BIG BOSS
BBK11: ಬಿಗ್ಬಾಸ್ ಸ್ಪರ್ಧಿಗಳಿಗೆ ಮೈಚಳಿ ಬಿಡಿಸಿದ ಸುದೀಪ್; ಇಲ್ಲಿವೆ ಟಾಪ್ 10 ಕಿಚ್ಚನ ಪಂಚಿಂಗ್ ಡೈಲಾಗ್ಗಳು
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ನಾಲ್ಕನೇ ವಾರಕ್ಕೆ ಕಾಲಿಡುತ್ತಿದೆ. ಈ ಬಾರಿಯ ಬಿಗ್ಬಾಸ್ ಸೀಸನ್ 11ರ ಮೂರನೇ ವಾರದಲ್ಲಿ ಕಿಚ್ಚ ಸುದೀಪ್ ಸ್ಪರ್ಧಿಗಳ ವಿರುದ್ಧ ಕೆಂಡಮಂಡಲರಾಗಿ ಮಾತಾಡಿದ್ದಾರೆ.
ಜೊತೆಗೆ ಸ್ಪರ್ಧಿಗಳು ಮಾಡುತ್ತಿರೋ ಸರಿ ತಪ್ಪುಗಳ ಬಗ್ಗೆ ಮಾತಾಡಿದ್ದಾರೆ. ಅಲ್ಲದೇ ಕೆಲವು ಸ್ಪರ್ಧಿಗಳಿಗೆ ಕೆಂಡಮಂಡಲವಾಗಿ ಮಾತಾಡಿದ್ದಲ್ಲದೇ ಮೈಚಳಿ ಬಿಡಿಸಿದ್ದಾರೆ. ಹೌದು, ನಿನ್ನೆಯ ಎಪಿಸೋಡ್ನಲ್ಲಿ ಬಿಗ್ಬಾಸ್ ವೇದಿಕೆಗೆ ಬಂದ ಕಿಚ್ಚ ತುಂಬಾ ಸಿಟ್ಟಾಗಿದ್ದರು. ಸಿಟ್ಟಿನಿಂದಲೇ ಶೋ ಶುರು ಮಾಡಿದ ಕಿಚ್ಚ ಮನೆಯಲ್ಲಿರೋ ಸ್ಪರ್ಧಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ಒಟ್ಟಾರೆಯಾಗಿ ಈ ವಾರದ ಬಿಗ್ಬಾಸ್ ಮನೆ ರಣಾಂಗಣವಾಗಿತ್ತು. ಇನ್ನು ಕಿಚ್ಚ ಸುದೀಪ್ ಒಬ್ಬೊಬ್ಬ ಸ್ಪರ್ಧಿಗಳಿಗೆ ಅರ್ಥ ಪೂರ್ಣವಾದ ಮಾತನ್ನು ಹೇಳಿದ್ದಾರೆ. ಅದರಲ್ಲಿ ಟಾಪ್ 10 ಪಂಚ್ಗಳನ್ನು ಈ ಕೆಳಕಂಡತೆ ನೀಡಲಾಗಿದೆ.
ಕಿಚ್ಚ ಸುದೀಪ್ ಸ್ಪರ್ಧಿಗಳಿಗೆ ಕೊಟ್ಟ ಟಾಪ್ 10 ಪಂಚ್ ಇಲ್ಲಿವೆ:
1. ತಪ್ಪು ಮಾಡಿದವರು ಹೊರಗಡೆ ಹೋಗಿದ್ದಾರೆ. ಆದರೆ, ನಿಮ್ಮ ಪೈಕಿ ಎಷ್ಟು ಜನರು ಸರಿ ಇದ್ದೀರಿ ಎಂದೇ ಕಿಚ್ಚ ಸುದೀಪ್ ಪ್ರಶ್ನೆ ಮಾಡಿದ್ದಾರೆ.
