LATEST NEWS
ಚಿಕನ್ನಲ್ಲಿ ಉಪ್ಪು ಕಡಿಮೆ ಎಂದ ಗಂಡ.. ರಾಡ್ನಿಂದ ಹೊಡೆದು ಕೊ*ಲೆ ಮಾಡಿದ ಹೆಂಡತಿ
ಪಾಟ್ನಾ: ಚಿಕನ್ ಸಾಂಬಾರ್ನಲ್ಲಿ ಉಪ್ಪು ಕಡಿಮೆ ಇದೆ ಅಂತ ಹೇಳಿದ್ದಕ್ಕೆ ಗಂಡನಿಗೆ ಕಬ್ಬಿಣದ ರಾಡ್ನಿಂದ ಹೊಡೆದು ಹೆಂಡತಿ ಕೊ*ಲೆ ಮಾಡಿದ್ದಾಳೆ. ಬಿಹಾರದ ಚಂಪಾರಣ್ ಜಿಲ್ಲೆಯ ಚೌತರ್ವದ ಕೊಲ್ಹುವಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಕೊಲ್ಹುವಾ ಗ್ರಾಮದ ಶಂಶೇರ್ ಆಲಂ ಅಲಿಯಾಸ್ ಲಾಲು (35) ಮೃ*ತ ದುರ್ದೈವಿ. ಪತ್ನಿ ಶಹನಾಜ್ ಬೇಗಂ ಹಾಗೂ ಈಕೆ ಸಹೋದರಿ ಅಪ್ರಾಪ್ತೆಯನ್ನ ಪೊಲೀಸರು ಬಂಧಿಸಿದ್ದಾರೆ. ಮನೆಯಲ್ಲಿ ಯಾವಾಗಲೂ ಮಾಡುವಂತೆ ಹೆಂಡತಿ ಚಿಕನ್ ಸಾಂಬಾರ್ ಮಾಡಿದ್ದಳು. ಮನೆಗೆ ಬಂದ ಗಂಡ ಚಿಕನ್ ಊಟ ಮಾಡುತ್ತ ಚಿಕನ್ಗೆ ಉಪ್ಪು ಜಾಸ್ತಿ ಆಗಿದೆ. ನೋಡಿಕೊಂಡು ಚಿಕನ್ ಮಾಡೋಕೆ ಬರಲ್ವಾ ಎಂದು ಪ್ರಶ್ನೆ ಮಾಡಿದ್ದಾನೆ ಎಂದು ಹೇಳಲಾಗಿದೆ.
ಇದೇ ಮಾತಿಗೆ ಕೋಪಗೊಂಡ ಹೆಂಡತಿ ಮನೆಯಲ್ಲಿದ್ದ ರಾಡ್ ತೆಗೆದುಕೊಂಡು ಗಂಡನಿಗೆ ಮನಬಂದಂತೆ ಹೊಡೆದಿದ್ದಾಳೆ. ಹೆಂಡತಿ ಹೊಡೆಯುವಾಗ ಈಕೆ ಅಪ್ರಾಪ್ತ ಸಹೋದರಿ ಕೂಡ ಕೋಲು ಹಿಡಿದುಕೊಂಡು ಬಂದು ಮಾವನಿಗೆ ಹೊಡೆದಿದ್ದಾಳೆ. ಆದರೆ ರಾಡ್ನಿಂದ ಬಲವಾದ ಪೆಟ್ಟು ಬಿದ್ದಿದ್ದರಿಂದ ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದಾನೆ. ಕೂಗಾಟ, ಅರಚಾಟ ಕೇಳಿ ಪಕ್ಕದ ಮನೆಯವರು ಬಂದು ನೋಡುವಷ್ಟರಲ್ಲಿ ಗಂಡನನ್ನ ಹ*ತ್ಯೆ ಮಾಡಿದ್ದಳು. ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಮೃ*ತನ ಹೆಂಡತಿ ಹಾಗೂ ಅಪ್ರಾಪ್ತೆಯನ್ನು ಅರೆಸ್ಟ್ ಮಾಡಿ ತನಿಖೆ ಮುಂದುವರೆಸಿದ್ದಾರೆ. ಮೃ*ತದೇಹವನ್ನು ಮರ*ಣೋ*ತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃ*ತ ಶಂಶೇರ್ ಆಲಂ ಗುಜರಾತ್ನಲ್ಲಿ ಕೆಲಸ ಮಾಡುತ್ತಿದ್ದನು. ಕೆಲ ದಿನಗಳ ಹಿಂದಷ್ಟೇ ಮನೆಗೆ ಬಂದಿದ್ದನು ಎಂದು ಗ್ರಾಮಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.
