LATEST NEWS
ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ
ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ ರಾಷ್ಟೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಇಂಡಿಯನ್ ರೆಡ್ ಕ್ರಾಸ್ ಘಟಕ ಮತ್ತು ಲಯನ್ಸ್ ಕ್ಲಬ್ ಕುಡ್ಲ ಇದರ ಸಹಬಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ನಡೆಯಿತು.
ಈ ಶಿಬಿರವನ್ನು ಶ್ರೀ ಶಿವಭಕ್ತಿ ಯೋಗ ಸಂಘದ ಸದಸ್ಯರಾದ ಶ್ರೀ ಕೆ ಪ್ರವೀಣ್ ಕುಮಾರ್ ಉದ್ಘಾಟಿಸಿದರು. ಗೌರವ ಅತಿಥಿಯಾಗಿ ಲಯನ್ಸ್ ಕುಡ್ಲ ಇದರ ಅಧ್ಯಕ್ಷರಾದ ಲಯನ್ ಪ್ರಮೋದ್ ರೈ ರವರು ಮಾತನಾಡಿ, ರಕ್ತದಾನ ಮಾಡುದರಿಂದ ನಾವು ಅರೋಗ್ಯವಾಗಿರುತ್ತೇವೆ. ನಮ್ಮಲ್ಲಿ ಹೊಸ ರಕ್ತ ಉತ್ಪತ್ತಿಯಾಗುತ್ತದೆ. ಪ್ರತಿಯೊಬ್ಬರು ರಕ್ತದಾನ ಮಾಡಲು ಸ್ವಯಂಪ್ರೇರಿತರಾಗಿ ಮುಂದೆ ಬರಬೇಕು ಎಂದರು.
ಮುಖ್ಯ ಅತಿಥಿಯಾಗಿ ಇಂಡಿಯನ್ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಪ್ರವೀಣ್ ಮಾತನಾಡಿ, ರಕ್ತದಾನದಲ್ಲಿ ಜಾತಿ ಮತ ಭೇದವಿಲ್ಲ. ರಕ್ತದಾನ ಶ್ರೇಷ್ಠ ಮಹಾದಾನ ಎಂದು ಹೇಳಿ ರಕ್ತದ ಮಹತ್ವದ ಕುರಿತು ವಿವರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಜಯಪ್ರಕಾಶ್ ರವರು ರಕ್ತದಾನ ಮಾಡುದರಿಂದ ನಮ್ಮ ದೇಹದ ಅರೋಗ್ಯ ಮತ್ತು ನಮ್ಮ ಹೃದಯದ ಅರೋಗ್ಯವನ್ನು ಕಾಪಾಡಿಕೊಳ್ಳಬಹುದು. ವಿದ್ಯಾರ್ಥಿಗಳು ಸಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದರು.
ಇನ್ನೊರ್ವ ಮುಖ್ಯ ಅತಿಥಿಯಾಗಿ ಬಿ.ಎಡ್ ವಿಭಾಗದ ಪ್ರಾಂಶುಪಾಲರಾದ ಶ್ರೀ ಉದಯಕುಮಾರ್ ರವರು ಮಾತನಾಡಿ ರಕ್ತದಾನ ಮಾಡುವುದರಿಂದ ಒಂದು ಜೀವ ಉಳಿಯುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶ್ರೀ ಗೋಕರ್ಣನಾಥ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಶ್ರೀ ವಸಂತ ಕಾರಂದೂರ್ ರವರು ರಕ್ತದಾನ ಮಹಾದಾನ, ರಕ್ತದಾನ ಮಾಡಿದವರು ಶ್ರೇಷ್ಠರು. ರಕ್ತಗೂ ಕೂಡ ಭೇದ-ಭಾವ ಇಲ್ಲ ಎಂದರು. ನಮ್ಮ ರಕ್ತದೋತ್ತಡವನ್ನು ನಿಯಂತ್ರಿಸುತ್ತದೆ. ಕಬ್ಬಿಣ ಅಂಶದ ಮಟ್ಟವನ್ನು ನಿಯಂತ್ರಣದಲ್ಲಿ ಇಡುತ್ತದೆ ಎಂದರು.