2. ಒಬ್ಬ ವ್ಯಕ್ತಿ ತನ್ನ ಚಪ್ಪಲಿಯನ್ನು ಉಗ್ರಂ ಮಂಜು ಎತ್ತಿ ಬಿಸಾಡುತ್ತಾನೆ. ಅದು ನಿಮಗೆ ಒಕೆನಾ? ಪ್ರಾಮಾಣಿಕತೆ ಅನ್ನೋ ಶಬ್ದವೇ ಈ ಮನೆಗೆ ಎಂದೂ ಸೂಟ್ ಆಗೋದಿಲ್ಲ ಅಂತ ಕಿಡಿಕಿಡಿಯಾಗಿದ್ದಾರೆ.
3. ಮಾತುಗಳಿಂದಲೇ ಒಬ್ಬ ವ್ಯಕ್ತಿ ಮನೆಯಿಂದ ಹೊರಗಡೆ ಹೋದ ಅನ್ನೋದಾಗಿದ್ರೆ, ನೀವು ಮಾತಾಡಿರೋ ಕೆಲವು ತಪ್ಪು ಮಾತುಗಳನ್ನು ಇಟ್ಟುಕೊಂಡು ನಿಮ್ಮನ್ನು ಯಾಕೆ ಮನೆಯಲ್ಲಿ ಇಟ್ಟುಕೊಂಡಿರಬೇಕು ಎಂದು ಮಾನಸಗೆ ನೇರಪ್ರಶ್ನೆ ಮಾಡಿದ್ದಾರೆ.
4. ಹೆಣ್ಣುಮಕ್ಕಳ ಬಗ್ಗೆ ಹಾಗೆಲ್ಲಾ ಮಾತನಾಡಬೇಡಿ ಎಂದು ನೀವು ಹೇಳುತ್ತೀರಿ. ಒಬ್ಬ ಅಪ್ಪನಿಗೆ ಹುಟ್ಟಿದ್ರೆ ಅಂದ್ರೆ ಅಲ್ಲಿ ಯಾರೂ ಕೂಡ ಅಪ್ಪನಿಗೆ ಬೈತಾ ಇರೋದಿಲ್ಲ. ಅವನು ಅಲ್ಲಿ ತಾಯಿಗೆ ಬೈತಾ ಇರ್ತಾನೆ ಎಂದು ಸಿಟ್ಟಿನಲ್ಲಿಯೇ ಚೈತ್ರಾಗೆ ತಿರುಗೇಟು ಕೊಟ್ಟಿದ್ದಾರೆ.
5. ಕ್ಯಾಪ್ಟನ್ ಶಿಶಿರ್ ಅನುಷಾ ರೈ ಅವರನ್ನು ಮನೆಯಿಂದ ಹೊರಗೆ ಹಾಕಲು ನೇರವಾಗಿ ನಾಮಿನೇಟ್ ಮಾಡಿದ್ದರು. ಇದೇ ಕೋಪದಲ್ಲಿ ನನಗೆ ಬಕೆಟ್ ಹಿಡಿಯೋದಕ್ಕೆ ಬರೋದಿಲ್ಲ ಗುರು ಅಂತ ಕಿಡಿಕಾಡಿದ್ದಾರೆ. ಆದರೆ ಇದನ್ನು ಐಶ್ವರ್ಯಾ ಶಿಶಿರ್ ನಿಮಗೆ ಹೇಳಿದ್ದು ಅಂತ ಪರೋಷವಾಗಿ ಸನ್ನೆ ಮಾಡಿ ತೋರಿಸಿದ್ದರು. ಈ ವಿಚಾರದ ಬಗ್ಗೆ ಕೂಡ ಕಿಚ್ಚ ಸುದೀಪ್ ಪಂಚಾಯ್ತಿಯಲ್ಲಿ ಬಿಟ್ಟಿದ್ದಾರೆ.
6. ಬಿಗ್ಬಾಸ್ ಮನೆಗೆ ತಾವೇ ಅಭಿನಂದನೆ ಬರೆದಿದ್ದ ಕೇಕ್ ಕಳುಹಿಸಿದ ಕಿಚ್ಚ ಸುದೀಪ್ ಸ್ಪರ್ಧಿಗಳ ಕೈಯಲ್ಲೇ ಕಟ್ ಮಾಡಿದ್ದರು. ಇದಕ್ಕೆ ಮುಖ್ಯ ಕಾರಣ ಈ ಸೀಸನ್ ನನಗೆ ಇಷ್ಟವಾಗದ ಕಳೆದ ಸೀಸನ್ ಅನ್ನು ಬಿಟ್ ಮಾಡುತ್ತೆ ಅಂತ ಎಂದು ಹೇಳಿದ್ದಾರೆ.
7. ನನಗೆ ಯಾರಾದರೂ ಕೇಳಿದ್ರೆ ಯಾವ ಸೀಸನ್ ಇಷ್ಟ ಇಲ್ಲ ಅಂತ ಕೇಳಿದ್ರೆ ನಾನು 6 ಅಂತ ಹೇಳುತ್ತಿದ್ದೆ. ಆದರೆ ಈಗ ಸೀಸನ್ 11 ಅಂತ ಹೇಳಬೇಕು ಅಂತ ಪಂಚ್ ಕೊಟ್ಟಿದ್ದಾರೆ.
8. ಹಂಸ ಅವರ ವಿಚಾರವಾಗಿಯೂ ಕಿಚ್ಚ ಸುದೀಪ್ ಅವರು ಮಾತಾಡಿದ್ದಾರೆ. ಜಗದೀಶ್ ಅವರು ಯಾಕೆ ಸಿಟ್ಟಾಗಿದ್ದರು ಅನ್ನೋ ಸತ್ಯವನ್ನ ಸುರೇಶ್ ತಮ್ಮ ಬಾಯಿಂದ ಹೇಳಿದ್ದಾರೆ. ಕ್ರಶ್ ಆಫ್ ದಿ ಕರ್ನಾಟಕ ಆದ್ಮೇಲೆ ಹಂಸ ಆದ್ಮೇಲೆ ಮನೆಯ ಮಂದಿ ಬದಲಾದ್ರು. ಆ ವಿಚಾರದಲ್ಲಿ ಹಂಸ ಕೂಡ ಬದಲಾಗಿದ್ದರು. ಜಗದೀಶ್ ಅವರನ್ನ ದೂರವೇ ಇಟ್ಟರು ಅಂತ ಹೇಳಿದ್ದಾರೆ. ಇದೇ ವಿಚಾರಕ್ಕೆ ಕಿಚ್ಚ ಸುದೀಪ್ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.
9. ಬಿಗ್ಬಾಸ್ ಮನೆಯಲ್ಲಿ ಎಲ್ಲ ಸ್ಪರ್ಧಿಗಳು ಜಗದೀಶ್ ಅವರು ಒಂದು ಕಡೆ ಕುಳಿತುಕೊಂಡಾಗ ತಮಾಷೆ ಮಾಡುತ್ತಿದ್ದರು. ಆಗ ಅನುಷಾ ರೈ ನೀವು ಎದ್ದು ಹೋಗಬೇಕಾಗಿತ್ತು ಅಂತ ಕಿಚ್ಚ ಉದಾಹರಣೆ ಕೊಡುವ ಮೂಲಕವೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಜೊತೆಗೆ ಅವರ ವ್ಯಕ್ತಿತ್ವದ ಬಗ್ಗೆ ಕೂಡ ಮಾತಾಡಿದ್ದಾರೆ.
