BIG BOSS
BIGG BOSS; ಗೆದ್ದವರಿಗೆ ಗ್ರ್ಯಾಂಡ್ ಫಿನಾಲೆ ಟಿಕೆಟ್.. ಬಿಗ್ ಬಾಸ್ ಕೊಟ್ಟ ಟಾಸ್ಕ್ ಹೇಗಿದೆ?
Published
1 week agoon
By
NEWS DESK2ಕನ್ನಡದ ಬಿಗ್ ಬಾಸ್ ಶೋನಲ್ಲಿ ಕಳೆದ ವಾರ ಯಾರನ್ನೂ ಮನೆಯಿಂದ ಆಚೆ ಕಳಿಸಿಲ್ಲ. ಆದರೆ ಈ ವಾರ 9 ಸ್ಪರ್ಧಿಗಳಲ್ಲಿ ಯಾರದರೂ ಗೇಟ್ ಪಾಸ್ ಪಡೆದುಕೊಳ್ಳುತ್ತಾರೆ. ಅದು ಯಾರು ಎಂಬುದೇ ಪ್ರೇಕ್ಷಕರ ಕುತೂಹಲವಾಗಿತ್ತದೆ. ಹೀಗಾಗಿಯೇ ವಾರದ ಕೊನೆಯಲ್ಲಿ ಕಿಚ್ಚ ಸುದೀಪ್ ಅವರು ಸ್ಪರ್ಧಿಯನ್ನು ಹೊರಗೆ ಕಳಿಸಿಕೊಡುತ್ತಾರೆ. ಗ್ರ್ಯಾಂಡ್ ಫಿನಾಲೆ ಸಮೀಪಿಸುತ್ತಿದ್ದು ಸ್ಪರ್ಧಿಗಳಿಗೆ ಒತ್ತಡ ಹೆಚ್ಚಾಗಿದೆ. ಇದರ ಜೊತೆ ಟಾಸ್ಕ್ಗಳಲ್ಲೂ ಗೆಲುವು ಪಡೆಯಬೇಕಾಗಿದೆ.
ಮನೆಯಲ್ಲಿನ ಸದಸ್ಯರಿಗೆ ಇಂದು ನೀಡಿರುವ ಟಾಸ್ಕ್ನಲ್ಲಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದೆ ಹೆಚ್ಚು ಕಾಣುತ್ತದೆ. ಟಾಸ್ಕ್ ಪ್ರಕಾರ ಒಂದು ಕೈಯಲ್ಲಿ ಪೋಲ್ ಮತ್ತೊಂದು ಕೈಯಲ್ಲಿ ಬಣ್ಣದ ನೀರಿನ ಬಾಟಲ್ ಕೊಟ್ಟಿರುತ್ತಾರೆ. ಒಂದು ಬಾರಿಗೆ ಇಬ್ಬರು ಸ್ಪರ್ಧಿಗಳು ಆಡಬೇಕು. ಕೈಯಲ್ಲಿರುವ ಪೋಲ್ನಿಂದ ಹೊಡೆದು ಬಾಟಲ್ ಒಳಗಿನ ಬಣ್ಣದ ನೀರಿನ್ನು ಚೆಲ್ಲಬೇಕು. ಯಾರ ನೀರು ಹೆಚ್ಚಿಗೆ ಚೆಲ್ಲುತ್ತಾವೋ ಅವರು ಸೋತಂತೆ. ಒಂದು ವೇಳೆ ಬಾಟಲ್ ಕೆಳಗೆ ಬಿದ್ದರೂ ಸ್ಪರ್ಧಿ ಸೋತಾಗೆ.
