BIG BOSS
BBK 11 : ಹನುಮಂತನ ನಿಜಬಣ್ಣ ಬಯಲು ಮಾಡಿದ ಭಟ್ರು !!
BBK 11 : ಅಮ್ಮನನ್ನು ಕಳೆದುಕೊಂಡ ದುಃಖದಲ್ಲಿರುವ ಸುದೀಪ್ ಈ ವಾರ ಬಿಗ್ ಬಾಸ್ ಮನೆಯ ಪಂಚಾಯಿತಿ ನಡೆಸಲು ಬರೋದಿಲ್ಲ. ಹೀಗಾಗಿ ಬಿಗ್ ಬಾಸ್ ಮನೆಯ ಪಂಚಾಯಿತಿ ನಡೆಸಲು ಯೋಗರಾಜ್ ಭಟ್ರು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದು, ಎಲ್ಲರನ್ನು ಸಖತ್ ಆಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಈ ನಡುವೆ ಅವರು ಹಳ್ಳಿ ಹುಡುಗ, ಮುಗ್ಧ ಹನುಮಂತನಿಗೆ ಕ್ಲಾಸ್ ತೆಗೆದುಕೊಂಡು ಅವನ ನಿಜ ಬಣ್ಣ ಬಯಲು ಮಾಡಿದ್ದಾರೆ ಎನ್ನಲಾಗಿದೆ.
ಹನುಮಂತು ಟಾಯ್ಲೆಟ್ನಲ್ಲಿ ಫ್ಲಶ್ ಮಾಡೋದು ಹೇಗೆ ಅನ್ನೋದು ಗೊತ್ತಿಲ್ಲ. ಇದನ್ನು ಅವರೇ ಹೇಳಿಕೊಂಡಿದ್ದರು. ಇಷ್ಟೆಲ್ಲ ರಿಯಾಲಿಟಿ ಶೋ ಮಾಡಿದವರಿಗೆ ಅಷ್ಟೂ ಗೊತ್ತಾಗುವುದಿಲ್ಲವೇ ಎನ್ನುವ ಪ್ರಶ್ನೆ ಮೂಡೋದು ಸಹಜ. ವೀಕೆಂಡ್ನಲ್ಲಿ ಈ ವಿಚಾರದ ಬಗ್ಗೆ ಚರ್ಚೆ ಆಗಿದೆ. ದೊಡ್ಮನೆಗೆ ಅತಿಥಿಯಾಗಿ ಬಂದ ಯೋಗರಾಜ್ ಭಟ್ ಎದುರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಹನುಮಂತು ನಿಜಕ್ಕೂ ಇನ್ನೋಸೆಟ್ ಇದ್ದಾನಾ ಅಥವಾ ಸ್ಮಾರ್ಟ್ ಆಗಿದ್ದಾನಾ ಎಂದು ಯೋಗರಾಜ್ ಭಟ್ರು ಮನೆಯವರಿಗೆ ಪ್ರಶ್ನೆ ಕೇಳಿದ್ರು. ಇದಕ್ಕೆ ಉತ್ತರಿಸಿದ ಸ್ಪರ್ಧಿಗಳು ನೇರವಾಗಿಯೇ ಉತ್ತರ ನೀಡಿದ್ದಾರೆ. ಶಿಶಿರ್ ಮಾತಾಡಿ, ಹನುಮಂತು ಬುದ್ದಿವಂತ, ದಡ್ಡ ಅಂತು ಅಲ್ಲವೇ ಅಲ್ಲ ಎಂದಿದ್ದಾರೆ. ಅಲ್ಲದೆ ಸ್ಮಾರ್ಟ್ ಆಗಿ ಆಟ ಆಡ್ತಿದ್ದಾನೆ ಎನ್ನುವಂತೆ ತ್ರಿವಿಕ್ರಮ್ ಕೂಡ ಮಾತಾಡಿದ್ದಾರೆ. ಅಷ್ಟಿಲ್ಲದೇ ಅಷ್ಟೋಂದು ಶೋಗಳಲ್ಲಿ ಭಾಗವಹಿಸಿ. ಕೆಲ ಕಾರ್ಯಕ್ರಮಗಳಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದಿದ್ದಾರೆ. ಬಿಗ್ ಬಾಸ್ ಮನೆಗೆ ಬಂದ ಹನುಮಂತು ಅವಕಾಶನಾ ದುರ್ಬಳಕೆ ಮಾಡಿಕೊಳ್ತಿದ್ದಾನೆ ಎಂದು ನಿಮಗೆ ಅನಿಸ್ತಿದ್ಯಾ ಎಂಬ ಪ್ರಶ್ನೆಗೆ ಮನೆಯವರು ನಾನಾ ಉತ್ತರ ನೀಡಿದ್ದಾರೆ.
