Connect with us

LATEST NEWS

ಉದ್ಯಾವರ ಜಯಲಕ್ಷ್ಮೀ ಸಿಲ್ಕ್ಸ್ ಮಳಿಗೆಯಲ್ಲಿ ಇಂದಿನಿಂದ ಇತಿಹಾಸದಲ್ಲಿ ಕಂಡು ಕೇಳರಿಯದ ಆಫರ್‌..

Published

on

ಉಡುಪಿ: ಉಡುಪಿಯ ಜನಪ್ರಿಯ ಹಾಗೂ ಕರಾವಳಿಯ ಜವಳಿ ಪ್ರಿಯರ ಅಚ್ಚುಮೆಚ್ಚಿನ ಪ್ರಸಿದ್ದ “ಜಯಲಕ್ಷ್ಮೀ ಸಿಲ್ಕ್ಸ್, ಉದ್ಯಾವರ ಕಳೆದ ಹಲವು ವರ್ಷಗಳಿಂದ ಉತ್ತಮ ಗುಣಮಟ್ಟದ ಸೇವೆ ಮೂಲಕ ಗ್ರಾಹಕರ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗಿದ್ದು, ಗ್ರಾಹಕರ ನೆಚ್ಚಿನ ಶಾಪಿಂಗ್ ತಾಣವಾಗಿದೆ.

ಮಾನ್ಸೂನ್ ನಲ್ಲಿ ತನ್ನ ಗ್ರಾಹಕರಿಗಾಗಿ ಇಂದಿನಿಂದ ವಿಶೇಷ ದರ ಕಡಿತದ ಆಫರ್ ನೀಡುತ್ತಿದೆ. ಉದ್ಯಾವರ ಜಯಲಕ್ಷ್ಮೀ ಸಿಲ್ಕ್ಸ್ ಜವುಳಿ ಮಳಿಗೆಯಲ್ಲಿ ಮಹಿಳೆಯರ, ಪುರುಷರ ಹಾಗೂ ಮಕ್ಕಳ, ಮದುವೆ ಸೀರೆಗಳ, ಹಾಗೂ ಎಲ್ಲಾ ವಯೋಮಾನದವರ ವಸ್ತ್ರಗಳ ಭಂಡಾರವೇ ಇದ್ದು ಗ್ರಾಹಕರು ತಮ್ಮ ಇಚ್ಚೆಯ ಬಟ್ಟೆಯನ್ನು ಖರೀದಿಸಬಹುದಾಗಿದೆ.

ಈ ಬಾರಿಯ ಮಾನ್ಸೂನ್ ಕೊಡುಗೆಯಲ್ಲಿ ಈ ಹಿಂದೆ ಎಲ್ಲೂ ಇರದ ವಿಶೇಷ ದರ ಕಡಿತ ಆಫರ್ ಗಳನ್ನು ವಸ್ತ್ರಗಳ ಖರೀದಿಗೆ ನೀಡಲಾಗುತ್ತಿದೆ.
ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ 9,999 ರೂಪಾಯಿಗೆ ಯಾವುದೇ ಬ್ರ್ಯಾಂಡಡ್ ಬಟ್ಟೆಗಳನ್ನು ಖರೀದಿಸಿದರೇ ಬ್ರ್ಯಾಂಡ್ ನಲ್ಲಿ ಉಲ್ಲೇಖಿಸಿದ ಕೊಡುಗೆಗಳಲ್ಲದೇ ಜಯಲಕ್ಷ್ಮೀ ಸಿಲ್ಕ್ಸ್ ವತಿಯಿಂದ ರೂಪಾಯಿ. 2,999 ರೂ. ಬ್ಯಾಗ್ ಕೇವಲ 149 ರೂಪಾಯಿಗೆ ನಿಮ್ಮ ಕೈ ಸೇರಲಿದೆ. ಈ ಬಂಪರ್ ಆಫರ್ ನಲ್ಲಿ ಜಯಲಕ್ಷ್ಮೀ ಸಿಲ್ಕ್ಸ್ ತನ್ನ ಎಲ್ಲಾ ಗ್ರಾಹಕರಿಗಾಗಿ ಬ್ರ್ಯಾಂಡೆಡ್ ಒಳ ಉಡುಪುಗಳ ಮೇಲೆ ವಿಶೇಷ ಕೊಡುಗೆಗಳನ್ನು ನೀಡುತ್ತಿದೆ.


