Connect with us

DAKSHINA KANNADA

ಕರಾವಳಿಗೂ ಕಾಲಿಟ್ಟ ಬ್ಲ್ಯಾಕ್ ಫಂಗಸ್ ;ಉಡುಪಿಯಲ್ಲಿ 7ಕೋವಿಡ್ ರೋಗಿಗಳಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ..!

Published

on

ಉಡುಪಿ: ಕೊರೊನಾ ಸೋಂಕಿನ ಜೊತೆಗೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ದೊಡ್ಡ ಆತಂಕ ಸೃಷ್ಟಿ ಮಾಡಿದ್ದು, ಇದೀಗ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಲ್ಲೂ ಬ್ಲ್ಯಾಕ್ ಫಂಗಸ್ ಸೋಂಕಿತರು ಪತ್ತೆಯಾಗಿದ್ದಾರೆ.ಕೋವಿಡ್ ರೋಗಿಗಳಲ್ಲಿ ಏಳು ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಹೊರ ಜಿಲ್ಲೆಗಳಿಂದ ಚಿಕಿತ್ಸೆ ಪಡೆಯಲು ಕೆ.ಎಂ.ಸಿ ಗೆ ದಾಖಲಾಗಿದ್ದ  ರೋಗಿಗಳಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ.ಧಾರವಾಡ, ಕೊಪ್ಪಳ, ಚಿತ್ರದುರ್ಗ, ದಾವಣಗೆರೆ, ಹರಿಹರ ಮೂಲದ ರೋಗಿಗಳಲ್ಲಿ  ಬ್ಲ್ಯಾಕ್ ಫಂಗಸ್ ರೋಗ ಇರುವುದು ಪತ್ತೆಯಾಗಿದೆ. ಈಗಾಗ್ಲೇ ಈ ಆರು ಮಂದಿಗೆ ಶಸ್ತ್ರಚಿಕಿತ್ಸೆ ಪೂರ್ಣಗೊಂಡಿದ್ದು,

ಅನ್ಯ ಚಿಕಿತ್ಸೆಗೆ ದಾಖಲಾದವರಲ್ಲಿ ಸೋಂಕು ಕಂಡು ಬಂದಿದೆ. ಮಧುಮೇಹ  ಕಾಯಿಲೆಯಿಂದ ಬಳಲುತ್ತಿದ್ದ ಕೊರೊನಾ ರೋಗಿಗಳಲ್ಲಿ ಬ್ಯ್ಲಾಕ್ ಫಂಗಸ್ ಕಂಡು ಬಂದಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಹೇಳಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ದೇಶದಲ್ಲಿ ಮೊದಲ ಬಾರಿಗೆ QR ಕೋಡ್ ವೋಟರ್ ಸ್ಲಿಪ್

Published

on

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಇದೇ ಮೊದಲ ಬಾರಿ ಮತದಾರರಿಗೆ ಕ್ಯೂ ಆರ್‌ ಕೋಡ್‌ ಹೊಂದಿರುವ ವೋಟರ್‌ ಸ್ಲಿಪ್‌ ನೀಡಲಾಗುವುದು.

ರಾಜ್ಯದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತಗಟ್ಟೆ ಸುಲಭವಾಗಿ ಹುಡುಕಲು ಸಾಧ್ಯವಾಗದಂತೆ ಮನೆ ಮನೆಗೆ ನೀಡಲಾಗುವ ವೋಟರ್‌ ಸ್ಲಿಪ್‌ ಗಳಲ್ಲಿ ಮತಗಟ್ಟೆಯ ಕ್ಯೂ ಆರ್‌ ಕೋಡ್‌ ಮುದ್ರಿಸಲಾಗಿದೆ.

