Connect with us

    LATEST NEWS

    ಗಂಭೀರ ಆರೋಪದ ಸುಳಿಯಲ್ಲಿ ಸಿಕ್ಕ ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌

    Published

    on

    ಮಂಗಳೂರು/ಬೆಂಗಳೂರು : ಗುತ್ತಿಗೆದಾರನಿಗೆ ಬೆದರಿ*ಕೆ, ಜಾತಿ ನಿಂದನೆ ಹಾಗೂ ಹಣದ ಆಮಿಷ ಒಡ್ಡಿದ ಆರೋಪದಲ್ಲಿ ಜೈಲು ಪಾಲಾಗಿದ್ದ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಮೇಲೆ ಬಿಡುಗಡೆಯಾಗಿದ್ದಾರೆ. ಆದ್ರೆ ಜಾಮೀನು ಪಡೆದು ಹೊರಬರುತ್ತಿದ್ದಂತೆ, ಶಾಸಕ ಹೊರಬರುತ್ತಿದ್ದಂತೆ ಅತ್ಯಾಚಾ*ರ ಪ್ರಕರಣದಲ್ಲಿ ರಾಮನಗರ ಪೊಲೀಸರು ಮುನಿರತ್ನರನ್ನ ಬಂಧಿಸಿದ್ದಾರೆ.

    ಗುತ್ತಿಗೆದಾರನಿಗೆ ಜೀವ* ಬೆದರಿ*ಕೆ ಹಾಕಿದ ಪ್ರಕರಣದಲ್ಲಿ ಮುನಿರತ್ನ ಅಂದರ್ ಆಗುತ್ತಿದ್ದಂತೆ ಹಲವು ಶಾಕಿಂಗ್ ವಿಚಾರಗಳು ಬೆಳಕಿಗೆ ಬಂದಿವೆ. ಅತ್ಯಾಚಾ*ರ, ಎದುರಾಳಿಗಳನ್ನು ಮಟ್ಟ ಹಾಕಲು ಅವರ ಖಾಸಗಿ ವಿಡಿಯೋಗಳ ದುರ್ಬಳಕೆ, ಹನಿಟ್ರ್ಯಾಪ್‌ನಲ್ಲಿ ಹೆಚ್‌ಐವಿ ಸೋಂಕಿತರ ಬಳಕೆ ಹೀಗೆ ಅನೇಕ ಆರೋಪಗಳು ಮುನಿರತ್ನ ಮೇಲೆ ಕೇಳಿ ಬಂದಿದೆ. ಅತ್ಯಾಚಾ*ರ ಹಾಗೂ ಬೆದರಿ*ಕೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದ್ದು,  ಪೊಲೀಸರು ಮುನಿರತ್ನರನ್ನು ಬಂಧಿಸಿದ್ದಾರೆ.

    ಮುನಿರತ್ನ ಮೇಲೆ ಇರುವ ಗಂಭೀರ ಆರೋಪಗಳು :

    ಅನೇಕ ಮಂದಿಯ ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಮುನಿರತ್ನ ಬ್ಲ್ಯಾಕ್​ಮೇಲ್ ಮಾಡುತ್ತಿದ್ದುದಲ್ಲದೆ, ರಾಜಕೀಯ ಎದುರಾಳಿಗಳನ್ನು ಮಣಿಸಲು ಅವುಗಳನ್ನು ಬಳಕೆ ಮಾಡುತ್ತಿದ್ದರು.  ಅವರು ಈ ವಿಡಿಯೋಗಳನ್ನು ಇಟ್ಟುಕೊಂಡು ಬೆದರಿ*ಕೆ ಹಾಕುತ್ತಿದ್ದಾರೆ ಅಂತ ಅತ್ಯಾಚಾ*ರದ ಸಂತ್ರ*ಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದೇ ಸಂ*ತ್ರಸ್ತೆಯ ವೀಡಿಯೋ ಇಟ್ಟುಕೊಂಡು ಹಲವರ ಹನಿಟ್ರ್ಯಾಪ್‌ಗೆ ಯತ್ನಿಸಿದ್ದರು ಮಾತ್ರವಲ್ಲದೆ ಹೆಚ್‌ಐವಿ ಸೋಂಕಿತರನ್ನೂ ಇದಕ್ಕಾಗಿ ಬಳಕೆ ಮಾಡಿದ್ದಾಗಿ ಆರೋಪಿಸಿದ್ದಾರೆ.