10. ಹೊಸಬರು ನಮ್ಮ ಮನೆ ಬಾಗಿಲಿಗೆ ಬಂದಾಗ ಆಗ ನಾನು ಅವರ ಕೈ ಹಿಡಿದುಕೊಂಡು ಎತ್ತಿ ನಿಂತುಕೊಂಡು ಇರುತ್ತೇವೆ. ಆದರೆ, ಅವರು ನನ್ನ ಪರವಾಗಿಯೇ ನಿಂತಿದ್ದಾರೆ ಅಂತ ನಾನು ಹೇಳಿಲ್ಲ. ಆದರೆ ಇನ್ನೊಬ್ಬರು ತಮಾಷೆ ಮಾಡಬೇಕಾದರೇ ಇಡೀ ಪ್ರಪಂಚ ಅವರ ಬಗ್ಗೆ ಮಾತಾಡುತ್ತಿದ್ದಾಗ ಅವರ ಪಕ್ಕ ಕುಳಿತುಕೊಳ್ತಾರೆ ಅಲ್ವಾ ಮೇಡಂ ಅಲ್ಲಿಗೆ ಅವರು ನನ್ನ ಭಾಗಕ್ಕೆ ಸತ್ರು ಅಂತ ಲೆಕ್ಕ ಟಾಂಗ್ ಕೊಟ್ಟಿದ್ದಾರೆ.
ಸುದೀಪ್ ಅವರ ಒಂದೊಂದು ಪ್ರಶ್ನೆಗಳಿಗೂ ಮನೆಯ ಸದಸ್ಯರ ತಲೆ ಕೆಳಗಾಗಿದೆ. ಸ್ಪರ್ಧಿಗಳ ಮುಖಕ್ಕೆ ಹೊಡೆದಂತೆ ಮಾತಾಡಿ ತಮ್ಮ ತಪ್ಪನ್ನು ಹೇಳಿದ್ದಾರೆ.
BIG BOSS
‘ಮೆಟ್ಟು ತಗೊಂಡು ಹೊಡಿತೀನಿ’: ಮತ್ತೆ ನಾಲಿಗೆ ಹರಿಬಿಟ್ಟ ಚೈತ್ರಾ ಕುಂದಾಪುರ
ಜಾಸ್ತಿ ಮಾತನಾಡುತ್ತಾರೆ ಎಂಬ ಕಾರಣದಿಂದಲೇ ಚೈತ್ರಾ ಕುಂದಾಪುರ ಅವರು ಹೈಲೈಟ್ ಆಗುತ್ತಾರೆ. ಆದರೆ ಆ ಮಾತೇ ಅವರಿಗೆ ಮುಳುವಾಗುತ್ತಿದೆ. ಕಳೆದ ವಾರ ಅವರು ‘ಒಬ್ಬ ಅಪ್ಪನಿಗೆ ಹುಟ್ಟಿದ್ದರೆ..’ ಎಂದು ಜಗದೀಶ್ಗೆ ಹೇಳಿದ್ದರು. ಆ ಮಾತನ್ನು ಕಿಚ್ಚ ಸುದೀಪ್ ಅವರು ಕಟುವಾಗಿ ಖಂಡಿಸಿದ್ದರು. ಹಾಗಂತ ಚೈತ್ರಾ ಅವರು ತಮ್ಮ ಮಾತಿನ ವರಸೆಯನ್ನು ಬದಲಿಸಿಕೊಂಡಿದ್ದಾರಾ? ಖಂಡಿತಾ ಇಲ್ಲ. ಸೋಮವಾರದ (ಅಕ್ಟೋಬರ್ 21) ಸಂಚಿಕೆಯಲ್ಲಿ ಅವರು ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಚಪ್ಪಲಿಯಲ್ಲಿ ಹೊಡೆಯುವ ಬಗ್ಗೆ ಅವರು ಮಾತನಾಡಿದ್ದಾರೆ.
ಕಳೆದ ವಾರ ಜಗದೀಶ್ ಅವರಿಗೆ ಉಗ್ರಂ ಮಂಜು ಅವರು ಚಪ್ಪಲಿ ತೋರಿಸಿದ್ದರು. ಅದು ಸರಿಯಲ್ಲ ಎಂದು ಸುದೀಪ್ ಅವರು ಹೇಳಿದ್ದರು. ಇಂಥ ಹಲವು ಕಾರಣಗಳಿಂದಾಗಿ ಮನೆಯ ಸದಸ್ಯರಿಗೆ ಕಿಚ್ಚ ಕ್ಲಾಸ್ ತೆಗೆದುಕೊಂಡಿದ್ದರು. ಅಷ್ಟಾದರೂ ಕೂಡ ಚೈತ್ರಾ ಅವರು ಮಾತಿನ ವರಸೆ ಬದಲಾಯಿಸಿಕೊಂಡಿಲ್ಲ. ಸಂದರ್ಭ ಬಂದರೆ ತಾವು ಮೆಟ್ಟಿನಲ್ಲಿ ಹೊಡೆಯುವುದಾಗಿ ಚೈತ್ರಾ ಹೇಳಿದ್ದಾರೆ.
