FILM
ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡ ಬಿಗ್ಬಾಸ್ ವಿನ್ನರ್ ಮಂಜು ಪಾವಗಡ
ಮಂಜು ಪಾವಗಡ ಯಾರಿಗೇ ತಾನೇ ಗೊತ್ತಿಲ್ಲ ಹೇಳಿ. ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಮಂಜು ಪಾವಗಡ ಚಿರಪರಿಚಿತ. ಮಜಾ ಭಾರತ, ಗಿಚ್ಚಿ ಗಿಲಿಗಿಲಿ, ಬಿಗ್ಬಾಸ್ ಮೂಲಕ ಎಲ್ಲರ ಮನೆಮಾತಾಗಿರೋ ನಟ ಮಂಜು ಪಾವಗಡ ಅವರು ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಹೌದು, ಬಿಗ್ಬಾಸ್ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿಕೊಂಡ ಹಾಸ್ಯ ನಟ ಮಂಜು ಪಾವಗಡ ಸದ್ಯ ಜಂಟಿಯಾಗಿದ್ದಾರೆ. ಸದ್ಯ ಪಾವಗಡದಲ್ಲಿ ಮಂಜು ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮುಂದಿನ ನವೆಂಬರ್ನಲ್ಲಿ ಸಪ್ತಪದಿ ತುಳಿಯಲಿದ್ದಾರೆ. ಸದ್ಯ ಮಂಜು ಪಾವಗಡ ಅವರು ಕೈ ಹಿಡಿದ ಹುಡುಗಿ ಯಾರು ಅಂತ ಮಾಹಿತಿ ಸಿಕ್ಕಿಲ್ಲ. ಮಂಜು ಪಾವಗಡ ಅವರು ನಿಶ್ಚಿತಾರ್ಥ ಮಾಡಿಕೊಂಡಿರುವ ಫೋಟೋಗಳು ನ್ಯೂಸ್ ಫಸ್ಟ್ಗೆ ಲಭ್ಯವಾಗಿವೆ.
ಇನ್ನು, ಮೊನ್ನೆಯಷ್ಟೇ ಮಂಜು ಪಾವಗಡ ಅವರು ಬೆಂಗಳೂರಿನಲ್ಲಿಯೇ ತಮ್ಮ ಹೊಸ ಮನೆಗೆ ಪ್ರವೇಶ ಮಾಡಿದ್ದರು. ಹೊಸ ಮನೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದವು. ಇನ್ನು ಮಂಜು ಪಾವಗಡ ಅವರ ಹೊಸ ಮನೆಗೆ ನಟ ರಾಜೀವ್, ಅಂಕಿತಾ ಜಯರಾಮ್ ಸೇರಿದಂತೆ ಮುಂತಾದವರು ಆಗಮಿಸಿ ಶುಭ ಹಾರೈಸಿದ್ದರು.
BIG BOSS
ಮಹಿಳೆಯರ ಒಳ ಉಡುಪಿನ ಬಗ್ಗೆ ಲಾಯರ್ ಜಗದೀಶ್ ಮಾತು.. ಏನಿದು ವಿವಾದ?
ಲಾಯರ್ ಜಗದೀಶ್ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಸದ್ಯ ಮಹಿಳೆಯರ ಒಳಉಡುಪಿನ ಬಗ್ಗೆ ಮಾತನಾಡಿ ವಿವಾದ ಸೃಷ್ಟಿ ಮಾಡಿದ್ದಾರೆ. ಈ ವಿಚಾರದ ಬಗ್ಗೆ ಸಖತ್ ಚರ್ಚೆ ಆಗುತ್ತಿದೆ.
ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕೆ ಅವಕಾಶ ನೀಡಲಾಗಿತ್ತು. ಇದರಲ್ಲಿ ಸ್ವರ್ಗ ನಿವಾಸಿಗಳು ಮಾತ್ರ ಭಾಗಿ ಆಗಲು ಅವಕಾಶ ಇತ್ತು. 10 ಮಂದಿಯಲ್ಲಿ ಆರು ಜನರು ಮಾತ್ರ ಕ್ಯಾಪ್ಟನ್ಸಿ ಟಾಸ್ಕಲ್ಲಿ ಇರಬಹುದು ಎಂದು ಬಿಗ್ ಬಾಸ್ ಆದೇಶ ಕೊಟ್ಟರು. ಇಷ್ಟೇ ಅಲ್ಲ, ಆರು ಮಂದಿಯನ್ನು ಸ್ವರ್ಗ ನಿವಾಸಿಗಳ ಒಮ್ಮತದ ನಿರ್ಧಾರದಿಂದ ಆಯ್ಕೆ ಮಾಡಬೇಕು ಎಂದು ಬಿಗ್ ಬಾಸ್ ಆದೇಶ ನೀಡಿದರು.
ವೋಟಿಂಗ್ ಆಧಾರದ ಮೇಲೆ ಸ್ಪರ್ಧಿಗಳನ್ನು ಆಯ್ಕೆ ಮಾಡೋಣ ಎನ್ನುವ ನಿರ್ಧಾರಕ್ಕೆ ಎಲ್ಲರೂ ಬಂದರು. ಇದು ಜಗದೀಶ್ ಅವರ ಕೋಪಕ್ಕೆ ಕಾರಣ ಆಯಿತು. ಅವರು ನೇರವಾಗಿ ಸ್ಪರ್ಧಿಗಳ ವಿರುದ್ಧ ಹರಿಹಾಯ್ದರು. ಅದರಲ್ಲೂ ಈ ಐಡಿಯಾ ನೀಡಿದ ಉಗ್ರಂ ಮಂಜು ವಿರುದ್ಧ ಸಿಡಿದೆದ್ದರು. ಮಾತು ಮಿತಿ ಮೀರುತ್ತಿತ್ತು. ‘ನೀನು ಸಿನಿಮಾದಲ್ಲಿ ಮಾತ್ರ ಉಗ್ರಂ ನಿಜ ಜೀವನದಲ್ಲಿ ನಾನು ನಿನಗೆ ಉಗ್ರಂ ತೋರಿಸುತ್ತೇನೆ’ ಎಂದು ಜಗದೀಶ್ ಹೇಳಲು ಆರಂಭಿಸಿದರು.
ಇದಕ್ಕೆ ಮಂಜು ಹೆಚ್ಚಿನ ಉತ್ತರ ಕೊಡೋಕೆ ಹೋಗಿಲ್ಲ.’ಬೋ..’ `ಬೋ..’ ಎಂದಷ್ಟೇ ಹೇಳಿದರು.’ಬೋ ಪ್ಯಾಂಟೀಸ್ ಎಲ್ಲ ನೋಡಿದೀನಿ.ನನ್ನ ಹೆಂಡತಿ ಹಾಕೋದು ಇದನ್ನೇ’ ಎಂದು ಜಗದೀಶ್ ಹೇಳಿದ್ದಾರೆ. ಇದು ಮನೆಯವರ ಅಸಮಾಧಾನಕ್ಕೆ ಕಾರಣ ಆಗಿದೆ. ಈ ವೇಳೆ ನಿಜವಗಾಲೂ ಇನ್ಸ್ಕ್ಯೂರ್ ಫೀಲ್ ಆಗ್ತಿದೆ ಎಂದು ಭವ್ಯಾ ಗೌಡ ಹೇಳಿದ್ದಾರೆ.
BIG BOSS
BBK11: ಧನರಾಜ್ ಆಚಾರ್ಯ ಡೈಲಾಗ್ಗೆ ಬಿಗ್ಬಾಸ್ ಮನೆಮಂದಿ ಫುಲ್ ಖುಷ್
ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಗ್ರ್ಯಾಂಡ್ ಆಗಿ ಓಪನಿಂಗ್ ಪಡೆದುಕೊಂಡು 5ನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಬಿಗ್ಬಾಸ್ ಮನೆಯಲ್ಲಿ ಸ್ಪರ್ಧಿಗಳು ಹೊಂದಿಕೊಳ್ಳಲು ಕಷ್ಟ ಪಡುತ್ತಿದ್ದಾರೆ.
ಬಿಗ್ಬಾಸ್ ಮನೆಗೆ ಬಂದ ಮೊದಲ ದಿನವೇ ಜಗಳ ಮಾಡಿಕೊಂಡಿದ್ದಾರೆ. ಕಳೆದ ಸೀಸನ್ನಲ್ಲಿ ನಡೆದ ಗಲಾಟೆ ರೀತಿಯಲ್ಲೇ ಬಿಗ್ಬಾಸ್ ಸ್ಪರ್ಧಿಗಳು ಆಡುತ್ತಿದ್ದಾರೆ. ಸಣ್ಣ ಪುಟ್ಟ ವಿಚಾರಕ್ಕೆ ಜಗಳ ವಾದ ವಿವಾದ ಮಾಡಿಕೊಳ್ಳುತ್ತಿದ್ದಾರೆ.
ಆದರೆ ಇದರ ಮಧ್ಯೆ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಧನರಾಜ್ ಆಚಾರ್ಯ ಗೋಲ್ಡನ್ ಸ್ಟಾರ್ ಗಣೇಶ್ ಅವರ ಡೈಲಾಂಗ್ ಅನ್ನು ಹೇಳಿ ಎಲ್ಲಾ ಸ್ಪರ್ಧಿಗಳ ಮನಸ್ಸನ್ನು ಗೆದ್ದುಕೊಂಡಿದ್ದಾರೆ. ಹೌದು, ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟ ಬಳಿಕ ಧನರಾಜ್ ಆಚಾರ್ಯ ಕೊಂಚ ಡಲ್ ಆಗಿದ್ದರು. ಬಳಿಕ ಬಿಗ್ಬಾಸ್ ಧೈರ್ಯ ತುಂಬಿದ ಬಳಿಕ ಧನರಾಜ್ ಅವರು ಮತ್ತೆ ಟ್ರಾಕ್ಗೆ ಬಂದಿದ್ದಾರೆ.
ಈ ಬಾರಿಯ ಬಿಗ್ಬಾಸ್ ಮನೆಯಲ್ಲಿ ನಗುವೆ ಇಲ್ಲದಂತೆ ಆಗಿಬಿಟ್ಟಿದೆ. ಏಕೆಂದರೆ ಒಂದೇ ವಾರಕ್ಕೆ ಬಿಗ್ಬಾಸ್ ಮನೆಯಲ್ಲಿ ಗಲಾಟೆ, ಮನಸ್ಥಾಪ ಹೀಗೆ ಸಾಕಷ್ಟು ವಿಚಾರಗಳಿಂದ ಸ್ಪರ್ಧಿಗಳು ಬೇಸರ ಆಗಿದ್ದರು. ಇದೀಗ ಧನರಾಜ್ ಅವರ ಕಾಮಿಡಿಗೆ ಸ್ಪರ್ಧಿಗಳು ಬಿದ್ದು ಬಿದ್ದು ನಕ್ಕಿದ್ದಾರೆ. ಮುಂಗಾರು ಮಳೆ ಸಿನಿಮಾ ಗೋಲ್ಡನ್ ಸ್ಟಾರ್ ಗಣೇಶ್ ಅವರ ಫೇಮಸ್ ಡೈಲಾಗ್ ಅನ್ನು ಬಿಗ್ಬಾಸ್ ಮನೆಯಲ್ಲಿ ರೀಕ್ರಿಯೇಟ್ ಮಾಡಿದ್ದಾರೆ.
FILM
ತೆಲುಗಿನ ಖ್ಯಾತ ಹಾಸ್ಯ ನಟನ ಮಗಳು ಹೃದಯಾಘಾತದಿಂದ ನಿಧನ
ಮಂಗಳೂರು: ತೆಲುಗಿನ ಜನಪ್ರಿಯ ಹಾಸ್ಯನಟ ರಾಜೇಂದ್ರ ಪ್ರಸಾದ್ ಮಗಳು ಗಾಯತ್ರಿ (38) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶುಕ್ರವಾರ (ಅಕ್ಟೋಬರ್ 4) ಹೃದಯಾಘಾತ ಆಗಿದ್ದು, ಕುಟುಂಬಸ್ಥರು ಹೈದರಾಬಾದ್ನ ಎಐಜಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯತ್ರಿ ಇಂದು (ಅಕ್ಟೋಬರ್ 5) ಮೃತಪಟ್ಟಿದ್ದಾರೆ.
