Connect with us

    DAKSHINA KANNADA

    ಇನ್ಮುಂದೆ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

    Published

    on

    ಬೆಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಅಂದ್ರೆ ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ.

    ಗಣ್ಯವ್ಯಕ್ತಿಗಳು ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಸಿಹಿ ಇತ್ಯಾದಿ ಹಂಚುವ ಅದ್ದೂರಿ ಕಾರ್ಯಕ್ರಮಗಳನ್ನು ಸಂಸ್ಥೆಯಲ್ಲಿ ಆಚರಿಸುವುದರಿಂದ ಮಕ್ಕಳಿಗೆ ಅವರ ಹುಟ್ಟು ಹಬ್ಬವನ್ನು ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲವಲ್ಲ ಅಂತ ಬೇಜಾರು ಮಾಡಿಕೊಳ್ಳುತ್ತವೆ. ಇದರಿಂದ ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಹೀಗಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಮಂಗಳೂರು : ಸೂರಜ್ ಪದವಿಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆ

    Published

    on

    ಮಂಗಳೂರು : ಸೂರಜ್ ಪದವಿಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ನಡೆಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕ ರಾಜೇಶ್ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಾದ ಕೃ ತಿಕ್ ಮತ್ತು ಪೃತ್ವಿಕ್ 6 ರಿಂದ 10ನೇ ತರಗತಿಯ ಮಕ್ಕಳಿಗೆ ಯೋಗವನ್ನು ಹೇಳಿಕೊಟ್ಟರು.

    ಶಾಲೆಯ ವಿದ್ಯಾರ್ಥಿಗಳು ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು.

     

    Continue Reading

    DAKSHINA KANNADA

    ವಿಟ್ಲ : ಬಾಲವಿಕಾಸದಲ್ಲಿ ‘ವಿಕಾಸೋತ್ಸವ 2024-25 – ದ ಕಲ್ಚರಲ್ ಫೆಸ್ಟ್’

    Published

    on

    ವಿಟ್ಲ : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಲ್ಲಿ ಸುಪ್ತವಾಗಿ ಹುದುಗಿರುವ ಪ್ರತಿಭೆಗಳನ್ನು ಹೊರತರಲು ಸೂಕ್ತವಾದ ವೇದಿಕೆಯನ್ನು ಒದಗಿಸಲು ಮೂರು ದಿನಗಳ ಕಾಲ ನಡೆಯಲಿರುವ ಶಾಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು “ವಿಕಾಸೋತ್ಸವ 2024-25 – ದ ಕಲ್ಚರಲ್ ಫೆಸ್ಟ್ ” ಹಾಗೂ ವಿಜ್ಞಾನ ಮತ್ತು ಕಲಾ ಸಂಘಗಳ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.


    “ವಿಕಾಸೋತ್ಸವ 2024-25 ದ ಕಲ್ಚರಲ್ ಫೆಸ್ಟ್ -ಫೆಸ್ಟಿವಿಟಿ ಆಫ್ ಕ್ರಿಯೇಟಿವಿಟಿ ” ಎಂದು ಉಲ್ಲೇಖಿಸಲಾದ ವಿಜಯದ ಚೌಕಟ್ಟಿನ ಪರದೆಯನ್ನು ಅನಾವರಣಗೊಳಿಸುವುದರ ಮೂಲಕ ಹಾಗೂ ವಿವಿಧ ಲಲಿತ ಕಲೆಗಳನ್ನು ಬಿಂಬಿಸುವಂತಹ ವಿನ್ಯಾಸವಿರುವ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕಗಳಿರುವ ಪೆಟ್ಟಿಗೆಯನ್ನು ತೆರೆಯುವ ಮೂಲಕ ವಿಕಾಸೋತ್ಸವ 2024-25 ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ನಂತರ “ಇನಾಗರೇಷನ್ ಆಫ್ ಸೈನ್ಸ್ ಅಂಡ್ ಆರ್ಟ್ಸ್ ಕ್ಲಬ್ ” ಎಂದು ಉಲ್ಲೇಖಿಸಲಾದ ಎಲ್ ಈ ಡಿ ಬೋರ್ಡಿನ ಗುಂಡಿಯನ್ನು ಒತ್ತುವ ಮೂಲಕ 2024-25ನೇ ಶೈಕ್ಷಣಿಕ ಸಾಲಿನ ವಿಜ್ಞಾನ ಹಾಗೂ ಕಲಾ ಸಂಘವನ್ನು ಉದ್ಘಾಟಿಸಲಾಯಿತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಜೆ, ವಿದ್ಯಾರ್ಥಿಗಳು ಕೇವಲ ಪಠ್ಯ ಚಟುವಟಿಕೆಗಳಿಗೆ ತಮ್ಮನ್ನು ತಾವು ಸೀಮಿತಗೊಳಿಸದೆ ವಿಕಾಸೋತ್ಸವದಂತಹ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಪೋಷಕರ ಹಾಗೂ ಶಿಕ್ಷಕರ ಸೂಕ್ತ ಮಾರ್ಗದರ್ಶನವನ್ನು ಪಡೆದುಕೊಂಡು ತಮ್ಮಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಗಳನ್ನು ಹೊರತರುವ ಪ್ರಯತ್ನವನ್ನು ಮಾಡಿ ಜಯಗಳಿಸಬೇಕು ಎಂದು ಶುಭಹಾರೈಸಿದರು.


    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರಿನ ವಿವೇಕಾನಂದ ಕೇಂದ್ರೀಯ ಶಾಲೆಯ ಅಧ್ಯಕ್ಷ ವಸಂತಿ ಕೆ. , “ಮಾಣಿಯಂತಹ ಗ್ರಾಮೀಣ ಪರಿಸರದಲ್ಲಿ ಒಂದು ಅಚ್ಚುಕಟ್ಟಾದ ಹಾಗೂ ಸೌಲಭ್ಯಭರಿತ ಅತ್ಯದ್ಭುತವಾದ ಶಾಲಾ ಕಟ್ಟಡವನ್ನು ನಿರ್ಮಿಸಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅತ್ಯುತ್ತಮವಾದ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರ ಹಾಗೂ ಕಾರ್ಯದರ್ಶಿಗಳ ತ್ಯಾಗ ಮತ್ತು ಸೇವಾ ಮನೋಭಾವನೆ ಶ್ಲಾಘನೀಯವಾದುದು. ಶಾಲೆಯಲ್ಲಿ ರಚನೆ ಮಾಡುವ ವಿಜ್ಞಾನ ಸಂಘಗಳಂತಹ ವಿವಿಧ ಸಂಘಗಳು ವಿದ್ಯಾರ್ಥಿಗಳನ್ನು ವಿವಿಧ ಸಂಶೋಧನಾ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ0ತೆ ಮಾಡಿ ಜೀವನಾನುಭವಗಳನ್ನು ಗಳಿಸಿಕೊಳ್ಳಲು ನೆರವಾಗುತ್ತವೆ. ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸಿ ಸ್ವಂತಿಕೆ ಮತ್ತು ಜೀವನಾಸಾಕ್ತಿಗಳನ್ನು ಹೆಚ್ಚಿಸಿಕೊಳ್ಳಬೇಕು “ಎಂದರು.

    ಇನ್ನೋರ್ವ ಮುಖ್ಯ ಅತಿಥಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕರಾದ ಕರುಣಾಕರ ಬಳ್ಕೂರು ಮಾತನಾಡಿ, ” ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಒಂದು ಅತ್ಯುತ್ತಮ ಶಿಕ್ಷಣ ಸಂಸ್ಥೆ. ಎಲ್ಲಾ ಪೋಷಕರು ತಮ್ಮ ನಿಷ್ಕಲ್ಮಶ ಮನಸ್ಸಿನ ಮಕ್ಕಳಿಗೆ ಇಂತಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣವನ್ನು ಒದಗಿಸುತ್ತಿರುವುದು ಸಾರ್ಥಕ. ಹಳ್ಳಿಯ ಪರಿಸರದಲ್ಲಿ ಸುಂದರವಾದ ಪ್ರಕೃತಿ ಮಾತೆಯ ಮಡಿಲಲ್ಲಿ ಅತ್ಯದ್ಭುತವಾದ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತಿರುವ ಇಂತಹ ಶಾಲೆಯಲ್ಲಿ ನಾನು ಕೂಡ ಒಬ್ಬ ವಿದ್ಯಾರ್ಥಿಯಾಗಿರಬೇಕಿತ್ತು ಎಂದು ಅನಿಸುತ್ತಿದೆ. ವಿದ್ಯೆ ಕದಿಯಲಾಗದ ಸಂಪತ್ತು. ಅಂತಹ ವಿದ್ಯೆಯನ್ನು ಮಕ್ಕಳೆಲ್ಲರೂ ಇಷ್ಟಪಟ್ಟು ಕಲಿತು ವಿದ್ಯೆಯ ಜೊತೆಗೆ ಸಾಂಸ್ಕೃತಿಕವಾಗಿಯೂ ಕೂಡ ಬೆಳೆಯಬೇಕು. ಈ ಮೂರು ದಿನಗಳ ಕಾಲ ಶಾಲೆಯಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಮಕ್ಕಳೆಲ್ಲರೂ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಿ ಜೀವನದಲ್ಲಿ ಸಾಧನೆಯನ್ನು ಮಾಡಬೇಕು” ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

    “ಬಾಲವಿಕಾಸ ನೀಡುತ್ತಿರುವ ಈ ಅದ್ಭುತವಾದ ಶಿಕ್ಷಣ ಸೇವೆ ಇನ್ನೂ ಹಲವಾರು ವರ್ಷಗಳವರೆಗೆ ಹಾಗೇ ಮುಂದುವರಿಯಲಿ ” ಎಂದು ಶುಭ ಹಾರೈಸಿದರು.

