DAKSHINA KANNADA
ಬಿಜೆಪಿಯ ಅಪಪ್ರಚಾರ,ಅಡ್ಡಿಗಳ ಮಧ್ಯೆ ಕಾಂಗ್ರೆಸ್ ಸರ್ಕಾರದ ಯಶಸ್ವಿ 1 ತಿಂಗಳು ಪೂರ್ಣ : ಹರೀಶ್ ಕುಮಾರ್
ನೂತನ ಸರಕಾರ ಅಸ್ತಿತ್ವಕ್ಕೆ ಬಂದು ಒಂದು ತಿಂಗಳಾಗುತ್ತಾ ಬಂದಿದ್ದು, ನಾವು ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಸಾಕಾರಗೊಳಿಸಲು ಯತ್ನಿಸುತ್ತಿದ್ದರೆ ಬಿಜೆಪಿ ಅಪಪ್ರಚಾರ ನಡೆಸಿ ಅಡ್ಡಿ ಪಡಿಸುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ದಾರೆ.
ಮಂಗಳೂರು : ನೂತನ ಸರಕಾರ ಅಸ್ತಿತ್ವಕ್ಕೆ ಬಂದು ಒಂದು ತಿಂಗಳಾಗುತ್ತಾ ಬಂದಿದ್ದು, ನಾವು ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಸಾಕಾರಗೊಳಿಸಲು ಯತ್ನಿಸುತ್ತಿದ್ದರೆ ಬಿಜೆಪಿ ಅಪಪ್ರಚಾರ ನಡೆಸಿ ಅಡ್ಡಿ ಪಡಿಸುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಹರೀಶ್ ಕುಮಾರ್ ರಾಜ್ಯದಾದ್ಯಂತ ಮಹಿಳೆಯರು ಸರಕಾರಿ ಬಸ್ಸಿನಲ್ಲಿ ಸಂಚರಿಸುತ್ತಿದ್ದಾರೆ .
ನಮ್ಮ ಪಕ್ಷದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಹಿತ ಇಡೀ ಮಂತ್ರಿಮಂಡಲ, ಇತರ ನಾಯಕರು ಕೂಡಾ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ.
ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಲು ನಮ್ಮ ಯತ್ನ ನಡೆಸಿದಿದ್ದು, ಶಕ್ತಿ ಯೋಜನೆ ಈಗಾಗಲೇ ಯಶಸ್ವಿಯಾಗಿ ಮಹಿಳೆಯರಿಗೆ ಲಭ್ಯವಾಗಿದೆ.
ಶೀಘ್ರದಲ್ಲೆ ಮಹಿಳೆಯರಿಗೆ ಗೃಹ ಲಕ್ಷ್ಮೀ ಮತ್ತು ಗೃಹ ಜ್ಯೋತಿ ಕೂಡ ಶೀಘ್ರದಲ್ಲೇ ಆರಂಭವಾಗಿದ್ದು, ಗ್ರಾಮ ಒನ್ ಮೂಲಕ ಅರ್ಜಿ ಸ್ವೀಕರಿಸುವ ಕೆಲಸ ಆಗುತ್ತಿದೆ.
ಯುವ ನಿಧಿಗೆ ಕೂಡಾ ಅರ್ಜಿ ಆಹ್ವಾನಿಸಲಾಗಿದೆ. ಆದರೆ ಅನ್ನಭಾಗ್ಯ ಕಾರ್ಯಕ್ರಮಕ್ಕೆ ಬಿಜೆಪಿ ಸರಕಾರ ಅಡ್ಡಿ ಮಾಡುತ್ತಿದೆ. ಈ ಹಿಂದೆ ಅಕ್ಕಿ ನೀಡುವುದಾಗಿ ಹೇಳಿದ ಕೇಂದ್ರ ಬಳಿಕ ಅಕ್ಕಿ ನೀಡಲು ಹಿಂದೇಟು ಹಾಕಿರುವುದು ನಮ್ಮ ಯೋಜನೆ ಜಾರಿ ಆಗದಂತೆ ಯತ್ನಿಸುತ್ತಿದೆ ಎಂದು ಆರೋಪಿಸಿದರು.
ಇನ್ನು ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ ದೇಶದಲ್ಲೇ ಜನಪ್ರಿಯವಾದ ಅನ್ನಭಾಗ್ಯ ಯೋಜನೆಯನ್ನು ತಂದವರು ಜನಪ್ರಿಯ ಮುಖ್ಯಮಂತ್ರಿಯಾದ ಸಿದ್ಧರಾಮಯ್ಯನವರು. ಇದು ದೇಶದ ಇತಿಹಾಸದಲ್ಲೇ ಪ್ರಥಮ ಯೋಜನೆಯಾಗಿದೆ.
