LATEST NEWS
ಅಪ್ರಾಪ್ತರನ್ನು ಬಳಸಿ ಬೈಕ್ ಕದಿಯುತ್ತಿದ್ದ ಕಾನ್ಸ್ಟೇಬಲ್ ಇದೀಗ ಪೊಲೀಸ್ ಅತಿಥಿ
ಬೆಂಗಳೂರು: ಪೊಲೀಸರೇ ಬೈಕ್ ಕಳ್ಳತನಕ್ಕೆ ಇಳಿದ ಅಪರೂಪದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಕಾನ್ಸ್ಟೆಬಲ್ ಒಬ್ಬ ಅಪ್ರಾಪ್ತ ಬಾಲಕರನ್ನು ಬಳಸಿಕೊಂಡು ಬೈಕ್ ಗಳನ್ನು ಕಳ್ಳತನ ಮಾಡಿಸುತ್ತಿದ್ದ ಕಾನ್ಸ್ಟೇಬಲ್ನನ್ನು ಅದೇ ಇಲಾಖೆಯ ಪೊಲೀಸರೇ ಬಂಧಿಸಿರುವ ಘಟನೆ ನಗರದ ಮಾಗಡಿ ರಸ್ತೆಯಲ್ಲಿ ನಡೆದಿದೆ.
ಪೊಲೀಸ್ ಕಾನ್ಸ್ಟೇಬಲ್ ಹೊನ್ನಪ್ಪ ರವಿ ಬಂಧಿತ ಆರೋಪಿ. ಈತ ಅಪ್ರಾಪ್ತರನ್ನು ಬಳಸಿಕೊಂಡು ಬೆಂಗಳೂರು, ಬೆಂಗಳೂರು ಹೊರವಲಯ, ಹಾವೇರಿಯ ರಾಣಿಬೆನ್ನೂರು ಸೇರಿದಂತೆ ಅನೇಕ ಕಡೆ ಬೈಕ್ಗಳನ್ನು ಕಳ್ಳತನ ಮಾಡಿಸುತ್ತಿದ್ದ. ಈವರೆಗೂ ಹೊನ್ನಪ್ಪ ರವಿ ಮಾರಾಟ ಮಾಡಿದ್ದ 53 ಬೈಕ್ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೊನ್ನಪ್ಪ, ರಾಜಸ್ಥಾನದ ರಮೇಶ್, ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.
2016ರ ಬ್ಯಾಚ್ನ ಸಿವಿಲ್ ಕಾನ್ಸ್ಟೇಬಲ್ ಆಗಿರುವ ಹೊನ್ನಪ್ಪ ರವಿ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಆಗಿ ಕಾರ್ಯನಿರ್ವಹಿಸುತ್ತಿದ್ದ. ಆನ್ಲೈನ್ ನಲ್ಲಿ ಹೆಚ್ಚು ಮಾರಾಟವಾಗುವ ಬೈಕ್ ಗಳನ್ನೇ ಹೊನ್ನಪ್ಪ ಕಳ್ಳತನ ಮಾಡಿಸುತ್ತಿದ್ದ. ಹೊನ್ನಪ್ಪ ಮಾರಾಟ ಮಾಡಿದ ಬೈಕ್ನಿಂದ ಬಂದ ಹಣದಲ್ಲಿ ಐದರಿಂದ ಆರು ಸಾವಿರ ಹಣವನ್ನು ಹುಡುಗರಿಗೆ ನೀಡುತ್ತಿದ್ದ.
ಸದ್ಯ ಕಾನ್ಸ್ಟೇಬಲ್ನನ್ನು ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆದಿರುವ ಮಾಗಡಿ ರೋಡ್ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅಪರಾಧಗಳನ್ನು ನಿಯಂತ್ರಿಸಬೇಕಾದ ಆರಕ್ಷಕನೇ ಕಳ್ಳನಾಗಿರುವುದು ವಿಪರ್ಯಾಸ.
FILM
ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ
ಉಡುಪಿ: ಇಂದು ಬೆಳಂಬೆಳಗ್ಗೆ ರಾಜಕೀಯ ನಾಯಕರು, ಜನಸಾಮಾನ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸಿದರೆ ಉಡುಪಿಯ ಮತಗಟ್ಟೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತದಾನ ಮಾಡಿದ್ದಾರೆ.
ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 197 ಕ್ಕೆ ಆಗಮಿಸಿ ಮತ ಚಲಾಯಿಸಿದರು. ರಕ್ಷಿತ್ ಶೆಟ್ಟಿ ಮನೆಯ ಮುಂಭಾಗದಲ್ಲೇ ಇರುವ ಮತಗಟ್ಟೆಗೆ ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದರು. ರಕ್ಷಿತ್ ಶೆಟ್ಟಿ ಈ ಸಂದರ್ಭದಲ್ಲಿ ಸೆಲೆಬ್ರೆಟಿಯನ್ನು ಕಂಡ ಇತರ ಮತದಾರರು ಹರ್ಷಚಿತ್ತರಾಗಿ ಸೆಲ್ಫೆ ಕ್ಲಿಕಿಸಲು ಮುಂದಾದ ಘಟನೆ ನಡೆಯಿತು.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
LATEST NEWS
ಅಯೋಧ್ಯೆಯ ಅಂಗಳದಲ್ಲಿ ಶೂಟಿಂಗ್ ಮಾಡಿದ ಮೊಟ್ಟ ಮೊದಲ ಕನ್ನಡ ಸೀರಿಯಲ್ ಇದು?
