LATEST NEWS
ಬಿಗ್ ಬಾಸ್ ಗೆದ್ದರೂ ಕಾರ್ತಿಕ್ಗೆ ಇನ್ನೂ ಸಿಕ್ಕಿಲ್ಲ ದುಬಾರಿ ಕಾರು..!! ಬೇಸರ ಹೊರ ಹಾಕಿದ ನೆಟ್ಟಿಗರು!
ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಸೀಸನ್ 10ರ ಬಿಗ್ ಬಾಸ್ ರಿಯಾಲಿಟಿ ಶೋ ಅತೀ ಹೆಚ್ಚು ಟಿಆರ್ ಪಿ ಯನ್ನು ಪಡೆದಿತ್ತು. ಹಿಂದಿನ ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋ ಗಿಂತಲೂ ಸೀಸನ್-10ರ ಕಂಟೆಂಸ್ಟೆಂಟ್ ಗಳು ಸಾಮಾಜಿಕ ಜಾಲತಾಣದಲ್ಲಿ ಅತೀ ಹೆಚ್ಚು ಸದ್ದು ಮಾಡುತ್ತಿದ್ದರು.
ಈ ಬಾರಿಯ ಸೀಸನ್-10ರಲ್ಲಿ ಹೆಚ್ಚು ಪೈಪೋಟಿ ಕಂಡಿದ್ದು, ಫೈನಲ್ ಗೆ ಕಾರ್ತಿಕ್ ಮಹೇಶ್, ಡ್ರೋನ್ ಪ್ರತಾಪ್ ಹಾಗೂ ವಿನಯ್ ಯವರು ಆಯ್ಕೆಯಾಗಿದ್ದು, ಕಾರ್ತಿಕ್ ಬಿಗ್ ಬಾಸ್ ಶೋ ನ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ರು. ‘ಬಿಗ್ ಬಾಸ್’ ವಿನ್ ಆದವರಿಗೆ ಈ ಬಾರಿ 50 ಲಕ್ಷ ರೂಪಾಯಿ, ಎಲೆಕ್ಟ್ರಿಕ್ ಸ್ಕೂಟರ್ ಹಾಗೂ ಬ್ರೇಜಾ ಕಾರು ಕೊಡಲಾಗಿತ್ತು. ಆದರೆ ಕಾರು ಇನ್ನೂ ಅವರ ಕೈ ಸೇರಿಲ್ಲ ಎಂದು ಕಾರ್ತಿಕ್ ರವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.
ಕಾರು ಇನ್ನೂ ಬಂದಿಲ್ಲ :
ಹೌದು, ಬಿಗ್ ಬಾಸ್ ಬಳಿಕ ನಟ ಕಾರ್ತಿಕ್ ಮಹೇಶ್ ರವರಿಗೆ ಸಿನಿಮಾಗಳಿಂದ ಅವಕಾಶಗಳು ಒಲಿದುಬರುತ್ತಿದೆ. ಬಿಗ್ ಬಾಸ್ನಿಂದ ಗೆದ್ದ ಹಣ ಹಂತಹಂತವಾಗಿ ಬರುತ್ತಿದೆ. ಗೆದ್ದ ಕಾರು ಇನ್ನೂ ಬಂದಿಲ್ಲ. ನಾಲ್ಕೈದು ತಿಂಗಳು ಬೇಕು ಎಂದು ಹೇಳಿದ್ದಾರೆ.
ದೆಹಲಿಯಿಂದ ಒಪ್ಪಿಗೆ ಸಿಕ್ಕಿ ಬರಬೇಕು ಎಂದು ಅವರು ಹೇಳಿಕೊಂಡಿದ್ದರು. ಈ ವಿಡಿಯೋಗೆ ಅನೇಕರು ಬೇಸರ ಹೊರಹಾಕಿದ್ದು, ಇನ್ನೂ ಕೆಲವರು ಬೇಗ ಕಾರು ಸಿಗಲಿ ಎಂದು ಅನೇಕರು ಹಾರೈಸಿದ್ದಾರೆ.
FILM
ರಾಮ-ಸೀತೆಯಂತೆ ಕಾಣಿಸಿಕೊಂಡ ರಣ್ಬೀರ್, ಸಾಯಿ ಪಲ್ಲವಿ.. ರಾಮಾಯಣ ಸಿನಿಮಾ ಸೆಟ್ಟಿನ ಫೋಟೋ ಲೀಕ್
ರಾಮಾಯಣ ಬಾಲಿವುಡ್ನಲ್ಲಿ ತೆರೆ ಮೇಲೆ ಬರಲಿರುವ ಬಹುನೀರಿಕ್ಷಿತ ಸಿನಿಮಾ. ಆದರೀಗ ಈ ಸಿನಿಮಾದ ಕೆಲವು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿದೆ.
