DAKSHINA KANNADA
WATCH: ಕೆಪಿಟಿ ಬಳಿ ಭೀಕರ ಅಪಘಾ*ತ: ಲಾರಿಯಡಿ ಬಿದ್ದ ಬೈಕ್ ಸವಾರ; ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಮಂಗಳೂರು : ಬೈಕ್ ಸವಾರನ ಮೇಲೆ ಲಾರಿ ಹರಿದು ಸವಾರ ಗಂಭೀ*ರವಾಗಿ ಗಾ*ಯಗೊಂಡಿರುವ ಘಟನೆ ಮಂಗಳೂರಿನ ಕೆಪಿಟಿ ಬಳಿ ನಡೆದಿದೆ. ತಲಪಾಡಿ ಕಿನ್ಯಾ ಮೂಲದ ಅಶೋಕ್(44) ಗಂಭೀ*ರವಾಗಿ ಗಾಯಗೊಂಡವರು.
ಯೆಯ್ಯಾಡಿಯಿಂದ ಕೆ.ಪಿ.ಟಿ ಜಂಕ್ಷನ್ ಬಳಿಯ ಪೆಟ್ರೋಲ್ ಪಂಪ್ ಕಡೆ ಬೈಕ್ ಸವಾರ ಬರುತ್ತಿದ್ದರು. ಅದೇ ವೇಳೆ ಪೆಟ್ರೋಲ್ ಪಂಪ್ ಕಡೆಗೆ ಇಂಡೇನ್ ಗ್ಯಾಸ್ ತುಂಬಿದ್ದ ಗೂಡ್ಸ್ ಲಾರಿ ಬರುತ್ತಿತ್ತು. ಗೂಡ್ಸ್ ಲಾರಿಯ ಚಾಲಕ ಏಕಾಏಕಿ ಎಡಬದಿಗೆ ತಿರುಗಿಸಿದ್ದರಿಂದ ಬೈಕ್ಗೆ ಡಿ*ಕ್ಕಿ ಹೊಡೆದಿದೆ.
ಇದನ್ನೂ ಓದಿ : ಕಳ್ಳರ ಜೊತೆ ಕೈ ಜೋಡಿಸಿ ಲಕ್ಷಗಟ್ಟಲೆ ಕೊಳ್ಳೆ ಹೊಡೆದ ಪೊಲೀಸ್; ತಗಲಾಕ್ಕೊಂಡಿದ್ದು ಹೇಗೆ?
ಪರಿಣಾಮ ಬೈಕ್ ಸವಾರ ಲಾರಿಯಡಿಗೆ ಸಿಲುಕಿ ಗಂಭೀ*ರವಾಗಿ ಗಾ*ಯಗೊಂಡಿದ್ದಾರೆ. ಅಪಘಾ*ತದ ದೃಶ್ಯ ಪೆಟ್ರೋಲ್ ಬಂಕ್ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
DAKSHINA KANNADA
ಮೂಡುಬಿದಿರೆ : ಚಿನ್ನದ ಸರ ಕಸಿದು ಪರಾರಿಯಾಗಿದ್ದ ಇಬ್ಬರು ಖತರ್ನಾಕ್ ಕಳ್ಳರ ಬಂಧನ
ಮೂಡುಬಿದಿರೆ : ಆತ ಒಬ್ಬ ಖತರ್ನಾಕ್ ಕ್ರಿಮಿನಲ್ ಆಗಿದ್ದು, ಆತನ ಮೇಲೆ ಹಲವು ಪೊಲೀಸ್ ಠಾಣೆಯಲ್ಲಿ 42 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿತ್ತು. ಹಲವು ಪೊಲೀಸ್ ಠಾಣೆಯಲ್ಲಿ ಈತನ ಮೇಲೆ ವಾರೆಂಟ್ ಇದ್ರೂ ಆತ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್ ಆಗ್ತಾನೆ ಇದ್ದ. ಇತ್ತೀಚೆಗೆ ಆಗಸ್ಟ್ ತಿಂಗಳಲ್ಲಿ ಮೂಡುಬಿದ್ರೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಆತ ವೃದ್ಧ ಮಹಿಳೆಯರನ್ನು ಗುರಿಯಾಗಿಸಿ ಅವರ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದ.
ಮೂಡಬಿದ್ರೆಯ ಮಾರ್ಪಾಡಿ ಗ್ರಾಮದ ವಿವೇಕಾನಂದ ನಗರದಲ್ಲಿ ನಿರ್ಮಲಾ ಪಂಡಿತ್ ಎಂಬ 70 ವರ್ಷದ ವೃದ್ದೆಯ 24 ಗ್ರಾಂ ಚಿನ್ನದ ಸರ ಹಾಗೂ ಸೆಪ್ಟಂಬರ್ ತಿಂಗಳಲ್ಲಿ ಮಾರ್ನಾಡು ಗ್ರಾಮದ ಬಸದಿ ಬಳಿ 82 ವರ್ಷ ಪ್ರಾಯದ ಪ್ರೇಮಾ ಎಂಬ ವೃದ್ಧೆಯ 24 ಗ್ರಾಂ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದ. ಈ ಎರಡೂ ಪ್ರಕರಣದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಇಬ್ಬರು ಈ ಕೃತ್ಯ ನಡೆಸಿದ ವಿಚಾರ ಪೊಲೀಸರ ಗಮನಕ್ಕೆ ಬಂದಿತ್ತು.
ಇದನ್ನೂ ಓದಿ :ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾ*ತ; ಸವಾರ ಸಾ*ವು
ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಕೊನೆಗೂ ಆರೋಪಿಯನ್ನು ಪತ್ತೆ ಹಚ್ಚಿದಾಗ ಇದು ಖತರ್ನಾಕ್ ಖದೀಮ ಚೆಂಬುಗುಡ್ಡೆಯ ಹಬೀಬ್ ಹಸನ್ ಕೃತ್ಯ ಎಂಬುದು ಗೊತ್ತಾಗಿದೆ. ಈತನ ಮೇಲೆ ವಿವಿಧ ಠಾಣೆಯಲ್ಲಿ 15 ಕ್ಕೂ ಹೆಚ್ಚು ಬಂಧನದ ವಾರೆಂಟ್ ಇದ್ರೂ ಪೊಲೀಸರಿಗೆ ಸಿಗದೆ ತಪ್ಪಿಸಿಕೊಳ್ಳುತ್ತಿದ್ದ. ಇದೀಗ ಮೂಡುಬಿದ್ರೆಯಲ್ಲಿ ಕೊ*ಲೆ ಆರೋಪಿ ಬಂಟ್ವಾಳದ ಉಮ್ಮರ್ ಸಿಯಾಫ್ ಎಂಬಾತನ ಜೊತೆ ಸೇರಿ ಸರ ಕಳ್ಳತನಕ್ಕೆ ಇಳಿದಿದ್ದ. ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಆರೋಪಿಗಳಿಂದ 2.5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕೃ*ತ್ಯಕ್ಕೆ ಬಳಿಸಿದ್ದ ಸ್ಕೂಟರ್ ವಶಕ್ಕೆ ಪಡೆದಿದ್ದಾರೆ.
DAKSHINA KANNADA
ಸೌದಿ ಅರೇಬಿಯಾದಲ್ಲಿ ಭೀಕರ ಕಾರು ಅ*ಪಘಾತ; ಉಳ್ಳಾಲದ ತಾಯಿ – ಮಗು ಮೃ*ತ್ಯು
ಉಳ್ಳಾಲ: ಸೌದಿ ಅರೇಬಿಯಾದ ಧಮಾಮ್ ಬಳಿ ಶುಕ್ರವಾರ(ಸೆ.20) ನಡೆದ ಭೀಕರ ರಸ್ತೆ ಅಪ*ಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ತಾಯಿ, ಮಗು ಸಾ*ವನ್ನಪ್ಪಿದ್ದಾರೆ.
ಹೈದರ್ ಉಳ್ಳಾಲ್ ಅವರ ಪುತ್ರಿ ಸಫಾ ಫಾತಿಮಾ (30) ಹಾಗೂ ಎರಡೂವರೆ ವರ್ಷದ ಮೊಮ್ಮಗ ಮೃತ ದು*ರ್ದೈವಿಗಳು. ಶುಕ್ರವಾರ ಸಂಜೆ ವೇಳೆ ಮದೀನದಿಂದ ಕಾರಿನಲ್ಲಿ ಸಫಾ ಫಾತಿಮಾ ತನ್ನ ಪತಿ ಮಲಪುರಂ ಆರಿಕೋಡ್ನ ಸುಹೈಲ್ (35) ಮತ್ತು ಸಹೋದರ ಮುಹವಿಯ(23) ಜೊತೆಗೆ ದಮಾಮ್ ನಲ್ಲಿರುವ ಹೈದರ್ ಉಳ್ಳಾಲ್ ಅವರ ಮನೆಗೆ ತೆರಳುತ್ತಿದ್ದರು.
ಈ ವೇಳೆ ಕಾರು ಅ*ಪಘಾತವಾಗಿದ್ದು, ಕಾರಿನಲ್ಲಿದ್ದ ಸುಹೈಲ್, ಮಕ್ಕಳಾದ ಅಬ್ದುಲ್ ಮಲಿಕ್ (7), ಅಬ್ದುಲ್ ರಹಿಮಾನ್ (6) ಹಾಗೂ ಅಹ್ಮದ್ (5) ತೀವ್ರ ಗಾ*ಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ
DAKSHINA KANNADA
ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾ*ತ; ಸವಾರ ಸಾ*ವು
ಪುತ್ತೂರು : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾ*ತ ಸಂಭವಿಸಿ ಆಕ್ಟಿವಾ ಸವಾರ ಮೃ*ತಪಟ್ಟಿರುವ ಘಟನೆ ಪುತ್ತೂರಿನ ಪುರುಷರಕಟ್ಟೆಯಲ್ಲಿ ನಡೆದಿದೆ.
ಇಂದಿರಾ ನಗರ ನಿವಾಸಿ ಗಣೇಶ್ ಪ್ರಭು ಮೃ*ತಪಟ್ಟವರು. ಪುರುಷರಕಟ್ಟೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬ್ರೀಝಾ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಕ್ಟಿವಾಗೆ ಡಿ*ಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಣೇಶ್ ಆಕ್ಟಿವಾ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಪಟ್ಟಿದ್ದು, ಗಂ*ಭೀರ ಗಾ*ಯಗೊಂಡಿದ್ದರು.
ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ಅವರು ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ. ಮೃ*ತ ಗಣೇಶ್ ಹೋಳಿಗೆ ವ್ಯಾಪಾರಿಯಾಗಿದ್ದರು ಎಂದು ತಿಳಿದುಬಂದಿದೆ.