Connect with us

DAKSHINA KANNADA

ಬಿಜೈ ರಾಜಾನ ಕೊಲೆ ಪ್ರಕರಣ: ರವಿ ಪೂಜಾರಿ ಖುಲಾಸೆಗೊಳಿಸಿ ತೀರ್ಪು ನೀಡಿದ ನ್ಯಾಯಾಲಯ

Published

on

ಮಂಗಳೂರು: ಮಂಗಳೂರಿನಲ್ಲಿ ಭೂಗತ ಪಾತಕಿ ರವಿ ಪೂಜಾರಿಯ ವಿರುದ್ದ ದಾಖಲಾಗಿದ್ದ ಬಿಜೈ ರಾಜನ ಕೊಲೆ ಪ್ರಕರಣ ದಲ್ಲಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

2012 ನೇ ಇಸವಿಯಲ್ಲಿ ನಗರದ ಫಳ್ನೀರ್ ವೆಸ್ಟ್‌ಗೇಟ್‌ ಟವರ್ಸ್ ಕಟ್ಟಡದಲ್ಲಿರುವ ನ್ಯಾಷನಲ್ ಮೆಡಿಕಲ್ ಬಳಿಯಲ್ಲಿರುವ ಕಾಯಿನ್ ಬೂತ್ ನ ಬಳಿ ರವಿ ಪೂಜಾರಿಯು ಒಳಸಂಚು ನಡೆಸಿ ಶೈಲೇಶ್ ರಾಜ ಯಾನೆ ಬಿಜೈ ರಾಜನನ್ನು ತಲವಾರಿನಿಂದ ಕಡಿದು ಗಂಭೀರವಾಗಿ ಗಾಯಗೊಳಿಸಿ ಕೊಲೆ ಮಾಡಿಸಿದ ರವಿ ಪೂಜಾರಿ ಮತ್ತು ಅತನ ಸಹಚರರ ವಿರುದ್ದ ಮಂಗಳೂರಿನ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸಿ ರವಿ ಪೂಜಾರಿ ಮತ್ತು ಆತನ ಸಹಚರರ ಮೇಲೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.

ಸದ್ರಿ ಘಟನೆಗಳ ಸಮಯ ರವಿಪೂಜಾರಿ ವಿದೇಶದಲ್ಲಿ ತಲೆಮರೆಸಿ ಕೊಂಡಿದ್ದು, 2021ನೇ ಇಸವಿಯಲ್ಲಿ ರವಿ ಪೂಜಾರಿಯನ್ನು ಸೆನೆಗಲ್‌ನಲ್ಲಿ ಬಂಧಿಸಿದ್ದು, ತದನಂತರ ಭಾರತಕ್ಕೆ ಹಸ್ತಾಂತರಿಸಲಾಗಿತ್ತು. ಭಾರತಕ್ಕೆ ಹಸ್ತಾಂತರಿಸಿದ ನಂತರ ಆತನ ವಿರುದ್ಧ ದಾಖಲಾದ ಎಲ್ಲ ಪ್ರಕರಣಗಳಲ್ಲಿ ಪೊಲೀಸರು ಹೆಚ್ಚುವರಿ ತನಿಖೆ ನಡೆಸಿ ಹೆಚ್ಚುವರಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ರವಿಪೂಜಾರಿ ವಿರುದ್ದ ಧಾಖಲಾದ ಎರಡು ಪ್ರಕರಣಗಳಲ್ಲಿ ಮಾನ್ಯ ಪ್ರಿನ್ಸಿಪಾಲ್ ಸೀನಿಯರ್ ಸಿವಿಲ್ ಜಡ್ಜ್ ಹಾಗೂ ಒಂದು ಪ್ರಕರಣದಲ್ಲಿ ಜೆ.ಎಂ.ಎಫ಼್.ಸಿ. ನ್ಯಾಯಾಲಯ ಮಂಗಳೂರು, ಸೇರಿ ಒಟ್ಟು 4 ಪ್ರಕರಣಗಳಲ್ಲಿ ರವಿಪೂಜಾರಿಯನ್ನು ಖುಲಾಸೆ ಗೊಳಿಸಿ ತೀರ್ಪು ನೀಡಲಾಗಿದೆ. ಬಿಜೈ ರಾಜಾ ಕೊಲೆ ಪ್ರಕರಣಗಳಲ್ಲಿ ವಿಚಾರಣೆ ನಡೆಸಿದ ಗೌರವಾನ್ವಿತ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ರೀ ಮಲ್ಲಿಕಾರ್ಜುನ ಸ್ವಾಮಿಯವರು ರವಿ ಪೂಜಾರಿಯನ್ನು ಖುಲಾಸೆ ಗೊಳಿಸಿ ತೀರ್ಪು ನೀಡಿರುತ್ತಾರೆ. ಇನ್ನು ರವಿ ಪೂಜಾರಿಯ ವಿರುದ್ದ ಹಲವು ಪ್ರಕರಣಗಳು ಮಂಗಳೂರು ಹಾಗೂ ಬೆಂಗಳೂರಿನಲ್ಲಿ ತನಿಖೆಗೆ ಬಾಕಿ ಇರುತ್ತದೆ.

Click to comment

Leave a Reply

Your email address will not be published. Required fields are marked *

DAKSHINA KANNADA

Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!

Published

on

ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.

ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ

Continue Reading

DAKSHINA KANNADA

Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು

Published

on

ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್‌ ಕುಮಾರ್‌ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.

ನವೀನ್‌ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫ‌ಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.

 

Continue Reading

DAKSHINA KANNADA

ಕಟೀಲು ಕ್ಷೇತ್ರಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ

Published

on

ಕಿನ್ನಿಗೋಳಿ: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ ನೀಡಿದರು.

ದೇವಳದ ವತಿಯಿಂದ ಶ್ರೀ ರಾಮುಲು ಅವರನ್ನು ಗೌರವಿಸಲಾಯಿತು.

ಈ ಸಂದರ್ಭ ವೆಂಕಟರಮಣ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಉಪಸ್ಥಿತರಿದ್ದರು.

ಕ್ಷೇತ್ರದಲ್ಲಿ ಅವರು ಅನ್ನಪ್ರಸಾದವನ್ನು ಸ್ವೀಕರಿಸಿ ಸರಳತೆ ಮೆರೆದರು. ಬಳಿಕ ಕ್ಷೇತ್ರದ ಕುರಿತಂತೆ ಹೆಚ್ಚಿನ ಮಾಹಿತಿ ಪಡೆದುಕೊಂಡರು.

Continue Reading

LATEST NEWS

Trending