bangalore
ಮುರಿದು ಬಿದ್ದ ಮೈಖಲ್ – ಇಶಾನಿ ಲವ್ ಸ್ಟೋರಿ…
ಮೈಖಲ್ ಮತ್ತು ಇಶಾನಿ ಇಬ್ಬರ ಲವ್ ಸ್ಟೋರಿ ಬ್ರೇಕಪ್ ಹಂತಕ್ಕೆ ಬಂದು ನಿಂತಿದೆ.
ಬೆಂಗಳೂರು : ಮೈಖಲ್ ಮತ್ತು ಇಶಾನಿ ಇಬ್ಬರ ಲವ್ ಸ್ಟೋರಿ ಬ್ರೇಕಪ್ ಹಂತಕ್ಕೆ ಬಂದು ನಿಂತಿದೆ. ನಿನ್ನೆಯ ಎಪಿಸೋಡ್ ನಲ್ಲಿ ಮೈಖಲ್ ಹಾಗೂ ಇಶಾನಿ ನಡುವೆ ಜೋರು ಜಗಳ ನಡೆದಿದ್ದು, ನನ್ನ ಅವನ ನಡುವೆ ಇನ್ನೇನಿಲ್ಲ ಎಂಬ ಸ್ಟೇಟ್ ಮೆಂಟನ್ನು ಇಶಾನಿ ನೀಡಿದ್ದಾಳೆ.
ಇಶಾನಿ-ಮೈಖಲ್ ಮಾತ್ರ ತಮ್ಮನ್ನು ತಾವು ಪ್ರೇಮಿಗಳೆಂದು ಬಿಗ್ಬಾಸ್ ಮನೆಯಲ್ಲಿ ಅಫೀಶಿಯಲ್ ಆಗಿ ಘೋಷಿಸಿಕೊಂಡಿದ್ರು.
ಬಾಕಿ ಉಳಿದ ಕಾರ್ತಿಕ್- ಸಂಗೀತ, ಹಾಗೂ ಸ್ನೇಹಿತ್-ನಮ್ರತಾ ಎರಡೂ ಜೋಡಿ ಸ್ನೇಹಿತರು ಎಂದು ಹೇಳಿಕೊಂಡ್ರೆ ಇಶಾನಿ-ಮೈಖಲ್ ಓಪನ್ ಆಗಿಯೇ ಲವ್ವರ್ಸ್ ಎಂದು ಹೇಳಿಕೊಂಡಿದ್ರು.
ಆದ್ರೆ ಈ ಜೋಡಿ ನಡುವೆ ಈಗ ಬ್ರೇಕಪ್ ಆಗಿರೋ ಎಲ್ಲಾ ಲಕ್ಷಣಗಳು ಕಾಣ್ತಿದೆ.
ಸದ್ಯ ಟಾಸ್ಕ್ಗಳೆಲ್ಲ ಮುಗಿದು, ವಿನಯ್ ತಂಡ ಗೆದ್ದಿದೆ. ವಿನಯ್ ಕ್ಯಾಪ್ಟನ್ ಆಗಿದ್ದಾರೆ.
ಸಂಗೀತಾಳ ಕೈಗೊಂಬೆ ಆಗಿದ್ದೀಯಾ ನೀನು ಅಂತ ಕಾರ್ತಿಕ್ ಬಗ್ಗೆ ಕಮೆಂಟ್ ಮಾಡಿದ ಇಶಾನಿಗೆ ಕಾರ್ತಿಕ್ ನೇರ ಉತ್ತರ ಕೊಡ್ತಾರೆ.
ಸಂಗೀತಾ ನನ್ನ ಸ್ನೇಹಿತೆ. ನಾನು ಅವಳಿಗೆ ಸಪೋರ್ಟ್ ಮಾಡ್ತೀನಿ ಎಂದ್ರು.
ಬಳಿಕ ಒಬ್ಬಳೇ ನಿಂತು ನಿನ್ನ ಕೈಯಲ್ಲಿ ಆಡಿ ಗೆಲ್ಲೋಕಾಗಲ್ಲ ಅಂತ ಗೋಡೆಯ ಹಿಂದೆ ಅವಿತುಕೊಂಡಿದ್ದೀಯ.
ಈಗಲೂ ಹೇಳ್ತೀನಿ ಒಬ್ಬಳೇ ನಿಂತು ಆಡಿ ಗೆಲ್ಲುವ ತಾಕತ್ತು ನಿನಗೆ ಇಲ್ಲ ಅಂತ ಹೇಳ್ತಾರೆ.
ಇದಕ್ಕೆ ಟ್ರಿಗರ್ ಆದ ಇಶಾನಿ “ಮಹಿಳೆಯರಿಗೆ ಆಡಿ ಗೆಲ್ಲುವ ತಾಕತ್ತು ಇಲ್ಲ ಎಂಬುವುದಾಗಿ ಅರ್ಥೈಸಿಕೊಂಡು ಜಗಳ ಶುರು ಮಾಡ್ತಾರೆ.
ಆಗ ಮೈಖಲ್ “ಕಾರ್ತಿಕ್ ಮಹಿಳೆಯರಿಗೆ ಗೆಲ್ಲುವ ತಾಕತ್ತು ಇಲ್ಲ ಎಂದು ಹೇಳಲಿಲ್ಲ, ಬದಲಿಗೆ ನಿನಗೆ ವೈಯಕ್ತಿಕವಾಗಿ ಗೆಲ್ಲುವ ತಾಕತ್ತು ಇಲ್ಲ ಅಂತ ಸತ್ಯದ ಪರ ನಿಲ್ತಾರೆ.
ಇದರಿಂದ ಇನ್ನಷ್ಟು ಕೆರಳಿದ ಇಶಾನಿ “ನೀನು ಒಬ್ಬ ಬಾಯ್ಫ್ರೆಂಡಾ ಥೂ ಅಂತ ಹೇಳಿ ಹೋಗ್ತಾರೆ.
ಕೊನೆಗೂ ಸುಮ್ಮನಾಗದ ಇಶಾನಿಯನ್ನು ಕಂಡು ಮೈಖಲ್ “ಸೈಕೋ” ಅಂತ ಹೋಗ್ತಾರೆ.
ಮುಗೀತು.. ನನಗೆ ಅವನು ಬೇಡ ಎಂದು ಇಶಾನಿ ಹೇಳ್ತಾರೆ. ಮುಂದೆ ಏನಾಗುತ್ತೋ ಅನ್ನೋದನ್ನ ಇಂದಿನ ಎಪಿಸೋಡ್ ನಲ್ಲಿ ಕಾದು ನೋಡ್ಬೇಕಷ್ಟೆ.
ಇಂದು ಇಚ್ಚನ ಪಂಚಾಯಿತಿ ಬೇರೆ ನಡೆಯುತ್ತೆ. ಸೋ ಎಲ್ಲರೂ ಕಾತುರತೆಯಿಂದ ಕಾಯ್ತಿದ್ದಾರೆ.
bangalore
ಬೆಂಗಳೂರು ನಮ್ಮ ಮೆಟ್ರೋದಲ್ಲಿ ಕಪಲ್ ‘ರೊಮ್ಯಾನ್ಸ್..’! ಪ್ರಿಯತಮಗೆ ಚುಂಬಿಸಿದ ಯುವತಿ.!!ವೀಡಿಯೋ ವೈರಲ್
ಬೆಂಗಳೂರು: ಅಗಾಗ ದೆಹಲಿ ಮೆಟ್ರೋದಲ್ಲಿ ಪ್ರೇಮಿಗಳ ಆಲಿಂಗನದ ವೀಡಿಯೋ ವೈರಲ್ ಆಗುತ್ತಲೇ ಇದೆ. ಇದೀಗ ಬೆಂಗಳೂರಿನಲ್ಲಿಯೂ ಇಂಥದ್ದೇ ಒಂದು ಘಟನೆ ಮರುಕಳಿಸಿದೆ. ಕಪಲ್ಸ್ ಇಬ್ಬರು ಒಬ್ಬರನೊಬ್ಬರು ತಬ್ಬಿಕೊಂಡು ರೊಮ್ಯಾನ್ಸ್ ಮಾಡುತ್ತಿರುವ ವೀಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಬೆಂಗಳೂರು ನಮ್ಮ ಮೆಟ್ರೋದ ಬಾಗಿಲಿನ ಬಳಿ ಯುವತಿ-ಯವಕರಿಬ್ಬರೂ ನಿಂತುಕೊಂಡಿದ್ದು ಒಬ್ಬರನೊಬ್ಬರು ತಬ್ಬಿಕೊಂಡಿದ್ದಾರೆ. ಯುವತಿ ಯುವಕನ ಕೆನ್ನೆಗೆ ಮುತ್ತು ನೀಡಿದ್ದಾಳೆ. ಈ ದೃಶ್ಯವನ್ನು ಮೆಟ್ರೋದಲ್ಲಿದ್ದ ಪ್ರಯಾಣಿಕರೋರ್ವರ ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ.
ಈ ವಿಡಿಯೋವನ್ನು KPSB 52 ಎಂಬ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು ‘ನಮ್ಮ ಮೆಟ್ರೋದಲ್ಲಿ ಇದೇನು ಅಸಭ್ಯವರ್ತನೆ’ ಎಂದು ಪ್ರಶ್ನಿಸಿದ್ದಾರೆ. ಇನ್ನು ಮೆಟ್ರೋದಲ್ಲಿದ್ದ ಇತರ ಪ್ರಯಾಣಿಕರು ಈ ಜೋಡಿಯ ರೋಮ್ಯಾನ್ಸ್ನಿಂದಾಗಿ ಮುಜುಗರಕ್ಕೊಳಗಾಗಿದ್ದಾರೆ.
Read More..; 15 ಸಾವಿರ ಸಂಬಳ..! ಮನೆಯಲ್ಲಿ ಕಂತೆ ಕಂತೆ ನೋಟು..! ED ಅಧಿಕಾರಿಗಳೇ ಶಾಕ್..!
ದೆಹಲಿಯಲ್ಲೂ ನಡೆದಿತ್ತು ಈ ಘಟನೆ:
ಈ ಹಿಂದೆ ದೆಹಲಿಯ ಮೆಟ್ರೋ ಸ್ಟೇಷನ್ ನಲ್ಲಿ ದಂಪಂತಿ ರೊಮ್ಯಾನ್ಸ್ ಮಾಡುತ್ತಿದ್ದ ವೀಡಿಯೋ ವೈರಲ್ ಆಗಿತ್ತು. ದಂಪತಿ ಮೈಮರೆತು ರೋಮ್ಯಾನ್ಸ್ ಮಾಡಿಕೊಂಡು ತಮ್ಮದೇ ಲೋಕದಲ್ಲಿ ಮುಳುಗಿ ಹೋಗಿದ್ದರು. ಅಲ್ಲದೇ ಇಬ್ಬರೂ ಲಿಪ್ಲಾಕ್ ಕೂಡಾ ಮಾಡಿದ್ದಾರೆ. ದಂಪತಿಯ ಸರಸಸಲ್ಲಾಪವನ್ನು ಅಲ್ಲೇ ಇದ್ದ ವ್ಯಕ್ತಿಯೊಬ್ಬ ವೀಡಿಯೋ ಮಾಡಿದ್ದಾನೆ. ಇನ್ನು ದೆಹಲಿಯಲ್ಲಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದು ಜನರನ್ನು ಮುಜುಗರಕ್ಕೆ ಒಳಪಡಿಸುತ್ತಿದೆ. ಈ ಬಗ್ಗೆ ಮೆಟ್ರೋ ಆಡಳಿತ ಮಂಡಳಿ ಸಾರ್ವಜನಿಕರಿಗೆ ಸೂಚನೆ ನೀಡಿದ್ದರೂ ಜನರು ಮಾತ್ರ ಕ್ಯಾರೇ ಅನ್ನುತ್ತಿಲ್ಲ.
bangalore
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಳೆಯಾಗಲಿದೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು : ಬಿಸಿಲಿನ ಉರಿಗೆ ಜನರು ಬೆಂದು ಹೋಗಿದ್ದಾರೆ. ವರುಣ ಕೃಪೆ ತೋರಯ್ಯ ಎಂದು ಬೇಡಿಕೊಳ್ಳುತ್ತಿದ್ದಾರೆ. ಈ ನಡುವೆ ಅಲ್ಲಲ್ಲಿ ಮಳೆಯಾಗಿದ್ರೂ ಸೂರ್ಯ ತಾಪವೇನೂ ಕಮ್ಮಿಯಾಗಿಲ್ಲ. ಇದೀಗ 8 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ ?
ರಾಜ್ಯದ ಜನತೆ ಮಳೆರಾಯನಿಗಾಗಿ ಕಾಯುತ್ತಿದ್ದಾರೆ. ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಶುಭ ಸುದ್ದಿ ನೀಡಿದೆ. ಏಪ್ರಿಲ್ 24ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಮೈಸೂರು, ಕೊಡಗು, ಹಾಸನ ಸೇರಿ 8 ಜಿಲ್ಲೆಗಳಲ್ಲಿ ಕೆಲವೆಡೆ ಮಳೆ ಬೀಳಬಹುದು ಎಂದು ಹೇಳಿದೆ.
ತಾಪಮಾನ ಹೆಚ್ಚಳ :
ಭಾರತೀಯ ಹವಾಮಾನ ಇಲಾಖೆ ದೇಶದ ಹಲವು ಭಾಗಗಳಲ್ಲಿ ಬಿಸಿಲಿನ ತಾಪ ತೀವ್ರವಾಗಲಿದೆ ಎಂದು ಕೂಡ ಮಾಹಿತಿ ನಡಿದೆ. ಅದರಲ್ಲೂ ಪೂರ್ವ ಮತ್ತು ದಕ್ಷಿಣ ಭಾರತದ ಹೆಚ್ಚಿನ ಭಾಗಗಳಲ್ಲಿ ಶಾಖದ ಅಲೆಗಳು ಹೆಚ್ಚಲಿವೆ ಎಂದಿದೆ. ಏಪ್ರಿಲ್ 25 ರ ವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಏಪ್ರಿಲ್ 27 ರ ವರೆಗೆ ಈ ಪ್ರದೇಶಗಳಲ್ಲಿ ಉಷ್ಣಾಂಶ 2 ರಿಂದ 2 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ : ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಏಪ್ರಿಲ್ 6 ರಂದು ರಾಜಧಾನಿಯಲ್ಲಿ ಗರಿಷ್ಠ 37.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಎಂಟು ವರ್ಷಗಳಲ್ಲಿ ಅತಿ ಹೆಚ್ಚು ಎಂದು ವರದಿಯಾಗಿದೆ.
ಮುಂದಿನವಾರ ನಗರದಲ್ಲಿ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
bangalore
ಮಹಿಳೆಯ ಅತಿಯಾದ ಕಾಮದಾಹ…! ದಾಹಕ್ಕೆ ಅಂತ್ಯ ಹಾಡಿದ ಯುವಕ..!
ಬೆಂಗಳೂರು : ಆಕೆ 48 ವರ್ಷ ಪ್ರಾಯದ ಮಹಿಳೆಯಾಗಿದ್ದು, ತನ್ನಿಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿ ಗಂಡನ ಮನೆಗೆ ಕಳುಹಿಸಿ ಕೊಟ್ಟಿದ್ದಾಳೆ. ಬೆಂಗಳೂರಿನ ಕೊಡಿಗೆ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿದ್ದ ಆಕೆಯ ದೇಹ ನಗ್ನವಾಗಿ ಬೆಡ್ರೂಮಿನಲ್ಲಿ ಪತ್ತೆಯಾಗಿತ್ತು. ಎಪ್ರಿಲ್ 19 ರಂದು ನಡೆದಿದ್ದ ಈ ಘಟನೆಯನ್ನು ಭೇದಿಸಿದ ಪೊಲೀಸರಿಗೆ ಶಾಕ್ ಆಗುವಂತ ವಿಚಾರಗಳು ಗೊತ್ತಾಗಿದೆ.
ಕೊಡಿಗೆ ಹಳ್ಳಿಯ ಭದ್ರಪ್ಪ ಲೇಔಟ್ನಲ್ಲಿ ನಡೆದಿದ್ದ ಶೋಭಾ ಎಂಬ ಮಹಿಳೆಯ ಕೊ*ಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಕೊಲೆ ಆರೋಪಿಯಾಗಿರುವ ನವೀನ್ ಎಂಬ ಯುವಕನನ್ನು ಕೊಡಿಗೆ ಹಳ್ಳಿಯ ಪೊಲೀಸರು ಬಂದಿಸಿದ್ದಾರೆ. ವಿಚಾರಣೆ ವೇಳೆ ಬಾಯ್ಬಿಟ್ಟ ವಿಚಾರ ಕೇಳಿ ಪೊಲೀಸರೇ ಸುಸ್ತಾಗಿದ್ದಾರೆ. ಬಳಿಕ ಹೆಚ್ಚಿನ ತನಿಖೆ ನಡೆಸಿದ ಪೊಲೀಸರಿಗೆ ಶೋಭಾಳ ಕಾಮದಾಹ ಬೆಳಕಿಗೆ ಬಂದಿದೆ.
ಇದನ್ನೂ ಓದಿ ಗಂಡ-ಹೆಂಡತಿ ಬೇರೆ ಬೇರೆ ಮಲಗಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?
ಶೋಭಾಳಿಗೆ ಇನ್ಸ್ಟಾಗ್ರಾಂ ಮೂಲಕ ಪರಿಚಿತನಾಗಿದ್ದ ನವೀನ್ ಬಳಿಕ ಸ್ನೇಹಿತನಾಗಿ, ಅದು ಪ್ರೀತಿಗೆ ತಿರುಗಿ ಬಳಿಕ ಇಬ್ಬರ ನಡುವೆ ಅನೈತಿಕ ಸಂಬಂಧದವರೆಗೂ ಬಂದು ನಿಂತಿತ್ತು. ಮಗನ ವಯಸ್ಸಿನ ಹುಡುಗನ ಜೊತೆಯಲ್ಲಿ ನಿರಂತರ ಸೆಕ್ಸ್ ಮಾಡುತ್ತಿದ್ದ ಶೋಭಾಳ ಅತಿಯಾದ ಕಾಮಧಾಹದಿಂದ ಬೇಸತ್ತು ಆಕೆಯನ್ನು ಕೊಲೆ ಮಾಡಿದ್ದಾಗಿ ಹೇರೋಹಳ್ಳಿ ಮೂಲದ ಆರೋಪಿ ನವೀನ್ ಹೇಳಿಕೆ ನೀಡಿದ್ದಾನೆ.
ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್ಗೆ ಸೆಕ್ಸ್ಗೆ ಒತ್ತಾಯಿಸಿದ್ದು ನಿರಾಕರಿಸಿದಾಗ ಬ್ಲ್ಯಾಕ್ಮೇಲ್ ಮಾಡಿದ್ದಾಳೆ. ಈಕೆ ಅತಿಯಾಗಿ ಸೆಕ್ಸ್ಗೆ ಒತ್ತಾಯಿಸಿದ್ದಕ್ಕೆ ಬೇಸರಗೊಂಡ ನವೀನ್ ಬೆಡ್ ರೂಮಿನಲ್ಲೇ ಆಕೆಯ ಕಥೆ ಮುಗಿಸಿದ್ದ.
48ರ ಮಹಿಳೆಗೆ ಯುವಕರ ಮೇಲೆ ಹುಚ್ಚು
48ರ ಶೋಭಾ ಕೇವಲ ನವೀನ್ ಮಾತ್ರವಲ್ಲದೇ ಅನೇಕ ಯುವಕರ ಸಹವಾಸ ಬೆಳೆಸಿದ್ದಳು. ಒಬ್ಬೊಬ್ಬ ಹುಡುಗರಿಗೂ ಒಂದೊಂದು ಹಣ್ಣಿನ ಹೆಸರಿಟ್ಟಿದ್ದು, ನವೀನ್ಗೆ ಆ್ಯಪಲ್ ಎಂದು ಹೆಸರಿಟ್ಟಿದ್ದಳಂತೆ. ಆ್ಯಪಲ್, ಆರೆಂಜ್, ಬನಾನ ಹೆಸರಿನಲ್ಲಿ ಹುಡುಗರ ಹೆಸರು ಸೇವ್ ಮಾಡಿಕೊಳ್ಳುತ್ತಿದ್ದಳು. ಆ್ಯಪ್ಗಳಲ್ಲಿಯೂ ಆ್ಯಕ್ಟಿವ್ ಆಗಿದ್ದ ಶೋಭಾ ಸುಮಾರು 20 ಕ್ಕೂ ಹೆಚ್ಚು ಹುಡುಗರನ್ನು ಖೆಡ್ಡಾಗೆ ಬೀಳಿಸಿಕೊಂಡಿದ್ದಳು. ಈಕೆ ಕರೆದಾಗ ಯುವಕರು ಏನಾದರೂ ಬಾರದೆ ಇದ್ದರೆ ಅವರ ಮನೆ ಬಳಿಯೇ ಹೋಗುತ್ತಿದ್ದಳು. ನಂತರ ಕಾರಿನ ಹಾರ್ನ್ ಜೋರಾಗಿ ಹಾಕುತ್ತಿದ್ದಳು. ಇಷ್ಟಕ್ಕೂ ಜಗ್ಗದೆ ಹೋದರೆ ಮನೆಯವರಿಗೆ ಖಾಸಗಿ ಫೋಟೊವನ್ನು ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು. ಅಷ್ಟೇ ಅಲ್ಲದೆ ಆ ಯುವಕರ ಮದುವೆಗೂ ಅಡ್ಡಿ ಪಡಿಸಿ ಮದುವೆ ನಿಲ್ಲಿಸಿದ್ದಳು.
ಇದನ್ನೂ ಓದಿ ರಿಯಾಲಿಟಿ ಶೋಗಳಲ್ಲೂ ಕಾಸ್ಟಿಂಗ್ ಕೌಚ್! ಡ್ಯಾನ್ಸಿಂಗ್ ಕ್ವೀನ್ ಬಿಚ್ಚಿಟ್ಟ ಸತ್ಯವೇನು?
ಕೊಲೆಯಾದ ದಿನವೂ ನವೀನ್ಗೆ ಬ್ಲಾಕ್ ಮೇಲ್ ಮಾಡಿ ಕರೆಸಿಕೊಂಡಿದ್ದಳು. ನವೀನ್ ಎಡಗೈಗೆ ಗಾಯವಾಗಿತ್ತು, ಗಾಯದ ಮೇಲೆ ಕೂತು ನೀನು ಮದುವೆ ಆಗಬಾರದು, ಹೀಗೆ ನನ್ನ ಜತೆ ಇರಬೇಕು. ಮದುವೆ ಆದರೆ ಅಲ್ಲೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಬೇಸತ್ತ ನವೀನ್, ಶೋಭಾಳ ಕತ್ತು ಹಿಸುಕಿ ಕೊ*ಲೆ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ.
- LATEST NEWS5 days ago
ಐವರು ಮೆಡಿಕಲ್ ವಿದ್ಯಾರ್ಥಿಗಳು ನೀರುಪಾಲು…!
- FILM6 days ago
ರಜನಿಕಾಂತ್-ಐಶ್ವರ್ಯ ರೈ ಸಂಬಂಧಪಟ್ಟ ವೀಡಿಯೋ ಈಗ ವೈರಲ್ ..!! ಅಮಿತಾಬಚನ್, ಅಭಿಷೇಕ್ಗೆ ಏನಾಗಿದೆ? ಎಂದು ಹೇಳಿದ್ಯಾಕೆ?
- DAKSHINA KANNADA5 days ago
ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!
- LATEST NEWS5 days ago
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ; ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ನಿರ್ಬಂಧ..!