ಈ ಮೊದಲು ಹಂಸಾ ಅವರ ಬಗ್ಗೆ ಗೋಲ್ಡ್ ಸುರೇಶ್ ಏನೇನೋ ಕಮೆಂಟ್ ಮಾಡಿದ್ದರು. ಹಂಸಾ ಅವರದ್ದು ಲವ್ ಸ್ಟೋರಿ ನಡೆಯುತ್ತಿತ್ತು ಎಂದು ಅವರು ಹೇಳಿದ್ದರು. ಅದರಿಂದ ಹಂಸಾಗೆ ಬೇಸರ ಆಯಿತು. ಹಾಗಾಗಿ ಅವರು ಈ ವಿಚಾರವನ್ನು ಚೈತ್ರಾ ಕುಂದಾಪುರ ಜೊತೆ ಚರ್ಚೆ ಮಾಡುತ್ತಿದ್ದರು. ಆಗ ಚೈತ್ರಾ ಅವರ ಮಾತುಗಳು ಮೆಟ್ಟಿನ ತನಕ ಹೋಯಿತು.
‘ನನ್ನ ಕ್ಯಾರೆಕ್ಟರ್ ಬಗ್ಗೆ ಯಾರಾದರೂ ಮಾತಾಡಿದರೆ ಮೆಟ್ಟು ತಗೊಂಡು ಹೊಡಿತೀನಿ. ಅದರಿಂದ ನಾನು ಹೊರಗೆ ಹೋದ್ರೂ ಚಿಂತೆ ಇಲ್ಲ. ನಾನು ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೇನೆ. ನನಗೆ ಯಾರ ಹತ್ತಿರವೂ ಸಂಬಂಧ ಕಟ್ಟಬೇಡಿ’ ಎಂದು ಚೈತ್ರಾ ಕುಂದಾಪುರ ಅವರ ಹೇಳಿದ್ದಾರೆ. ಇಂಥ ಮಾತುಗಳನ್ನು ಆಡಿದ್ದಕ್ಕೆ ಸುದೀಪ್ ಅವರು ವೀಕೆಂಡ್ ಸಂಚಿಕೆಯಲ್ಲಿ ಯಾವ ರೀತಿ ಪಂಚಾಯ್ತಿ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕು.
BIG BOSS
Watch Video: ಬಿಗ್ ಬಾಸ್ನಲ್ಲಿ ಪಾತ್ರೆ ತೊಳೆದ ಪರಿಣಾಮ; ಲಾಯರ್ ಜಗದೀಶ್ಗೆ ಮನೆಯಲ್ಲಿ ಎಂಥಾ ಸ್ಥಿತಿ ನೋಡಿ..!
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ದೊಡ್ಡ ಮಟ್ಟದಲ್ಲಿ ಸ್ದದು ಮಾಡಿದ್ದು ಲಾಯರ್ ಜಗದೀಶ್. ಮೂರು ವಾರ ಕಳೆಯುವುದರ ಒಳಗೆ ಅವರು ದೊಡ್ಮನೆಯಿಂದ ಔಟ್ ಆದರು. ಹೊರ ಹೋದ ಬಳಿಕ ಅವರಿಗೆ ಸೃಷ್ಟಿ ಆಗಿರೋ ಅಭಿಮಾನಿ ಬಳಗ ಎಂಥದ್ದು ಎಂಬುದು ಗೊತ್ತಾಗಿದೆ. ಈಗ ಅವರು ಮನೆಯಲ್ಲೂ ಪಾತ್ರೆ ತೊಳೆಯೋ ಪರಿಸ್ಥಿತಿ ಬಂದೊದಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಒಂದು ವೈರಲ್ ಆಗಿದೆ.