ಸದ್ಯ ಈ ರೀತಿಯ ಗೇಮ್ ಆಡುವಾಗ ತ್ರಿವಿಕ್ರಮ್ ಮುಖ, ಮುಖಕ್ಕೆ ಮಂಜು ಪೋಲ್ನಿಂದ ಹೊಡೆದರು. ಹೆಂಗೆ ಬಿತ್ತು, ಹೇಗೆ ಬಿತ್ತು ಎಂದು ಹೇಳಿದರೆ, ಹೀಗೆ ಹೊಡೆದರೆ ಹೆಂಗೆ?. ನಾನು ಹೊಡೆಯುತ್ತೇನೆ ಎಂದು 2 ಸೆಕೆಂಡ್ಗೆ ಮಂಜು ಕೈಯಲ್ಲಿನ ಬಾಟಲ್ ಬೀಳಿಸುತ್ತೇನೆ ಎಂದು ಚಾಲೆಂಜ್ ಹಾಕಿದ್ದಾರೆ. ಪೋಲ್ನಿಂದ ತ್ರಿವಿಕ್ರಮ್ ಹೊಡೆದಿರುವುದು ವಿಡಿಯೋದಲ್ಲಿದೆ. ಆದರೆ ಮಂಜು ಕೈಯಿಂದ ಬಾಟಲ್ ಕೆಳಗೆ ಬಿದ್ದಿಲ್ಲ. ಆಡುವಾಗ ಎಲ್ಲ ಸ್ಪರ್ಧಿಗಳು ನಿಯಮ ಮೀರಿದ್ದಾರೆ ಎನ್ನಲಾಗಿದೆ. ಆದರೆ ಈ ಟಾಸ್ಕ್ನಲ್ಲಿ ಯಾರು ಗೆದ್ದಿದಾರೆ ಎನ್ನುವುದು ಕುತೂಹಲ ವಿದೆ.
ಇನ್ನು ತ್ರಿವಿಕ್ರಮ್ ಹಾಗೂ ಮಂಜು ನಡುವೆ ಮಾತಿನ ಸಮರ ನಡೆದಿದ್ದು ಟಾಸ್ಕ್ನಲ್ಲೂ ಇಬ್ಬರು ಕೋಪದಲ್ಲೇ ಆಡಿದ್ದಾರೆ. ಮನೆ ಕ್ಯಾಪ್ಟನ್ ಆಗಿರುವ ರಜತ್ ಅವರು ಏನು ಮಾಡೋಕೆ ಆಗಲ್ಲ ಗುರು, ಕಾಪಾಡಿಕೋ ಎಂದು ಮಂಜುಗೆ ಹೇಳಿದ್ದಾರೆ. ಬಿಗ್ಬಾಸ್ ಪ್ರಕಾರ ಯಾರು ಟಾಸ್ಕ್ ಚೆನ್ನಾಗಿ ಪೂರ್ಣಗೊಳಿಸಿ ಗೆಲವು ಪಡೆಯುತ್ತಾರೋ ಅವರಿಗೆ ಫಿನಾಲೆ ಟಿಕೆಟ್ ನೀಡುವುದಾಗಿ ಹೇಳಿದ್ದಾರೆ. ಹೀಗಾಗಿ ಯಾರು ಆ ಅದೃಷ್ಣಶಾಲಿಗಳು ಎನ್ನುವುದು ಶೀಘ್ರದಲ್ಲೇ ಗೊತ್ತಾಗಲಿದೆ.
You may like
BIG BOSS
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?
Published
2 hours agoon
14/01/2025By
NEWS DESK3ಬಿಗ್ ಬಾಸ್ ಫಿನಾಲೆಗೆ ಇನ್ನೊಂದು ವಾರವಷ್ಟೇ ಬಾಕಿ ಉಳಿದಿದೆ. ಬಿಗ್ ಬಾಸ್ ಮನೆಯಲೀಗ ಮಿಡ್ ವೀಕ್ ಎಲಿಮಿನೇಷನ್ ಟೆನ್ಶನ್ ಶುರುವಾಗಿದೆ.
ಇದೇ ಹೊತ್ತಲ್ಲಿ ಬಿಗ್ ಬಾಸ್ ಮನೆಯಿಂದ ಆಚೆ ಹೋಗಲು 7 ಮಂದಿ ನಾಮಿನೇಟ್ ಆಗಿದ್ದಾರೆ. ಹೀಗಾಗಿ 7 ಸ್ಪರ್ಧಿಗಳ ಎದೆಯಲ್ಲಿ ನಡುಕ ಶುರುವಾಗಿದೆ. ನಾಮಿನೇಷನ್ ನಿಂದ ಪಾರಾಗಲು ಬಿಗ್ ಬಾಸ್ ಸ್ಪರ್ಧಿಗಳಿಗೆ ಕಾಲ ಕಾಲಕ್ಕೆ ಟಾಸ್ಕ್ ನೀಡಲಿದ್ದಾರೆ.