LATEST NEWS
ಆಸ್ತಿ ವಿಚಾರಕ್ಕೆ ತಂಗಿಯನ್ನೇ ಕ್ರೂರ*ವಾಗಿ ಹತೈ*ಗೈದ ಅಣ್ಣ
ಮಂಗಳೂರು/ಗದಗ: ‘ಆಸ್ತಿ’ ಎಂಬ ಒಂದು ವಿಚಾರ ಬಂದಾಗ ಅಣ್ಣ-ತಂಗಿ, ಅಕ್ಕ-ತಮ್ಮ ಎಂಬುವುದನ್ನೇ ಮರೆತು ಮೃ*ಗಗಳಂತೆ ವರ್ತಿಸುವ ಸಮಾಜದಲ್ಲಿ ನಾವಿದ್ದೇವೆ. ಅಂತಹದ್ದೇ ಒಂದು ಅಮಾ*ನುಷ ಘಟನೆ ಗದಗದಲ್ಲಿಯೂ ನಡೆದಿದೆ.
ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಅನ್ನದಾನೀಶ್ವರ ನಗರದಲ್ಲಿ ಆಸ್ತಿ ವಿವಾದ ಹಿನ್ನೆಲೆ ಅಣ್ಣನೇ ತಂಗಿಯನ್ನು ಚಾಕು*ವಿನಿಂದ ಇರಿ*ದು ಕೊಂದು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ತಂಗಿ ಕಾಳಮ್ಮ (35) ಜೊತೆ ಇಂದು (ಸೆ.24) ಆಸ್ತಿ ವಿಚಾರವಾಗಿ ಜಗಳ ಶುರುವಾಗಿ, ಜಗಳ ವಿಕೋಪಕ್ಕೆ ತಿರುಗಿ ಆರೋಪಿ ಈಶ್ವರಪ್ಪ ಕ್ಯಾದಿಗೇಹಳ್ಳಿ ತಂಗಿಯ ಹೊಟ್ಟೆ*ಗೆ ಚಾಕುವಿ*ನಿಂದ ಇರಿದು ಹ*ತೈ ಮಾಡಿದ್ದಾನೆ.
ಘಟನೆ ಹಿನ್ನಲೆ:
ಮೃ*ತ ಮಹಿಳೆ 14 ವರ್ಷದ ಹಿಂದೆ ಕಟಿಂಗ್ ಸಲೂನ್ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದು, ಬಳಿಕ 2020 ರಲ್ಲಿ ಮೈಬೂಬ್ ಬೆಟಗೇರಿ ಎಂಬಾತನ ಜೊತೆ ಎರಡನೇ ಮದುವೆಯಾಗಿದ್ದಾರೆ. ಜೀವನ ನಿರ್ವಹಣೆಗಾಗಿ ಅಣ್ಣನ 15 ಎಕರೆ ಜಮೀನಿನಲ್ಲಿ ಅವಳು ಪಾಲಿಗಾಗಿ ಕೋರ್ಟ್ ಮೆಟ್ಟಿಲೇರಿದ್ದಳು.
ಕೇಸ್ ವಾಪಸ್ ಪಡೆಯುವಂತೆ ಇಂದು ಬೆಳಿಗ್ಗೆ ಅಣ್ಣನು ಮನೆಗೆ ಬಂದು ಒತ್ತಾಯ ಮಾಡಿದ್ದ. ಅವನ ಮಾತು ಕೇಳದಾಗ ಸಿಟ್ಟು ನೆತ್ತಿಗೇರಿ ಸಿಕ್ಕ ಸಿಕ್ಕಲ್ಲಿ ಮನಬಂದಂತೆ ಚಾ*ಕು ಇ*ರಿದು, ಕುತ್ತಿ*ಗೆ ಮೇಲೆ ಕಾಲಿಟ್ಟು ಉ*ಸಿರುಗಟ್ಟಿಸಿ ಕೊ*ಲೆ ಮಾಡಿದ್ದಾನೆ. ನಂತರ ತಾನೇ ಮುಂಡರಗಿ ಪೊಲೀಸರಿಗೆ ಶರಣಾಗಿದ್ದಾನೆ.
ಸ್ಥಳಕ್ಕೆ ಗದಗ ಹೆಚ್ಚುವರಿ ಎಸ್.ಪಿ ಎಂ.ಬಿ.ಸಂಕದ ಹಾಗೂ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
FILM
ಆಸ್ಕರ್ಗೆ ಅಧಿಕೃತ ಪ್ರವೇಶ ಪಡೆದ “ಸ್ವಾತಂತ್ರ್ಯ ವೀರ್ ಸಾವರ್ಕರ್” ಸಿನೆಮಾ
ಮುಂಬೈ/ಮಂಗಳೂರು: ಬಾಲಿವುಡ್ ನಟ ರಣ್ದೀಪ್ ಹೂಡಾ ನಟಿಸಿ ನಿರ್ದೇಶಿಸಿರುವ ಸ್ವಾತಂತ್ರ್ಯ ವೀರ್ ಸಾವರ್ಕರ್ ಸಿನಿಮಾವೂ ಅಧಿಕೃತವಾಗಿ 2025ರ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ಈ ಜೀವನಚರಿತ್ರೆಯಾಧಾರಿತ ಸಿನಿಮಾವೂ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರ ಜೀವನಗಾಥೆಯನ್ನು ಹೊಂದಿದ್ದು, ಈ ಸಿನಿಮಾದಲ್ಲಿ ರಣ್ದೀಪ್ ಹೂಡಾ ಜೊತೆ ಬಾಲಿವುಡ್ ನಟಿ ಅಂಕಿತಾ ಲೋಖಂಡೆ ನಟಿಸಿದ್ದಾರೆ.
ಸಂದೀಪ್ ಸಿಂಗ್ ಅವರು ಈ ಸಿನಿಮಾದ ನಿರ್ಮಾಣ ಮಾಡಿದ್ದು, ಈ ಸಿನಿಮಾವೀಗ ಆಸ್ಕರ್ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಈ ಖುಷಿಯ ವಿಚಾರವನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿ ಸಂತಸದ ಜೊತೆ ಹೆಮ್ಮೆ ಹಾಗೂ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.
2025ರ ಆಸ್ಕರ್ಗೆ ನಾಮ ನಿರ್ದೇಶನಗೊಂಡ ‘ಲಾಪತಾ ಲೇಡಿಸ್’ ಚಿತ್ರ
ಕೆಲ ವಾರಗಳ ಹಿಂದಷ್ಟೇ ರಣ್ದೀಪ್ ಹೂಡಾ ಅವರಿಗೆ ಮುಂಬೈನಲ್ಲಿ ಪ್ರತಿಷ್ಠಿತ ಸ್ವಾತಂತ್ರ್ಯವೀರ ಸಾವರ್ಕರ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯ್ತು. ಸ್ವಾತಂತ್ರ್ಯ ಹೋರಾಟಗಾರ ಜೀವನಚರಿತ್ರೆಯನ್ನು ಅದ್ಭುತವಾಗಿ ತೆರೆಗೆ ತಂದಿದ್ದಕ್ಕಾಗಿ ಈ ಪ್ರಶಸ್ತಿ ನೀಡಲಾಗಿದೆ. ಸ್ವಾತಂತ್ರ್ಯ ಹೋರಾಟದ ವೇಳೆ ಭಾರತದ ಯುವ ಸಮೂಹದಲ್ಲಿ ಸಾಕಷ್ಟು ಪ್ರಭಾವ ಬೀರಿದ್ದ ವಿವಾದಿತ ಹಾಗೂ ಪ್ರಭಾವಶಾಲಿ ನಾಯಕ ವೀರ್ ಸಾವರ್ಕರ್ ಆಗಿದ್ದಾರೆ. ಮಾರ್ಚ್ 22 ರಂದು ಹಿಂದಿ ಹಾಗೂ ಮಾರಾಠಿ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆಯಾಗಿತ್ತು.
bangalore
ಆಟೋದಲ್ಲಿ ಆಫೀಸ್ ಚೇರ್; ಏನಿದು ವಿಚಿತ್ರ ?
ಮಂಗಳೂರು/ಬೆಂಗಳೂರು : ಬೆಂಗಳೂರಿನ ಆಟೋ ಚಾಲಕರೊಬ್ಬರು ತನ್ನಲ್ಲಿರುವ ಸ್ಮಾರ್ಟ್ವಾಚ್ನಲ್ಲಿ ಯುಪಿಐ ಕ್ಯೂಆರ್ ಕೋಡ್ ಬಳಸಿ ಗ್ರಾಹಕರಿಂದ ಆನ್ಲೈನ್ ಪೇಮೆಂಟ್ ಸ್ವೀಕರಿಸಿರುವ ಫೋಟೋ ಇತ್ತೀಚೆಗೆ ಎಲ್ಲೆಡೆ ವೈರಲ್ ಆಗಿತ್ತು. ಇದೀಗ ಮತ್ತೊಬ್ಬ ಆಟೋ ಚಾಲಕನ ಕ್ರಿಯೇಟಿವ್ ಐಡಿಯಾವೊಂದು ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ತನ್ನ ಡ್ರೈವರ್ ಸೀಟನ್ನೇ ಆಫೀಸ್ ಚೇರ್ ಆಗಿ ಅಪ್ಗ್ರೇಡ್ ಮಾಡಿದ್ದ ಫೋಟೋ ಎಲ್ಲೆಡೆ ಹರಿದಾಡುತ್ತಿದೆ.
@shivaniiiiiii_ ಎಂಬ ಟ್ವಿಟರ್ ಖಾತೆಯಲ್ಲಿ ಆಟೋ ಚಾಲಕನ ಈ ಫೋಟೋ ಸೆಪ್ಟೆಂಬರ್ 23ರಂದು ಹಂಚಿಕೊಂಡಿದ್ದು, ಈ ಪೋಸ್ಟ್ ಒಂದೇ ದಿನದಲ್ಲಿ 76 ಸಾವಿರಕ್ಕೂ ಹೆಚ್ಚು ಜನರನ್ನು ತಲುಪಿದೆ. ಸದ್ಯ ಫೋಟೋ ಎಲ್ಲೆಡೆ ವೈರಲ್ ಆಗುತ್ತಿದೆ.
ಎಷ್ಟೇ ಟ್ರಾಫಿಕ್ ಇದ್ದರೂ ಕೂಡ ಆರಾಮಾಗಿ ಅಟೋದಲ್ಲಿ ಕುಳಿತುಕೊಳ್ಳಲು ಆಗುವಂತೆ ಆಫೀಸ್ ಚೇರ್ ಫಿಟ್ ಮಾಡಿರುವುದನ್ನು ಕಾಣಬಹುದು. ಸದ್ಯ ಈ ಆಟೋ ಚಾಲಕನ ಕ್ರಿಯೇಟಿವ್ ಐಡಿಯಾಗೆ ಜನರು ಪೂರ್ತಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ಜನರು ಕಾಮೆಂಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