BIG BOSS
Bigg Boss ಸ್ಪರ್ಧಿಗೆ ಹೃದಯಾಘಾ*ತ- ಆಸ್ಪತ್ರೆಗೆ ದಾಖಲು
ಕನ್ನಡದ ‘ಬಿಗ್ ಬಾಸ್ ಸೀಸನ್ 11’ರ ಕಾರ್ಯಕ್ರಮದಂತೆ ತೆಲುಗಿನ ಬಿಗ್ ಬಾಸ್ ಸೀಸನ್ 8ಕ್ಕೂ ಅದ್ಧೂರಿ ಚಾಲನೆ ಸಿಕ್ಕಿದೆ. ನಾಗಾರ್ಜುನ ನಿರೂಪಣೆಯ ತೆಲುಗಿನ ಬಿಗ್ ಬಾಸ್ ಕುರಿತು ಬ್ರೇಕಿಂಗ್ ನ್ಯೂಸ್ವೊಂದು ಹೊರಬಿದ್ದಿದೆ. ಬಿಗ್ ಬಾಸ್ನಲ್ಲಿರುವಾಗಲೇ ಖ್ಯಾತ ಯೂಟ್ಯೂಬರ್ ಗಂಗವ್ವಗೆ ಹೃದಯಾಘಾ*ತವಾಗಿದೆ ಎಂದು ವರದಿಯಾಗಿದೆ.
60 ವರ್ಷ ದಾಟಿದರೂ ಯಾವ ಸ್ಪರ್ಧಿಗಳಿಗೂ ಕಮ್ಮಿಯಿಲ್ಲ ಎಂಬಂತೆ ಟಫ್ ಫೈಟ್ ಕೊಡುತ್ತಿದ್ದ ವೈಲ್ಡ್ ಕಾರ್ಡ್ ಎಂಟ್ರಿ ಗಂಗಮ್ಮಗೆ ಸೋಮವಾರ ರಾತ್ರಿ (ಅ.21) ಹೃದಯಾಘಾತವಾಗಿದೆ ಎಂಬ ಸುದ್ದಿ ಹಬ್ಬಿದೆ. ಶೋನಲ್ಲಿರುವಾಗಲೇ ಈ ಘಟನೆ ನಡೆದಿದ್ದು, ಕೂಡಲೇ ಅವರಿಗೆ ವೈದ್ಯಕೀಯ ನೆರವು ಒದಗಿಸಲಾಗಿದೆ. ಸದ್ಯ ಅವರು ಪ್ರಾಣಪಾಯದಿಂದ ಪಾರಾಗಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ವರದಿ ಆಗಿದೆ.
ಅಂದಹಾಗೆ, ‘ಮೈ ವಿಲೇಜ್ ಶೋ’ ಮೂಲಕ ಯೂಟ್ಯೂಬ್ನಲ್ಲಿ ಹಾಸ್ಯ ಭರಿತ ವಿಡಿಯೋಗಳಿಂದ ಖ್ಯಾತಿ ಗಳಿಸಿದ್ದ ಗಂಗವ್ವ ಈ ಹಿಂದೆ ‘ಬಿಗ್ ಬಾಸ್ ಸೀಸನ್ 4’ರಲ್ಲಿ ಕೂಡ ಸ್ಪರ್ಧಿಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದ ಅರ್ಧಕ್ಕೆ ಶೋ ತೊರೆದಿದ್ದರು. ಇದೀಗ ಮತ್ತೆ ತೆಲುಗಿನ ಸೀಸನ್ 8ರಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ರಂಜಿಸುತ್ತಿದ್ದಾರೆ.
BIG BOSS
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಸಾಕಷ್ಟು ಟಾಸ್ಕ್ಗಳನ್ನು ನೀಡಲಾಗುತ್ತಿದೆ. ಈ ಬಾರಿ ರಾಜಕೀಯ ಮಾಡೋಕೆ ಓಪನ್ ಆಗಿ ಅವಕಾಶ ನೀಡಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.
