Connect with us

LATEST NEWS

 ಮಾರಕ ಹಕ್ಕಿ ಜ್ವರಕ್ಕೆ ಯುರೋಪ್ ತತ್ತರ : ಭಾರತಲ್ಲಿ ಕಟ್ಟೆಚ್ಚರ..!

Published

on

 ಮಾರಕ ಹಕ್ಕಿ ಜ್ವರಕ್ಕೆ ಯುರೋಪ್ ತತ್ತರ : ಭಾರತಲ್ಲಿ ಕಟ್ಟೆಚ್ಚರ..!

ಪ್ಯಾರಿಸ್ : ಕೊರೊನಾದಿಂದ ವಿಶ್ವವೇ ತ್ತರಿಸಿ ಹೋಗಿದೆ. ಲಕ್ಷಾಂತರ ಜನ ಜೀವ ಕಳಕೊಂಡಿದ್ದಾರೆ ಇದರ ಬೆನ್ನಿಗೇ ಮತ್ತೊಂದು ಹೊಡೆತ ಮನು ಕುಲಕ್ಕೆ ಬಿದ್ದಿದೆ. ಮಾರಕ ಹಕ್ಕಿ ಜ್ವರ ಯುರೋಪಿನಲ್ಲಿ ವೇಗವಾಗಿ ಹರಡುತ್ತಿದೆ.

ರಷ್ಯಾ, ಕಜಕಿಸ್ತಾನ್‌ ಮತ್ತು ಇಸ್ರೇಲ್‌ಗಳನ್ನು ತೀವ್ರವಾಗಿ ಭಾದಿಸಿದ ನಂತರ ಫ್ರಾನ್ಸ್‌, ನೆದರ್ಲೆಂಡ್ಸ್‌, ಜರ್ಮನಿ, ಬ್ರಿಟನ್‌, ಬೆಲ್ಜಿಯಂ, ಡೆನ್ಮಾರ್ಕ್‌, ಐರ್ಲೆಂಡ್‌, ಸ್ವೀಡನ್‌ನಲ್ಲಿ ಕೋಳಿ ಜ್ವರದ ವೈರಸ್‌ ಪತ್ತೆಯಾಗಿದೆ. ಇದೇ ಮೊದಲ ಬಾರಿಗೆ ಈ ವಾರ ಕ್ರೊರಾಟಿಯಾ, ಸ್ಲೊವೇನಿಯಾ ಮತ್ತು ಪೋಲೆಂಡ್‌ಗಳಲ್ಲಿಯೂ ಕೋಳಿ ಜ್ವರ ಕಾಣಿಸಿಕೊಂಡಿದೆ.

ಬಹುಪಾಲು ಪ್ರಕರಣಗಳು ವಲಸೆ ಕಾಡು ಪಕ್ಷಿಗಳಲ್ಲಿ ಕಾಣಿಸಿಕೊಂಡಿವೆ. ಆದರೆ, ಕೋಳಿ ಸಾಕಣೆ ಕೇಂದ್ರಗಳಲ್ಲಿಯೂ ವೈರಸ್‌ ಸಾಂಕ್ರಾಮಿಕಗೊಂಡಿದೆ. ಹೀಗಾಗಿ ಯೂರೋಪ್‌ನಾದ್ಯಂತ ಇಲ್ಲಿಯವರೆಗೆ ಕನಿಷ್ಠ 1.6 ದಶಲಕ್ಷ ಕೋಳಿ ಮತ್ತು ಬಾತುಕೋಳಿಗಳು ಸತ್ತಿವೆ. ಇಲ್ಲವೇ ಕೊಲ್ಲಲಾಗಿದೆ.

ಕೋಳಿ ಉದ್ಯಮವು ಹಿಂದಿನ ದುರಂತಗಳನ್ನು ಗಮನದಲ್ಲಿಟ್ಟುಕೊಂಡು ಈಗಾಗಲೇ ಲಕ್ಷಾಂತರ ಕೋಳಿಗಳನ್ನು ಕೊಂದಿದೆ. ಹೀಗಾಗಿ ಉದ್ಯಮವು ಗಮನಾರ್ಹ ಆರ್ಥಿಕ ನಷ್ಟವನ್ನು ಕಾಣುತ್ತಿದೆ.

ಕೋಳಿ ಮಾಂಸ ಮತ್ತು ಮೊಟ್ಟೆಗಳನ್ನು ರಫ್ತು ಮಾಡುವ ಯುರೋಪಿನ ಅತಿ ದೊಡ್ಡ ರಾಷ್ಟ್ರ ನೆದರ್ಲೆಂಡ್‌ನಲ್ಲಿ ಸುಮಾರು 5,00,000 ಕೋಳಿಗಳು ವೈರಸ್‌ನಿಂದ ಸತ್ತಿವೆ, ಅಥವಾ ಕೊಲ್ಲಲಾಗಿದೆ. ಈ ವಾರ ಪೋಲೆಂಡ್‌ನ ಕೋಳಿ ಸಾಕಣೆ ಕೇಂದ್ರದಲ್ಲಿ 9,00,000 ಕೋಳಿಗಳು ಸತ್ತಿವೆ ಎಂದು ಅಲ್ಲಿನ ಸಚಿವಾಲಯ ತಿಳಿಸಿದೆ.

‘ಕೋಳಿ ಸಾಕಣೆ ಕೇಂದ್ರಗಳಲ್ಲಿ ಪ್ರಸರಣೆ ಅಪಾಯ ಮತ್ತು ಕಾಡು ಪಕ್ಷಿಗಳಲ್ಲಿನ ಸೋಂಕು ಪ್ರಕರಣಗಳು ಕಳೆದ ಎರಡು ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಹೆಚ್ಚಿದೆ. ಏಕೆಂದರೆ ಯುರೋಪಿನಲ್ಲಿ ಪಕ್ಷಿ ಜ್ವರದ ವಿವಿಧ ವೈರಸ್‌ಗಳು ದೊಡ್ಡಪ್ರಮಾಣದಲ್ಲಿ ಕಾಣಿಸಿಕೊಂಡಿವೆ’ ಎಂದು ಜರ್ಮನಿಯ ಪ್ರಾಣಿ ರೋಗ ಸಂಶೋಧನಾ ವಿಭಾಗದ ವಕ್ತಾರ ಹೇಳಿದ್ದಾರೆ.

FILM

ಮೊದಲ ಬಾರಿ ಮದುವೆ ರಹಸ್ಯ ಬಿಚ್ಚಿಟ್ಟ ಹಳ್ಳಿಕಾರ್‌ ಒಡೆಯ ವರ್ತೂರು ಸಂತೋಷ್

Published

on

ಬೆಂಗಳೂರು : ಬಿಗ್‌ಬಾಸ್‌ ಕನ್ನಡ ಸೀಸನ್‌ 10ರಲ್ಲಿ ಹಲವು ಸ್ಪರ್ಧಿಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದಾರೆ. ಇದರಲ್ಲಿ ಹುಲಿ ಉಗುರು ಧರಿಸಿದ ಕಾರಣಕ್ಕೆ ಪೊಲೀಸರಿಂದ ಹಳ್ಳಿಕಾರ್‌ ಒಡೆಯ ವರ್ತೂರು ಸಂತೋಷ್‌ ಅವರ ಬಂಧನವಾಗಿತ್ತು. ಈಗ ಮದುವೆ ವಿಚಾರ ಮತ್ತೆ ಮುನ್ನೆಲೆಗೆ ಬಂದು ನಿಂತಿದೆ.

ಬಿಗ್ ಬಾಸ್ ಮನೆಯಲ್ಲಿಯೇ ತಮ್ಮ ಮದುವೆ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ವರ್ತೂರು ಸಂತೋಷ್ ಅವರಿಗೆ ಮದುವೆ ಆಗಿದೆ. ಒಬ್ಬಳು ಹೆಣ್ಣು ಮಗು ಕೂಡ ಇದೆ. ಆದರೆ ಅವರು ಮದುವೆ ಆಗಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಕೆಲದಿನಗಳ ಹಿಂದೆ ಸೋಷಿಯಲ್‌ಮೀಡಿಯಾದಲ್ಲಿ ಗುಲ್ಲೆದ್ದಿತ್ತು. ಈಗ ಬಿಗ್ ಬಾಸ್ ಮನೆಯಲ್ಲಿ ಸ್ವತಃ ವರ್ತೂರ್ ಅವರೇ ತಮ್ಮ ಮದುವೆ, ಪತ್ನಿ ಜೊತೆಗಿನ ಭಿನ್ನಾಭಿಪ್ರಾಯಗಳ ಕುರಿತು ಮನಸ್ಸು ಬಿಚ್ಚಿ ಮಾತನಾಡಿದ್ದಾರೆ.

ಬಿಗ್‌ಬಾಸ್ ಮನೆ ಸೇರಿದಾಗಿನಿಂದ ಈ ವರೆಗೂ ತನಗೆ ಮದುವೆ ಆಗಿದೆ ಎಂಬ ಒಂದೇ ಒಂದು ಸಣ್ಣ ಸುಳಿವನ್ನೂ ಬಿಟ್ಟುಕೊಟ್ಟಿರಲಿಲ್ಲ ವರ್ತೂರು ಸಂತೋಷ್.  ಈಗ ಗುಟ್ಟು ರಟ್ಟಾಗಿದೆ.

‘ವರ್ತೂರ ಸಂತೋಷ್‌ ಒಳಗಡೇ ಏನೈತೆ ಅನ್ನೋದನ್ನು ಹೇಳ್ತಿದ್ದೇನೆ. ನೋಡು ದೊಡ್ಡಪ್ಪ ನೀನು ಹೀಗು ತಾಳಿಕಟ್ಟು ಅಂದ್ರೆ ಕಟ್ಟಿಬಿಡ್ತಿನಿ. ನಾನು ಅವರಿಗೆ ಮಾತು ಕೊಟ್ಟು ಒಪ್ಪಿಕೊಂಡು ಬಿಟ್ಟೆ. ಮದುವೆಯೂ ಆಯ್ತು, ದಿನ ಕಳೆದಂತೆ, ಅಮ್ಮನನ್ನು ಇಗ್ನೋರ್‌ ಮಾಡೋಕೆ ಶುರು ಮಾಡಿದ್ರು. ನಾನು ಸಂಪಾದನೆ ಮಾಡಿದ ಜನರನ್ನು ತೊರೆದು ಇವರ ಹಿಂದೆ ಹೋಗಬೇಕು ಎಂದರೆ ಅದು ಸಾಧ್ಯವಾಗದ ಮಾತು. ಆಗ ಹೆಂಡತಿ ಮನೆ ಹತ್ತಿರ ಹೋಗ್ತಿನಿ. ನನ್ನ ಮಾತಿನ ಪ್ರಕಾರ ಬಂದ್ರೆ, ನೀನು ರಾಣಿನೇ ಎಂದು ಕರೆದೆ. ಮೊದಲು ನೀನು ಗೇಟಿಂದ ಆಚೆ ಹೋಗು ಎನ್ನುತ್ತಾರೆ. ಆವತ್ತು ನಾನು ಮಾತು ಕೊಟ್ಟು ಬಂದಿದ್ದೀನಿ ಇವತ್ತು ಆ ಮಾತಿನ ಮೇಲೆ ನಿಂತಿದ್ದೀನಿ’ ಎಂದಿದ್ದಾರೆ ವರ್ತೂರು.

ಮುಂದೇನಾಗುತ್ತೆ ಅನ್ನುವುದನ್ನ ಇವತ್ತಿನ ಎಪಿಸೋಡ್ ನಲ್ಲಿ ನೋಡ್ಬೇಕಷ್ಟೆ..

Continue Reading

Ancient Mangaluru

ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

Published

on

ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.

ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.  ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ  ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು.  ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ  ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Continue Reading

DAKSHINA KANNADA

ಉಡುಪಿ : ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ

Published

on

ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್‌ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.

ಪ್ರೀತಮ್‌ ಅವರು ಬೈಕ್‌ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್‌ ಪಂಪ್‌ ಕಡೆಯಿಂದ ಸರ್ವಿಸ್‌ ರೋಡ್‌ನ‌ಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್‌ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್‌ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್‌ ಕೆಟರಿಂಗ್‌ ಉದ್ಯಮ ನಡೆಸುತ್ತಿದ್ದರು. ಪ್ರೀತಮ್‌ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Continue Reading

LATEST NEWS

Trending