ಜಾಕಿ, ಗ್ಯಾಲಕ್ಸಿ, ವ್ಯಾನ್ ಹುಸೇನ್, ವಿಐಪಿ, ರಾಮ್ ರಾಜ್, ಜೂಲಿಯಟ್, ಮಾಚೋ, ಲಕ್ಸ್ ಕೋಝಿ ವಿ ಸ್ಟಾರ್ , ಸೂಪರ್ ಸೋಕ್ಸ್, ಕ್ರೋಕೊಡೈಲ್ ಮೊದಲಾದ ಬ್ರ್ಯಾಂಡೆಡ್ ನ 7000 ರೂ. ಹಾಗೂ ಅದಕ್ಕೂ ಹೆಚ್ಚಿನ ಮೊತ್ತದ ಖರೀದಿಗೆ 2,499 ರೂ ಮೌಲ್ಯದ ವೈಲ್ಡ್ ಕ್ರಾಫ್ಟ್ ಬ್ರ್ಯಾಂಡ್ ನ ಬ್ಯಾಕ್ ಪ್ಯಾಕ್ ಬ್ಯಾಗ್ ಕೇವಲ 99 ರೂಪಾಯಿಗೆ ನಿಮಗೆ ಸಿಗುತ್ತೆ.

ಜಯಲಕ್ಷ್ಮೀ ಸಿಲ್ಕ್ಸ್ ಕರ್ನಾಟಕ ಕರಾವಳಿಯ ಸುಪ್ರಸಿದ್ಧ ಬಟ್ಟೆ ಮಳಿಗೆ. ತಮ್ಮ ಲಕ್ಷಾಂತರ ಗ್ರಾಹಕರಿಗೆ ವರ್ಷಂಪ್ರತಿ ವಿನೂತನ ಮತ್ತು ಆಕರ್ಷಕ ಅಲ್ಲದೇ ಉತ್ತಮ ಗುಣಮಟ್ಟದ ಬಟ್ಟೆ ಬರೆಗಳನ್ನು ಅತೀ ಕಡಿಮೆ ದರದಲ್ಲಿ ನೀಡುತ್ತಾ ಬಂದಿದೆ.

ಹೀಗಾಗಿ ಗ್ರಾಹಕರು ತಡ ಮಾಡದೇ ಜಯಲಕ್ಷ್ಮೀ ಸಿಲ್ಕ್ಸ್ , ಉದ್ಯಾವರ ಇಲ್ಲಿಗೆ ಬಂದು ಅತ್ಯಾಕರ್ಷಕ ಕೊಡುಗೆಗಳನ್ನು ಪಡೆದುಕೊಳ್ಳಬಹುದಾಗಿದೆ.

ಎಲ್ಲೂ ಇರದ, ಇನ್ನೆಂದು, ಇನ್ನಾವುದೇ ಮಳಿಗೆ ನೀಡದ ಅಮೋಘ ಆಫರ್ ಗಳನ್ನು ಜಯಲಕ್ಷ್ಮೀ ಸಿಲ್ಕ್ಸ್ ನೀಡುತ್ತಿದ್ದು ಗ್ರಾಹಕರ ವಲಯದಲ್ಲಿ ಸಂಭ್ರಮ ಮನೆ ಮಾಡಿದೆ.

ನೆನಪಿಡಿ..ಬ್ರ್ಯಾಂಡ್ ಗಳಲ್ಲಿ ಉಲ್ಲೇಖಿಸಿದ ಆಫರ್ ಗಳೊಂದಿಗೆ ವಿಶೇಷವಾಗಿ ನಿಮ್ಮ ನೆಚ್ಚಿನ ಜಯಲಕ್ಷ್ಮೀ ಸಿಲ್ಕ್ಸ್ ಕೂಡ ಆಕರ್ಷಕ ಆಫರ್ ಗಳನ್ನು ನೀಡುತ್ತಿದೆ.

FILM

ಮೊದಲ ಬಾರಿ ಮದುವೆ ರಹಸ್ಯ ಬಿಚ್ಚಿಟ್ಟ ಹಳ್ಳಿಕಾರ್‌ ಒಡೆಯ ವರ್ತೂರು ಸಂತೋಷ್

Published

on

ಬೆಂಗಳೂರು : ಬಿಗ್‌ಬಾಸ್‌ ಕನ್ನಡ ಸೀಸನ್‌ 10ರಲ್ಲಿ ಹಲವು ಸ್ಪರ್ಧಿಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದಾರೆ. ಇದರಲ್ಲಿ ಹುಲಿ ಉಗುರು ಧರಿಸಿದ ಕಾರಣಕ್ಕೆ ಪೊಲೀಸರಿಂದ ಹಳ್ಳಿಕಾರ್‌ ಒಡೆಯ ವರ್ತೂರು ಸಂತೋಷ್‌ ಅವರ ಬಂಧನವಾಗಿತ್ತು. ಈಗ ಮದುವೆ ವಿಚಾರ ಮತ್ತೆ ಮುನ್ನೆಲೆಗೆ ಬಂದು ನಿಂತಿದೆ.