ಬಿಗ್ ಬಾಸ್’ ಮನೆಯಲ್ಲಿ ರಾಜಕೀಯ ಒಳಗೊಳಗೆ ನಡೆಯೋದು ಕಾಮನ್. ಯಾವುದೂ ಎದುರಿಗೆ ಬರೋದಿಲ್ಲ. ಆದರೆ, ಈಗ ಹಾಗಿಲ್ಲ. ಓಪನ್ ಆಗಿ ರಾಜಕೀಯ ಆರಂಭ ಆಗಿದೆ. ಇದಕ್ಕೆ ಕಾರಣ ಆಗಿರೋದು ‘ಬಿಗ್ ಬಾಸ್’ ಮನೆಯಲ್ಲಿ ನೀಡಿರೋ ಟಾಸ್ಕ್. ಈ ವಾರ ಬಿಗ್ ಬಾಸ್ ಮನೆ ಬಿಗ್ ಬಾಸ್ ಸೌಧವಾಗಿ ಮಾರ್ಪಾಡಾಗಿದೆ. ಎಲ್ಲರೂ ರಾಜಕಾರಣಿಗಳ ಅವತಾರ ತಾಳಿದ್ದಾರೆ. ಆ ಪ್ರೋಮೋವನ್ನು ಕಲರ್ಸ್ ಕನ್ನಡ ಪೇಜ್ನಲ್ಲಿ ಹಾಕಿದ್ದಾರೆ.
BIG BOSS
‘ಮೆಟ್ಟು ತಗೊಂಡು ಹೊಡಿತೀನಿ’: ಮತ್ತೆ ನಾಲಿಗೆ ಹರಿಬಿಟ್ಟ ಚೈತ್ರಾ ಕುಂದಾಪುರ
ಜಾಸ್ತಿ ಮಾತನಾಡುತ್ತಾರೆ ಎಂಬ ಕಾರಣದಿಂದಲೇ ಚೈತ್ರಾ ಕುಂದಾಪುರ ಅವರು ಹೈಲೈಟ್ ಆಗುತ್ತಾರೆ. ಆದರೆ ಆ ಮಾತೇ ಅವರಿಗೆ ಮುಳುವಾಗುತ್ತಿದೆ. ಕಳೆದ ವಾರ ಅವರು ‘ಒಬ್ಬ ಅಪ್ಪನಿಗೆ ಹುಟ್ಟಿದ್ದರೆ..’ ಎಂದು ಜಗದೀಶ್ಗೆ ಹೇಳಿದ್ದರು. ಆ ಮಾತನ್ನು ಕಿಚ್ಚ ಸುದೀಪ್ ಅವರು ಕಟುವಾಗಿ ಖಂಡಿಸಿದ್ದರು. ಹಾಗಂತ ಚೈತ್ರಾ ಅವರು ತಮ್ಮ ಮಾತಿನ ವರಸೆಯನ್ನು ಬದಲಿಸಿಕೊಂಡಿದ್ದಾರಾ? ಖಂಡಿತಾ ಇಲ್ಲ. ಸೋಮವಾರದ (ಅಕ್ಟೋಬರ್ 21) ಸಂಚಿಕೆಯಲ್ಲಿ ಅವರು ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಚಪ್ಪಲಿಯಲ್ಲಿ ಹೊಡೆಯುವ ಬಗ್ಗೆ ಅವರು ಮಾತನಾಡಿದ್ದಾರೆ.
ಕಳೆದ ವಾರ ಜಗದೀಶ್ ಅವರಿಗೆ ಉಗ್ರಂ ಮಂಜು ಅವರು ಚಪ್ಪಲಿ ತೋರಿಸಿದ್ದರು. ಅದು ಸರಿಯಲ್ಲ ಎಂದು ಸುದೀಪ್ ಅವರು ಹೇಳಿದ್ದರು. ಇಂಥ ಹಲವು ಕಾರಣಗಳಿಂದಾಗಿ ಮನೆಯ ಸದಸ್ಯರಿಗೆ ಕಿಚ್ಚ ಕ್ಲಾಸ್ ತೆಗೆದುಕೊಂಡಿದ್ದರು. ಅಷ್ಟಾದರೂ ಕೂಡ ಚೈತ್ರಾ ಅವರು ಮಾತಿನ ವರಸೆ ಬದಲಾಯಿಸಿಕೊಂಡಿಲ್ಲ. ಸಂದರ್ಭ ಬಂದರೆ ತಾವು ಮೆಟ್ಟಿನಲ್ಲಿ ಹೊಡೆಯುವುದಾಗಿ ಚೈತ್ರಾ ಹೇಳಿದ್ದಾರೆ.
