೇಹದ ಉಷ್ಣತೆಯ ಬದಲಾವಣೆ ವಿಭಿನ್ನವಾಗಿರುತ್ತದೆ. ನೀವು ಕೆಲವೊಮ್ಮೆ ಪ್ರತ್ಯೇಕವಾಗಿ ಮಲಗಲು ಪ್ರಯತ್ನಿಸಿದರೆ ನಿಮ್ಮ ದೇಹವು ಅರಾಮವಾಗಲು ಸಹಾಯಕವಾಗುತ್ತದೆ. ಸ್ವಲ್ಪ ಸಮಯದ ಅಂತರವು ನಿಮ್ಮ ಸಂಬಂಧವನ್ನು ಹೆಚ್ಚು ಉತ್ತಮಗೊಳಿಸುತ್ತದೆ. ನಿಮಗೆ ವಿಶ್ರಾಂತಿ ಪಡೆಯಲು ಸಮಯ ಸಿಗುತ್ತದೆ.
ಜೊತೆಗೆ ಕೆಲವೊಮ್ಮೆ ದಂಪತಿಗಳ ನಡುವೆ ಮನಸ್ಥಾಪವಾದಾಗ ಈ ರೀತಿ ಕೆಲ ದಿನ ದೂರ ಮಲಗಿದರೆ ಆ ವಿರಹ ವೇದನೆಯಿಂದ ಕೋಪವೂ ತಣ್ಣಗಾಗುತ್ತದೆ. ದೈಹಿಕ ಅನ್ಯೋನ್ಯತೆ ಮತ್ತು ಭಾವನಾತ್ಮಕ ಪ್ರೀತಿಯ ಅವಶ್ಯಕತೆ ಯಾವಾಗಲೂ ಇರುತ್ತದೆ ಮತ್ತು ಆದ್ದರಿಂದ ಕೆಲವೊಮ್ಮೆ ಪ್ರತ್ಯೇಕವಾಗಿ ಮಲಗುವುದು ಉತ್ತಮ. ಜೊತೆಗೆ ಕೆಲವೊಮ್ಮೆ ಜ್ವರ ರೀತಿಯ ಅನಾರೋಗ್ಯವಿದ್ದಾಗ ದೂರ ಮಲಗಿದರೆ ಒಬ್ಬರಿಂದ ಒಬ್ಬರಿಗೆ ಅದು ಹರಡುವುದಿಲ್ಲ.
ಇದನ್ನೂ ಓದಿ ULLALA : ಮಲಗಿದ್ದಲ್ಲೇ ಹೃದಯಾಘಾ*ತಕ್ಕೆ ಬ*ಲಿಯಾದ ಯುವಕ
ಕೆಲವೊಮ್ಮೆ ದಂಪತಿಗಳಿಗೆ ಸ್ವಲ್ಪ ಅಂತರ ಕಾಯ್ದುಕೊಳ್ಳುವುದು ಅವರ ಲೈಂಗಿಕ ಜೀವನಕ್ಕೆ ಒಳ್ಳೆಯದು ಎಂದು ಸಂಶೋಧನೆ ಸೂಚಿಸುತ್ತದೆ. ಇದರಿಂದ ದಣಿವು ಆಗುವುದು ಕಡಿಮೆ ಆಗುತ್ತದೆ. ಪರಿಣಾಮವಾಗಿ, ಲೈಂಗಿಕ ಜೀವನವನ್ನು ಸುಧಾರಿಸಬಹುದು.
- DAKSHINA KANNADA6 days ago
ಮಂಗಳೂರು : ಬೈಕ್ಗೆ ಕಾರು ಡಿಕ್ಕಿ; ಇಹಲೋಕ ತ್ಯಜಿಸಿದ ವಿದ್ಯಾರ್ಥಿ
- DAKSHINA KANNADA6 days ago
ಸೀರೆ ಉಟ್ರೆ ಕ್ಯಾನ್ಸರ್ ಬರುತ್ತಂತೆ..! ಏನಿದು ಸೀರೆ ಕ್ಯಾನ್ಸರ್?
- DAKSHINA KANNADA7 days ago
ದಂತ ವೈದ್ಯೆಯಾಗಿ ಸೇವೆ ಆರಂಭದ ದಿನವೇ ವಿಧಿಯಾಟ..! ಯುವ ವೈದ್ಯೆ ಸಾ*ವು..!
- DAKSHINA KANNADA7 days ago
ಬಿಜೆಪಿಯಿಂದ ಬಿಲ್ಲವ ನಾಯಕ ಔಟ್..? ನಾರಾಯಣ ಗುರು ಹೈಜಾಕ್..!