ಆದರೆ ಇದೀಗ ಬಿಜೆಪಿಗರಿಗೆ ಕಾಂಗ್ರೆಸ್ ಸರಕಾರದ ಯೋಜನೆಗಳನ್ನು ಸಹಿಸಲಾಗದೇ ವಿನಾಕಾರಣ ಟೀಕಿಸುತ್ತಿದ್ದಾರೆ ಎಂದರು.
DAKSHINA KANNADA
ದೇವರಿಗೆ ತುಪ್ಪದಲ್ಲಿ ದೀಪ ಹಚ್ಚುವುದು ಶುಭವೇ..?
ಮಂಗಳೂರು: ಮನೆಯ ದೇವರ ಕೊಣೆಯಲ್ಲಿ ಅಥವಾ ದೇವಸ್ಥಾನದಲ್ಲಿ ತುಪ್ಪ, ಎಣ್ಣೆ, ಸಾಸಿವೆ, ಎಳ್ಳು ಅಥವಾ ಮಲ್ಲಿಗೆಯ ಎಣ್ಣೆಯ ದೀಪವನ್ನು ಹಚ್ಚುವ ಪದ್ಧತಿ ಇದೆ. ಈ ರೀತಿಯಾಗಿ ಪ್ರತಿಯೊಂದು ಎಣ್ಣೆಯ ದೀಪವನ್ನು ಸುಡುವುದು ವಿಭಿನ್ನ ಮಹತ್ವವನ್ನು ಹೊಂದಿದೆ. ತುಪ್ಪದ ದೀಪವನ್ನು ಹಚ್ಚುವುದು ದುಬಾರಿಯಾದ ಕಾರಣ ಜನರು ಎಣ್ಣೆಯ ದೀಪಗಳನ್ನು ಹೆಚ್ಚು ಹಚ್ಚುತ್ತಾರೆ. ಎಣ್ಣೆ ಅಥವಾ ತುಪ್ಪದ ದೀಪಕ್ಕಿಂತ ಯಾವುದರ ದೀಪ ಹಚ್ಚುವುದು ಹೆಚ್ಚು ಮಂಗಳಕರ ಎಂಬುದನ್ನು ತಿಳಿದುಕೊಳ್ಳೋಣ.
ಯಾವ ದೀಪವನ್ನು ಬೆಳಗಬೇಕು?
ತುಪ್ಪದ ದೀಪವನ್ನು ಯಾವಾಗಲೂ ಹೂವಿನಾಕಾರದ ದೀಪದಲ್ಲಿ ಬಿಳಿ ಎಂಬ ಬೆಳಕಿನಿಂದ ಬೆಳಗಿಸಲಾಗುತ್ತದೆ ಮತ್ತು ಎಣ್ಣೆ ದೀಪವನ್ನು ಉದ್ದವಾದ ದೀಪದಿಂದ ಬೆಳಗಿಸಲಾಗುತ್ತದೆ. ಆದರೆ, ಎಳ್ಳಿನ ಎಣ್ಣೆಯ ದೀಪವನ್ನು ಹಚ್ಚಿದರೆ ಅದರಲ್ಲಿ ಕೆಂಪು ಅಥವಾ ಹಳದಿ ದೀಪವನ್ನು ಬಳಸಬೇಕು.
ಯಾವ ದೀಪ ಸೂಕ್ತ?
ತುಪ್ಪದ ದೀಪವನ್ನು ದೇವರಿಗೆ ಸಮರ್ಪಿಸಲಾಗುತ್ತದೆ. ಆದರೆ ಇಷ್ಟಾರ್ಥಗಳ ಈಡೇರಿಕೆಗಾಗಿ ಎಣ್ಣೆಯ ದೀಪವನ್ನು ಬೆಳಗಿಸಲಾಗುತ್ತದೆ. ಆರ್ಥಿಕ ಮುಗ್ಗಟ್ಟಿನಿಂದ ಮುಕ್ತಿ ಹೊಂದಲು ತುಪ್ಪದ ದೀಪವನ್ನು ಹಚ್ಚುವುದು ಹೆಚ್ಚು ಪ್ರಯೋಜನಕಾರಿ. ಇದರಿಂದ ದೇವರುಗಳು ಮತ್ತು ದೇವತೆಗಳು ಸಂತೋಷಪಡುತ್ತಾರೆ.