    ಕಾರ್ಯಕ್ರಮದಲ್ಲಿ ಬಾಲವಿಕಾಸ ಟ್ರಸ್ಟಿನ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ, ಶಾಲಾ ವ್ಯವಸ್ಥಾಪಕಿ ನಯನ ಎಂ, ಶಾಲಾ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ವಿಜಯಲಕ್ಷ್ಮಿ ವಿ.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

    ಇದನ್ನೂ ಓದಿ : ಕಚೇರಿಗೆ ತೆರಳಲು ಸಿದ್ಧವಾಗುತ್ತಿದ್ದಾಗ ಹೃದಯಾ*ಘಾತ; 24 ವರ್ಷದ ಯುವತಿ ದುರ್ಮ*ರಣ

    ಶಾಲಾ ಪ್ರಾಂಶುಪಾಲರಾದ ರವೀಂದ್ರ ದರ್ಬೆ ಸ್ವಾಗತಿಸಿ, ಸಹಶಿಕ್ಷಕಿ ಯಜ್ಞೆಶ್ವರಿ ಎನ್ ವಂದಿಸಿ, ಸಹಶಿಕ್ಷಕಿಯರಾದ ಜಯಶ್ರೀ ಆಚಾರ್ಯ ಹಾಗೂ ಅನಿತಾ ಜಿ. ನಿರೂಪಿಸಿದರು.

    ಜೂನ್ 26 ರಿಂದ ಜೂನ್ 28ರವರೆಗೆ 3 ದಿನಗಳ ಕಾಲ ನಡೆಯುವ ಈ ಸಾಂಸ್ಕೃತಿಕ ಹಬ್ಬದಲ್ಲಿ ಒಟ್ಟು 83 ಸ್ಪರ್ಧೆಗಳು ನಡೆಯಲಿದ್ದು ಒಂದರಿಂದ ಹತ್ತನೆ ತರಗತಿಯವರೆಗಿನ ಒಟ್ಟು 647 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

    Continue Reading

    DAKSHINA KANNADA

    ಗೋಬಿ, ಕಬಾಬ್​ ಬಳಿಕ ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ!

    Published

    on

    ಬೆಂಗಳೂರು: ಗೋಬಿ ಮಂಚೂರಿ, ಕಬಾಬ್​​ಗೆ ಕ್ಯಾನ್ಸರ್​ ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇವುಗಳಿಗೆ ಬಳಸುವ ಕೃತಕ ಬಣ್ಣವನ್ನು ಬ್ಯಾನ್​​ ಮಾಡಿದೆ. ಇದೀಗ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಪಾನಿಪುರಿ ಪ್ರಿಯರಿಗೂ ಶಾಕ್​​ ನೀಡಲು ಸದ್ದಿಲ್ಲದೆ ತಯಾರಿ ನಡೆಸಿದೆ. ಗೋಬಿ, ಕಬಾಬ್ ಬಳಿಕ ಈಗ ಪಾನಿಪುರಿಗೆ ಬಳಸುವ ಸಾಸ್​, ಮೀಟಾ ಖಾರದ ಪುಡಿ ಸೇರಿದಂತೆ ಐದು ಬಗೆಯ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ.

    ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗದಲ್ಲಿನ ಪಾನಿಪುರಿ ಮಾದರಿಗಳನ್ನ ಸಂಗ್ರಹಿಸಿ ಪರಿಶೀಲನೆ ನಡೆಸಿದೆ. ಪರಿಶೀಲನೆ ವೇಳೆ ಪಾನಿಪೂರಿ ತಯಾರಿಕೆಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಇರುವುದು ಪತ್ತೆಯಾಗಿದೆ. ಹೀಗಾಗಿ ಶೀಘ್ರದಲ್ಲೆ ಪಾನಿಪೂರಿಗೆ ಬಳಸುವ ಕ್ಯಾನ್ಸರ್ ಕಾರಕ ಅಂಶಗಳು ಬ್ಯಾನ್ ಮಾಡಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿರ್ಧರಿಸಿದೆ.

    ಬೆಂಗಳೂರಿನ 49 ಕಡೆಗಳಲ್ಲಿ ಪಾನಿಪುರಿ ತಯಾರಿಕೆಗೆ ಕ್ಯಾನ್ಸರ್ ಕಾರಕ ಇರುವ ಸಾಸ್ ಮತ್ತು ಮೀಟಾ ಖಾರದ ಪುಡಿ ಬಳಕೆ ಮಾಡುತ್ತಿದ್ದಾರೆ. ಹಾನಿಕಾರಕ ಅಂಶಗಳು ಮನುಷ್ಯನ ದೇಹ ಸೇರಿದರೆ ಆರೋಗ್ಯ ಕ್ಷೀಣಿಸುತ್ತಾ ಹೋಗಲಿದೆ. ಹೀಗಾಗಿ ಕ್ಯಾನ್ಸರ್ ಕಾರಕ ಇರುವ ಸಾಸ್, ಮೀಟಾ ಖಾರದ ಪುಡಿ ಬ್ಯಾನ್​ ಮಾಡುವ ಬಗ್ಗೆ ಚಿಂತನೆ ನಡೆದಿದೆ.

    Continue Reading

    LATEST NEWS

    Trending