ಮುಂದುವರೆದು ಯೋಗರಾಜ್ ಭಟ್ ಅವರು, ಹನುಮಂತ ಒಬ್ಬ ಕುತಂತ್ರಿ, ಖತರ್ನಾಕ್ ಇದ್ದಾನೆ ಎಂಬುದಾದರೆ ಅದನ್ನು ನೇರವಾಗಿ ಹೇಳಬಹುದು ಎಂದು ಹೇಳಿದ್ದಾರೆ. ಭಟ್ರ ಪ್ರಶ್ನೆ, ಮನೆ ಮಂದಿಯ ಮಾತು ಕೇಳಿದ ಹನುಮಂತು ತಬ್ಬಿಬ್ಬಾದಂತೆ ಕಾಣ್ತಿದೆ.
BIG BOSS
BBK 11 : ಸೃಜನ್ ಲೊಕೇಶ್ ಜೊತೆ ಬಂದ ಹೊಸ ಕಾರಲ್ಲಿ ಹೊರ ಹೊಗೋದು ಯಾರು ಗೊತ್ತಾ ??
BBK 11 : ಬಿಗ್ ಬಾಸ್ ಕನ್ನಡ ಶೋ ನಲ್ಲಿ ವಾರದ ಕೊನೆಯಲ್ಲಿ ಕಿಚ್ಚನ ಜೊತೆಗೆ ಪಂಚಾಯತಿ ನಡೆಯುತ್ತೆ. ಆದ್ರೆ ಈ ವಾರ ಸುದೀಪ್ ಬಂದಿಲ್ಲ. ಹಾಗಾಗಿ ಶನಿವಾರದ ಎಪಿಸೋಡ್ಗೆ ನಿರ್ದೇಶಕ ಯೋಗರಾಜ್ ಭಟ್ ಮನೆಗೆ ಬಂದಿದ್ದರು. ಇನ್ನು ಭಾನುವಾರದ ಎಪಿಸೋಡ್ಗೆ ಹೊಸ ಅತಿಥಿ ಬಂದಿದ್ದು ತಮ್ಮೊಟ್ಟಿಗೆ ಕಾರುಗಳನ್ನು ಸಹ ಕರೆತಂದಿದ್ದಾರೆ.
ಕಳೆದ ಶನಿವಾರ ಸುದೀಪ್ ಅವರ ತಾಯಿ ಸರೋಜಮ್ಮ ನಿಧನರಾದ ಕಾರಣ ಸುದೀಪ್ ಆ ನಂತರದ ತಮ್ಮ ಎಲ್ಲ ಚಿತ್ರೀಕರಣ, ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ. ಈ ವೀಕೆಂಡ್ನ ವಾರದ ಪಂಚಾಯಿತಿಗೆ ಸಹ ಸುದೀಪ್ ಬಂದಿಲ್ಲ. ಹಾಗಾಗಿ ಬಿಗ್ಬಾಸ್ ಆಯೋಜಕರು ಇಬ್ಬರು ಅತಿಥಿಗಳನ್ನು ಮನೆಯ ಒಳಕ್ಕೆ ಕಳಿಸಿದ್ದಾರೆ. ಶನಿವಾರದ ಎಪಿಸೋಡ್ಗೆ ನಿರ್ದೇಶಕ ಯೋಗರಾಜ್ ಭಟ್ ಅವರು ಬಂದಿದ್ದರು. ಮನೆಯ ಸದಸ್ಯರ ಕೈಲಿ ಕೆಲವು ತಮಾಷೆಯ ಟಾಸ್ಕ್ಗಳನ್ನು ಮಾಡಿದ್ದರು. ಕೆಲವರಿಗೆ ಬುದ್ಧಿವಾದ ಹೇಳಿದ್ದರು. ಇದೀಗ ಭಾನುವಾರದ ಎಪಿಸೋಡ್ಗೆ ಸೃಜನ್ ಬಂದಿದ್ದಾರೆ.