ತುಪ್ಪದ ದೀಪವನ್ನು ಹಚ್ಚುವುದು ಅತ್ಯಂತ ಮಂಗಳಕರ
ಮನೆ ಅಥವಾ ದೇವಸ್ಥಾನದಲ್ಲಿ ತುಪ್ಪದ ದೀಪವನ್ನು ಬೆಳಗಿಸುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಇದು ಎಲ್ಲಾ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ಜೊತೆಗೆ ಮನೆಯ ವಾಸ್ತು ದೋಷಗಳು ಸಹ ನಿವಾರಣೆಯಾಗುತ್ತದೆ. ಇದು ಎಲ್ಲಾ ರೀತಿಯ ನೋವನ್ನು ನಾಶಪಡಿಸುತ್ತದೆ. ಶಿವ ಪುರಾಣದ ಪ್ರಕಾರ ಪ್ರತಿದಿನ ತುಪ್ಪದ ದೀಪವನ್ನು ಹಚ್ಚುವುದರಿಂದ ಮನೆಯಲ್ಲಿ ಸುಖ, ಸಮೃದ್ಧಿ ಮತ್ತು ಶಾಂತಿ ನೆಲೆಸುತ್ತದೆ ಎಂದು ಹೇಳಲಾಗಿದೆ.
ತುಪ್ಪದ ದೀಪವನ್ನು ಹಚ್ಚಿದರೆ ಗಾಳಿಯು ಶುದ್ಧವಾಗುತ್ತದೆ ಮತ್ತು ಗಾಳಿಯಲ್ಲಿರುವ ರೋಗಾಣುಗಳು ನಾಶವಾಗುತ್ತದೆ. ಇದರ ಸುವಾಸನೆಯು ಮನಸ್ಸಿಗೆ ಶಾಂತಿಯನ್ನು ನೀಡುತ್ತದೆ ಮತ್ತು ಖಿನ್ನತೆಯನ್ನು ಹೋಗಲಾಡಿಸುತ್ತದೆ. ತುಪ್ಪವು ಚರ್ಮದ ರಕ್ತ ಕಣಗಳನ್ನು ಸಕ್ರಿಯಗೊಳಿಸುವ ವಿದ್ಯುತ್ಕಾಂತೀಯ ಶಕ್ತಿಯನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಲಾಗುತ್ತದೆ, ಇದರಿಂದಾಗಿ ಯಾವುದೇ ಚರ್ಮ ರೋಗಗಳು ಬರುವುದಿಲ್ಲ.
DAKSHINA KANNADA
ಆಂಬುಲೆನ್ಸ್ – ಕಾರು ನಡುವೆ ಭೀಕರ ಅ*ಪಘಾತ..! ಮೂವರ ದುರ್ಮ*ರಣ.!
ಕಾಸರಗೋಡು: ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಇಂದು ನಡೆದಿದೆ.
ಕಾರಿನಲ್ಲಿದ್ದ ತ್ರಿಶೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಎಂಬವರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಆ್ಯಂಬುಲೆನ್ಸ್ ನಲ್ಲಿದ್ದ ರೋಗಿಯೂ ಗಾಯಗೊಂಡಿದ್ದಾರೆ. ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮತ್ತು ಮಂಗಳೂರು ಕಡೆಯಿಂದ ಮಂಜೇಶ್ವರದತ್ತ ಬರುತ್ತಿದ್ದ ಕಾರು ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಆ್ಯಂಬುಲೆನ್ಸ್ ರಸ್ತೆಯಲ್ಲಿ ಮಗುಚಿ ಬಿದ್ದಿದೆ.
ಮುಂದೆ ಓದಿ..; ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!
DAKSHINA KANNADA
ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! ರಕ್ತಸಿಕ್ತ ಸ್ಥಿತಿಯಲ್ಲಿದ್ದ ಶ*ವ.!!
ಮಂಗಳೂರು: ಹೆಸರಾಂತ ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ತಲಪಾಡಿಯಲ್ಲಿರುವ ಬಂಟವಾಳದ ಭಂಟರ ಭವನದ ಆವರಣದ ಕಂಪೌಂಡ್ ಒಳಗಡೆ ವ್ಯಕ್ತಿಯೋರ್ವನ ಮೃತದೇಹ ರಕ್ತಸಿಕ್ತವಾಗಿ ಇದ್ದ ರೀತಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಅವರ ಮೃತದೇಹ ಎಂದು ಗುರುತಿಸಲಾಗಿದೆ.
ಬಂಟರ ಭವನದ ಹೊರಗಡೆ ಸಂತೋಷ್ ಗೆ ಸೇರಿದ್ದ ಬೈಕ್ ಪತ್ತೆಯಾಗಿದೆ. ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತು ಕೊಂಡಿದ್ದು ಈ ವೇಳೆ ಕುಸಿದು ಕೆಳಗೆ ಬಿದ್ದು ಈ ಘಟನೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಮುಂದೆ ಓದಿ.. ಧರ್ಮಸ್ಥಳ: ಸರಣಿ ಅಪ*ಘಾತ, 5 ವಾಹನಗಳಿಗೆ ಹಾನಿ
ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
- DAKSHINA KANNADA4 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- FILM6 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- dehali5 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
- BELTHANGADY5 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು