Connect with us

    DAKSHINA KANNADA

    ಮಂಗಳೂರಿನಲ್ಲಿ ಬೆಳಕಿಗೆ ಬಂತು ಬಹುದೊಡ್ಡ ಆನ್ಲೈನ್ ವಂಚನೆ ಪ್ರಕರಣ; ಕೋಟಿಗಟ್ಟಲೆ ಕಳೆದುಕೊಂಡ ನಿವೃತ್ತ ಇಂಜಿನಿಯರ್

    Published

    on

    ಮಂಗಳೂರು : ಇತ್ತೀಚೆಗೆ ಆನ್ ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಲಕ್ಷಾಂತರ ರೂಪಾಯಿ ಕಳೆದುಕೊಳ್ಳುತ್ತಿರುವ ಸಂಖ್ಯೆ ಹೆಚ್ಚಾಗಿದೆ. ವಿದ್ಯಾವಂತರೇ ಈ ಮೋಸದ ಜಾಲಕ್ಕೆ ಬೀಳುತ್ತಿರೋದು ವಿಪರ್ಯಾಸ. ಇದೀಗ ಮಂಗಳೂರಿನಲ್ಲಿ ಮತ್ತೊಂದು ಪ್ರಕರಣ ನಡೆದಿದೆ. ಇಲ್ಲಿ 72 ವರ್ಷದ ನಿವೃತ್ತ ಇಂಜಿನಿಯರ್‌ ಒಬ್ಬರು ಸಾವಿರ  ಅಲ್ಲ, ಲಕ್ಷ ಅಲ್ಲ ಬರೋಬ್ಬರಿ 1.60 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ.


    ಮುಂಬೈ ಕ್ರೈಂ ಬ್ರಾಂಚ್ ಹೆಸರಲ್ಲಿ ವಂಚನೆ:

    ಮುಂಬೈ ಕ್ರೈಂ ಬ್ರಾಂಚ್ ಮತ್ತು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಆನ್‌ಲೈನ್ ವಂಚಕರು ನಿವೃತ್ತ ಇಂಜಿನಿಯರ್ ಗೆ ಬೆದರಿಕೆ ಒಡ್ಡಿದ್ದಾರೆ. ನಿಮ್ಮ ಹೆಸರಿನಲ್ಲಿ ಥಾಯ್ಲೆಂಡ್‌ಗೆ ಕಳುಹಿಸಲಾದ ಪಾರ್ಸೆಲ್‌ನಲ್ಲಿ ಡ್ರಗ್ಸ್ ಇದೆ ಎಂದು ಹೇಳಿದ್ದಾರೆ.

    ಫೋನ್ ಮಾಡಿದ ಅಪರಿಚಿತ ವ್ಯಕ್ತಿ ತನ್ನ ಹೆಸರು ರಾಜೇಶ್ ಕುಮಾರ್ ಮತ್ತು ಫೆಡೆಕ್ಸ್ ಕಂಪನಿಯಿಂದ ಕರೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾನೆ. ನೀವು ಥೈಲ್ಯಾಂಡ್‌ಗೆ ಕಳುಹಿಸಿದ್ದ ಪಾರ್ಸೆಲ್ ನ್ನು ಕಸ್ಟಮ್ಸ್ ವಶಪಡಿಸಿಕೊಂಡಿದೆ. ಇದು ಅಫ್ಘಾನಿಸ್ತಾನ ಮತ್ತು ಕೀನ್ಯಾದ ಐದು ಪಾಸ್‌ಪೋರ್ಟ್‌ಗಳನ್ನು, ಮೂರು ಕ್ರೆಡಿಟ್ ಕಾರ್ಡ್‌ಗಳನ್ನು ಹೊಂದಿದೆ. 140 ಗ್ರಾಂ ಎಂಡಿಎಂಎ ಔಷಧ, ನಾಲ್ಕು ಕಿಲೋ ಬಟ್ಟೆ ಮತ್ತು ಲ್ಯಾಪ್‌ಟಾಪ್ ಹೊಂದಿದೆ. ಮುಂಬೈ ಅಪರಾಧ ವಿಭಾಗವು ಪ್ರಕರಣದ ತನಿಖೆ ನಡೆಸುತ್ತಿದೆ ಎಂದು ಖತರ್ನಾಕ್ ವಂಚಕ ಹೆದರಿಸಿದ್ದಾನೆ.

    ಮುಂಬೈ ಕ್ರೈಂ ಬ್ರಾಂಚ್ ಅಧಿಕಾರಿ ಎಂದು ಹೇಳಿಕೊಂಡ ಇನ್ನೊಬ್ಬ ವ್ಯಕ್ತಿ ಸಿಬಿಐ ಅಧಿಕಾರಿ ರುದ್ರ ರಾಥೋಡ್ ಹೆಚ್ಚುವರಿ ಮಾಹಿತಿಯನ್ನು ನೀಡಲಿದ್ದಾರೆ ಮತ್ತು ಇ-ಮೇಲ್ ಮೂಲಕ rathoreb@21 ಗೆ ಸಂಪರ್ಕಿಸಲು ನಿವೃತ್ತ ಎಂಜಿನಿಯರ್​​​ಗೆ ಸೂಚಿಸಿದ್ದಾರೆ. ನಂತರ ರುದ್ರ ರಾಥೋಡ್ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಕರೆ ಮಾಡಿ ಹಲವು ಮಕ್ಕಳನ್ನು ಹತ್ಯೆಗೈದ ತಂಡ ಈ ಪ್ರಕರಣದಲ್ಲಿ ಶಾಮೀಲಾಗಿದೆ ಎಂದು ತಿಳಿಸಿದ್ದಾನೆ. ಜತೆಗೆ, ನೀವು ತನಿಖೆಗೆ ಸಹಕರಿಸದಿದ್ದರೆ ನಿಮ್ಮ ಮಗ ಮತ್ತು ಮಗಳನ್ನು ಇಂಟರ್‌ಪೋಲ್ ಮೂಲಕ ಬಂಧಿಸಬೇಕಾಗುತ್ತದೆ ಎಂದು ಬೆದರಿಸಿದ್ದಾನೆ.

    ಖದೀಮರ ಫೋನ್ ಕರೆಗೆ ನಿವೃತ್ತ ಎಂಜಿನಿಯರ್ ಭಯಭೀತರಾಗಿದ್ದಾರೆ. ಇದು ಮೋಸದ ಕರೆ ಎಂಬುದೂ ಭೀತಿಯಲ್ಲಿ ಅವರಿಗೆ ಅರಿವಾಗಿರಲಿಲ್ಲ. ವಂಚಕರು ಸ್ಕೈಪ್ ಖಾತೆ ತೆರೆಯುವಂತೆ ಒತ್ತಾಯಿಸಿದ್ದಾರೆ. ಸ್ಕೈಪ್ ಅಪ್ಲಿಕೇಶನ್‌ನಲ್ಲಿ ಸಿಬಿಐ ಅಧಿಕಾರಿಗಳಂತೆ ಪೋಸ್ ನೀಡಿ ಹಲವಾರು ನೋಟಿಸ್‌ಗಳನ್ನು ಕಳುಹಿಸಿದ್ದಾರೆ. ಬಂಧನದಿಂದ ಬಚಾವಾಗಬೇಕಾದರೆ ಬಾಂಡ್‌ಗಳ ರೂಪದಲ್ಲಿ ಹಣವನ್ನು ಕಳುಹಿಸುವಂತೆ ಹೇಳಿದ್ದಾರೆ. ಅಷ್ಟೇ ಅಲ್ಲದೇ, ಪ್ರಕರಣದ ತನಿಖೆ ಪೂರ್ಣಗೊಂಡ ನಂತರ ಮೊತ್ತವನ್ನು ಹಿಂದಿರುಗಿಸುವುದಾಗಿ ನಿವೃತ್ತ ಎಂಜಿನಿಯರ್‌ಗೆ ಭರವಸೆ ನೀಡಿದ್ದರು. ತನಗೆ ಮತ್ತು ಮಕ್ಕಳಿಗೆ ಹಾನಿ ಮಾಡಬೇಡಿ ಎಂದು ಮನವಿ ಮಾಡಿದ ಎಂಜಿನಿಯರ್, ಐಸಿಐಸಿಐ ಬ್ಯಾಂಕ್ ಖಾತೆಯಿಂದ ಮೇ 2 ರಂದು 1.1 ಕೋಟಿ ರೂ. ಮತ್ತು ಮೇ 6 ರಂದು 50 ಲಕ್ಷ ರೂ. ಗಳನ್ನು ಹಣ ವರ್ಗಾವಣೆ ಮಾಡಿದ್ದರು.

    ಇದನ್ನೂ ಓದಿ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆಮರಿಸಿಕೊಂಡಿದ್ದ ಪ್ರಮುಖ ಆರೋಪಿ ಅರೆಸ್ಟ್

    ಮರುದಿನ ಅಪರಿಚಿತರಿಗೆ ಕರೆ ಮಾಡಿದಾಗ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಹೀಗಾಗಿ ಅವರು ತನ್ನ ಮಗಳಿಗೆ ಮಾಹಿತಿ ನೀಡಿದ್ದು, ತಾವು ವಂಚನೆಗೊಳಗಾಗಿರುವುದು ಅವರಿಗೆ ಅರಿವಾಗಿದೆ. ಬಳಿಕ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

    ಪುತ್ತೂರು ವಂಚನೆ ಪ್ರಕರಣ ನೆನಪಿಸಿದ ಕೇಸ್:

    ಈಗಾಗಲೇ ಹಲವಾರು ಆನ್ ಲೈನ್ ವಂಚನೆ ಪ್ರಕರಣ ನಡೆಯುತ್ತಿವೆ. ಮಾರ್ಚ್ ತಿಂಗಳಲ್ಲಿ ವೈದ್ಯರೊಬ್ಬರು ವಂಚನೆಗೊಗಾಗಿದ್ದರು. ಪುತ್ತೂರು ನಗರದ ಬೊಳ್ವಾರು ನಿವಾಸಿ ಡಾ. ಚಿದಂಬರ ಅಡಿಗ ವಂಚನೆಗೊಳಗಾಗಿದ್ದರು. ಮಾ.28 ರಂದು ಬೆಳಗ್ಗೆ, ಅಪರಿಚಿತ ವ್ಯಕ್ತಿಯಿಂದ ಫೋನ್ ಕರೆ ಮಾಡಿ ದೆಹಲಿ ಪೊಲೀಸ್ ಎಂಬುದಾಗಿ ನಂಬಿಸಿದ್ದಾನೆ.   ನಿಮ್ಮ ಮೇಲೆ ದೆಹಲಿಯಲ್ಲಿ ಮಾದಕ ವಸ್ತುವಿಗೆ ಸಂಬಂಧಿಸಿದಂತೆ ಹಾಗೂ ಅಕ್ರಮ ಹಣ ಹೊಂದಿರುವ ಬಗ್ಗೆ ಮತ್ತು ಮಾನವ ಕಳ್ಳ ಸಾಗಾಣಿಕ ಪ್ರಕರಣ ದಾಖಲಾಗಿ, ಅರೆಸ್ಟ್ ಮಾಡಲು ಕೋರ್ಟ್ ನಿಂದ ವಾರಂಟ್ ಎಂದು ಹೇಳಿ, ನೀವು ದೆಹಲಿಯ ಸಿಬಿಐ ಕೋರ್ಟ್ ಗೆ ಹಾಜರಾಗಬೇಕು. ನಿಮಗೆ ಇಲ್ಲಿಗೆ ಬರಲು ಆಗದಿದ್ದರೆ ಈಗ ಆನ್ಸೆನ್ ಮೂಲಕ ಕೋರ್ಟ್ ನ ಕೇಸ್ ನಡೆಸುತ್ತೇವೆ. ನೀವು ನಿಮ್ಮ ಬ್ಯಾಂಕ್ ಅಕೌಂಟ್ ನಲ್ಲಿದ್ದ ಹಣವನ್ನು ನಾನು ಹೇಳುವ ಅಕೌಂಟ್ ನಂಬರ್ ಗೆ ವರ್ಗಾವಣೆ ಮಾಡಬೇಕು.

    ನಿಮ್ಮ ಕೋರ್ಟ್ ಕೆಲಸ ಮುಗಿದ ಮೇಲೆ ನಿಮಗೆ ನಿಮ್ಮ ಹಣ ವಾಪಾಸು ಸಿಗುತ್ತದೆ, ಇಲ್ಲದಿದ್ದರೆ ನಿಮ್ಮ ಮನೆಗೆ ಬಂದು ನಿಮ್ಮನ್ನು ಅರೆಸ್ಟ್ ಮಾಡುತ್ತೇವೆ ಎಂಬುದಾಗಿ ತಿಳಿಸಿದ್ದಾರೆ. ದೂರುದಾರರ ವಿರುದ್ಧ ದೆಹಲಿಯಲ್ಲಿ ಪ್ರಕರಣ ದಾಖಲಾಗಿರುವಂತೆ ಬಿಂಬಿಸುವ ಕೆಲವೊಂದು ದಾಖಲೆಗಳನ್ನು ಅಡಿಗ ರವರ ಮೊಬೈಲ್ ಫೋನ್ ನ ವಾಟ್ಸ್ ಆಪ್ ಗೆ ಕಳುಹಿಸಿರುವುದಾಗಿ ತಿಳಿಸಿದ್ದಾರೆ.

    ಇದನ್ನೂ ಓದಿ : ಆನ್‌ಲೈನ್ ಮೋಸದ ಜಾಲಕ್ಕೆ ಬಿದ್ದು ಲಕ್ಷಗಟ್ಟಲೆ ಹಣ ಕಳೆದುಕೊಂಡ ಪುತ್ತೂರಿನ ವೈದ್ಯ..! ಕೇಸ್‌ಗೆ ಭಯಬಿದ್ರಾ ವೈದ್ಯ..!!
    ಅಪರಿಚಿತನ ಮಾತನ್ನು ನಂಬಿ, ಗಾಬರಿಗೊಂಡು ಅಡಿಗ ತಮ್ಮ ಬ್ಯಾಂಕ್ ಖಾತೆಯಿಂದ, RTGS ಮೂಲಕ ಸದರಿ ಅಪರಿಚಿತ ತಿಳಿಸಿದ ಬ್ಯಾಂಕ್ ಖಾತೆಗೆ ರೂ 16,50,000/- ಹಣವನ್ನು ವರ್ಗಾವಣೆ ಮಾಡಿ ಮೋಸ ಹೋಗಿದ್ದರು.

    1 Comment

    Leave a Reply

    Your email address will not be published. Required fields are marked *

    DAKSHINA KANNADA

    ಹರೇಕಳ ಹಾಜಬ್ಬ ಶಾಲೆಯ ಕಂಪೌಂಡ್ ಕುಸಿತ..! ವಿದ್ಯಾರ್ಥಿನಿ ಸಾ*ವು..!

    Published

    on

    ಮಂಗಳೂರು : ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ನ್ಯೂಪಡ್ಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಂಪೌಂಡ್‌ ವಾಲ್ ಕುಸಿತಗೊಂಡಿದೆ. ಕುಸಿತಗೊಂಡ ವಾಲ್‌ ಅಡಿಗೆ ಸಿಲುಕಿದ 3 ನೇ ತರಗತಿ ವಿದ್ಯಾರ್ಥಿನಿ ಅಸುನೀಗಿದ್ದಾಳೆ. ಹರೇಕಳ ಗ್ರಾ.ಪಂ ವ್ಯಾಪ್ತಿಯ ನ್ಯೂಪಡ್ಪುವಿನಲ್ಲಿ ಮೇ 20ರ ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಂಜೆ ವೇಳೆ ಸುರಿದ ಧಾರಕಾರ ಮಳೆಯಿಂದಾಗಿ ದುರ್ಘಟನೆ ಸಂಭವಿಸಿದೆ.


    ನ್ಯೂಪಡ್ಪು ನಿವಾಸಿ ಸಿದ್ದೀಖ್ – ಜಮೀಲಾ ದಂಪತಿ ಪುತ್ರಿ ಶಾಝಿಯಾ ಬಾನು (7) ಮೃತ ಬಾಲಕಿ. ಹರೇಕಳ ಹಾಜಬ್ಬರ ಶಾಲೆಯಲ್ಲಿ ಕಳೆದ ಎರಡು ದಿನಗಳಿಂದ ಮುಡಿಪು ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಶಿಬಿರ ನಡೆಯುತ್ತಿದೆ. ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳು ಇದ್ದ ಹಿನ್ನೆಲೆಯಲ್ಲಿ ಶಾಲೆಯ ಸಮೀಪದಲ್ಲೇ ಇರುವ ವಿದ್ಯಾರ್ಥಿನಿ ಶಾಝಿಯಾ ಭಾನು ಭಾಗವಹಿಸಿದ್ದಳು.

    ಸಂಜೆ ವೇಳೆ ಮನೆಗೆ ಹಿಂತಿರುಗುವ ಸಂದರ್ಭ ಶಾಲಾ ಕಂಪೌಂಡ್ ಗೇಟಿನಲ್ಲಿ ಆಟವಾಡುವ ಸಂದರ್ಭ ಕಂಪೌಂಡ್ ಬಾಲಕಿ ಶಾಝಿಯಾ ಮೇಲೆ ಕುಸಿದುಬಿದ್ದಿದೆ. ತಕ್ಷಣ ಸ್ಥಳೀಯರು ರಕ್ಷಣೆಗೆ ಧಾವಿಸಿದರೂ, ಬಾಲಕಿ ಪ್ರಾಣಪಕ್ಷಿ ಹಾರಿಹೋಗಿತ್ತು. ಬೆಳಿಗ್ಗೆಯಿಂದ ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಆಗಾಗ್ಗ ಮಳೆಯಾಗುತ್ತಿದ್ದು, ಇದರಿಂದಾಗಿ ಕಂಪೌಂಡ್ ಶಿಥಿಲಗೊಂಡು ಬಿದ್ದಿದೆ. ಘಟನಾ ಸ್ಥಳಕ್ಕೆ ಹರೇಕಳ ಗ್ರಾ.ಪಂ ಅಧಿಕಾರಿಗಳು, ಕೊಣಾಜೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Continue Reading

    DAKSHINA KANNADA

    ಪಡೀಲ್‌ ಕಣ್ಣೂರು ಬಳಿ ಭೀಕರ ವಾಹನ ಅಪಘಾ*ತ; ಕೇಬಲ್ ಟೆಕ್ನಿಷಿಯನ್ ವಿಧಿವ*ಶ

    Published

    on

    ಮಂಗಳೂರು : ಪಡೀಲ್‌ ಕಣ್ಣೂರು ಬಳಿ ನಡೆದ ರಸ್ತೆ ಅಪಘಾ*ತದಲ್ಲಿ ನಮ್ಮ ಕುಡ್ಲ ವಾಹಿನಿಯ ಸಹಸಂಸ್ಥೆ ವಿಝಾರ್ಡ್‌ ಕೇಬಲ್‌ ನೆಟ್ ವರ್ಕ್‌ನ ಸಿಬಂದಿ ಹರೀಶ್ (45) ವಿಧಿವ*ಶರಾಗಿದ್ದಾರೆ. ಕರ್ತವ್ಯ ನಿಮಿತ್ತ ಫರಂಗಿಪೇಟೆಗೆ ತೆರಳಿದ್ದ ಹರೀಶ್ ಪಡೀಲ್‌ ಕಣ್ಣೂರು ಬಳಿ ಬೈಕ್ ನಿಲ್ಲಿಸಿದ್ದ ವೇಳೆ ವೇಗವಾಗಿ ಬಂದ ಡಸ್ಟರ್‌ ಕಾರೊಂದು ಬೈಕ್‌ಗೆ ಡಿ*ಕ್ಕಿ ಹೊಡೆದಿದೆ.


    ಮಹಿಳೆಯೊಬ್ಬರು ಕಾರು ಚಲಾಯಿಸುತ್ತಿದ್ದು, ಬೈಕ್‌ಗೆ ಡಿ*ಕ್ಕಿ ಹೊಡೆದ ಬಳಿಕ ಅಲ್ಪ ದೂರ ಚಲಿಸಿದ ಕಾರಣ ಬೈಕ್ ಸಹಿತ ಹರೀಶ್ ಕಾರಿನ ಅಡಿಗೆ ಸಿಲುಕಿಕೊಂಡಿದ್ದರು. ಈ ಭೀಕರ ಅಪಘಾ*ತದಲ್ಲಿ ಗಂಭೀರ ಗಾಯಗೊಂಡಿದ್ದ ಹರೀಶ್ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

    ಹರೀಶ್ ಕಲ್ಲಾಪು ಅವರು ಹಲವಾರು ವರ್ಷಗಳಿಂದ ವಿಝಾರ್ಡ್‌ ಕೆಬಲ್ ನೆಟ್‌ವರ್ಕ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    ಇದನ್ನೂ ಓದಿ : ಕಾರ್ಕಳ : ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿ*ಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾ*ವು

    ಅಗಲಿದ ಸಿಬ್ಬಂದಿಗೆ ನಮ್ಮ ಕುಡ್ಲ ವಾಹಿನಿಯ ನಿರ್ದೇಶಕರು ಹಾಗೂ ಸಿಬಂದಿ ಸಂತಾಪ ಸೂಚಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಮೃ*ತ ಹರೀಶ್‌ ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

    Continue Reading

    DAKSHINA KANNADA

    ಕದ್ದ ಫೋನ್ ಸ್ವಿಚ್ ಆಫ್ ಆಗಿದ್ರೂ ಸುಲಭದಲ್ಲಿ ಕಂಡುಹಿಡಿಯಬಹುದು.. ಹೇಗೆ ಗೊತ್ತಾ?

    Published

    on

    ಮಂಗಳೂರು: ನಿಮ್ಮ ಸ್ಮಾರ್ಟ್‌ಫೋನ್ ಕದ್ದರೆ ಮತ್ತು ಕಳ್ಳರು ಆ ಫೋನನ್ನು ಸ್ವಿಚ್ ಆಫ್ ಮಾಡಿದರೆ ಅದನ್ನು ಹುಡುಕುವುದು ದೊಡ್ಡ ಕಷ್ಟ. ಆದರೆ ಮುಂಬರುವ ಗೂಗಲ್‌ನ ನವೀಕರಣ, ಆಂಡ್ರಾಯ್ಡ್ ಬಳಕೆದಾರರ ಫೋನ್ ಸ್ವಿಚ್ ಆಫ್ ಆಗಿದ್ದರೂ ಅವರ ಸ್ಮಾರ್ಟ್‌ಫೋನ್ ನಿಖರವಾದ ಸ್ಥಳವನ್ನು ಸುಲಭವಾಗಿ ಹುಡುಕಲು ಸಾಧ್ಯವಾಗುತ್ತದೆ.