ಬಿಗ್ ಬಾಸ್ ಮನೆಯಲ್ಲಿಯೇ ತಮ್ಮ ಮದುವೆ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ವರ್ತೂರು ಸಂತೋಷ್ ಅವರಿಗೆ ಮದುವೆ ಆಗಿದೆ. ಒಬ್ಬಳು ಹೆಣ್ಣು ಮಗು ಕೂಡ ಇದೆ. ಆದರೆ ಅವರು ಮದುವೆ ಆಗಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಕೆಲದಿನಗಳ ಹಿಂದೆ ಸೋಷಿಯಲ್‌ಮೀಡಿಯಾದಲ್ಲಿ ಗುಲ್ಲೆದ್ದಿತ್ತು. ಈಗ ಬಿಗ್ ಬಾಸ್ ಮನೆಯಲ್ಲಿ ಸ್ವತಃ ವರ್ತೂರ್ ಅವರೇ ತಮ್ಮ ಮದುವೆ, ಪತ್ನಿ ಜೊತೆಗಿನ ಭಿನ್ನಾಭಿಪ್ರಾಯಗಳ ಕುರಿತು ಮನಸ್ಸು ಬಿಚ್ಚಿ ಮಾತನಾಡಿದ್ದಾರೆ.

ಬಿಗ್‌ಬಾಸ್ ಮನೆ ಸೇರಿದಾಗಿನಿಂದ ಈ ವರೆಗೂ ತನಗೆ ಮದುವೆ ಆಗಿದೆ ಎಂಬ ಒಂದೇ ಒಂದು ಸಣ್ಣ ಸುಳಿವನ್ನೂ ಬಿಟ್ಟುಕೊಟ್ಟಿರಲಿಲ್ಲ ವರ್ತೂರು ಸಂತೋಷ್.  ಈಗ ಗುಟ್ಟು ರಟ್ಟಾಗಿದೆ.

‘ವರ್ತೂರ ಸಂತೋಷ್‌ ಒಳಗಡೇ ಏನೈತೆ ಅನ್ನೋದನ್ನು ಹೇಳ್ತಿದ್ದೇನೆ. ನೋಡು ದೊಡ್ಡಪ್ಪ ನೀನು ಹೀಗು ತಾಳಿಕಟ್ಟು ಅಂದ್ರೆ ಕಟ್ಟಿಬಿಡ್ತಿನಿ. ನಾನು ಅವರಿಗೆ ಮಾತು ಕೊಟ್ಟು ಒಪ್ಪಿಕೊಂಡು ಬಿಟ್ಟೆ. ಮದುವೆಯೂ ಆಯ್ತು, ದಿನ ಕಳೆದಂತೆ, ಅಮ್ಮನನ್ನು ಇಗ್ನೋರ್‌ ಮಾಡೋಕೆ ಶುರು ಮಾಡಿದ್ರು. ನಾನು ಸಂಪಾದನೆ ಮಾಡಿದ ಜನರನ್ನು ತೊರೆದು ಇವರ ಹಿಂದೆ ಹೋಗಬೇಕು ಎಂದರೆ ಅದು ಸಾಧ್ಯವಾಗದ ಮಾತು. ಆಗ ಹೆಂಡತಿ ಮನೆ ಹತ್ತಿರ ಹೋಗ್ತಿನಿ. ನನ್ನ ಮಾತಿನ ಪ್ರಕಾರ ಬಂದ್ರೆ, ನೀನು ರಾಣಿನೇ ಎಂದು ಕರೆದೆ. ಮೊದಲು ನೀನು ಗೇಟಿಂದ ಆಚೆ ಹೋಗು ಎನ್ನುತ್ತಾರೆ. ಆವತ್ತು ನಾನು ಮಾತು ಕೊಟ್ಟು ಬಂದಿದ್ದೀನಿ ಇವತ್ತು ಆ ಮಾತಿನ ಮೇಲೆ ನಿಂತಿದ್ದೀನಿ’ ಎಂದಿದ್ದಾರೆ ವರ್ತೂರು.

ಮುಂದೇನಾಗುತ್ತೆ ಅನ್ನುವುದನ್ನ ಇವತ್ತಿನ ಎಪಿಸೋಡ್ ನಲ್ಲಿ ನೋಡ್ಬೇಕಷ್ಟೆ..

Continue Reading

Ancient Mangaluru

ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

Published

on

ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.

ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.  ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ  ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು.  ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ  ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Continue Reading

DAKSHINA KANNADA

ಉಡುಪಿ : ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ

Published

on

ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್‌ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.

ಪ್ರೀತಮ್‌ ಅವರು ಬೈಕ್‌ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್‌ ಪಂಪ್‌ ಕಡೆಯಿಂದ ಸರ್ವಿಸ್‌ ರೋಡ್‌ನ‌ಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್‌ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್‌ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್‌ ಕೆಟರಿಂಗ್‌ ಉದ್ಯಮ ನಡೆಸುತ್ತಿದ್ದರು. ಪ್ರೀತಮ್‌ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Continue Reading

LATEST NEWS

Trending