ನಗರದ ನಿವಾಸಿಗಳು ಕ್ಯೂ ಆರ್‌ ಕೋಡ್‌ ಮೂಲಕ ತಮ್ಮ ಮತಗಟ್ಟೆಯನ್ನು ಸುಲಭವಾಗಿ ಗುರುತಿಸಬಹುದಾಗಿದೆ. ಮತದಾರರ ಮಾಹಿತಿ ಚೀಟಿಯನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳ ಮೂಲಕ ನೋಂದಾಯಿತ ಎಲ್ಲಾ ಮತದಾರರಿಗೆ ಒದಗಿಸಲಾಗುವುದು.

Continue Reading

DAKSHINA KANNADA

ಒಂದು ತಿಂಗಳಿನಿಂದ ಮೊಬೈಲ್‌ ಫೋನ್‌ ಸಂಪರ್ಕವಿಲ್ಲದೆ ಪರದಾಡುತ್ತಿದ್ದಾರೆ ಈ ಜನರು..!!

Published

on

ಉಡುಪಿ: ಜಿಲ್ಲೆಯ ಕಟಪಾಡಿ ಪೇಟೆ ಸುತ್ತಮುತ್ತಲಿನ ಒಂದೂವರೆ ಕಿ.ಮೀ. ವ್ಯಾಪ್ತಿಯಲ್ಲಿ ಕಳೆದ ಒಂದು  ತಿಂಗಳಿನಿಂದ ಮೊಬೈಲ್ ನೆಟ್ವರ್ಕ್ ಸಂಪೂರ್ಣ ಸ್ಥಗಿತವಾಗಿದ್ದು, ಖಾಸಗಿ ಕಂಪೆನಿಗಳ ಮೊಬೈಲ್ ಫೋನ್ ಮತ್ತು ಇಂಟರ್‌ನೆಟ್ ಬಳಕೆದಾರರು ತೀವ್ರ ಅಡಚಣೆ ಅನುಭವಿಸುತ್ತಿದ್ದಾರೆ.

katapadi

ಮೊಬೈಲ್ ಕಂಪೆನಿ ಹಾಗೂ ಟವರ್ ಅಳವಡಿಸಲಾಗಿರುವ ಜಾಗದ ಮಾಲೀಕರ ನಡುವಿನ ಒಪ್ಪಂದ ಮುಗಿದ ಹಿನ್ನೆಲೆಯಲ್ಲಿ ಏರ್‌ಟೆಲ್, ವಿಐ ಮತ್ತು ಜಿಯೋ ಬಳಕೆದಾರರಿಗೆ ನೆಟ್ ವರ್ಕ್ ಸಿಗದಂತಾಗಿದೆ. ಫೋನ್ ಕರೆ ಮಾಡಲು, ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ, ಆನ್‌ಲೈನ್ ಹಣಕಾಸಿನ ವ್ಯವಹಾರ, ವರ್ಕ್ ಫ್ರಮ್ ಹೋಮ್, ಕಚೇರಿಯ ದೈನಂದಿನ ಕೆಲಸ ನಿರ್ವಹಿಸಲು ಕಷ್ಟಪಡುತ್ತಿದ್ದು, ಜನರ ಗೋಳು ಕೇಳುವವರೇ ಇಲ್ಲವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಮೊಬೈಲ್ ಸೇವೆ ಒದಗಿಸುವ ಕಂಪೆನಿಗಳು ಟವರ್ ಲಭ್ಯವಿಲ್ಲದೆ ನಾವೇನೂ ಮಾಡಲಾಗುತ್ತಿಲ್ಲ. ಸಮೀಪದಲ್ಲಿ ಪರ್ಯಾಯ ಜಾಗವೂ ಸಿಗುತ್ತಿಲ್ಲ ಎಂದು ಹೇಳುತ್ತಿವೆ. ಏರ್‌ಟೆಲ್ ಸಂಸ್ಥೆಯ ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ‘ಪರ್ಯಾಯ ಟವರ್‌ಗೆ ವ್ಯವಸ್ಥೆಯಾಗದೆ ಏನೂ ಮಾಡುವಂತಿಲ್ಲ, ಪರ್ಯಾಯ ಜಾಗದ ವ್ಯವಸ್ಥೆ ಆದಲ್ಲಿ ಟವರ್ ನಿರ್ಮಾಣ ಮಾಡುತ್ತೇವೆ’ ಎಂದು ಹೇಳುತ್ತಿದ್ದಾರೆ.

