Connect with us

DAKSHINA KANNADA

ಬಿಜೆಪಿಯವರದ್ದು ಬಾಯಲ್ಲಿ ಸ್ವದೇಶಿ ಮಂತ್ರ, ಕಾರ್ಯ ವಿದೇಶಿ ತಂತ್ರ-ಶಾಸಕ ಖಾದರ್ ವ್ಯಂಗ್ಯ

Published

on

ಮಂಗಳೂರು: ‘ಬಿಜೆಪಿಯವರದ್ದು ಬಾಯಲ್ಲಿ ಸ್ವದೇಶಿ ಮಂತ್ರ, ಕಾರ್ಯ ಅನುಷ್ಠಾನ ಮಾಡುವಾಗ ವಿದೇಶಿ ತಂತ್ರ. ಸ್ಪಷ್ಟತೆ ಇಲ್ಲದ ತೀರ್ಮಾನ ದೇಶಕ್ಕೆ ಅವಮಾನ. ಅಷ್ಟೇ ಅಲ್ಲದೆ ಭಾರತ ದೇಶದ ರಾಷ್ಟ್ರಧ್ವಜಕ್ಕೆ ತಿದ್ದುಪಡಿ ತಂದು ಖಾದಿ ಬದಲು ಪಾಲಿಸ್ಟರ್ ಬಟ್ಟೆ ಉಪಯೋಗ ಮಾಡಬಹುದೆಂಬ ಕೇಂದ್ರದ ತೀರ್ಮಾನವು ಭಾರತ ದೇಶದ ಸ್ವಾತಂತ್ರ್ಯೋತ್ಸವದ ಚಳುವಳಿಗೆ ಮಾಡಿದ ಅವಮಾನ. ದೇಶದ ಮೂಲ ತಾಯಿಬೇರು ಖಾದಿ’ ಎಂದು ವಿರೋಧ ಪಕ್ಷ ಉಪನಾಯಕ ಯು.ಟಿ.ಖಾದರ್ ದೂರಿದ್ದಾರೆ.


ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಭಾರತದ ಸ್ವಾತಂತ್ರ್ಯ ಸಂಭ್ರಮದ ಅಮೃತ ಮಹೋತ್ಸವಕ್ಕೆ ಇಡೀ ದೇಶವೇ ಸಜ್ಜಾಗುತ್ತಿದೆ. ಸರಕಾರ ಹರ್ ಘರ್ ತಿರಂಗಾ ಎನ್ನುವ ಅಭಿಯಾನದ ಮೂಲಕ ಪ್ರತಿಯೊಬ್ಬರೂ ಮನೆ ಮೇಲೆ ರಾಷ್ಟ್ರಧ್ವಜ ಹಾರಿಸಬೇಕೆಂದು ಸೂಚನೆ ನೀಡಿದೆ.

ಸ್ವರಾಜ್ ಮತ್ತು ಸ್ವದೇಶಿ ಹೋರಾಟದ ಸ್ವಾಭಿಮಾನದ ಪ್ರತೀಕವೂ ಹೌದು. ಚರಕ ಕೇವಲ ಒಂದು ಸಿಂಬಲ್ ಅಲ್ಲ, ದೊಡ್ಡ ರಾಜ ಆಡಳಿತವನ್ನು ಕಿತ್ತೆಸೆದ ಸಂಕೇತವಾಗಿದೆ. ಯಾವುದೇ ಸರ್ಕಾರ ಬಂದರೂ ಖಾದಿಗೆ ವಿಶೇಷ ಪ್ರೋತ್ಸಾಹ ನೀಡಲಾಗುತ್ತಿತ್ತು.

ಈ ಅಮೃತ ಮಹೋತ್ಸವದ ಸಂದರ್ಭ ಎಲ್ಲರೂ ಖಾದಿ ತೊಡಬೇಕೆಂಬ ದೊಡ್ಡ ಮಟ್ಟದ ಸಂದೇಶವನ್ನು ಸರ್ಕಾರ ದೇಶಕ್ಕೆ ಕೊಡಬೇಕಿತ್ತು. ಆದರೆ ಅದನ್ನು ಮಾಡಲಿಲ್ಲ.

ಅಷ್ಟೇ ಅಲ್ಲ ನಮ್ಮಲ್ಲಿ ಖಾದಿಗೆ ಮಹತ್ವ ಕಡಿಮೆ ಆಗಿದೆ. ಮೋದಿ ಅವರು ಎಪ್ಪತೈದರ ಸಂಭ್ರಮಕ್ಕೆ ಎಲ್ಲರಿಗೂ ಖಾದಿ ಧರಿಸುವಂತೆ ಕರೆ ನೀಡಬೇಕಿತ್ತು ಎಂದರು. ಮೋದಿ ಅವರು ರಾಷ್ಟ್ರ ದ್ವಜವನ್ನೇ ಪಾಲಿಸ್ಟರ್ ಬಟ್ಟೆಗೆ ಬದಲಾಯಿಸಿದ್ದಾರೆ. ಮಾತಾಡೋದು ಸ್ವದೇಶಿ, ಆದ್ರೆ ಕೆಲಸ ಮಾಡುವಾಗ ಎಲ್ಲಾ ವಿದೇಶಿ ಆಗಿದೆ.

ವಿದೇಶದಿಂದ ಆಮದು ಮಾಡಿದ ಪಾಲಿಸ್ಟರ್ ಬಟ್ಟೆಯಲ್ಲಿ ದ್ವಜ ತಯಾರಿಸಲಾಗಿದೆ. ಚೈನಾದಿಂದಲೂ ಅಮದಿಗೆ ಅವಕಾಶ ನೀಡಲಾಗಿದೆ. ಇದು ಉದ್ಯಮಿಗಳಿಗೆ ಅನುಕೂಲ ಮಾಡಿಕೊಡುತ್ತದೆ ಅಷ್ಟೇ ಎಂದು ಖಾದರ್ ಕಿಡಿಕಾರಿದ್ದಾರೆ.

ಇನ್ನು ಮನೆಗಳಲ್ಲೂ ರಾಷ್ಟ್ರಧ್ವಜ ಹಾರಿಸುವುದಕ್ಕೆ ಸರ್ಕಾರ ಸರಿಯಾದ ಮಾಹಿತಿ ನೀಡಬೇಕು ಮತ್ತು ದ್ವಜಗಳನ್ನು ಪೂರೈಸಬೇಕು ಎಂದ ಅವರು ಪ್ರತಿ ಮನೆಗೆ ಹಾಕುವಷ್ಟು ರಾಷ್ಟ್ರ ದ್ವಜ ಮಾರುಕಟ್ಟೆಯಲ್ಲಿ ಇಲ್ಲ.

ಮಾರುಕಟ್ಟೆಯಲ್ಲಿ ಸಿಗುವ ಧ್ವಜದಲ್ಲಿ ಹಲವು ನೂನ್ಯತೆಗಳಿವೆ. ಘೋಷಣೆ ಮಾಡಿದ್ರೆ ಸಾಲದು ಸರಿಯಾಗಿ ಅನುಷ್ಠಾನ ಮಾಡಬೇಕು ಎಂದರು.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending