HomeDAKSHINA KANNADAಉಳ್ಳಾಲ ಕೋಟೆಕಾರ್ ಅಜ್ಜನ ಕಟ್ಟೆಯಿಂದ ಕಳವಾದ ಬೈಕ್ : ಕಳ್ಳರ ಜಾಡನ್ನು ಪೊಲೀಸರಿಗೆ ತೋರಿಸಿಕೊಟ್ಟ ಕೊರಗಜ್ಜ..!

ಉಳ್ಳಾಲ ಕೋಟೆಕಾರ್ ಅಜ್ಜನ ಕಟ್ಟೆಯಿಂದ ಕಳವಾದ ಬೈಕ್ : ಕಳ್ಳರ ಜಾಡನ್ನು ಪೊಲೀಸರಿಗೆ ತೋರಿಸಿಕೊಟ್ಟ ಕೊರಗಜ್ಜ..!

ಬೈಕ್ ಕಳವಾದ ಕುರಿತು ಕೊರಗಜ್ಜನ ಕಟ್ಟೆ ಎದುರುಗಡೆ ರಾಜೇಶ್ ಸೇರಿದಂತೆ ಹಲವರು ಕಳ್ಳನ ಪತ್ತೆಯಾಗುವಂತೆ ಸಾಮೂಹಿಕ ಪ್ರಾರ್ಥನೆ ನಡೆಸಿದ್ದರು.

ಉಳ್ಳಾಲ: ಉಳ್ಳಾಲ ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿಯಿಂದ ಕಳವು ನಡೆಸಿದ್ದ ಬೈಕ್ ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಬೈಕ್ ಮಾಲೀಕರ ಸ್ನೇಹಿತರೊಬ್ಬರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬೈಕ್ ಸಮೇತ ಪಾಂಡೇಶ್ವರ ಠಾಣಾ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಾ.28ರ ನಸುಕಿನ ಜಾವ ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿ ಒಳರಸ್ತೆಯಲ್ಲಿ ನಿಲ್ಲಿಸಿದ್ದ ರಾಜೇಶ್ ಎಂಬವರಿಗೆ ಸೇರಿದ ಬೈಕನ್ನು ಕಳ್ಳರು ಕಳವು ನಡೆಸಿದ್ದರು.

ಕೃತ್ಯ ಸಿಸಿಟಿವಿಯಲ್ಲಿ ಸೆಎರಯಾಗಿದ್ದು, ಕಳ್ಳನ ಚಹರೆಯೂ ಸರಿಯಾಗಿ ಗೋಚರಿಸಿತ್ತು.

ಅದೇ ದಿನದಂದು ತೊಕ್ಕೊಟ್ಟು ಕಾಂಗ್ರೆಸ್ ಕಚೇರಿ ಮುಂಭಾಗದ ಕೊರಗಜ್ಜನ ಕಟ್ಟೆ ಬಳಿ ನಿಲ್ಲಿಸಿದ್ದ ಬೈಕ್ ಕೂಡಾ ಕಳವು ನಡೆದಿತ್ತು. ಅದರ ದೃಶ್ಯ ಕೂಡಾ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಈ ಕುರಿತು ಎರಡು ಪ್ರತ್ಯೇಕ ಬೈಕ್ ಕಳವು ಪ್ರಕರಣ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಕಳವಾದ ರಾಜೇಶ್ ಸ್ನೇಹಿತ ರಫೀಕ್ ಕೆಲಸದ ನಿಮಿತ್ತ ಇಂದು ನಗರದ ಹಂಪನಕಟ್ಟೆಯ ಮಿನಿವಿಧಾನಸೌಧಕ್ಕೆ ತೆರಳಿದ್ದರು.

ಅಲ್ಲಿ ರೈಲು ನಿಲ್ದಾಣದ ರಸ್ತೆ ಬದಿಯ ಅಂಗಡಿಗೆ ತೆರಳಿದ್ದ ಸಂದರ್ಭ ಅಂಗಡಿ ಎದುರುಗಡೆ ಬೈಕ್ ನಿಂತಿತ್ತು.

ಕಳವಾದ ಸ್ನೇಹಿತ ರಾಜೇಶನ ಬೈಕ್ ಎಂದು ಶಂಕೆ ವ್ಯಕ್ತಪಡಿಸಿ , ಅಲ್ಲಿದ್ದ ಯುವಕರನ್ನು ಪ್ರಶ್ನಿಸುತ್ತಿದ್ದಂತೆ, ಇಬ್ಬರು ಪರಾರಿಯಾಗಿದ್ದಾರೆ.

ಬೈಕ್ ನೋಂದಣಿ ಸಂಖ್ಯೆಯನ್ನು ಬದಲಾಯಿಸಿದ್ದ ಕಿರಾತಕರು , ಅದರಲ್ಲಿ ` ಸೋನು’ ಎಂದು ಅಂಟಿಸಲಾಗಿದ್ದ ಸ್ಟಿಕರ್ ತೆಗೆಯುವಲ್ಲಿ ವಿಫಲರಾಗಿದ್ದರು.

ತಕ್ಷಣ ರಫೀಕ್ ಸ್ಥಳದಲ್ಲಿದ್ದ ಪಾಂಡೇಶ್ವರ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಅಂಗಡಿ ಸಿಸಿಟಿವಿಯ ಮಾಹಿತಿ ಪಡೆದು ಕಸಬ ಬೆಂಗ್ರೆ ಮತ್ತು ಪಡುಬಿದ್ರೆ ಮೂಲದ ಮೂವರನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ.

ಬೈಕ್ ಕಳವಾದ ಕುರಿತು ಕೊರಗಜ್ಜನ ಕಟ್ಟೆ ಎದುರುಗಡೆ ರಾಜೇಶ್ ಸೇರಿದಂತೆ ಹಲವರು ಕಳ್ಳನ ಪತ್ತೆಯಾಗುವಂತೆ ಸಾಮೂಹಿಕ ಪ್ರಾರ್ಥನೆ ನಡೆಸಿದ್ದರು.

ಎರಡು ದಿನಗಳ ಒಳಗೆ ಬೈಕ್ ಪತ್ತೆಯಾಗುವುದರ ಜೊತೆಗೆ ಕಳ್ಳರನ್ನು ಸೆರೆಹಿಡಿಯಲಾಗಿದೆ.

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಹಲವು ಬೈಕ್ ಗಳ ಕಳವು ಜಾಲದಲ್ಲಿ , ಪೊಲೀಸ್ ವಶದಲ್ಲಿರುವವರ ಕೈವಾಡವಿರುವ ಕುರಿತು ತನಿಖೆಯಾಗಬೇಕಿದೆ ಎಂದು ಬೈಕ್ ಕಳೆದುಕೊಂಡ ಮಾಲೀಕರು ಒತ್ತಾಯಿಸಿದ್ದಾರೆ.

Latest articles

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎಫೆಕ್ಟ್- ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ..!

ಜೂನ್ ಎರಡನೇ ವಾರಕ್ಕೆ ಕಾಲಿಟ್ಟರೂ ಮುಂಗಾರು ಮಳೆಯ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಹವಾಮಾನ ಇಲಾಖೆಯ ಪ್ರಕಾರ ಈ ಬಾರಿ...

ಮಂಗಳೂರು: ಮಹಿಳಾ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿ ಮಂಗಳೂರಿನಲ್ಲಿ ಪ್ರತಿಭಟನೆ-ಬೃಜ್‌ ಭೂಷಣ್‌ ಬಂಧನಕ್ಕೆ ಆಗ್ರಹ

ಮಹಿಳಾ ಕುಸ್ತಿ ಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅರೋಪ ಹೊತ್ತ ಎಸಗಿದ ಉತ್ತರ ಪ್ರದೇಶದ ಬಿಜೆಪಿ ಸಂಸದ...

ಮಂಗಳೂರು: ಬೀದಿಬದಿ ವ್ಯಾಪಾರಿಗಳ ಮೇಲಿನ ಕಿರುಕುಳ, ಕೇಸುಗಳಿಗೆ ಖಂಡನೆ – ಸುಳ್ಳು ಮೊಕದ್ದಮೆ ವಾಪಾಸ್ ಪಡೆಯಲು ಒತ್ತಾಯಿಸಿ ಪ್ರತಿಭಟನೆ

ಜನಪರ ಹೋರಾಟಗಾರ, ಬೀದಿ ವ್ಯಾಪಾರಿಗಳ ಮುಂದಾಳು ಬಿ ಕೆ ಇಮ್ತಿಯಾಝ್‌ ಮತ್ತು ಮುಖಂಡರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ವಾಪಾಸ್...

ರಾಮನಗರ: ಟೋಲ್ ವಿಚಾರಕ್ಕೆ ಸಂಬಂಧಿಸಿ ಗಲಾಟೆ- ಯುವಕರ ತಂಡದಿಂದ ಸಿಬಂದಿ ಹತ್ಯೆ..!

ಟೋಲ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಯುವಕರ ತಂಡವೊಂದು ಗಲಾಟೆ ಮಾಡಿದ ಹಿನ್ನಲೆಯಲ್ಲಿ ಟೋಲ್ ಸಿಬ್ಬಂದಿಯ ಕೊಲೆಯಾಗಿದೆ. ಈ ಘಟನೆ...