Thursday, March 23, 2023

“ಬಿಜೆಪಿಯವರು ದೈವ-ದೇವರನ್ನು ವೋಟಿಗಾಗಿ ಬಳಸಿ ಗೆದ್ದ ಮೇಲೆ ಹೀಯಾಳಿಸುತ್ತಾರೆ”

ಮಂಗಳೂರು: ಬಿಜೆಪಿಯವರು ದೈವ ಮತ್ತು ದೇವರನ್ನು ಹಾಗೂ ಹಿಂದುತ್ವವನ್ನು ವೋಟಿಗಾಗಿ ಮಾತ್ರ ಬಳಸುತ್ತಿದ್ದಾರೆ. ಗೆದ್ದ ಮೇಲೆ ದೈವ-ದೇವರನ್ನು ಹೀಯಾಳಿಸುತ್ತಾರೆ.

ಬಿಜೆಪಿ ಗೃಹ ಸಚಿವ ಅರಗ ಜ್ಞಾನೇಂದ್ರ ಕೂಡಾ ಇದೇ ಮನಸ್ಥಿತಿಯವರು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸಸ ಅಧ್ಯಕ್ಷ ಹರೀಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬಿಜೆಪಿ ನಾಯಕರಿಗೆ ಅಭಿವೃದ್ಧಿ ಬೇಡ, ಸಾಮರಸ್ಯವೂ ಬೇಡ. ಭಾವನೆಗಳನ್ನು ಕೆರಳಿಸುವುದು ಮತ್ತು ಸುಳ್ಳು ಹೇಳುವುದು ಮಾತ್ರ ಮಾಡುತ್ತಿದ್ದಾರೆ. ಈ ಮೂಲಕ ಅಧಿಕಾರವನ್ನು ಹಿಡಿಯುವ ಪ್ರಯತ್ನ ಅವರದ್ದು ಎಂದರು.

ಮಾರ್ಚ್‌ 24ರಂದು ಕೆಎಸ್‌ಆರ್‌ಟಿಸಿ ಮಾರ್ಗದಲ್ಲಿ ಖಾಸಗಿ ಬಸ್ಸಿನವರು ರೂಟ್ ಪರ್ಮಿಟ್‌ನೊಂದಿಗೆ 24 ಕಿಲೋ ಮೀಟರ್ ತನಕ ಸಂಚರಿಸಬಹುದೆಂಬ ಕಾನೂನನ್ನು ತರಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಇದರಿಂದ ಕೆಎಸ್ಸಾರ್ಟಿಸಿ ಸಂಪೂರ್ಣ ನಷ್ಟಹೊಂದಲಿದೆ ಎಂದು ದೂರಿದರು.
ಮುಖಂಡರಾದ ಮಹಾಬಲ ಮಾರ್ಲ, ಪ್ರಕಾಶ್ ಸಾಲಿಯಾನ್‌, ಮೊಹಮ್ಮದ್ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

Hot Topics

ಕಲಬುರಗಿಯಲ್ಲಿ ಹಾಡು ಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ..!

ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ ಮಾಡಲಾದ ಘಟನೆ ಕಲಬುರಗಿಯ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮಜತ್ ಸುಲ್ತಾನ್ (35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ : ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ...

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...

ಉಡುಪಿ : ಕಳವಾದ 74 ಲಕ್ಷ ರೂಪಾಯಿ ಸೊತ್ತುಗಳು ಮರಳಿ ಮಾಲಕರಿಗೆ ಹಸ್ತಾಂತರಿಸಿದ ಪೊಲೀಸರು.!

ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ,ದರೋಡೆ ಮತ್ತಿತರ ಕಾರಣಗಳಿಂದ ಸುತ್ತುಗಳನ್ನು ಕಳೆದುಕೊಂಡವರಿಗೆ ಅವರ ಚಿನ್ನಾಭರಣ ಸೊತ್ತು ಮತ್ತು ನಗದನ್ನು ಹಸ್ತಾಂತರಿಸಲಾಯಿತು.ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್...