ಈ ಮೊದಲು ಹಂಸಾ ಅವರ ಬಗ್ಗೆ ಗೋಲ್ಡ್ ಸುರೇಶ್ ಏನೇನೋ ಕಮೆಂಟ್ ಮಾಡಿದ್ದರು. ಹಂಸಾ ಅವರದ್ದು ಲವ್ ಸ್ಟೋರಿ ನಡೆಯುತ್ತಿತ್ತು ಎಂದು ಅವರು ಹೇಳಿದ್ದರು. ಅದರಿಂದ ಹಂಸಾಗೆ ಬೇಸರ ಆಯಿತು. ಹಾಗಾಗಿ ಅವರು ಈ ವಿಚಾರವನ್ನು ಚೈತ್ರಾ ಕುಂದಾಪುರ ಜೊತೆ ಚರ್ಚೆ ಮಾಡುತ್ತಿದ್ದರು. ಆಗ ಚೈತ್ರಾ ಅವರ ಮಾತುಗಳು ಮೆಟ್ಟಿನ ತನಕ ಹೋಯಿತು.
‘ನನ್ನ ಕ್ಯಾರೆಕ್ಟರ್ ಬಗ್ಗೆ ಯಾರಾದರೂ ಮಾತಾಡಿದರೆ ಮೆಟ್ಟು ತಗೊಂಡು ಹೊಡಿತೀನಿ. ಅದರಿಂದ ನಾನು ಹೊರಗೆ ಹೋದ್ರೂ ಚಿಂತೆ ಇಲ್ಲ. ನಾನು ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೇನೆ. ನನಗೆ ಯಾರ ಹತ್ತಿರವೂ ಸಂಬಂಧ ಕಟ್ಟಬೇಡಿ’ ಎಂದು ಚೈತ್ರಾ ಕುಂದಾಪುರ ಅವರ ಹೇಳಿದ್ದಾರೆ. ಇಂಥ ಮಾತುಗಳನ್ನು ಆಡಿದ್ದಕ್ಕೆ ಸುದೀಪ್ ಅವರು ವೀಕೆಂಡ್ ಸಂಚಿಕೆಯಲ್ಲಿ ಯಾವ ರೀತಿ ಪಂಚಾಯ್ತಿ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕು.
BIG BOSS
Watch Video: ಬಿಗ್ ಬಾಸ್ನಲ್ಲಿ ಪಾತ್ರೆ ತೊಳೆದ ಪರಿಣಾಮ; ಲಾಯರ್ ಜಗದೀಶ್ಗೆ ಮನೆಯಲ್ಲಿ ಎಂಥಾ ಸ್ಥಿತಿ ನೋಡಿ..!
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ದೊಡ್ಡ ಮಟ್ಟದಲ್ಲಿ ಸ್ದದು ಮಾಡಿದ್ದು ಲಾಯರ್ ಜಗದೀಶ್. ಮೂರು ವಾರ ಕಳೆಯುವುದರ ಒಳಗೆ ಅವರು ದೊಡ್ಮನೆಯಿಂದ ಔಟ್ ಆದರು. ಹೊರ ಹೋದ ಬಳಿಕ ಅವರಿಗೆ ಸೃಷ್ಟಿ ಆಗಿರೋ ಅಭಿಮಾನಿ ಬಳಗ ಎಂಥದ್ದು ಎಂಬುದು ಗೊತ್ತಾಗಿದೆ. ಈಗ ಅವರು ಮನೆಯಲ್ಲೂ ಪಾತ್ರೆ ತೊಳೆಯೋ ಪರಿಸ್ಥಿತಿ ಬಂದೊದಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಒಂದು ವೈರಲ್ ಆಗಿದೆ.
‘ಬಿಗ್ ಬಾಸ್’ ಮನೆಯಲ್ಲಿ ಜಗದೀಶ್ ಅವರು ಜಗಳಕ್ಕೆ ಮಾತ್ರ ನಿಲ್ಲುತ್ತಿರಲಿಲ್ಲ. ಅವರು ಅಗತ್ಯ ಬಂದಾಗ ಪಾತ್ರೆ ತೊಳೆಯುತ್ತಿದ್ದರು. ಇದು ಅವರ ನೆಚ್ಚಿನ ಕಾಯಕಗಳಲ್ಲಿ ಒಂದಾಗಿತ್ತು. ಈ ಕಾರಣದಿಂದಲೇ ಹಗಲು ರಾತ್ರಿ ಎನ್ನದೆ ಸಿಕ್ಕ ಸಿಕ್ಕಾಗಲೆಲ್ಲ ಅಡುಗೆ ಮನೆಯ ವಾಶ್ ಬೇಸ್ನಲ್ಲಿ ನಿಲ್ಲುತ್ತಿದ್ದರು. ಇದು ಅವರ ಪತ್ನಿಯ ಗಮನಕ್ಕೆ ಬಂದಿದೆ.