    ಗೂಗಲ್ ಶೀಘ್ರದಲ್ಲೇ ತನ್ನ ಆಂಡ್ರಾಯ್ಡ್ 15 ಅಪ್ಡೇಟ್ ಅನ್ನು ತರಲಿದೆ. ಇದನ್ನು ಇನ್​ಸ್ಟಾಲ್ ಮಾಡಿದ ನಂತರ ಆಂಡ್ರಾಯ್ಡ್ ಬಳಕೆದಾರರು ಸ್ವಿಚ್ ಆಫ್ ಮಾಡಿದ ನಂತರವೂ ತಮ್ಮ ಫೋನ್ ಅನ್ನು ಸುಲಭವಾಗಿ ಹುಡುಕಲು ಸಾಧ್ಯವಾಗುತ್ತದೆ. ಇಲ್ಲಿಯವರೆಗೆ ಈ ವೈಶಿಷ್ಟ್ಯವು ಆಂಡ್ರಾಯ್ಡ್ ಫೋನ್‌ಗಳಲ್ಲಿ ಲಭ್ಯವಿರಲಿಲ್ಲ.

    ಗೂಗಲ್ ಕಂಪನಿಯು ಆಂಡ್ರಾಯ್ಡ್ 15 ಸಿಸ್ಟಮ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದು ಗೂಗಲ್‌ನ ಮುಂಬರುವ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ಆಗಿದೆ. ಆಂಡ್ರಾಯ್ಡ್ 15 ಓಎಸ್‌ನಲ್ಲಿ ಸ್ಮಾರ್ಟ್‌ಫೋನ್ ಬಳಕೆದಾರರಿಗೆ ಗೂಗಲ್ ಉತ್ತಮ ವೈಶಿಷ್ಟ್ಯವನ್ನು ನೀಡಲಿದೆ. ಇದರಲ್ಲಿ ಬಳಕೆದಾರರಿಗೆ ಫೋನ್ ಸ್ವಿಚ್ ಆಫ್ ಆಗಿದ್ದರೂ ಅದನ್ನು ಪತ್ತೆ ಮಾಡುವ ಆಯ್ಕೆ ಕೂಡ ಒಂದು.

    ಗೂಗಲ್​ನ ಮುಂಬರುವ OS ಆಂಡ್ರಾಯ್ಡ್ 15 ನಲ್ಲಿ ಪಾಸ್‌ವರ್ಡ್ ಮೂಲಕ ಹುಡುಕುವ ವೈಶಿಷ್ಟ್ಯವು ಲಭ್ಯವಿರುತ್ತದೆ. ಈ ಹೊಸ ವ್ಯವಸ್ಥೆಯು ಪೂರ್ವ ಕಂಪ್ಯೂಟೆಡ್ ಬ್ಲೂಟೂತ್ ಬೀಕನ್ ಆಗಿರುತ್ತದೆ. ಇದು ಸಾಧನದ ಮೆಮೊರಿಯಿಂದ ನಿಯಂತ್ರಿಸಲ್ಪಡುತ್ತದಂತೆ. ಇದಕ್ಕಾಗಿ ಫೋನ್​ನ ಹಾರ್ಡ್‌ವೇರ್‌ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ.

    ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಆಂಡ್ರಾಯ್ಡ್ ತಜ್ಞ ಮಿಶಾಲ್ ರೆಹಮಾನ್ ಈ ಬಗ್ಗೆ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಪಿಕ್ಸೆಲ್ 8 ಮತ್ತು ಪಿಕ್ಸೆಲ್ 8 ಪ್ರೊ ಜೊತೆಗೆ ಗೂಗಲ್‌ನ ಮುಂಬರುವ ಸ್ಮಾರ್ಟ್‌ಫೋನ್‌ಗಳಲ್ಲಿ ಈ ವೈಶಿಷ್ಟ್ಯವನ್ನು ಒದಗಿಸಲಾಗುವುದು ಎಂದು ಅವರು ಹೇಳಿದ್ದಾರೆ. ಪ್ರಸ್ತುತ ಆಂಡ್ರಾಯ್ಡ್ 15 ಓಎಸ್ ಬಿಡುಗಡೆಗೆ ಯಾವುದೇ ನಿಖರವಾದ ದಿನಾಂಕವನ್ನು ಗೂಗಲ್ ಬಹಿರಂಗಪಡಿಸಿಲ್ಲ.

    Continue Reading

    LATEST NEWS

    Trending