READ MORE..; ಅರ್ಚಕರಿಂದಲೇ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ..!! ವಿಡಿಯೋ ವೈರಲ್

ನೆಟ್ ವರ್ಕ್ ಸಿಗದೆ ಹೈರಾಣಾಗಿರುವ ಸ್ಥಳೀಯರು ಮೊಬೈಲ್ ಸೇವೆ ಕಲ್ಪಿಸುವ ಸಂಸ್ಥೆಗಳ ವಿರುದ್ಧ – ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಜನರಲ್ಲಿ ಕಂಪೆನಿ ವಿರುದ್ದ ಆಕ್ರೋಶ ಹೆಚ್ಚುತ್ತಿದೆ. ಜಾಗದ ಮಾಲೀಕರು ಮತ್ತು ನೆಟ್ವರ್ಕ್ ಸಂಸ್ಥೆಗಳು ಪರಸ್ಪರ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳ ಬೇಕು ಎಂದು ಒತ್ತಾಯಿಸು ತ್ತಿರುವ ಸ್ಥಳೀಯರು ಸಂಘಟಿತ ಹೋರಾಟಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.

 

Continue Reading

DAKSHINA KANNADA

ಪ್ರತಿಭಾವಂತೆ ವಿದ್ಯಾರ್ಥಿನಿಯನ್ನು ಬಲಿ ಪಡೆದ ಮೆದುಳು ಜ್ವರ

Published

on

ಮೂಡಬಿದಿರೆ: ಮೆದುಳು ಜ್ವರಕ್ಕೆ 10ನೇ ತರಗತಿ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಮೂಡಬಿದರೆಯಲ್ಲಿ ನಡೆದಿದೆ. ಶಿರ್ತಾಡಿ ಮೌಂಟ್ ಕಾರ್ಮೆಲ್ ಹೈಸ್ಕೂಲ್‌ನ 10ನೇ ತರಗತಿಯ ಸ್ವಸ್ತಿ ಶೆಟ್ಟಿ (15) ಮೃತ ವಿದ್ಯಾರ್ಥಿನಿ. ಸ್ವಸ್ತಿ ಶೆಟ್ಟಿ ಮೆದುಳು ಜ್ವರ ಉಲ್ಬಣಗೊಂಡ ಪರಿಣಾಮ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

Swasthi

ಉತ್ತಮ ತ್ರೋಬಾಲ್ ಆಟಗಾರ್ತಿಯಾಗಿದ್ದ ಈಕೆ ಉತ್ತಮ ನೃತ್ಯಪಟುವೂ ಆಗಿದ್ದಳು.ತಂದೆ ಸತೀಶ್‌ ಶೆಟ್ಟಿ ಗೋವಾದಲ್ಲಿ ಉದ್ಯೋಗದಲ್ಲಿದ್ದು ತಾಯಿ ಸರಿತಾ ಶೆಟ್ಟಿ ಶಿರ್ತಾಡಿ ನವಮೈತ್ರಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಉದ್ಯೋಗಿ. ಮೂಲತಃ ವಾಲ್ಪಾಡಿಯವರಾದ ಇವರು ಪ್ರಸ್ತುತ ಮೂಡಬಿದಿರೆಯಲ್ಲಿ ನೆಲೆಸಿದ್ದಾರೆ.

READ MORE..; ಪ್ರಚಾರದ ಭರದಲ್ಲಿ ತೇಜಸ್ವಿ ಸೂರ್ಯ ಕಿರಿಕ್‌..! ಸಂಸದರಿಗೆ ಡೌನ್ ಡೌನ್ ಎಂದ ಸಭಿಕರು

Continue Reading

LATEST NEWS

Trending