ಮಂಗಳೂರು: ಬೈಕ್ಗೆ ಕಾರು ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣೆಯ ಸಮೀಪ ನಡೆದಿದೆ.
ಸ್ಥಳೀಯ ನಿವಾಸಿ ರಮೇಶ್ ಕುಮಾರ್ (ಮೃತ ದುರ್ದೈವಿ).
ಆರೋಪಿ ಕಾರು ಚಾಲಕ ದರ್ಶನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಕುಮಾರ್ ಅವರು ಸುರತ್ಕಲ್ ಪೊಲೀಸ್ ಠಾಣಾವ್ಯಾಪ್ತಿಯ ಗೋವಿಂದ ದಾಸ ವೃತ್ತದ ಬಳಿ ರಾ. ಹೆದ್ದಾರಿಯಿಂದ ಮಹಾಲಿಂಗೇಶ್ವರ ಶಾಲೆಯ ಬಳಿ ತನ್ನ ಬೈಕ್ ನಲ್ಲಿ ತೆರಳುತ್ತಿದ್ದರು.
ಈ ವೇಳೆ ಮಂಗಳೂರು ಕಡೆಯಿಂದ ಸುರತ್ಕಲ್ ಕಡೆ ದರ್ಶನ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.
ಕಾರು ಚಾಲಕ ಅಜಾಗರೂಕತೆ ಮತ್ತು ಅಪಾಯಕಾರಿಯಾಗಿ ಕಾರು ಚಾಲಾಯಿಸುತ್ತಿದ್ದ ಪರಿಣಾಮ ರಮೇಶ್ ಅವರು ಸಂಚರಿಸುತ್ತಿದ್ದ ಬೈಕ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆಯಿಂದ ರಸ್ತೆಗೆ ಎಸೆಯಲ್ಪಟ್ಟ ರಮೇಶ್ ಅವರನ್ನು ಸ್ಥಳೀಯರು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರಾದರು ಪ್ರಯೋಜನವಾಗದೆ ಮೃತ ಪಟ್ಟಿದ್ದಾರೆ.
ಈ ಸಂಬಂಧ ರೋಶನ್ ಪ್ರಸಾದ್ ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ಉತ್ತರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.