    ಇದನ್ನೂ ಓದಿ : ಬಸ್ ಚಾಲನೆ ವೇಳೆಯೇ ಚಾಲಕನಿಗೆ ಹೃದಯಘಾತ,; ಪೊಲೀಸರ ಸಮಯಪ್ರಜ್ಞೆಯಿಂದ ಉಳಿಯಿತು 45 ಜೀವ !

    ರಾಜಕೀಯ ಎದುರಾಳಿಗಳ ಹಣಿಯಲು ಮುನಿರತ್ನ ಅಟ್ರಾಸಿಟಿ ಕೇಸ್​​ಗಳ ದುರ್ಬ*ಳಕೆ ಮಾಡುತ್ತಿದ್ದರು ಎಂಬ ಆರೋಪವೂ ಈಗ ಕೇಳಿಬಂದಿದೆ. ಮುನಿರತ್ನ ಅಟ್ರಾಸಿಟಿ ಕೇಸ್​​ಗಳನ್ನೇ ದಾಳವನ್ನಾಗಿ ಬಳಸಿಕೊಳ್ಳುತ್ತಿದ್ದರು. ಹಣ ಕೊಟ್ಟು ಪ್ರಭಾವ ಬಳಸಿ ಅಟ್ರಾಸಿಟಿ ಕೇಸ್​​ಗಳನ್ನು ದಾಖಲಿಸುತ್ತಿದ್ದರು. ಈ ಹಿಂದೆ ಆರ್​ಆರ್ ನಗರದಲ್ಲಿ ಹಲವರ ವಿರುದ್ಧ ಅಟ್ರಾಸಿಟಿ ಕೇಸ್​ಗಳು ದಾಖಲಾಗಿದ್ದವು ಎಂದು ಮೂಲಗಳು ತಿಳಿಸಿವೆ.

    LATEST NEWS

    ವಾಕಿಂಗ್ ಮಾಡುತ್ತಿದ್ದ ಮೂವರ ಮೇಲೆ ಹರಿದ ಲಾರಿ; ಇಬ್ಬರು ಸಾ*ವು

    Published

    on

    ಮಂಗಳೂರು/ವಿಜಯನಗರ : ಲಾರಿಯೊಂದು ವಾಕಿಂಗ್ ಮಾಡುತ್ತಿದ್ದ ಮೂವರ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಸಾ*ವನ್ನಪ್ಪಿದ ಘಟನೆ ಕೂಡ್ಲಿಗಿ ತಾಲೂಕಿನ ಆಲೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಬೆಂಗಳೂರಿನಿಂದ ರಾಜಸ್ಥಾನದತ್ತ ಹೊರಟಿದ್ದ ಲಾರಿಯು ಮೂವರ ಮೇಲೆ ಹರಿದು ಈ ದುರ್ಘಟನೆ ನಡೆದಿದೆ.

    ಆಲೂರಿನ ಸಿದ್ದಲಿಂಗಯ್ಯ(39), ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ದೇವಸಮುದ್ರ ಗ್ರಾಮದ ದೇವಸಮುದ್ರದ ಕೊಟ್ರಯ್ಯ(26) ಮೃ*ತ ರ್ದುದೈವಿಗಳು.

    ಇದನ್ನೂ ಓದಿ : ಅಮಾ*ನವೀಯ ಕೃ*ತ್ಯ; ಲೈಂ*ಗಿಕ ಕಿರು*ಕುಳ ನೀಡಿ ಬಾಲಕಿಯ ಹ*ತ್ಯೆ

    ಗಾ*ಯಗೊಂಡ ಮತ್ತೊಬ್ಬ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಈ ಕುರಿತು ಖಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    ರೋಗಿ ಕೊಳಲು ನುಡಿಸುತ್ತಿದ್ದಾಗಲೇ ಮೆದುಳಿನ ಆಪರೇಷನ್

    Published

    on

    ಬೆಳಗಾವಿ: ರೋಗಿ ಕೊಳಲು ನುಡಿಸುತ್ತಾ ಮಾತನಾಡುತ್ತಿರುವಾಗಲೇ ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಿರುವ ಘಟನೆ ಬೆಳಗಾವಿಯ ಕೊಲ್ಲಾಪುರ ಕನೇರಿ ಮಠದ ಸಿದ್ದಗಿರಿ ಆಸ್ಪತ್ರೆಯಲ್ಲಿ ನಡೆದಿದೆ.

    ಮೆದುಳು ಕ್ಯಾನ್ಸರ್ ನಿಂದ ಬಳಲುತ್ತಿದ್ದ ವ್ಯಕ್ತಿಯ ಕ್ಲಿಷ್ಟಕರವಾದ ಶಸ್ತ್ರಚಿಕಿತ್ಸೆ ನಡೆಸುವಾಗ ಮೆದುಳಿಗೆ ಅರಿವಳಿಕೆ ನೀಡಿರಲಿಲ್ಲ. ಹೀಗಾಗಿ ರೋಗಿ ಸಂಪೂರ್ಣವಾಗಿ ಪ್ರಜ್ಞಾಸ್ಥಿತಿಯಲ್ಲೇ ಇದ್ದರು. ಕೇವಲ ಮೆದುಳಿನ ಭಾಗದ ಹೊರಭಾಗದಲ್ಲಿ ಮಾತ್ರ ಅರಿವಳಿಕೆ ನೀಡಲಾಗಿತ್ತು. ಐದು ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆ ವೇಳೆ ರೋಗಿ ನಿರಂತರವಾಗಿ ಕೊಳಲು ನುಡಿಸುತ್ತಿದ್ದರು.

    ಸುದ್ದಿಗೋಷ್ಠಿಯಲ್ಲಿ ಶಸ್ತ್ರಚಿಕಿತ್ಸೆ ಕುರಿತು ಮಾಹಿತಿ ನೀಡಿದ ಡಾ| ಶಿವಶಂಕರ ಮರಜಕ್ಕೆ, ಹಳ್ಳಿ ಭಾಗದಲ್ಲಿ ಇಂಥ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಮಾಡಿರುವ ದೇಶದ ಕೆಲವೇ ಆಸ್ಪತ್ರೆಗಳಲ್ಲಿ ಇದೂ ಒಂದು. ಬೇರೆ ಕಡೆಗೆ ಇದಕ್ಕೆ 10 ರಿಂದ 15 ಲಕ್ಷ ರೂ. ವೆಚ್ಚ ಆಗುತ್ತದೆ. ನಮ್ಮಲ್ಲಿ ಕೇವಲ 1.20 ಲಕ್ಷ ರೂ. ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.

    Continue Reading

    LATEST NEWS

    ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ : ಸಿಎಂ ಸಿದ್ಧರಾಮಯ್ಯ

    Published

    on

    ಮೈಸೂರು : ಈ ಬಾರಿಯ ಮೈಸೂರು ದಸರಾವನ್ನು ಹಿರಿಯ ಸಾಹಿತಿ ಹಂಪ ನಾಗರಾಜಯ್ಯ  ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಘೋಷಿಸಿದ್ದಾರೆ.

    ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮೈಸೂರು ಅರಮನೆಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಗಜಪಡೆ ತಾಲೀಮು ಆರಂಭವಾಗಿದೆ. ಅಕ್ಟೋಬರ್​ 3 ರಂದು ಮೈಸೂರು ದಸರಾಕ್ಕೆ ಚಾಲನೆ ಸಿಗಲಿದೆ.

    ಇದನ್ನೂ ಓದಿ : ಮೈಸೂರು ದಸರಾಗೆ ಒಂದು ಲಕ್ಷ ವಿದ್ಯುತ್ ದೀಪಗಳಿಂದ ಅರಮನೆ ಅಲಂಕಾರ

    2024ರ ದಸರಾ ಮಹೋತ್ಸವ ಅಕ್ಟೋಬರ್ 3ರಂದು ಆರಂಭಗೊಂಡು ಅದೇ ತಿಂಗಳ 12 ರಂದು ಸಮಾರೋಪಗೊಳ್ಳಲಿದೆ ಎಂದು ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಅಕ್ಟೋಬರ್ 3ರಂದು ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಬೆಳಗ್ಗೆ 9.15 ರಿಂದ 9.45ರ ಮುಹೂರ್ತದಲ್ಲಿ ದಸರಾ ಉದ್ಘಾಟನೆಗೊಳ್ಳಲಿದೆ.

    Continue Reading

    LATEST NEWS

    Trending