Connect with us

    BIG BOSS

    ಬಿಗ್​ಬಾಸ್ ಶೋಗೆ ಸಂಕಷ್ಟ; ತುರ್ತು ನೋಟಿಸ್​ ಕೊಟ್ಟ ಕೋರ್ಟ್​

    Published

    on

    ಶಿವಮೊಗ್ಗ: ಕನ್ನಡದ ಬಿಗ್​ಬಾಸ್ ಸೀಸನ್ ಆರಂಭವಾಗಿ ಇಂದಿಗೆ 19 ದಿನಗಳು ಆದ ಬೆನ್ನಲ್ಲೇ ದೊಡ್ಡ ಸಂಕಷ್ಟ ಎದುರಾಗಿದೆ. ಕನ್ನಡ ಕಿರುತೆರೆಯ ದೊಡ್ಡ ರಿಯಾಲಿಟಿ ಶೋ ಎನಿಸಿರುವ ಬಿಗ್​ಬಾಸ್​ ಶೋಗೆ ಸಾಗರ ಕೋರ್ಟ್​ ತುರ್ತು ನೋಟಿಸ್ ಜಾರಿ ಮಾಡಿದೆ. ಸೀಸನ್- 11ರ ಪ್ರಸಾರವನ್ನು ಕಾಯಂ ರದ್ದುಪಡಿಸುವಂತೆ ಕೋರಿ ಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.

    ಬಿಗ್ ಬಾಸ್- 11ನೇ ಸೀಸನ್ ಪ್ರಸಾರವನ್ನು ಕಾಯಂ ರದ್ದುಪಡಿಸುವಂತೆ ಕೋರಿ ವಕೀಲ ಕೆ.ಎಲ್. ಭೋಜರಾಜ್ ಅವರು ಸಾಗರದ ಪ್ರಧಾನ ವ್ಯವಹಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವ್ಯವಹಾರ ಪ್ರಕ್ರಿಯಾ ಸಂಹಿತೆ ಆದೇಶ 39 ನಿಯಮ 1 ಮತ್ತು 2 ರೆಡ್ ವಿಥ್ ಸೆಕ್ಷನ್ 151ರ ಪ್ರಕಾರ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಈ ಸಂಬಂಧ ನ್ಯಾಯಾಲಯ ವಿಚಾರಣೆಯನ್ನು ಕೈಗೊಂಡಿದ್ದು ಸಿವಿಲ್ ಕಾರ್ಯವಿಧಾನದ ಕೋಡ್ ಕಾಯ್ದೆ ಅಡಿ ನೋಟಿಸ್ ಜಾರಿ ಮಾಡಲಾಗಿದೆ. ಕಲರ್ಸ್ ಕನ್ನಡ ವಾಹಿನಿಯ ನಿರ್ಮಾಪಕರು ಹಾಗೂ ಸಂಪಾದಕರಿಗೆ ತುರ್ತು ನೋಟಿಸ್ ನೀಡಲಾಗಿದೆ.

    ಅರ್ಜಿ ವಿಚಾರಣೆ ಅಕ್ಟೋಬರ್ 28 ರಂದು ನಡೆಯಲಿದ್ದು ವಾಹಿನಿಯವರು ಹಾಜರಾಗಬೇಕಿದೆ. ಕಳೆದ ವಾರ ಬಿಗ್ ಬಾಸ್ ಮನೆಯಲ್ಲಿ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆಯಾಗಿದೆ ಎಂದು ಮಹಿಳಾ ಆಯೋಗಕ್ಕೆ ಪತ್ರದ ಮೂಲಕ ದೂರು ವಕೀಲೆ ಒಬ್ಬರು ನೀಡಿದ್ದರು. ಇದೇ ಶೋನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡು ನರಕ-ಸ್ವರ್ಗ ಎಂಬ ಪರಿಕಲ್ಪನೆಯನ್ನು ಅರ್ಧಕ್ಕೆ ನಿಲ್ಲಿಸಿ ಎಲ್ಲಾ ಸ್ಪರ್ಧಿಗಳಿಗೂ ಒಂದೇ ಮನೆಯಲ್ಲಿರಲು ಬಿಗ್ ಬಾಸ್ ಟೀಮ್ ಅವಕಾಶ ಕಲ್ಪಿಸಿಕೊಟ್ಟಿತ್ತು.

    BIG BOSS

    ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ: ಬಿಗ್ ಬಾಸ್ ನಿಂದ ಹೊರಬಂದ ಜಗದೀಶ್ ಫಸ್ಟ್ ರಿಯಾಕ್ಷನ್!

    Published

    on

    ಬೆಂಗಳೂರು: ಬಿಗ್​ಬಾಸ್ ಕನ್ನಡ ಸೀಸನ್ 11ರಿಂದ ಲಾಯರ್ ಜಗದೀಶ್ ಹೊರ ಹಾಕಲ್ಪಟ್ಟಿದ್ದಾರೆ. ಮನೆಯಲ್ಲಿ ಅಶಿಸ್ತು ತೋರಿ, ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ ಕಾರಣ ಜಗದೀಶ್ ಅನ್ನು ಹೊರಗೆ ಹಾಕಲಾಗಿದೆ. ಹೊರಗಡೆ ಬಂದ ಬಳಿಕ ಅವರು, ಸಾಮಾಜಿಕ ಜಾಲತಾಣದ ಮೂಲಕ ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ ಎಂದು ಅವರು ತಿಳಿಸಿದ್ದಾರೆ.

    ನಿಮ್ಮ ಪ್ರತಿ ಒಂದು ಚಪ್ಪಾಳೆ, ಸಂದೇಶ, ನಿಮ್ಮ ಆಶೀರ್ವಾದ ನನ್ನ ಈ ಬಿಗ್​ಬಾಸ್ ಪಯಣ ಯಶಸ್ಸು, ಅದು ನೀವು ಇಟ್ಟ ಈ ನಂಬಿಕೆ. ಮತ್ತೊಮ್ಮೆ ಕೋಟಿ ಕೋಟಿ ನಮನ. ಸಾರ್ಥಕ ಆಯಿತು, ನನ್ನ ಈ ಹುಟ್ಟು, ಈ ಪ್ರೀತಿ, ನನ್ನ ಗೆಲುವಿಗೆ ನೀವು ಕೊಟ್ಟ ಆ ಒಡನಾಟ, ವಿಶ್ಲೇಷಣೆ ಮಾಡಲು ನನ್ನ ಬಳಿ ಪದಗಳು ಕಡಿಮೆ ಎಂದು ತಿಳಿಸಿದ್ದಾರೆ. ನೂರಾರು ಕ್ಯಾಮೆರಾ, ಸಾವಿರಾರು ಬಿಗ್​ಬಾಸ್​ ಸಿಬ್ಬಂದಿ, ಆ ನಿರ್ದೇಶಕ, ಆ ಮಾಂತ್ರಿಕ ತಂತ್ರಜ್ಞರು, ಅವರ 24/7 ಡೆಡಿಕೇಷನ್ ಹಾಗೂ 20 ಕೋಟಿಗೂ ಹೆಚ್ಚಿನ ಬಿಗ್​ಬಾಸ್ ಅಭಿಮಾನಿ ದೇವರುಗಳ ಆಶೀರ್ವಾದ ಈ ಹೊಸ ಕರ್ನಾಟಕ ಕ್ರಶ್ ಲಾಯರ್ ಜಗದೀಶ್ ಆಗಿದ್ದಾನೆ ಎಂದು ಹೇಳಿದ್ದಾರೆ.

    ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ. ರಂಜಿತ್, ಮಾನಸ ಮತ್ತು ಎಲ್ಲರೂ ನನ್ನನ್ನು ಕ್ಷಮಿಸಿ, ನೀವೆಲ್ಲ ತುಂಬಾ ಚಿಕ್ಕ ವಯಸ್ಸಿನಲ್ಲೇ ಅಧ್ಭುತ ಕಲಾವಿದರು, ನಾನು ನಿಮ್ಮ ಜೊತೆಯಲ್ಲಿ ಒಬ್ಬನಾಗಿ ನಗಲು ಪ್ರಯತ್ನ ಪಟ್ಟೆ ಅಷ್ಟೆ, ಈ ನಿಟ್ಟಿನಲ್ಲಿ ಕೆಲವು ತಪ್ಪುಗಳು ನನ್ನಿಂದ ಆಗಿದೆ. ಅದು ನಟನೆ ಅಥವಾ ಮನರಂಜನೆಯ ಒಂದು ಭಾಗವಷ್ಟೆ. ವೈಯಕ್ತಿಕ ದ್ವೇಷ ಯಾವುದೂ ಇಲ್ಲ’ ಎಂದಿದ್ದಾರೆ ಜಗದೀಶ್. ಮಾಧ್ಯಮಗಳನ್ನು ಭೇಟಿ ಆಗಲು ಕಾಯುತ್ತಿದ್ದೇನೆ ಎಂದಿರುವ ಜಗದೀಶ್, ಭಾನುವಾರದಂದು ಜಕ್ಕೂರು ಏರೋಸ್ಪೇಸ್​ ಬಳಿ ಸುದ್ದಿಗೋಷ್ಠಿ ನಡೆಸಲಿದ್ದೇನೆ ಎಂದು ತಿಳಿಸಿದರು.

    Continue Reading

    BIG BOSS

    ಲಾಯರ್​ ಜಗದೀಶ್​ಗೆ ಸೀರೆ ಕೊಡ್ತೀನಿ ಉಟ್ಕೋ ಎಂದ ಮಾನಸ.. ಬೈಗುಳಗಳ ಸುರಿಮಳೆ

    Published

    on

    ಬಿಗ್ ಬಾಸ್ ಸೀಸನ್ 11ರ ಮನೆ ರಣರಂಗವಾಗಿದ್ದು ಕೆಲ ಸ್ಪರ್ಧಿಗಳೆಲ್ಲ ಲಾಯರ್ ಜದೀಶ್ ಮೇಲೆ ಮುಗಿಬೀಳುತ್ತಿದ್ದಾರೆ. ಗಲಾಟೆ ಅತಿರೇಕದ ಎಲ್ಲೆ ಮೀರಿದ್ದು ಯಾವ್ಯಾವ ಪದಗಳನ್ನು ಬಳಕೆ ಮಾಡುತ್ತಾರೆ ಎನ್ನುವುದೇ ಊಹೆ ಮಾಡೋಕೆ ಆಗುತ್ತಿಲ್ಲ. ಅವರು ಆಡಿದ ಕೆಲ ಮಾತುಗಳು ಸಂಘರ್ಷ ಜೊತೆಗೆ ಮಹಿಳೆಯರು, ಪುರುಷರು ಎನ್ನದೇ ಬಳಕೆ ಮಾಡಲಾಗುತ್ತಿದೆ. ವಿಡಿಯೋವೊಂದರಲ್ಲಿ ಜಗದೀಶ್ ಅವರಿಗೆ ಸೀರೆ ಕೊಡುತ್ತೀನಿ ಹುಟ್ಕೋ ಎಂದು ಹೇಳಲಾಗಿದೆ.

    ಬಿಗ್ ಹೌಸ್​ನಲ್ಲಿ ಹೆಣ್ಮುಕ್ಕಳು ಬಗ್ಗೆ ಮಾತನಾಡಿದ್ದಕ್ಕೆ ಗಲಾಟೆ ಆರಂಭ ಆಗಿರುವುದು ವಿಡಿಯೋದಿಂದ ಗೊತ್ತಾಗುತ್ತದೆ. ಇದಕ್ಕೆ ವಾಹಿನಿ ‘ಮನೆ ಮಂದಿ ಮನಸನ್ನು ಕೆಡಿಸ್ತಾ ಜಗದೀಶ್ ಮಾತು?’ ಎಂದು ಟ್ಯಾಗ್​​ಲೈನ್ ಬರೆಯಲಾಗಿದೆ. ವಿಡಿಯೋದಲ್ಲಿ ಗೋಲ್ಡ್ ಸುರೇಶ್ ಮಹಿಳೆಯರ ಬಗ್ಗೆ ಮಾತನಾಡಬೇಡ ಎಂದಿದ್ದಾರೆ. ಇದಕ್ಕೆ ಫುಲ್ ಗರಂ ಆಗಿರುವ ಜಗದೀಶ್ ನಾನು ಮಾತನಾಡುತ್ತೇನೆ, ಏನೋ ಇವಾಗ? ಅಂತ ಪ್ರಶ್ನಿಸಿದ್ದಾರೆ. ಈ ವೇಳೆ ಜಗದೀಶ್ ಮೇಲೆ ಚೈತ್ರಾ, ಮಾನಸ ಸೇರಿ ಕೆಲವು ಮುಗಿಬಿದ್ದಿದ್ದಾರೆ.

    ತಾಕತ್ ಇದ್ದರೇ ಏನ್ ಮಾಡ್ಕೊಂತಿಯಾ ಮಾಡ್ಕೊ ಹೋಗು ಎಂದು ಚೈತ್ರಾಗೆ ಜಗದೀಶ್ ಗದರಿದ್ದಾನೆ. ಕೈಕೈ ಮಿಲಾಯಿಸುವ ಮಟ್ಟಿಗೆ ಎಲ್ಲರು ಗುಂಪಾಗಿ ಜಗಳ ಮಾಡಿದ್ದಾರೆ. ಆಗ ನಿನ್ನಂತವರನ್ನು ಎಷ್ಟು ಜನ ನೋಡಿಲ್ಲ.. ಎಂದು ಜಗದೀಶ್ ಮಾನಸ ನೋಡಿಕೊಂಡು ಹೇಳುತ್ತಾರೆ. ಇದಕ್ಕೆ ಸೀರೆ ಕೊಡ್ತೀನಿ ಉಟ್ಕೋ ಮತ್ತೆ ಎಂದು ಜಗದೀಶ್​ಗೆ ಹೇಳಿದ್ದಾರೆ. ಇದೇ ವೇಳೆ ಹಂಸಾ ಅವರು ಹೆಂಗಸು ಆಗೋಕೆ ಯೋಗ್ಯತೆ ಇಲ್ಲ ಅವನಿಗೆ ಎಂದು ಹೇಳಿದ್ದಾರೆ. ಇದರಿಂದ ಕೋಪಗೊಂಡ ಜಗದೀಶ್ ಗಟ್ಟಿಧ್ವನಿಯಲ್ಲಿ ಮಾನಸಗೆ ಗದರಿದರು. ಇದರಿಂದ ತೀವ್ರ ಕೋಪದಲ್ಲೇ ಬಿಗ್​ಬಾಸ್ ಕ್ಯಾಮೆರಾ​ ಮುಂದೆ ಬಂದ ಹಂಸಾ ಅವರು ಇದಕ್ಕೆ ಏನಾದರೂ ಸಲ್ಯೂಷನ್​​ ಬೇಕೆಬೇಕು ಎಂದು ಕೇಳಿದ್ದಾರೆ.

    Continue Reading

    BIG BOSS

    ಕೊನೆಗೂ ಸುದೀಪ್ ಹೇಳಿದ ಬದಲಾವಣೆಯನ್ನು ಜಾರಿಗೆ ತಂದ ಬಿಗ್ ಬಾಸ್; ಏನದು ?

    Published

    on

    ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಬಳಿಕ ಬಿಗ್ ಬಾಸ್ ತೊರೆಯೋದಾಗಿ ಸುದೀಪ್ ಅವರು ಘೋಷಣೆ ಮಾಡಿದ್ದರು. ಇದು ಅನೇಕರಿಗೆ ಬೇಸರ ಮೂಡಿಸಿತ್ತು. ಸುದೀಪ್ ಅವರು ಈ ರೀತಿ ಏಕಾಏಕಿ ನಿರ್ಧಾರ ತೆಗೆದುಕೊಳ್ಳಲು ಕಾರಣ ಏನು ಎನ್ನುವ ಪ್ರಶ್ನೆ ಅನೇಕರಿಗೆ ಮೂಡಿತ್ತು. ಈ ಬಗ್ಗೆ ಮಾತನಾಡಿದ್ದ ಕನ್ನಡ ಪರ ಹೋರಾಟಗಾರ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ರೂಪೇಶ್ ರಾಜಣ್ಣ ಕೆಲವು ವಿಚಾರಗಳನ್ನು ಹೇಳಿದ್ದರು. ಅಲ್ಲದೆ, ಕಲರ್ಸ್ ವಾಹಿನಿ ಮಾಡಿದ ತಪ್ಪನ್ನು ಸರಿಪಡಿಸಿಕೊಂಡಿದೆ ಎಂದಿದ್ದರು. ಅಷ್ಟೇ ಅಲ್ಲ ಸುದೀಪ್ ಹೇಳಿದ್ದ ಬದಲಾವಣೆಗೆ ಕಲರ್ಸ್ ಕನ್ನಡ ಒಪ್ಪಿದೆ. ಇದು ಎಪಿಸೋಡ್​ನಲ್ಲೇ ಗೊತ್ತಾಗಿದೆ.

    ಬಿಗ್ ಬಾಸ್​ನಲ್ಲಿ ಇಂಗ್ಲಿಷ್ ವಾಕ್ಯಗಳನ್ನು ಹೆಚ್ಚು ಬಳಕೆ ಮಾಡುವಂತಿಲ್ಲ. ಕನ್ನಡವೇ ಬಳಕೆ ಆಗಬೇಕು. ಒಂದೊಮ್ಮೆ ಇಂಗ್ಲಿಷ್ ಬಳಕೆ ಆದರೆ, ‘ಹುಟ್ಟಿದರೇ ಕನ್ನಡ​ ನಾಡಲ್ಲಿ ಹುಟ್ಟಬೇಕು’ ಎನ್ನುವ ಹಾಡನ್ನು ಹಾಕುತ್ತಿದ್ದರು. ಆದರೆ, ಈ ಪದ್ಧತಿ ಇತ್ತೀಚೆಗೆ ಮಾಯ ಆಗಿತ್ತು. ಈಗ ಸುದೀಪ್ ಅವರ ಸೂಚನೆಯನ್ನು ಒಪ್ಪಿದ ಬಳಿಕ ಇದನ್ನು ಮತ್ತೆ ಜಾರಿಗೆ ತರಲಾಗಿದೆ.

    ಇಂಗ್ಲಿಷ್​ನ ಹೆಚ್ಚು ಬಳಕೆ ಮಾಡದಂತೆ ‘ಬಿಗ್ ಬಾಸ್​’ ಅಕ್ಟೋಬರ್ 16ರ ಎಪಿಸೋಡ್​ನಲ್ಲಿ ಎಚ್ಚರಿಕೆ ನೀಡಿದ್ದಾರೆ. ಸುದೀಪ್ ಹೇಳಿದ ಬದಲಾವಣೆಯಲ್ಲಿ ಇದು ಕೂಡ ಇತ್ತು ಎನ್ನಲಾಗಿದೆ. ಈಗ ಸುದೀಪ್ ಕೋರಿಕೆ ಈಡೇರಿದೆ ಎನ್ನಬಹುದು.

    ಈ ಮೊದಲು ಟ್ವೀಟ್ ಮಾಡಿದ್ದ ರಾಜಣ್ಣ, ‘ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಬಿಗ್ ಬಾಸ್ ಆಯೋಜಕರು ಒಪ್ಪಿದ್ದಾರೆ. ತಮಗೂ ಹಾಗೂ ಕನ್ನಡದ ಪರವಾಗಿ ನಿಂತ ಸುದೀಪ್ ಅವರಿಗೆ ಸಮಸ್ತ ಕನ್ನಡಿಗರ ಪರವಾಗಿ ಧನ್ಯವಾದಗಳು. ಬದಲಾವಣೆ ನೀವೇ ನೋಡುವಿರಿ’ ಎಂದಿದ್ದಾರೆ. ಈಗ ಆ ಬದಲಾವಣೆ ಕಾಣಿಸಿದೆ.

    ಮನೆಯಲ್ಲಿ ನಿದ್ದೆ ಮಾಡುವುದು ಎಷ್ಟು ತಪ್ಪೋ ಇಂಗ್ಲಿಷ್ ಪದಗಳನ್ನು ಹೆಚ್ಚು ಬಳಕೆ ಮಾಡೋದು ಕೂಡ ತಪ್ಪೇ. ಅದನ್ನು ಮೀರಿದರೆ ಶಿಕ್ಷೆ ಖಚಿತ. ಸದ್ಯ ಬಿಗ್ ಬಾಸ್ ಮನೆಯಿಂದ ರಂಜಿತ್ ಹಾಗೂ ಜಗದೀಶ್ ಎಲಿಮಿನೇಟ್ ಆಗಿದ್ದಾರೆ ಎನ್ನಲಾಗುತ್ತಿದೆ.

    Continue Reading

    LATEST NEWS

    Trending