‘ಬಿಗ್ ಬಾಸ್’ ಮನೆಯಲ್ಲಿ ಜಗದೀಶ್ ಅವರು ಜಗಳಕ್ಕೆ ಮಾತ್ರ ನಿಲ್ಲುತ್ತಿರಲಿಲ್ಲ. ಅವರು ಅಗತ್ಯ ಬಂದಾಗ ಪಾತ್ರೆ ತೊಳೆಯುತ್ತಿದ್ದರು. ಇದು ಅವರ ನೆಚ್ಚಿನ ಕಾಯಕಗಳಲ್ಲಿ ಒಂದಾಗಿತ್ತು. ಈ ಕಾರಣದಿಂದಲೇ ಹಗಲು ರಾತ್ರಿ ಎನ್ನದೆ ಸಿಕ್ಕ ಸಿಕ್ಕಾಗಲೆಲ್ಲ ಅಡುಗೆ ಮನೆಯ ವಾಶ್ ಬೇಸ್ನಲ್ಲಿ ನಿಲ್ಲುತ್ತಿದ್ದರು. ಇದು ಅವರ ಪತ್ನಿಯ ಗಮನಕ್ಕೆ ಬಂದಿದೆ.
ಬಿಗ್ ಬಾಸ್ ಮಾಜಿ ಸ್ಪರ್ಧಿ ಕಿರಿಕ್ ಕೀರ್ತಿ ಅವರು ಫನ್ ಆಗಿ ಒಂದು ವಿಡಿಯೋ ಮಾಡಿದ್ದಾರೆ. ಈ ವಿಡಿಯೋದಲ್ಲಿ ಕೀರ್ತಿ ಅವರು ಜಗದೀಶ್ ಮನೆ ಒಳಗೆ ಬರುತ್ತಾರೆ. ಅಲ್ಲಿ ಜಗದೀಶ್ ಅವರು ಪಾತ್ರೆ ತೊಳೆಯುತ್ತಾ ನಿಂತಿರುತ್ತಾರೆ. ‘ಏನ್ ಸರ್ ಸಂದರ್ಶನ ಕೊಡ್ತೀನಿ ಅಂಥ ಹೇಳಿ ಪಾತ್ರೆ ತೊಳೆಯುತ್ತಿದ್ದೀರಲ್ಲ’ ಎಂದು ಪ್ರಶ್ನೆ ಮಾಡಿದರು ಕೀರ್ತಿ. ಇದಕ್ಕೆ ಜಗದೀಶ್ ಉತ್ತರ ಕೊಟ್ಟರು.
‘ಏನ್ ಮಾಡೋದು. ನಮ್ಮ ಮನೆ, ನಮ್ ಪಾತ್ರೆ ತೊಳೆಯೋದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನೆ ಮಾಡಿದರು ಜಗದೀಶ್. ಇದಕ್ಕೆ ಜಗದೀಶ್ ಪತ್ನಿ ಉತ್ತರ ನೀಡುತ್ತಾರೆ. ‘ಬಿಗ್ ಬಾಸ್ ಮನೆಯಲ್ಲಿ ರಾತ್ರಿ-ಹಗಲು ಎನ್ನದೇ ತೊಳೆಯುತ್ತಿದ್ದರು. ಹೀಗಾಗಿ ತೊಳೆಸುತ್ತಾ ಇದ್ದೇನೆ’ ಎನ್ನುತ್ತಾರೆ ಜಗದೀಶ್ ಪತ್ನಿ.
ಸದ್ಯ ಈ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಹಲವರು ಹಲವು ರೀತಿಯ ಕಮೆಂಟ್ ಮಾಡಿದ್ದಾರೆ. ಅನೇಕರ ಗಮನ ಮನೆಯ ಮೇಲೆ ಹೋಗಿದೆ. ಮನೆ ಅಷ್ಟು ಕಲರ್ಫುಲ್ ಆಗಿಲ್ಲ. ಹೀಗಾಗಿ, ಕೆಲವರು ಜಗದೀಶ್ ಹೇಳಿದ ಮಾತನ್ನು ನೆನಪಿಸಿಕೊಂಡಿದ್ದಾರೆ. ‘ನೀವೇನಾ ನಿಮ್ಮ ಮನೆಯ ನಾಯಿಗೆ ಒಂದು ಲಕ್ಷ ರೂಪಾಯಿ ಖರ್ಚು ಮಾಡುವವರು’ ಎಂದು ಪ್ರಶ್ನೆ ಮಾಡಿದ್ದಾರೆ.
Watch Video:
BIG BOSS
ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೀನಿ, ಯಾರ ಜೊತೆ ಸಂಬಂಧ ಕಟ್ಟಲ್ಲ; ಚೈತ್ರಾ ಕುಂದಾಪುರ
ಚೈತ್ರಾ ಕುಂದಾಪುರ ಅವರು ಕೇಸ್ ಒಂದರಲ್ಲಿ ಜೈಲಿಗೆ ಹೋಗಿದ್ದರು. ಮೊದಲು ಅವರನ್ನು ವಾಗ್ಮಿ ಎಂದು ನೋಡುತ್ತಿದ್ದರು. ಈ ಪ್ರಕರಣದ ಬಳಿಕ ಅವರ ಮೇಲಿದ್ದ ಗೌರವ ಕಡಿಮೆ ಆಗಿತ್ತು. ಈಗ ಬಿಗ್ ಬಾಸ್ ನೋಡುತ್ತಿರುವವರಿಗೆ ಅವರ ಮೇಲಿದ್ದ ಭಾವನೆ ನಿಧಾನವಾಗಿ ಬದಲಾಗುತ್ತಿದೆ. ಹೀಗಿರುವಾಗಲೇ ಅವರು ಒಂದು ಶಾಕಿಂಗ್ ವಿಚಾರ ಬಿಚ್ಚಿಟ್ಟಿದ್ದಾರೆ. ಚೈತ್ರಾ ಕುಂದಾಪುರಗೆ ಮದುವೆ ಫಿಕ್ಸ್ ಆಗಿದೆಯಂತೆ. ಈ ವಿಚಾರವನ್ನು ಸ್ವತಃ ಅವರೇ ರಿವೀಲ್ ಮಾಡಿದ್ದಾರೆ.
‘ಬಿಗ್ ಬಾಸ್’ ಒಳಗೆ ಹೋದಾಗ ಕೆಲವರ ಮಧ್ಯೆ ಆಪ್ತತೆ ಬೆಳೆಯುತ್ತದೆ. ಇದನ್ನು ಪ್ರೀತಿ ಎಂದು ಬಿಂಬಿಸುವ ಕೆಲಸ ಆಗುತ್ತದೆ. ಇದು ಕೆಲವರಿಗೆ ಇಷ್ಟ ಆದರೆ, ಇನ್ನೂ ಕೆಲವರಿಗೆ ಇಷ್ಟ ಆಗುವುದಿಲ್ಲ. ಚೈತ್ರಾ ಕುಂದಾಪುರಗೆ ಈ ವಿಚಾರದಲ್ಲಿ ನಂಬಿಕೆ ಇಲ್ಲ. ತಮ್ಮ ವಿಚಾರದಲ್ಲಿ ಯಾರಾದರೂ ಕಥೆ ಕಟ್ಟೋಕೆ ಬಂದರೆ ಸರಿ ಇರಲ್ಲ ಎಂದು ಅವರು ಹೇಳಿದ್ದಾರೆ.
ಚೈತ್ರಾ, ಹಂಸಾ ಹಾಗೂ ಮಾನಸಾ ಒಂದು ಕಡೆ ಕುಳಿತು ಮಾತನಾಡುತ್ತಿದ್ದರು. ‘ನಂದು, ರಂಜಿತ್ ಹಾಗೂ ತ್ರಿವಿಕ್ರಂದು ಲವ್ಸ್ಟೋರಿ ಎಂದು ಸುರೇಶ್ ಹೇಳಿಕೆ ಕೊಟ್ಟರು. ಹೀಗೆಲ್ಲ ಹೇಳಿದ್ರೆ ಕಷ್ಟ ಆಗುತ್ತದೆ. ಅವರ ಜೊತೆ ಯಾಕೆ ಕ್ಲೋಸ್ ಆದೆ ಎಂದರೆ ಅವರು ಯಾರ ಬಗ್ಗೆಯೂ ಮಾತನಾಡಲ್ಲ. ಆದರೆ ಸುರೇಶ್ ಜೊತೆ ಕುಳಿತರೆ ನೆಗೆಟಿವ್ ವೈಬ್ಸ್ ಜಾಸ್ತಿ. ಈ ಕಾರಣಕ್ಕೆ ರಂಜಿತ್ ಹಾಗೂ ತ್ರಿವಿಕ್ರಂ ಜೊತೆ ಕ್ಲೋಸ್ ಆಗಿದ್ದೇನೆ’ ಎಂದು ಹಂಸಾ ಸ್ಪಷ್ಟನೆ ಕೊಟ್ಟರು.
‘ನಾನು ವಿಕ್ಕಿ ಜೊತೆ ಕ್ಲೋಸ್ ಆಗಿದ್ದೇನೆ ಎಂದು ಸುರೇಶ್ ಅಣ್ಣ ಹೆಳುತ್ತಲೇ ಇದ್ದಾರೆ. ನನ್ನ ವಿಚಾರದಲ್ಲಿ ಯಾರಾದರೂ ಲವ್ಸ್ಟೋರಿ ಶುರು ಮಾಡಿದರೆ ಮೆಟ್ಟು ತೆಗೆದುಕೊಂಡು ಹೊಡೆಯುತ್ತೇನೆ. ಹೊರಗೆ ಹೋದರೂ ತೊಂದರೆ ಇಲ್ಲ. ನನ್ನ ಕ್ಯಾರೆಕ್ಟರ್ಗೆ ಯಾರೂ ಕಳಂಕ ತರಬಾರದು ಎಂದು ನಾನು ಬಯಸುತ್ತೇನೆ. ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೇನೆ. ಯಾರ ಜೊತೆಯೂ ಸಂಬಂಧ ಕಟ್ಟೋದು ಇಟ್ಟುಕೊಳ್ಳಬೇಡಿ’ ಎಂದರು ಚೈತ್ರಾ.
- BIG BOSS7 days ago
ಲಾಯರ್ ಜಗದೀಶ್ ಹೊರಗೆ, ಪತ್ನಿ ಒಳಗೆ: ಕಲರ್ಸ್ ಶೋನಲ್ಲಿ ಜಗದೀಶ್ ಪತ್ನಿ
- BIG BOSS5 days ago
ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ: ಬಿಗ್ ಬಾಸ್ ನಿಂದ ಹೊರಬಂದ ಜಗದೀಶ್ ಫಸ್ಟ್ ರಿಯಾಕ್ಷನ್!
- BIG BOSS6 days ago
ಕೊನೆಗೂ ಸುದೀಪ್ ಹೇಳಿದ ಬದಲಾವಣೆಯನ್ನು ಜಾರಿಗೆ ತಂದ ಬಿಗ್ ಬಾಸ್; ಏನದು ?
- LATEST NEWS6 days ago
ಕೀಬೋರ್ಡ್ನಲ್ಲಿ ಎಫ್ ಮತ್ತು ಜೆ ಅಕ್ಷರಗಳ ಕೆಳಗೆ ಗೆರೆ ಏಕೆ ಇರುತ್ತದೆ ಗೊತ್ತಾ?