ಈ ಹಿಂದೆ ಸೃಜನ್ ಸ್ಪರ್ಧಿಯಾಗಿ ಬಿಗ್ಬಾಸ್ಗೆ ಬಂದಿದ್ದರು, ಆದರೆ ಈಗ ಅತಿಥಿಯಾಗಿ ಬಂದಿದ್ದಾರೆ. ಖಾಲಿ ಕೈಯಲ್ಲಿ ಬಾರದೆ ತಮ್ಮೊಡನೆ ದುಬಾರಿ ಟಾಟಾ ಕರ್ವ್ ಕಾರುಗಳನ್ನು ತಂದಿದ್ದರು. ಮನೆಗೆ ಬಂದಿದ್ದ ಕಾಲಿ ಕಾರುಗಳು ಎಲಿಮಿನೇಟ್ ಆಗಲಿರುವ ಒಬ್ಬ ಸ್ಪರ್ಧಿಯನ್ನು ಮನೆಯಿಂದ ಹೊರಗೆ ಕರೆದುಕೊಂಡು ಹೋಗಿವೆ. ಆದರೆ ಆ ವ್ಯಕ್ತಿ ಯಾರು ಎಂದು ಇವತ್ತಿನ ಎಪಿಸೋಡ್ನಲ್ಲಿ ಕಾದು ನೋಡಬೇಕಷ್ಟೇ.
ಮುಖ್ಯವಾಗಿ ಬಿಗ್ಬಾಸ್ ಮನೆಗೆ ಬಂದ ಸೃಜನ್ ಮೊದಲಿಗೆ ಟಾಸ್ಕ್ ನೀಡಿ ಕೆಲವು ತಾಷೆ ಆಟಗಳನ್ನೂ ಆಡಿದ್ದಾರೆ. ಬಳಿಕ ಮನೆಯಿಂದ ಯಾರು ಹೊರಹೋಗಬೇಕು ಹಾಗೂ ಯಾಕೆ ? ಎಂಬ ಸೂಕ್ತ ಕಾರಣ ಸ್ಪರ್ಧಿಗಳಿಗೆ ನೀಡಿದ್ದಾರೆ. ಐಶ್ವರ್ಯ ಸೇರಿದಂತೆ ಇನ್ನೂ ಹಲವರು ವಿಕ್ರಮ ಹೆಸರು ಹೇಳಿದ್ದಾರೆ. ಒಬ್ಬೊಬ್ಬರ ಹೆಸರು ಕೆಳಿ ಬಂದಿದ್ದು, ಕೊನೆಗೆ ಮತಗಲ ಆಧಾರದಲ್ಲಿ ಒಬ್ಬ ಸ್ಪರ್ಧಿಯನ್ನು ಇಂದು ಬಿಗ್ಬಾಸ್ ಮನೆಯಿಂದ ಹೊರ ಹಾಕಲಿದೆ.
BIG BOSS
BBK11: ಬಿಗ್ ಬಾಸ್ ಇತಿಹಾಸದಲ್ಲೇ ಇದೇ ಮೊದಲು ಮನೆಯೊಳಕ್ಕೆ ನುಗ್ಗಿ ಬಂದ ಜನರು! ಯಾಕೆ ಗೊತ್ತಾ?
ಬಿಗ್ ಬಾಸ್ ಕನ್ನಡ ಸೀಸನ್ 11 ಭಾರೀ ಕುತೂಹಲದಿಂದ ಸಾಗುತ್ತಿದೆ. ಸದ್ಯ ಮನೆಯಲ್ಲಿ ರಾಜಕೀಯ ಟಾಸ್ಕ್ ನಡೆಯುತ್ತಿದೆ. ಈಗಾಗಲೇ ಮನೆಯಲ್ಲಿ ಎರಡು ಬಣಗಳಾಗಿದ್ದು, ಇತ್ತಂಡಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ನಡೆಸುತ್ತಿವೆ. ಹೀಗಿರುವಾಗ ಬಿಗ್ ಬಾಸ್ ಟಾಸ್ಕ್ನಲ್ಲಿ ಕೊಂಚ ಟ್ವಿಸ್ಟ್ ಕೊಟ್ಟಿದ್ದಾರೆ. ಅದೇನೆಂದರೆ ಬಿಗ್ ಬಾಸ್ ಮನೆಗೆ ಜನಸಾಮಾನ್ಯರನ್ನು ಕರೆಸಲಾಗಿದೆ.
ಹೌದು. ರಾಜಕೀಯ ಎಂದ ಮೇಲೆ ಜನರು ಇರಲೇಬೇಕು. ಜನರಿಂದಲೇ ಪ್ರತಿನಿಧಿಯೊಬ್ಬ ರಾಜಕಾರಣಿಯಾಗಿ ಆಯ್ಕೆಯಾಗುತ್ತಾನೆ. ಆದರೀಗ ಜನರನ್ನೇ ಮನೆಯೊಳಕ್ಕೆ ಕರೆಸಿಕೊಂಡಿರುವ ಬಿಗ್ ಬಾಸ್ ಸ್ಪರ್ಧಿಗಳಿಗೆ ದೊಡ್ಡ ಟಾಸ್ಕ್ ನೀಡಿದ್ದಾರೆ. ಆ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ.
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಈಗಾಗಲೇ ಎರಡು ಪಕ್ಷವನ್ನು ರಚಿಸಿದ್ದಾರೆ. ತೋಳ ಮತ್ತು ಹದ್ದು ಎಂಬ ಎರಡು ಪಕ್ಷ ರಚಿಸಿ ಪ್ರಚಾರ ಮಾಡುತ್ತಿದ್ದಾರೆ. ಆದರೀಗ ಜನ ಸಾಮಾನ್ಯರ ಮುಂದೆ ತಮ್ಮ ಪಕ್ಷವನ್ನು ಗೆಲ್ಲಿಸುವುದೇ ಪ್ರಮುಖ ಗುರಿಯಾಗಿದೆ.
ತೋಳ ಪಕ್ಷವು ಧರ್ಮ ಪರ ಸೇನಾ ಪಕ್ಷ ಎಂಬ ಧ್ಯೇಯದೊಂದಿಗೆ ಪ್ರಚಾರ ಮಾಡಿದರೆ, ಇತ್ತ ಹದ್ದು ಪಕ್ಷವು ಪ್ರಮಾಣಿಕ ಸಮರ್ಥ ನ್ಯಾಯವಾದಿ ಪಕ್ಷ ಹೆಸರಿನಲ್ಲಿ ಪ್ರಚಾರ ಮಾಡುತ್ತಿದೆ.
ಒಟ್ಟಿನಲ್ಲಿ ಮನೆಯೊಳಕ್ಕೆ ಕಾಲಿಟ್ಟ ಜನರ ಮನಗೆಲ್ಲುವುದೇ ರಾಜಕಾರಣಿಗಳ ಪ್ರಮುಖ ಗುರಿಯಾಗಿದೆ. ಜೊತೆಗೆ ಸ್ಪರ್ಧಿಗಳಿಗೆ ಜನಸಾಮಾನ್ಯರು ನಾನಾ ರೀತಿಯ ಪ್ರಶ್ನೆಯನ್ನು ಕೇಳುವ ಅವಕಾಶವನ್ನು ಕೊಡಲಾಗಿದೆ. ಇಂದಿನ ಎಪಿಸೋಡ್ ಭಾರೀ ಕುತೂಹಲತೆಯಿಂದ ಕೂಡಿದ್ದು, ಜನಸಾಮಾನ್ಯರು ಮತ್ತು ಪಕ್ಷದ ಪ್ರತಿನಿಧಿಗಳ ಜೊತೆಗಿನ ಮಾತುಕತೆಯನ್ನು ಕಾಣಲು ವೀಕ್ಷಕರು ಕಾದು ಕುಳಿತ್ತಿದ್ದಾರೆ.
BIG BOSS
ಬಿಗ್ ಬಾಸ್ ಮನೆಯ ರಾಜಕೀಯ ವಿಚಾರಿಸಲು ನ್ಯೂಸ್ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ
ಬೆಂಗಳೂರು: ಕಲರ್ಸ್ ಕನ್ನಡದಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಸೀಸನ್ 11 ಬರೀ ಗಲಾಟೆಯಲ್ಲಿ ಮುಂದುವರೆದಿದೆ. ಬಿಗ್ ಬಾಸ್ ನಲ್ಲಿ ಇತ್ತೀಚೆಗೆ ವೈಲ್ಡ್ ಕಾರ್ಡ್ ಎಂಟ್ರಿಯಲ್ಲಿ ಹನುಮಂತು ಅವರು ಆಗಮಿಸಿದ್ದರು. ಇದೀಗ ಮತ್ತೊಬ್ಬರು ಬಿಗ್ ಬಾಸ್ ಮನೆಗೆ ಬಂದಿದ್ದಾರೆ.