ಇದನ್ನೂ ಓದಿ: ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?
ಬಿಗ್ ಬಾಸ್ ಕೊಟ್ಟ ಟಾಸ್ಕ್ ಯಾರು ಗೆಲ್ಲುತ್ತಾರೋ ಅವರು ಈ ವಾರದ ನಾಮಿನೇಷನ್ ನಿಂದ ಪಾರಾಗಲಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಒಟ್ಟು 8 ಸ್ಪರ್ಧಿಗಳು ಉಳಿದುಕೊಂಡಿದ್ದು, ಈ ಪೈಕಿ ಒಬ್ಬರು ಮಿಡ್ ವೀಕ್ ಎಲಿಮಿನೇಟ್ ಆಗಲಿದ್ದಾರೆ. ಇನ್ನು ಇಬ್ಬರು ವಾರಾಂತ್ಯಕ್ಕೆ ಬಿಗ್ ಬಾಸ್ ಮನೆಯಿಂದ ಹೊರ ಬರಲಿದ್ದಾರೆ. ಕೊನೆಗೆ ವಾರಾಂತ್ಯದಲ್ಲಿ ಮೂರು ಜನ ಬಿಗ್ ಬಾಸ್ ಮನೆಯಿಂದ ಹೊರಬರಲಿದ್ದಾರೆ.
ಹೀಗಾಗಿ ಎಲ್ಲಾ ಸ್ಪರ್ಧಿಗಳು ಬಿಗ್ ಬಾಸ್ ಕೊಟ್ಟ ಟಾಸ್ಕ್ ಗಳನ್ನು ಕಷ್ಟಪಟ್ಟು ಆಡುತ್ತಿದ್ದಾರೆ. ಅದರಲ್ಲೂ ರಿಲೀಸ್ ಆದ ಪ್ರೋಮೋದಲ್ಲಿ, ಇದು ಮಿಡ್ ವೀಕ್ ಎಲಿಮಿನೇಷನ್ ನಿಂದ ತಮ್ಮನ್ನು ತಾವು ಉಳಿಸಿಕೊಳ್ಳಲು ಇರುವ ಕೊನೆಯ ಟಾಸ್ಕ್ ಎಂದು ಭಯ ಹುಟ್ಟಿಸಿದ್ದಾರೆ.
BIG BOSS
ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?
Published
3 hours agoon
14/01/2025By
NEWS DESK3‘ಬಿಗ್ ಬಾಸ್ ಕನ್ನಡ ಸೀಸನ್ 11’ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಆದ್ರೆ ಕಳೆದ ವಾರ ಅಚ್ಚರಿ ಎಂಬಂತೆ ಬಿಗ್ ಬಾಸ್ ಮನೆಯಿಂದ ಚೈತ್ರಾ ಕುಂದಾಪುರ ಆಚೆ ಬಂದಿದ್ದಾರೆ. ಅವರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದು, ಯಾರು ಗೆಲ್ಲುವ ಸಾಧ್ಯತೆ ಹೆಚ್ಚು ಎಂದು ಹೇಳಿದ್ದಾರೆ.
ಚೈತ್ರಾ ಕುಂದಾಪುರ ಅವರ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಫಿನಾಲೆಗೂ ಮೊದಲೇ ಔಟ್ ಆಗಿದ್ದಾರೆ. 105ಕ್ಕೂ ಹೆಚ್ಚು ದಿನಗಳ ಕಾಲ ದೊಡ್ಮನೆಯಲ್ಲಿ ಇದ್ದ ಅವರು ಈಗ ಆಟದಿಂದ ಹೊರ ಹೋಗಿದ್ದಾರೆ. ಅವರು ಆಟವನ್ನು ಹತ್ತಿರದಿಂದ ನೋಡಿದವರು. ಯಾರು ದೊಡ್ಮನೆಯಿಂದ ಹೊರ ಹೋಗುತ್ತಾರೆ ಹಾಗೂ ಯಾರೂ ಗೆಲ್ಲಬಹುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬಿಗ್ ಬಾಸ್ ನಿಂದ ಹೊರ ಬಂದ ಚೈತ್ರಾ ಕುಂದಾಪುರ ಪಡೆದ ಸಂಭಾವನೆ ಎಷ್ಟು ಗೊತ್ತೇ?