ನಿತೇಶ್ ತಿವಾರಿ ನಿರ್ದೇಶನದಲ್ಲಿ ರಾಮಾಯಣ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾದಲ್ಲಿ ರಣ್ಬೀರ್ ಕಪೂರ್ ಮತ್ತು ಸಾಯಿ ಪಲ್ಲವಿ ನಟಿಸುತ್ತಿರೋ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ರಣ್ಬೀರ್ ಮತ್ತು ಸಾಯಿ ಪಲ್ಲವಿ ಸಿನಿಮಾದಲ್ಲಿ ಭಗವಾನ್ ರಾಮ ಮತ್ತು ಸೀತಾ ದೇವಿ ಪಾತ್ರದಲ್ಲಿ ಕಾಣಿಸಿಕೊಂಡ ಫೋಟೋ ಲೀಕ್ ಆಗಿದೆ.
ಸದ್ಯ ಹರಿದಾಡುತ್ತಿರುವ ಮಾಹಿತಿ ಪ್ರಕಾರ, ಶನಿವಾರದಂದು ರಾಮಾಯಣ ಸೆಟ್ನಲ್ಲಿ ರಣ್ಬೀರ್ ಅಯೋಧ್ಯೆಯ ಶ್ರೀ ರಾಮ ಚಂದ್ರನಂತೆ ಕಾಣಿಸಿಕೊಂಡಿದ್ದಾರೆ. ಅತ್ತ ಸಾಯಿ ಪಲ್ಲವಿ ಕೂಡ ಸೀತೆಯಂತೆ ಕಂಗೊಳಿಸಿದ್ದಾರೆ. ಆದರೆ ಇದೇ ಸೆಟ್ನಲ್ಲಿ ಇವರಿಬ್ಬರ ಫೋಟೋ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ದಶರಥನ ವೇಷದಲ್ಲಿ ಅರುಣ್ ಗೋಯಲ್
ಇದಲ್ಲದೆ ರಾಮಾಯಣ ಸಿನಿಮಾದಲ್ಲಿ ನಟಿಸುತ್ತಿರುವ ಅರುಣ್ ಗೋಯಲ್ ದಶರಥನ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ. ಲಾರಾ ದತ್ತಾ ಕೈಕೇಯಿ, ಬಾಬಿ ಡಿಯೋಲ್, ವಿಜಯ್ ಸೇತುಪತಿ, ಸನ್ನಿ ಡಿಯೋಲ್ ಮೂವರು ಕುಂಭಕರಣ, ವಿಭೀಷಣ, ಹನುಮಂತನಾಗಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ರಣ್ಬೀರ್ ಸಸ್ಯಹಾರಿ
ಇನ್ನು ರಣ್ಬೀರ್ ರಾಮನ ಪಾತ್ರಕ್ಕಾಗಿ ಸಸ್ಯಹಾರವನ್ನು ಸೇವಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅನಿಮಲ್ ಸಿನಿಮಾದ ಬಳಿಕ ರಣಬೀರ್ ರಾಮಾಯಣ ಚಿತ್ರತಂಡ ಸೇರಿಕೊಂಡಿದ್ದಾರೆ. ಅಂದಹಾಗೆಯೇ ಅನಿಮಲ್ನಲ್ಲಿ ನಟಿ ರಶ್ಮಿಕಾ ಮಂದಣ್ಣನವರು ರಣಬೀರ್ ಅವರ ನಾಯಕಿಯಾಗಿ ಕಾಣಿಸಿಕೊಂಡಿದ್ದರು.
FILM
ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!
ನವದೆಹಲಿ : ಖ್ಯಾತ ಕಿರುತೆರೆ ನಟ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಜನಪ್ರಿಯ ಕಾರ್ಯಕ್ರಮ ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ಮೂಲಕ ಗಮನ ಸೆಳೆದಿರುವ ನಟ ಗುರುಚರಣ್ ಸಿಂಗ್ ಅವರು ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ನಟನ ತಂದೆ ದೆಹಲಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ದೂರಿನಲ್ಲಿ ಏನಿದೆ?
ದೆಹಲಿ ಪೊಲೀಸರಿಗೆ ತಂದೆ ನೀಡಿರುವ ದೂರಿನ ಪ್ರಕಾರ, 50ರ ಹರೆಯದ ನಟ ಏಪ್ರಿಲ್ 22 ರಂದು ದೆಹಲಿಯ ತಮ್ಮ ನಿವಾಸದಿಂದ ಮುಂಬೈಗೆ ತೆರಳಿದ್ದಾರೆ. ಅಂದಿನಿಂದ ಅವರು ನಾಪತ್ತೆಯಾಗಿದ್ದಾರೆ. ಅವರು ಮುಂಬೈಗೆ ಬಂದಿಳಿಯಬೇಕಿತ್ತು, ಆದರೆ ಮುಂಬೈ ತಲುಪಿಲ್ಲ. ಮನೆಗೂ ವಾಪಸಾಗಲಿಲ್ಲ. ಫೋನ್ ಸಂಪರ್ಕಕ್ಕೂ ಸಿಗಲಿಲ್ಲ. ಈ ಹಿನ್ನೆಲೆ ಪೊಲೀಸ್ ಠಾಣಾ ಮೆಟ್ಟಿಲೇರಬೇಕಾಯಿತು ಎಂದು ತಿಳಿಸಲಾಗಿದೆ.
“ಅವರು ಮಾನಸಿಕವಾಗಿ ಸ್ಥಿರವಾಗಿದ್ದು, ನಾವು ಅವರನ್ನು ಹುಡುಕಿದ್ದೇವೆ. ಆದರೆ, ಈಗ ಅವರು ಕಾಣೆಯಾಗಿದ್ದಾರೆ” ಎಂದು ಗುರುಚರಣ್ ಸಿಂಗ್ ತಂದೆ ಪೊಲೀಸರಲ್ಲಿ ತಿಳಿಸಿದ್ದಾರೆ. ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಈ ನಾಪತ್ತೆ ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ನಾವು ಪರಿಶೀಲಿಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಗುರುಚರಣ್ ಸಿಂಗ್ ಕೊನೆಯದಾಗಿ ಏಪ್ರಿಲ್ 22 ರಂದು ದೆಹಲಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಅವರು ಮುಂಬೈಗೆ ತೆರಳಿದ್ದರು ಎನ್ನಲಾಗಿದೆ. ಆದರೆ, ಅವರು ಮುಂಬೈಗೆ ತಾವು ತಲುಪಬೇಕಾಗಿದ್ದ ಸ್ಥಳಕ್ಕೆ ತಲುಪಿಲ್ಲ. ಮನೆಗೂ ಹಿಂತಿರುಗಿಲ್ಲ. ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ ಎಂದು ತಿಳಿದು ಬಂದಿದೆ. ನಟನ ದಿಢೀರ್ ಕಣ್ಮರೆ ಪ್ರಕರಣ ಆತಂಕ ಸೃಷ್ಟಿಸಿದೆ.
ಇದನ್ನೂ ಓದಿ : ಕೊನೆಗೂ ಪ್ರಭಾಸ್ ‘ಕಲ್ಕಿ 2898AD’ ಚಿತ್ರ ಬಿಡುಗಡೆಗೆ ಡೇಟ್ ಫಿಕ್ಸ್! ಯಾವಾಗ ತೆರೆಗೆ?
ಶೋ ತೊರೆದಿದ್ದ ನಟ :
ಗುರುಚರಣ್ ಅವರು ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ಚಿತ್ರದಲ್ಲಿ ಸೋಧಿ ಪಾತ್ರ ನಿರ್ವಹಿಸಿದ್ದರು. ಈ ಮೂಲಕ ಜನಪ್ರಿಯತೆ ಸಂಪಾದಿಸಿದ್ದರು. ಅದಾಗ್ಯೂ, ಅವರು ಕೆಲ ವರ್ಷಗಳ ಹಿಂದೆ ಕಾರ್ಯಕ್ರಮವನ್ನು ತೊರೆದರು. ತಂದೆಯ ಅನಾರೋಗ್ಯ ಹಿನ್ನೆಲೆ ಶೋ ಬಿಡಬೇಕಾಯಿತು.
ಇದೀಗ ಅವರ ನಾಪತ್ತೆ ಪ್ರಕರಣ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅಲ್ಲದೇ, ಅವರ ಅಭಿಮಾನಿಗಳಲ್ಲಿ ಆತಂಕ ಹುಟ್ಟು ಹಾಕಿದೆ.
FILM
ಕೊನೆಗೂ ಪ್ರಭಾಸ್ ‘ಕಲ್ಕಿ 2898AD’ ಚಿತ್ರ ಬಿಡುಗಡೆಗೆ ಡೇಟ್ ಫಿಕ್ಸ್! ಯಾವಾಗ ತೆರೆಗೆ?
ಪ್ರಭಾಸ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಕಲ್ಕಿ 2898AD’ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಅಮಿತಾಬ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾನಿ ಸೇರಿದಂತೆ ಮೊದಲಾದ ಖ್ಯಾತ ನಟ – ನಟಿಯರ ದಂಡೇ ಚಿತ್ರದಲ್ಲಿದೆ.
‘ಮಹಾನಟಿ’ ಚಿತ್ರದ ಮೂಲಕ ಭಾರೀ ಯಶಸ್ಸು ತನ್ನದಾಗಿಸಿಕೊಂಡಿದ್ದ, ನಾಗ್ ಅಶ್ವಿನ್ ಕಲ್ಕಿ ಮೂಲಕ ಮತ್ತೆ ಹವಾ ಸೃಷ್ಟಿಸಲು ಹೊರಟಿದ್ದಾರೆ. ಹಾಗಾಗಿ ಸಹಜವಾಗಿಯೇ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ. ‘ಕಲ್ಕಿ’ ಭಾರತೀಯ ಚಿತ್ರರಂಗದಲ್ಲೇ ಅತಿ ದೊಡ್ಡ ಬಜೆಟ್ ಸಿನಿಮಾ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.
ಈಗಾಗಲೇ ‘ಕಲ್ಕಿ 2898AD’ ಚಿತ್ರದ ಪೋಸ್ಟರ್ಸ್, ಟೀಸರ್ ಭಾರೀ ಕತೂಹಲ ಹೆಚ್ಚಿಸಿದೆ. ಚಿತ್ರದಲ್ಲಿ ವಿಭಿನ್ನ ಗೆಟಪ್ಗಳಲ್ಲಿ ಪ್ರಭಾಸ್ ಕಾಣಿಸಿಕೊಳ್ಳಲಿದ್ದಾರೆ. ಅಶ್ವತ್ಥಾಮನಾಗಿ ಅಮಿತಾಬ್ ಬಚ್ಚನ್, ಕಲಿಯಾಗಿ ಕಮಲ್ ಹಾಸನ್ ನಟಿಸುತ್ತಿದ್ದಾರೆ.
ಚುನಾವಣಾ ಲೆಕ್ಕಾಚಾರ :
‘ಕಲ್ಕಿ 2898AD’ ಸಿನಿಮಾ ರಿಲೀಸ್ ಡೇಟ್ ಪದೇ ಪದೆ ಬದಲಾಗುತ್ತಲೇ ಇದೆ. ಚುನಾವಣೆ ಹಿನ್ನೆಲೆಯಲ್ಲಿ ಚಿತ್ರತಂಡ ಇತ್ತೀಚೆಗೆ ಮತ್ತೆ ಚುನಾವಣಾ ದಿನಾಂಕ ಮುಂದೂಡಿದೆ. ಚುನಾವಣೆ ಪ್ರಚಾರ, ಮತದಾನ, ಫಲಿತಾಂಶದ ಸಮಯದಲ್ಲಿ ಸಿನಿಮಾಗಳು ಬಿಡುಗಡೆಯಾದರೆ ಹಿನ್ನಡೆಯಾಗುತ್ತದೆ. ಇದೇ ಕಾರಣಕ್ಕೆ ಚುನಾವಣೆಗಳ ಸಮಯದಲ್ಲಿ ಸಿನಿಮಾ ಬಿಡುಗಡೆಗೆ ಹಿಂದೇಟು ಹಾಕುತ್ತಾರೆ. ಮೇ 9ರಂದು ‘ಕಲ್ಕಿ 2898AD’ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಮೇ 13 ರಂದು ಕೂಡ ಕೆಲವೆಡೆ ಮತದಾನ ನಡೆಯಲಿದೆ. ಇಂತಹ ಸಮಯದಲ್ಲಿ ಸಿನಿಮಾ ತೆರೆಗಪ್ಪಳಿಸಿದರೆ ಕಲೆಕ್ಷನ್ ಮೇಲೆ ಪರಿಣಾಮ ಬೀರಲಿದೆ ಎನ್ನುವ ಲೆಕ್ಕಾಚಾರ ನಡೆದು ಚಿತ್ರದ ಬಿಡುಗಡೆ ದಿನಾಂಕ ಮುಂದೂಡಲಾಗಿದೆ.
ಈ ವರ್ಷ ಜನವರಿಯಲ್ಲಿ ಚಿತ್ರವನ್ನು ರಿಲೀಸ್ ಪ್ಲ್ಯಾನ್ ಮಾಡಲಾಗಿತ್ತು. ಬಳಿಕ ಮೇ 9ಕ್ಕೆ ಮುಂದೂಡಲಾಗಿತ್ತು. ಇದೀಗ ಮತ್ತೆ ಚಿತ್ರ ತೆರೆಗೆ ಬರುವ ದಿನಾಂಕ ಮುಂದೆ ಹೋಗಿದೆ.
ಯಾವಾಗ ಬಿಡುಗಡೆ?
‘ಕಲ್ಕಿ 2898AD’ ಚಿತ್ರ ತೆರೆಗೆ ಯಾವಾಗ ಬರುತ್ತೆ? ಎಂದು ಕಾಯುತ್ತಿದ್ದ ಪ್ರಭಾಸ್ ಅಭಿಮಾನಿಗಳಿಗೆ ಖುಷಿಯ ವಿಚಾರವನ್ನು ಕೊನೆಗೂ ಚಿತ್ರತಂಡ ನೀಡಿದೆ. ದಿನಾಂಕ ಮುಂದೂಡುತ್ತಿದ್ದುದರಿಂದ ನಿರಾಸೆಗೊಂಡಿದ್ದ ಅಭಿಮಾನಿಗಳು ಕೊನೆಗೂ ನಿರಾಳರಾಗಿದ್ದಾರೆ.
ಹೌದು, ಮೇ 9 ರಂದು ಚಿತ್ರ ತೆರೆಗೆ ಬರಬೇಕಿತ್ತು. ಚುನಾವಣೆ ಹಿನ್ನೆಲೆ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಜೂನ್ 27 ರಂದು ಚಿತ್ರ ತೆರೆಗೆ ಬರಲಿದೆ. ವಿಶ್ವದಾದ್ಯಂತ ಚಿತ್ರವನ್ನು ಅದ್ದೂರಿಯಾಗಿ ತೆರೆಗೆ ತರುವ ಸಿದ್ಧತೆಯಲ್ಲಿದೆ ಚಿತ್ರತಂಡ.
ಇದನ್ನೂ ಓದಿ : “ಗಬ್ಬರ್ ಸಿಂಗ್” ಮೇ 3 ರಂದು ತೆರೆಗೆ ; ಇಂದು ವಿಡಿಯೋ ಸಾಂಗ್ ರಿಲೀಸ್..!
ಯಾವುದೇ ತೆಲುಗು ಸಿನಿಮಾ ಬಿಡುಗಡೆಯಾದರೂ, ಒಂದು ದಿನ ಮುಂಚಿತವಾಗಿ ಅಮೆರಿಕದಲ್ಲಿ ಪ್ರೀಮಿಯರ್ ನಡೆಯುತ್ತೆ. ‘ಕಲ್ಕಿ 2898 AD’ ಬಹುಕೋಟಿ ವೆಚ್ಚದ ಸಿನಿಮಾ ಆಗಿರುವುದರಿಂದ ಒಂದು ದಿನ ಮುಂಚಿತವಾಗಿ, ಅಂದರೆ, ಜೂನ್ 26ರಂದು ಅಮೆರಿಕದಲ್ಲಿ ತೆರೆಕಾಣಲಿದೆ ಎನ್ನಲಾಗಿದೆ.
ವಿಷ್ಣುಪುರಾಣ, ಕಲ್ಕಿ ಪುರಾಣ, ಭಾಗವತ ಪುರಾಣಗಳನ್ನು ಆಧರಿಸಿ ‘ಕಲ್ಕಿ 2898AD’ ಸಿನಿಮಾ ಕಟ್ಟಿಕೊಡಲಾಗುತ್ತಿದೆ. 5 ಭಾಷೆಗಳಲ್ಲಿ ಚಿತ್ರ ತೆರೆಗೆ ಬರಲಿದೆ. ಸಂತೋಷ್ ನಾರಾಯಣ್ ಸಂಗೀತ, ಜೊರ್ಡ್ಜೆ ಸ್ಟೋಜಿಲ್ಕೋವಿಕ್ ಛಾಯಾಗ್ರಹಣ ಚಿತ್ರಕ್ಕಿದೆ. ಎಎ ಫಿಲ್ಮ್ಸ್ ಉತ್ತರ ಭಾರತದಲ್ಲಿ ಸಿನಿಮಾ ವಿತರಣೆ ಹಕ್ಕು ಖರೀದಿಸಿದೆ.
- FILM5 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM6 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru5 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!