ಗಂಗೊಳ್ಳಿ: ಗೋ ಹತ್ಯೆ ವಿರೋಧಿಸಿ ನಡೆದ ಬೃಹತ್ ಪಾದಯಾತ್ರೆಯ ಬಳಿಕ ಇಲ್ಲಿನ ಮೀನುಗಾರ ಮಹಿಳೆಯರಿಂದ ಮೀನು ಖರೀದಿ ಬಹಿಷ್ಕರಿಸಿದ ಅನ್ಯಧರ್ಮೀಯರ ನಡೆಯನ್ನು ಖಂಡಿಸಿ ನಿನ್ನೆ ಬಿಜೆಪಿ ಬೈಂದೂರು ಮಂಡಲ ಹಿಂದುಳಿದ ವರ್ಗ ಮೋರ್ಚಾ ವತಿಯಿಂದ ಗಂಗೊಳಿ ಮೀನು ಮಾರುಕಟ್ಟೆಯಲ್ಲಿ ಮೀನು ಖರೀದಿ ಮಾಡುವ ಮೂಲಕ ಮೀನುಗಾರ ಮಹಿಳೆಯರಿಗೆ ಆತ್ಮಸ್ಥೈರ್ಯ ನೀಡಿದರು.
ಈ ವೇಳೆ ಮಾತನಾಡಿದ ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಗಂಗೊಳ್ಳಿಯಲ್ಲಿ ಗೋ ಹತ್ಯೆ ವಿರೋಧಿಸಿ ನಡೆದ ಬೃಹತ್ ಪಾದಯಾತ್ರೆಯಲ್ಲಿ ಹಿಂದೂ ಸಮಾಜ ಒಗ್ಗಟ್ಟಿನಿಂದ ಭಾಗವಹಿಸಿ ಪ್ರತಿಭಟನೆ ನಡೆಸಿತ್ತು.
ಈ ಪಾದಯಾತ್ರೆಯಲ್ಲಿ ಮಹಿಳಾ ಮೀನುಗಾರರು, ಮೀನು ಮಾರಾಟ ಮಾಡುವ ಮಹಿಳೆಯರು, ತಾಯಂದಿರು ಪಾಲ್ಗೊಂಡಿದ್ದರು.
ಎಂಬ ಒಂದೇ ಉದ್ದೇಶದಿಂದ ಅನ್ಯಕೋಮಿನ ಒಂದು ವರ್ಗ ಗಂಗೊಳ್ಳಿ ಮೀನು ಖರೀದಿಗೆ ಬಹಿಷ್ಕಾರ ಹಾಕಿರುವುದು, ಮೀನು ಖರೀದಿಗೆ ಬಂದ ಜನರನ್ನು ತಡೆದು ಮೀನು ಖರೀದಿಸದಂತೆ ತಡೆಯುತ್ತಿರುವುದು ಖಂಡನೀಯ ಎಂದರು.
ಮಹಿಳಾ ಮೀನುಗಾರರಲ್ಲಿ ಆತ್ಮಸ್ಥೆರ್ಯ ನೀಡಿ ಬೆಂಬಲ ನೀಡುವ ಹಾಗೂ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶವನ್ನು ಸಾರುವ ಉದ್ದೇಶದಿಂದ ಬೈಂದೂರು ಬಿಜೆಪಿ ಒಂದುಳಿದ ವರ್ಗ ಮೋರ್ಚಾ ವತಿಯಿಂದ ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮೀನು ಖರೀದಿ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆ ಹಾಗೂ ಕ್ಷೇತ್ರದ ಬೇರೆ ಬೇರೆ ಭಾಗಗಳಿಂದ ಜನರು ಗಂಗೊಳ್ಳಿಗೆ ಬಂದು ಮೀನು ಮಾರುಕಟ್ಟೆಯಲ್ಲಿ ಮೀನು ಖರೀದಿ ಮಾಡುವ ಕಾರ್ಯ ನಿರಂತರವಾಗಿ ನಡೆಯಲಿದೆ. ಇದು ಯಾರ ವಿರುದ್ಧವೂ ಅಲ್ಲ, ಪ್ರತಿಭಟನೆಯೂ ಅಲ್ಲ ಎಂದು ಅವರು ಹೇಳಿದರು.