ಬಿಗ್ ಬಾಸ್ ಕನ್ನಡ ಸೀಸನ್ 11ರ, ಟಾಪ್ 5 ಫೈನಲಿಸ್ಟ್ ಜಾಗದಲ್ಲಿ ತ್ರಿವಿಕ್ರಮ್, ಹನುಮಂತ, ರಜತ್, ಭವ್ಯಾ ಗೌಡ ಹಾಗೂ ಉಗ್ರಂ ಮಂಜು ಇರಲಿದ್ದಾರೆ ಎಂದು ಹೇಳಿದ್ದಾರೆ. ಮುಂದಿನ ವಾರ ಮೋಕ್ಷಿತಾ ಅಥವಾ ಧನರಾಜ್ ಅವರು ಆಚೆ ಬರಬಹುದು ಎಂದು ಹೇಳಿದ್ದಾರೆ.
ಅಲ್ಲದೇ ಬಿಗ್ ಬಾಸ್ ಸೀಸನ್ 11 ಫಿನಾಲೆ ಟ್ರೋಫಿ ಗೆಲ್ಲೋದು ಯಾರು ಅಂತ ಕೂಡ ಹೇಳಿದ್ದಾರೆ. ಹನುಮಂತ ತುಂಬಾ ಚೆನ್ನಾಗಿ ಆಟ ಆಡುತ್ತಿದ್ದಾರೆ. ಹನುಮಂತ ಟಾಪ್ 2ನಲ್ಲಿ ಇರುತ್ತಾರೆ ಅಥವಾ ಗೆಲ್ಲಲುಬಹುದು. ಆದ್ರೆ ನನಗೆ ತ್ರಿವಿಕ್ರಮ್ ಅವರು ಗೆಲ್ಲಬೇಕು. ಅವ್ರು ಜೀವನದಲ್ಲಿ ತುಂಬಾ ಕಷ್ಟಗಳನ್ನು ಅನುಭವಿಸಿದ್ದಾರೆ. ಈ ಬಿಗ್ ಬಾಸ್ ಗೆಲುವು ಅವರಿಗೆ ತುಂಬಾನೇ ಮುಖ್ಯ ಎಂದು ಹೇಳಿದ್ದಾರೆ.
BIG BOSS
ಬಿಗ್ ಬಾಸ್ ನಿಂದ ಹೊರ ಬಂದ ಚೈತ್ರಾ ಕುಂದಾಪುರ ಪಡೆದ ಸಂಭಾವನೆ ಎಷ್ಟು ಗೊತ್ತೇ?
Published
1 day agoon
13/01/2025By
NEWS DESK2ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿರುವ ಚೈತ್ರಾ ಕುಂದಾಪುರ ಪಡೆದ ಒಟ್ಟು ಹಣವೆಷ್ಟು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಮಾತಿನಿಂದಲೇ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ಚೈತ್ರಾ ಕುಂದಾಪುರ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ.
ಚೈತ್ರಾ ಕುಂದಾಪುರ ಅವರು ಟಾಸ್ಕ್ಗಳಲ್ಲಿ ಅಷ್ಟಾಗಿ ಮಿಂಚಿರಲಿಲ್ಲ. ಆದರೆ ಮಾತು, ವಾದ, ವಾಗ್ವಾದಗಳಿಂದಲೇ ಬಿಗ್ ಬಾಸ್ ವೀಕ್ಷಕರ ಗಮನಸೆಳೆದಿದ್ದರು. ಉಳಿದ ಸ್ಪರ್ಧಿಗಳಿಗೆ ಹೋಲಿಸಿದರೆ ಚೈತ್ರಾ ಕುಂದಾಪುರ ನೇರವಾಗಿ ಮಾತನಾಡುತ್ತಿದ್ದರು. ತಮ್ಮ ಮಾತಿನಿಂದಲೇ ಹಲವು ಬಾರಿ ಮನೆಯವರ ಕೆಂಗಣ್ಣಿಗೆ ಸಹ ಚೈತ್ರಾ ಗುರಿಯಾಗಿದ್ದರು.