ಈ ಹಿಂದೆ ರಾಜೇಂದ್ರ ಪ್ರಸಾದ್ ‘ಬೇವಾರ್ಸ್’ ಸಿನಿಮಾದ ಪ್ರೀ ರಿಲೀಸ್ ಸಮಾರಂಭದಲ್ಲಿ ಮಗಳ ಬಗ್ಗೆ ಮಾತನಾಡಿದ್ದರು. ‘ಈ ಸಿನಿಮಾದಲ್ಲಿ ಅಮ್ಮನ ಮೇಲೆ ಒಂದು ಹಾಡು ಇದೆ. ತಾಯಿ ಇಲ್ಲದವನು ತನ್ನ ಮಗಳಲ್ಲಿ ತಾಯಿಯನ್ನು ಕಾಣುತ್ತಾನೆ. ನಾನು ಹತ್ತು ವರ್ಷದವನಿದ್ದಾಗ ನನ್ನ ತಾಯಿಯನ್ನು ಕಳೆದುಕೊಂಡೆ. ನನ್ನ ಮಗಳಲ್ಲಿ ಅಮ್ಮನನ್ನು ಕಂಡೆ. ಈ ಸಿನಿಮಾದ ಬಳಿಕ ಮಗಳನ್ನು ಮನೆಗೆ ಕರೆದು ಅಮ್ಮ ಹಾಡನ್ನು ನಾಲ್ಕು ಬಾರಿ ಕೇಳಿದ್ದೇನೆ’ ಎಂದರು ರಾಜೇಂದ್ರ ಪ್ರಸಾದ್ ಹೇಳಿದ್ದರು.
ಮಗಳಿಗೆ ಹೃದಯಘಾತವಾದಾಗ ರಾಜೇಂದ್ರ ಪ್ರಸಾದ್ ಶೂಟಿಂಗ್ನಲ್ಲಿ ಬ್ಯುಸಿ ಇದ್ದರು. ವಿಚಾರ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಬಂದಿದ್ದಾರೆ. ವೈದ್ಯರು ತಮ್ಮ ಕೈಲಾದ ಪ್ರಯತ್ನ ಮಾಡಿದರೂ ಬದುಕುಳಿಸಲು ಸಾಧ್ಯವಾಗಲೇ ಇಲ್ಲ. ಇಂದು (ಅಕ್ಟೋಬರ್ 5) ಅಂತಿಮ ಸಂಸ್ಕಾರ ನಡೆಯಲಿದೆ.
- BIG BOSS5 days ago
BBK11 ವೇದಿಕೆಗೆ ಬರುತ್ತಿದ್ದಂತೆ ರೀಲ್ಸ್ ಸ್ಟಾರ್ ಮೇಲೆ ಕೋಪಗೊಂಡ ಕಿಚ್ಚ: ಇಂತವರನ್ನ ಏಕೆ ಕರೆಸಿದ್ರಿ ಎಂದು ಗರಂ?
- BIG BOSS5 days ago
ಭ್ರಷ್ಟರ ವಿರುದ್ಧ ಗುಡುಗಿದ ಸ್ಪರ್ಧಿ ಲಾಯರ್ ಜಗದೀಶ್ಗೆ ಕಿಚ್ಚ ವಾರ್ನಿಂಗ್..!
- LATEST NEWS4 days ago
Watch Video: ಕೋಚಿಂಗ್ ಸೆಂಟರ್ನಲ್ಲಿ ವಿದ್ಯಾರ್ಥಿನಿಯೊಂದಿಗೆ ಬಯಾಲಜಿ ಶಿಕ್ಷಕನ ರೊಮ್ಯಾನ್ಸ್
- BIG BOSS5 days ago
ಚೈತ್ರಾ ಕುಂದಾಪುರಗೆ ಮೊದಲ ದಿನವೇ ಹೊಸ ಬಿರುದು ಕೊಟ್ಟ ಲಾಯರ್ ಜಗದೀಶ್