ಬಿಗ್ ಬಾಸ್ ನಲ್ಲಿ ಈ ವಾರ ಸ್ಪರ್ಧಿಗಳಿಗೆ ರಾಜಕೀಯದ ಟಾಸ್ಕ್ ನೀಡಿದ್ದಾರೆ. ಅದರಂತೆ ಎರಡು ಪಕ್ಷಗಳನ್ನು ರಚಿಸಿ ಕೆಲವು ಟಾಸ್ಕ್ ನೀಡಿದ್ದಾರೆ. ಈ ನಡುವೆ ಬಿಗ್ ಬಾಸ್ ನಲ್ಲಿ ನಡೆಯುತ್ತಿರುವ ರಾಜಕೀಯ ವಿಚಾರಿಸಿಕೊಳ್ಳಲು ಬಿಗ್ ಬಾಸ್ ನ್ಯೂಸ್ ಆ್ಯಂಕರ್ ರಾಧಾ ಹಿರೇಗೌಡರ್ ಅವರನ್ನು ಬಿಗ್ ಬಾಸ್ ಮನೆಗೆ ಕಳುಹಿಸಿದೆ. ಬಿಗ್ ಬಾಸ್ ಮನೆಯ ರಾಜಕೀಯ ಆಟವನ್ನು ಪ್ರಶ್ನೆ ಮಾಡೋಕೆ ಬರ್ತಾ ಇದ್ದಾರೆ ರಾಧಾ ಹಿರೇಗೌಡರ್. ನೀವು ಬಂದಿದ್ದೀರಿ ಅಂದರೆ ನಮಗೆ ನೀರು ಕುಡಿಸುತ್ತೀರಿ. ನೀವು ಸ್ಪರ್ಧಿಯಾಗಿ ಬಂದಿದ್ದೀರೋ ಹೇಗೋ ಅಂಥ ಚೈತ್ರಾ ರಾಧಾ ಅವರನ್ನು ಪ್ರಶ್ನಿಸಿದ್ದಾರೆ.
ನನಗೆ ಪಕ್ಷ ಎಲ್ಲ ಹೊಸತಲ್ಲ. ಭಾಷಣ ರಾಜಕೀಯ. ಐಶ್ವರ್ಯಾ ಅವರೇ ಎದೆ ಮುಟ್ಟಿಕೊಂಡು ಹೇಳಿ ನಿಮ್ಮ ಪಕ್ಷದಲ್ಲಿ ಎಲ್ಲರೂ ಪ್ರಾಮಾಣಿಕರಾಗಿದ್ದಾರಾ? ಏನು ಕೊಡ್ತೀರಾ ಜನರಿಗೆ ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ತಿವಿಕ್ರಮ್ ಕಾಫಿ ಕೊಡುತ್ತೇವೆ ಅಂದಿದ್ದಾರೆ. ಐಶ್ವರ್ಯಾ ಅವರು ಮನರಂಜನೆ ಕೊಡುತ್ತೇವೆ ಅಂದಿದ್ದಾರೆ. ಅದಕ್ಕೆ ರಾಧಾ ಅವರು ಅದನ್ನು ನಿವೇನು ಕೊಡೋದು ಬಿಗ್ ಬಾಸ್ ಕೊಡುತ್ತಾರೆ. ನನ್ನನ್ನು ನಗಿಸುತ್ತೀರಾ ನಗಿಸಿ ಎಂದು ಮರು ಪ್ರಶ್ನಿಸಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ. ರಾಧಾ ಹಿರೇಗೌಡರ್ ಸ್ಪರ್ಧಿಯಾಗಿ ಬಂದಿದ್ದಾರೋ ಅಥವಾ ಗೆಸ್ಟ್ ಆಗಿ ಬಂದಿದ್ದಾರಾ ಎನ್ನುವುದನ್ನು ಕಾದು ನೋಡಬೇಕಿದೆ.
- FILM6 days ago
ಇರಲು ಮನೆ ಇರಲಿಲ್ಲ; ಮೆಜೆಸ್ಟಿಕ್ನಲ್ಲೇ ಸುತ್ತಾಡಿದ್ದ ಸಿಹಿ ಕುಟುಂಬ; ಕಷ್ಟಗಳ ನೆನೆದು ಪುಟಾಣಿ ಕಣ್ಣೀರು
- LATEST NEWS6 days ago
ನಿಜವಾದ ಸಾಧನೆ: ಎಂ.ಬಿ.ಬಿ.ಎಸ್ ಸೀಟ್ ಪಡೆದು ಭವಿಷ್ಯದ ವೈದ್ಯರಾಗಲು ಹೊರಟ 4 ಸಹೋದರಿಯರು
- FILM6 days ago
ಅ*ಶ್ಲೀಲ ವೀಡಿಯೋ ವೈರಲ್; ಈ ಕೆಲಸ ಮಾಡಿದ್ದು ಅವನು ಎಂದ ಓವಿಯಾ
- DAKSHINA KANNADA5 days ago
ಮಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿ ಸಮುದ್ರಪಾಲು