ಚೈತ್ರಾ ಕುಂದಾಪುರ ಎಲಿಮಿನೇಟ್ ಆದ ವಿಚಾರ ತಿಳಿಯುತ್ತಿದ್ದಂತೆ ಅವರು ಬಿಗ್ ಬಾಸ್ ನಿಂದ ಪಡೆದ ಸಂಭಾವನೆ ಸುದ್ದಿ ವೈರಲ್ ಆಗುತ್ತಿದೆ. ಚೈತ್ರಾ ಕುಂದಾಪುರ ವಾರಕ್ಕೆ 1 ಲಕ್ಷದವರೆಗೆ ಸಂಭಾವನೆ ಪಡೆಯುತ್ತಿದ್ದರು ಎಂದು ಕೆಲವು ವರದಿಗಳಲ್ಲಿ ಹೇಳಲಾಗಿದೆ. ಈ ಪ್ರಕಾರ 15 ವಾರಗಳಿಗೆ ಒಟ್ಟು 15,00,000 ರೂಪಾಯಿ ಸಂಭಾವನೆ ಪಡೆದಂತಾಗುತ್ತದೆ. ಇದಲ್ಲದೇ ಚೈತ್ರಾ ಕುಂದಾಪುರ ಅವರಿಗೆ 1,50,000 ರೂಪಾಯಿ ಸ್ಪಾನ್ಸರ್ ಕಡೆಯಿಂದ ಬಹುಮಾನದ ಮೊತ್ತ ಸಿಗಲಿದೆ. ಜೊತೆಗೆ 50,000 ದ ಗಿಫ್ಟ್ ವೋಚರ್ ಸಹ ಸಿಗಲಿದೆ.
ಇದೆಲ್ಲವನ್ನೂ ಒಟ್ಟುಗೂಡಿಸಿದರೆ ಚೈತ್ರಾ ಕುಂದಾಪುರ ಬಿಗ್ಬಾಸ್ ನಿಂದ ಒಟ್ಟು 16,50,000 ರೂಪಾಯಿ ಹಣ ಪಡೆದಂತಾಗುವುದು. (ಇದು ವರದಿಗಳನ್ನು ಮತ್ತು ವೈರಲ್ ಸಂಗತಿಗಳನ್ನು ಆಧರಿಸಿ ಬರೆದ ಸುದ್ದಿಯಾಗಿದೆ. ನಿಖರ ಮಾಹಿತಿಯಲ್ಲ.)
LATEST NEWS
ಅಧಿಕಪ್ರಸಂಗದ ಪ್ರಶ್ನೆ ಕೇಳಿದ ಯೂಟ್ಯೂಬರನ್ನು ಹೊಡೆದ ನಾಗಾಸಾಧು
ತುಳು ಸಿನೆಮಾಗೆ ‘ಜೈ’ ಅಂದ ಸುನೀಲ್ ಶೆಟ್ಟಿ; ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ
ಮಕರ ಜ್ಯೋತಿ ಯಾವ ಹೊತ್ತಲ್ಲಿ ಕಾಣುತ್ತದೆ ಗೊತ್ತಾ ?
ನಟ ದರ್ಶನ್ ಸಂಕ್ರಾಂತಿ ಆಚರಣೆ…ಪತ್ನಿ ಮಾಡಿರುವ ಪೋಸ್ಟ್ ವೈರಲ್!
ಟೀಮ್ ಇಂಡಿಯಾ ಆಟಗಾರರಿಗೆ ಬಿಗ್ ಶಾಕ್; ಕಟ್ಟುನಿಟ್ಟಿನ ಕ್ರಮಕೈಗೊಂಡ ಬಿಸಿಸಿಐ
ಟ್ಯಾಂಕರ್ಗಳಿಂದ ಡಿಸೇಲ್ ಕಳ್ಳತನ; ಆರೋಪಿಗಳು ಅರೆಸ್ಟ್
Trending
- BIG BOSS3 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- LATEST NEWS4 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
- FILM6 days ago
ಗೋವಾದಲ್ಲಿ ಕೇಕ್ ಕತ್ತರಿಸಿ ಯಶ್ ಬರ್ತ್ಡೇ ಸಂಭ್ರಮ
- FILM5 days ago
ಮಗುವಿನೊಂದಿಗೆ ಕೊಲ್ಲೂರು ದೇಗುಲಕ್ಕೆ ಹರ್ಷಿಕಾ ದಂಪತಿ ಭೇಟಿ