bengaluru
ಭಗವದ್ಗೀತೆ ಓದುವವರು ದೇಶದ ಆಸ್ತಿ: ರಾಜ್ಯದಲ್ಲಿ ಭಗವದ್ಗೀತೆ ಕಲಿಕೆಯನ್ನು ಸ್ವಾಗತಿಸಿದ ಬಿಜೆಪಿ ರಾಜ್ಯಾಧ್ಯಕ್ಷ
ಬೆಂಗಳೂರು: ಶಿಕ್ಷಣ ಎಂದರೆ ಅದು ಮನುಷ್ಯನ ಸುಪ್ತ ಸಾಮರ್ಥ್ಯದ ಅಭಿವ್ಯಕ್ತಿಗೊಳಿಸುವ ಪ್ರಕ್ರಿಯೆ. ಇಂದಿನ ಶಿಕ್ಷಣದಲ್ಲಿ ಕೇವಲ ಮೆದುಳಿಗೆ ಮಾಹಿತಿ ಕೊಡಲಾಗುತ್ತಿದೆ.
ಶಿಕ್ಷಣವು ಮನುಷ್ಯನೊಳಗಿನ ವ್ಯಕ್ತಿತ್ವಕ್ಕೆ ಹೊಳಪು ಮತ್ತು ಬೆಳಕು ಕೊಡುವ ಮಾದರಿಯಲ್ಲಿರಬೇಕು.
ಆದ್ದರಿಂದ ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲೂ ತರಗತಿಗಳಲ್ಲಿ ಭಗವದ್ಗೀತೆಯ ಶಿಕ್ಷಣ ನೀಡಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಶಿಕ್ಷಣದಲ್ಲಿ ಭಗವದ್ಗೀತೆಯನ್ನು ಭೋಧಿಸುವ ವಿಚಾರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ ಅವರು “ವಿದ್ಯಾರ್ಥಿಯ ಸರ್ವತೋಮುಖ ವಿಕಾಸದ ಬದಲಾಗಿ ಇಂದು ಆತನ ತಲೆಗೆ ಏನೇನೋ ತುರುಕುವ ಕೆಲಸ ನಡೆದಿದೆ. ಮನುಷ್ಯನ ನೈತಿಕ ಮೌಲ್ಯಗಳನ್ನು ಗಟ್ಟಿಗೊಳಿಸುವ ನಮ್ಮ ಪ್ರಾಚೀನ ಚಿಂತನೆ, ವಿಚಾರಧಾರೆಯನ್ನು ತಿಳಿಸುವ ಕೆಲಸ ಆಗಬೇಕು.
ವಿದ್ಯಾರ್ಜನೆ “ನಹಿ ಜ್ಞಾನೇನ ಸದೃಶಂ” ಎಂಬಂತೆ ದೇಶ ಮತ್ತು ಜಗತ್ತಿನ ಒಳಿತಿಗೆ ಬಳಕೆ ಆಗಬೇಕೆಂಬುದನ್ನು ಹೇಳಿಕೊಡಬೇಕು. ಸ್ವಂತ ಬೆಳವಣಿಗೆ ಮಾತ್ರವಲ್ಲದೆ ಸಮಾಜದ ಒಳಿತಿಗಾಗಿ ಕಲಿತ ವಿದ್ಯೆ ಬಳಕೆ ಆಗಬೇಕು. ಭಗವದ್ಗೀತೆಯು ಭಾರತ ದೇಶದ ಅಂತಃಸತ್ವ.
ಹಿಂದೆ ಶಿಕ್ಷಣ ಸಚಿವರಾಗಿದ್ದ ಎಂ.ಸಿ. ಚಾಗ್ಲಾ ಅವರು ನೈತಿಕ ಶಿಕ್ಷಣವನ್ನು ಕೊಡುವ ಕುರಿತು ಪ್ರತಿಪಾದಿಸಿದ್ದರು. ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ವಿಚಾರಧಾರೆಯನ್ನು ತಿಳಿಸಲು ಅವರು ತಿಳಿಸಿದ್ದರು ಎಂದು ವಿವರಿಸಿದ್ದಾರೆ.
ಭಗವದ್ಗೀತೆಯನ್ನು ವಿದೇಶಗಳಲ್ಲೂ ಇಷ್ಟಪಟ್ಟು ಕಲಿಸುತ್ತಿದ್ದಾರೆ. ಮನುಷ್ಯ ಮನುಷ್ಯತ್ವದೊಂದಿಗೆ ಬದುಕಬೇಕು ಎಂಬುದನ್ನು ತಿಳಿಸುವ ಕಾರ್ಯವನ್ನು ಭಗವದ್ಗೀತೆ ಮಾಡುತ್ತದೆ. ಇವತ್ತಿನ ಕ್ರೌರ್ಯ, ಹಿಂಸೆ, ಅಪರಾಧ ಪ್ರವೃತ್ತಿ ಹೆಚ್ಚಳದ ಈ ಕಾಲಘಟ್ಟದಲ್ಲಿ ಭಗವದ್ಗೀತೆಯ ಅಗತ್ಯ ಹೆಚ್ಚಾಗಿದೆ ಎಂದಿದ್ದಾರೆ.
ಹಿಂದೊಮ್ಮೆ ಅಮೆರಿಕದ ಷಿಕಾಗೊದಲ್ಲಿ ಭಗವದ್ಗೀತೆಯ ಮೇಲ್ಗಡೆ ಕುರಾನ್, ಅದರ ಮೇಲೆ ಬೈಬಲ್ ಇತ್ತು. ಆಗ ವಿವೇಕಾನಂದರನ್ನು ಈ ಕುರಿತು ಅಲ್ಲಿನ ಪ್ರಜೆಯೊಬ್ಬರು ಗಮನ ಸೆಳೆದು ಭಗವದ್ಗೀತೆ ಕೆಳಗಿದೆ ಎಂದಾಗ “ಭಗವದ್ಗೀತೆಯು ಎಲ್ಲ ವಿಚಾರಗಳ ಬೇರು, ತಳಹದಿ” ಎಂದು ಸ್ವಾಮಿ ವಿವೇಕಾನಂದರು ತಿಳಿಸಿದ್ದರು. ಅದೇ ಮಾದರಿಯಲ್ಲಿ ಭಗವದ್ಗೀತೆ ಕಲಿಕೆಯು ನೈತಿಕತೆಯ ತಳಹದಿ ಆಗಬಲ್ಲದು ಎಂದು ತಿಳಿಸಿದ್ದಾರೆ.
ಭಗವದ್ಗೀತೆಯು ದೇಶದ ಸಂಸ್ಕೃತಿಯ ಭಾಗವಾಗಿದೆ. ಮತಬ್ಯಾಂಕ್ ರಾಜಕಾರಣ, ಓಲೈಕೆಯ ರಾಜಕೀಯ ಮಾಡುವವರಿಗೆ ದೇಶದ ಇಂಥ ಗಟ್ಟಿ ಬೇರುಗಳ ಅರಿವಿಲ್ಲ. ಗಾಂಧೀಜಿ ಅವರು ಸ್ವಾತಂತ್ರ್ಯಾನಂತರದ ದಿನಗಳಲ್ಲಿ ಭಗವದ್ಗೀತೆಯನ್ನು ದೇಶದಾದ್ಯಂತ ಪ್ರಸಾರ ಆಗಬೇಕೆಂದು ಪ್ರಯತ್ನ ಮಾಡಿದ್ದರು. ಭಗವದ್ಗೀತೆ ಓದುವವರು ದೇಶದ ಆಸ್ತಿಯಾಗುತ್ತಾರೆ. ಅವರು ದೇಶಕ್ಕೆಂದೂ ಹೊರೆ ಅನಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ನ್ಯಾಯಾಂಗ ವ್ಯವಸ್ಥೆಯಲ್ಲೂ ಭಗವದ್ಗೀತೆಯನ್ನು ಮುಟ್ಟಿ ಸತ್ಯವನ್ನೇ ಹೇಳುವುದಾಗಿ ಪ್ರಮಾಣ ಮಾಡುವ ಪದ್ಧತಿಯಿದೆ. ಭಗವದ್ಗೀತೆ ಎಂದಾಗ ದೇಶದೊಳಗೆ ವ್ಯಕ್ತಿಯಲ್ಲಿ ರೋಮಾಂಚನ ಆಗಿ ಸುಳ್ಳು ಹೇಳುವವನೂ ಸತ್ಯ ಹೇಳುವಂಥ ಸ್ಥಿತಿ ನಿರ್ಮಾಣವಾಗುತ್ತದೆ.
ಸ್ವಾಮಿ ವಿವೇಕಾನಂದರು ಮನುಷ್ಯ ನಿರ್ಮಾಣದ ಶಿಕ್ಷಣ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದರು. ಅದಕ್ಕೆ ಅನುಗುಣವಾಗಿ ಮೂಲ ಶಿಕ್ಷಣದಲ್ಲಿ ಭಗವದ್ಗೀತೆಯ ಶಿಕ್ಷಣ ಅತ್ಯಗತ್ಯ ಎಂದು ನಳಿನ್ ಕುಮಾರ್ ಕಟೀಲ್ ಅವರು ಪ್ರತಿಪಾದಿಸಿದ್ದಾರೆ.
bengaluru
ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕ*ರಣಕ್ಕೆ ಟ್ವಿಸ್ಟ್..! ಎಸ್ಐಟಿ ರಚನೆ!!
ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಜ್ವಲ್ ಸಾವಿರಾರು ಹೆಣ್ಣುಮಕ್ಕಳ ಮೇಲಿನ ಲೈಂ*ಗಿಕ ದೌರ್ಜ*ನ್ಯ ಆರೋಪ ಎದುರಿಸುತ್ತಿದ್ದಾರೆ. ಈ ಬಗ್ಗೆ ಮಾಜಿ ಸಚಿವ, ಶಾಸಕ ಎಚ್.ಡಿ.ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ರವಿವಾರ ಪ್ರಕರಣ ದಾಖಲಾಗಿದೆ.
47 ವರ್ಷದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ದೂರು ನೀಡಿದ್ದಾರೆ. ಈ ಹಿಂದೆ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಮಹಿಳೆ ನೀಡಿದ ದೂರಿನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ತಂದೆ ಎಚ್ಡಿ ರೇವಣ್ಣ ಅವರನ್ನು ಎ1 ಆರೋಪಿಯಾಗಿ ನಮೂದಿಸಿದ್ದು, ಎ2 ಪ್ರಜ್ವಲ್ ರೇವಣ್ಣ ಆಗಿದ್ದಾರೆ. ದೂರಿನಲ್ಲಿ ಏನಿದೆ ಅಂದರೆ… ನಮ್ಮ ಪತಿಗೆ ಎಚ್ಡಿ ರೇವಣ್ಣ ತಮ್ಮ ಡೇರಿಯಲ್ಲಿ ಕೆಲಸ ಕೊಡಿಸಿದ್ದರು. ಬಳಿಕ 2015ರಲ್ಲಿ ಹಾಸ್ಟೆಲ್ ಒಂದರಲ್ಲಿ ಅಡುಗೆ ಕೆಲಸಕ್ಕೆ ಸೇರಿಸಿದ್ದರು. ನಂತರ ತಮ್ಮ ಮನೆಯಲ್ಲಿ ಅಡುಗೆ ಕೆಲಸಕ್ಕೆ ಬರುವಂತೆ ರೇವಣ್ಣ ಹೇಳಿದ್ದರು. ಅಡುಗೆ ಕೆಲಸಕ್ಕೆ ಸೇರಿಕೊಂಡ ಬಳಿಕ ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದ ವೇಳೆ ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ಅಡುಗೆ ಮನೆಗೆ ಬಂದು ಪ್ರಜ್ವಲ್ ಸಹ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಪ್ರಜ್ವಲ್ ರೇವಣ್ಣ ಅಸಭ್ಯವಾಗಿ ವರ್ತಿಸಿದ್ದಾರೆ. ನನ್ನ ಮಗಳಿಗೂ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ ವರ್ತಿಸಿದ್ದಾರೆ. ಪದೇ ಪದೇ ಕಾಲ್ ಮಾಡಿದ್ದಕ್ಕೆ ಪುತ್ರಿ ಪ್ರಜ್ವಲ್ ನಂಬರ್ ಬ್ಲಾಕ್ ಮಾಡಿದ್ದರು. ಲೈಂಗಿಕ ಕಿರುಕುಳ ಹೆಚ್ಚಾದಾಗ ಕೆಲಸಬಿಟ್ಟು ಹೋಗಿದ್ದೆ ಎಂದು ಸಂತ್ರಸ್ತೆ ದೂರಿನಲ್ಲಿ ಹೇಳಿದ್ದಾರೆ. ಸದ್ಯ ಪೆನ್ಡ್ರೈವ್ ವಿವಾದದಲ್ಲಿರುವ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಜರ್ಮನಿ ಸೇರಿದ್ದಾರೆ ಎಂದು ಹೇಳಲಾಗಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಹಾಸನದಲ್ಲಿ ಏಪ್ರಿಲ್ 26 ರಂದು ನಡೆದಿದೆ. ಜೆಡಿಎಸ್ – ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ್ದಾರೆ.
ಮುಂದೆ ಓದಿ..; ಲೈಂ*ಗಿಕ ದೌರ್ಜ*ನ್ಯ ಆರೋಪ : ವಿಕಿಪೀಡಿಯಾದಲ್ಲಿ ಸೇವ್ ಆಯ್ತು ಪ್ರಜ್ವಲ್ ರೇವಣ್ಣ ಕೇಸ್!
ಎಸ್ಐಟಿಗೆ ನೀಡುವುದಾಗಿ ಗೃಹಸಚಿವರಿಂದ ಸೂಚನೆ:
ಚುನಾವಣೆಗೆ ಎರಡು ದಿನಗಳು ಬಾಕಿ ಉಳಿದಿರುವಾಗ ಈ ವಿಡಿಯೊ ದೃಶ್ಯಾವಳಿಗಳ ತುಣುಕುಗಳ ಪೆನ್ಡ್ರೈವ್ಗಳು ಹಾಸನದಾದ್ಯಂತ ವೈರಲ್ ಆಗಿತ್ತು. ಪ್ರಜ್ವಲ್ ರೇವಣ್ಣ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ನೀಡುವುದಾಗಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
bengaluru
ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ಕಸ್ಟಮ್ಸ್ ಅಧಿಕಾರಿಗಳಿಗೆ ಶಾಕ್; ಅದರಲ್ಲಿತ್ತು 10 ಅನಕೊಂಡಾ!
ಬೆಂಗಳೂರು : ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣೆ ನಡೆಸುತ್ತಿದ್ದ ಕಸ್ಟಮ್ಸ್ ಅಧಿಕಾರಿಗಳು ಶಾಕ್ ಗೆ ಒಳಗಾಗಿದ್ದಾರೆ. ಯಾಕೆಂದರೆ, ಪ್ರಯಾಣಿಕನೊಬ್ಬನ ಬ್ಯಾಗ್ ನಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 10 ಅನಕೊಂಡಾ ಪತ್ತೆಯಾಗಿವೆ. ಆತ ಬ್ಯಾಂಕಾಕ್ನಿಂದ ಅಕ್ರಮವಾಗಿ 10 ಅನಕೊಂಡಾ ಹಾವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಬ್ಯಾಂಕಾಕ್ನಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರ ಲಗೇಜ್ಗಳನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬನ ಲಗೇಜ್ ತಪಾಸಣೆ ಮಾಡುವಾಗ 10 ಹಳದಿ ಅನಕೊಂಡ ಪತ್ತೆಯಾಗಿವೆ.
ಕೂಡಲೇ ಅಧಿಕಾರಿಗಳು ಪ್ರಯಾಣಿಕನನ್ನ ವಶಕ್ಕೆ ಪಡೆದಿದ್ದು, ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಹಳದಿ ಬಣ್ಣ ಆನಕೊಂಡಾ ಹಾವುಗಳನ್ನು ರಕ್ಷಿಸಿ, ಅರಣ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ.
ಇದನ್ನೂ ಓದಿ : ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ವನ್ಯಜೀವಿಗಳ ಕಳ್ಳಸಾಗಣೆ ಮಾಡಿದ ಆರೋಪದಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.
bangalore
ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!
ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶಿಸಿ ಬಿಜೆಪಿ ಶಿಸ್ತು ಸಮಿತಿ ಈ ನಿರ್ಧಾರ ಕೈಗೊಂಡಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಕೆಎಸ್ ಈಶ್ವರಪ್ಪ, ತಮ್ಮ ನಾಮಪತ್ರವನ್ನು ಹಿಂಪಡೆಯಲು ನಿನ್ನೆ(ಎ.22) ಕೊನೆಯ ದಿನವಾಗಿತ್ತು. ಆದರೆ, ಈಶ್ವರಪ್ಪ ನಾಮಪತ್ರವನ್ನು ಹಿಂಪಡೆಯಲು ನಿರಾಕರಿಸಿದ ಕಾರಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಆರು ವರ್ಷಗಳ ಕಾಲ ಅವರು ಬಿಜೆಪಿ ಪಕ್ಷದಡಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ.
ಮುಂದೆ ಓದಿ..; ಚೌಟ ಪರ ಪ್ರಚಾರಕ್ಕೆ ಪುತ್ತೂರಿಗೆ ಬರಲಿದ್ದಾರೆ ಅಣ್ಣಾಮಲೈ
ಬಿಜೆಪಿ ಪಕ್ಷದಲ್ಲೇ ಇದ್ದುಕೊಂಡ ಕೆ ಎಸ್ ಈಶ್ವರಪ್ಪ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡು ನಿಂದಿಸುತ್ತಿದ್ದರು. ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ ರಾಜಕಾರಣವನ್ನು ಕೆ ಎಸ್ ಈಶ್ವರಪ್ಪ ತೀವ್ರವಾಗಿ ಟೀಕಿಸುತ್ತಿದ್ದರು. ತನ್ನ ಬೆಂಬಲ ಮೋದಿ ಪ್ರಧಾನಿಗೆ ಇದೆ ಎಂದು ಹೇಳಿಕೊಂಡಿದ್ದ ಈಶ್ವರಪ್ಪ ತಾನು ಗೆದ್ದ ಬಳಿಕ ಮೋದಿಗೆ ಬೆಂಬಲ ನೀಡುವುದಾಗಿ ಹೇಳಿಕೆ ನೀಡುತ್ತಿದ್ದರು. ಆದರೆ ಇದೀಗ ಪಕ್ಷದಿಂದಲೇ ಇವರನ್ನು ಉಚ್ಛಾಟಿಸಲಾಗಿದೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