ಮಹಿಳೆಯರಿಗೆ ಸೀರಿಯಲ್ ನೋಡುವುದಂದರೆ ಒಂತಾರ ಹುಚ್ಚು. ಮನೆಯಲ್ಲೇ ಇರುವ ಮಹಿಳೆಯರು ಕೆಲವೊಮ್ಮೆ ಬೆಳಗ್ಗೆಯಿಂದ ಸಂಜೆಯವರೆಗೆ ಟಿವಿಯಲ್ಲಿ ಸೀರಿಯಲ್ ನೋಡುತ್ತಾ ಇರುತ್ತಾರೆ. ಸೀರಿಯಲ್ ನೋಡೊದು ಮಾತ್ರ ಅಲ್ಲ ಅದರ ಬಗ್ಗೆ ಸಂವಾದ ಕೂಡ ಮನೆಯವರಲ್ಲಿ ಮಾಡುತ್ತಾ ಇರುತ್ತಾರೆ.
ಈ ನಡುವೆ ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ದೇಶದ ಜನರು ತುಂಬಾ ಸಂತೋಷದಲ್ಲಿದ್ದಾರೆ. ಅದೆಷ್ಟೋ ಜನ ಹಿಂದೂಗಳ ಕನಸು ನನಸಾದ ಕ್ಷಣ ಎಂದು ಹೇಳಬಹುದು. ಒಮ್ಮೆಯಾದ್ರೂ ಅಯೋಧ್ಯೆಗೆ ಹೋಗಿಬರಬೇಕು ಅಂತಾ ಪ್ಲಾನ್ ಅಂತೂ ಮಾಡ್ತಾ ಇರೋದು ಕಂಡಿತ. ಕೆಲವರು ಹೋಗಿ ಬಂದಿದ್ದಾರೆ ಕೂಡ ಆದರೆ ಇನ್ನು ಕೆಲವರು ಇನ್ನು ಹೋಗಬೇಕು. ಇದುವರೆಗೆ ಅಯೋಧ್ಯೆ ರಾಮಮಂದಿರದಲ್ಲಿ ಯಾವೂದೇ ರೀತಿದ ಫಿಲ್ಮ್ ಶೂಟಿಂಗ್, ಸೀರಿಯಲ್, ಕಿರುಚಿತ್ರ ಯಾವೂದು ಶೂಟಿಂಗ್ ಆಗಲಿಲ್ಲ. ಆದರೇ ಇದೇ ಮೊದಲ ಬಾರಿಗೇ ಕನ್ನಡ ಸೀರಿಯಲ್ ಇಂಡಸ್ಟ್ರಿಯಲ್ಲಿ ಕನ್ಯಾದಾನ ಸೀರಿಯಲ್ ಹೊಸ ದಾಖಲೆ ಬರೆದಿದೆ.
ಉದಯ ಟಿವಿಯಲ್ಲಿ ಪ್ರಸಾರವಾಗೋ ಕನ್ಯಾದಾನ ಧಾರಾವಾಹಿ ಈಗ ಹೊಸ ದಾಖಲೆ ಬರೆದಿದ್ದಾರೆ. ಕನ್ನಡ ಟೆಲಿವಿಷನ್ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಯೋಧ್ಯೆಯಲ್ಲಿ ಚಿತ್ರೀಕರಣಗೊಂಡ ಮೊಟ್ಟ ಮೊದಲ ಸೀರಿಯಲ್ ಎಂಬ ಹೆಗ್ಗಳಿಕೆಗೆ ಕನ್ಯಾದಾನ ಧಾರಾವಾಹಿ ಪಾತ್ರವಾಗಿದೆ.
ಜನವರಿ 22ರಂದು ಅಂದ್ರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಇಲ್ಲಿಯವೆರೆಗೂ ಯಾವುದೇ ಸಿನಿಮಾವಾಗ್ಲಿ, ಅಥವಾ ಸೀರಿಯಲ್ ಆಗ್ಲಿ ಶೂಟ್ ಮಾಡಿರಲಿಲ್ಲ. ಆದ್ರೆ, ಕನ್ಯಾದಾನ ಧಾರವಾಹಿ ತಂಡ ಫಸ್ಟ್ಟೈಮ್ ಅಯೋಧ್ಯೆಗೆ ಹೋಗಿ ಚಿತ್ರೀಕರಣ ಮಾಡಿದೆ.
ಈ ಸೀರಿಯಲ್ನಲ್ಲಿ ಬಹುತೇಕ ಪಾತ್ರಗಳು ಒಂದಲ್ಲ ಒಂದು ಸಮಸ್ಯೆ ಎದುರಿಸ್ತಿವೆ. ಹಾಗಾಗಿ ರಾಮನ ದರ್ಶನ ಪಡೆದು ಆ ಕಷ್ಟಗಳಿಂದ ಹೊರಬರಬೇಕು ಎಂದು ನಿರ್ಧರಿಸಿ, ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಶೂಟಿಂಗ್ ಮಾಡಿರೋ ಬಗ್ಗೆ ಸೀರಿಯಲ್ ತಂಡ ಸಂತಸ ಹಂಚಿಕೊಂಡಿದೆ.