ಬಿಗ್ ಬಾಸ್ ಮಾಜಿ ಸ್ಪರ್ಧಿ ಕಿರಿಕ್ ಕೀರ್ತಿ ಅವರು ಫನ್ ಆಗಿ ಒಂದು ವಿಡಿಯೋ ಮಾಡಿದ್ದಾರೆ. ಈ ವಿಡಿಯೋದಲ್ಲಿ ಕೀರ್ತಿ ಅವರು ಜಗದೀಶ್ ಮನೆ ಒಳಗೆ ಬರುತ್ತಾರೆ. ಅಲ್ಲಿ ಜಗದೀಶ್ ಅವರು ಪಾತ್ರೆ ತೊಳೆಯುತ್ತಾ ನಿಂತಿರುತ್ತಾರೆ. ‘ಏನ್ ಸರ್ ಸಂದರ್ಶನ ಕೊಡ್ತೀನಿ ಅಂಥ ಹೇಳಿ ಪಾತ್ರೆ ತೊಳೆಯುತ್ತಿದ್ದೀರಲ್ಲ’ ಎಂದು ಪ್ರಶ್ನೆ ಮಾಡಿದರು ಕೀರ್ತಿ. ಇದಕ್ಕೆ ಜಗದೀಶ್ ಉತ್ತರ ಕೊಟ್ಟರು.
‘ಏನ್ ಮಾಡೋದು. ನಮ್ಮ ಮನೆ, ನಮ್ ಪಾತ್ರೆ ತೊಳೆಯೋದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನೆ ಮಾಡಿದರು ಜಗದೀಶ್. ಇದಕ್ಕೆ ಜಗದೀಶ್ ಪತ್ನಿ ಉತ್ತರ ನೀಡುತ್ತಾರೆ. ‘ಬಿಗ್ ಬಾಸ್ ಮನೆಯಲ್ಲಿ ರಾತ್ರಿ-ಹಗಲು ಎನ್ನದೇ ತೊಳೆಯುತ್ತಿದ್ದರು. ಹೀಗಾಗಿ ತೊಳೆಸುತ್ತಾ ಇದ್ದೇನೆ’ ಎನ್ನುತ್ತಾರೆ ಜಗದೀಶ್ ಪತ್ನಿ.
ಸದ್ಯ ಈ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಹಲವರು ಹಲವು ರೀತಿಯ ಕಮೆಂಟ್ ಮಾಡಿದ್ದಾರೆ. ಅನೇಕರ ಗಮನ ಮನೆಯ ಮೇಲೆ ಹೋಗಿದೆ. ಮನೆ ಅಷ್ಟು ಕಲರ್ಫುಲ್ ಆಗಿಲ್ಲ. ಹೀಗಾಗಿ, ಕೆಲವರು ಜಗದೀಶ್ ಹೇಳಿದ ಮಾತನ್ನು ನೆನಪಿಸಿಕೊಂಡಿದ್ದಾರೆ. ‘ನೀವೇನಾ ನಿಮ್ಮ ಮನೆಯ ನಾಯಿಗೆ ಒಂದು ಲಕ್ಷ ರೂಪಾಯಿ ಖರ್ಚು ಮಾಡುವವರು’ ಎಂದು ಪ್ರಶ್ನೆ ಮಾಡಿದ್ದಾರೆ.
Watch Video:
- BIG BOSS5 days ago
ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ: ಬಿಗ್ ಬಾಸ್ ನಿಂದ ಹೊರಬಂದ ಜಗದೀಶ್ ಫಸ್ಟ್ ರಿಯಾಕ್ಷನ್!
- BIG BOSS6 days ago
ಕೊನೆಗೂ ಸುದೀಪ್ ಹೇಳಿದ ಬದಲಾವಣೆಯನ್ನು ಜಾರಿಗೆ ತಂದ ಬಿಗ್ ಬಾಸ್; ಏನದು ?
- FILM2 days ago
ಇರಲು ಮನೆ ಇರಲಿಲ್ಲ; ಮೆಜೆಸ್ಟಿಕ್ನಲ್ಲೇ ಸುತ್ತಾಡಿದ್ದ ಸಿಹಿ ಕುಟುಂಬ; ಕಷ್ಟಗಳ ನೆನೆದು ಪುಟಾಣಿ ಕಣ್ಣೀರು
- BIG BOSS4 days ago
ಮತ್ತೆ ಜೈಲು ಸೇರಿದ ಚೈತ್ರಾ ಕುಂದಾಪುರ