ಈ ಸಂದರ್ಭದಲ್ಲಿ ಎಚ್.ಡಿ.ಎಫ್.ಸಿಯ ಸೀನಿಯರ್ ಮೆನೇಜರ್ ಕುಶಾಲಪ್ಪ ಗೌಡ ಲಯನ್ಸ್ ಕ್ಲಬ್ ಕುಡ್ಲದ ನಿವೃತ ಅಧ್ಯಕ್ಷರಾದ – ಕಾರ್ಯದರ್ಶಿ ಉಪಸ್ಥಿತರಿದ್ದರು. ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕರಾದ ಶ್ರೀ ಯತೀನ್, ರಾಷ್ಟ್ರೀಯ ಸೇವಾಯೋಜನೆಯ ಕಾರ್ಯಕ್ರಮಧಿಕಾರಿ ಬಾಲಚಂದ್ರ, ಯೂತ್ ರೆಡ್ ಕ್ರಾಸ್ ಘಟಕದ ಸಂಯೋಜಕಿ ಶ್ರೀಮತಿ ರವಿಕಲ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಉಪಕಾರ್ಯಕ್ರಮಧಿಕಾರಿ ಕುಮಾರಿ ಪ್ರತೀಕ್ಷಾ, ಉಪನ್ಯಾಸಕರಾದ ಉಮೇಶ್ ಹೆಗ್ಡೆ, ಕ್ಯಾಪ್ಟನ್ ಪ್ರವೀಣ್ ಭಾಗವಹಿಸಿದರು. ಕಾರ್ಯಕ್ರಮವನ್ನು ಧನುಶ್ರೀ ನಿರೂಪಿಸಿದರು. ನಿರೀಕ್ಷಾ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಶೇಲ್ಮಾ ವಂದಿಸಿದರು. ಒಟ್ಟು 90 ವಿದ್ಯಾರ್ಥಿಗಳು, ಹಳೇವಿದ್ಯಾರ್ಥಿಗಳು ರಕ್ತದಾನ ಮಾಡಿ ಕಾರ್ಯಕ್ರಮದ ಯಶಸ್ವಿಗೆ ಕಾರಣರಾದರು.
health
ಬಾಯ್ಸ್.. ನಿಮಗೆ ಈ ಅಭ್ಯಾಸ ಇದೆಯಾ ?? ಹಾಗಾದ್ರೆ ಮಕ್ಕಳಾಗೋದು ಡೌಟ್ !!!
ಮಂಗಳೂರು: ಪುರುಷರ ಫಲವತ್ತತೆಯು ಪ್ರಸ್ತುತ ದಿನಗಳಲ್ಲಿ ಗಂಭೀರ ವಿಷಯವಾಗಿದ್ದು ನಿರ್ಲಕ್ಷ ಮಾಡದೆಯೇ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿದೆ. ಹೆಣ್ಣಿಗೆ ಗರ್ಭ ಧರಿಸುವುದಕ್ಕೆ ವೀರ್ಯದ ಸಂಖ್ಯೆ ಪ್ರತಿ ಮಿಲಿಲೀಟರ್ ನಲ್ಲಿ 15 ಮಿಲಿಯನ್ ಗಿಂತ ಹೆಚ್ಚಿರಬೇಕು. ಇದು ಇದಕ್ಕಿಂತ ಕಡಿಮೆಯಿದ್ದರೆ, ಅದನ್ನು ಕಡಿಮೆ ವೀರ್ಯಾಣುಗಳ ಸಂಖ್ಯೆ ಎಂದು ಪರಿಗಣಿಸಲಾಗುತ್ತದೆ.
ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಬಂಜೆತನದ ಸಮಸ್ಯೆಯನ್ನು ಹೆಚ್ಚಾಗಿ ಎದುರಿಸುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಈ ವೀರ್ಯಾಣುಗಳ ಸಂಖ್ಯೆಯಲ್ಲಿನ ಇಳಿಕೆ. ಜೊತೆಗೆ ಇತರ ಆರೋಗ್ಯ ಸಮಸ್ಯೆಗಳು. ಸಾಮಾನ್ಯವಾಗಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗಲು ಹಲವು ಕಾರಣಗಳಿವೆ. ತಡವಾಗಿ ಮದುವೆಯಾಗುವುದು, ಒತ್ತಡ, ಅನಾರೋಗ್ಯಕರ ಜೀವನಶೈಲಿಯು ವೀರ್ಯಾಣುಗಳ ಸಂಖ್ಯೆಯ ಮೇಲೆ ಪರಿಣಾಮ ಬೀರುತ್ತದೆ.
ಇಂತಹ ಸಮಯದಲ್ಲಿ ಲೈಂಗಿಕ ಸಮಸ್ಯೆಗಳು, ಕಡಿಮೆ ಶಕ್ತಿ, ವೃಷಣ ಸಮಸ್ಯೆಗಳು, ದೇಹ – ಮುಖ – ಕೂದಲಿನ ಬೆಳವಣಿಗೆಯಲ್ಲಿ ಬದಲಾವಣೆಗಳನ್ನು ಅನುಭವಿಸುತ್ತಿದ್ದರೆ, ಅದು ಕಡಿಮೆ ವೀರ್ಯಾಣುಗಳ ಸಂಖ್ಯೆಯ ಸಂಕೇತವಾಗಿರಬಹುದು. ಈ ಕಾರಣಗಳಿಂದ ಬಂಜೆತನದ ಸಮಸ್ಯೆಯ ಜೊತೆಗೆ ಇತರ ಸಮಸ್ಯೆಗಳು ಕೂಡ ಸಾಮಾನ್ಯವಾಗಿ ಸಂಭವಿಸುತ್ತವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ ಪುರುಷರು ಪ್ರತಿದಿನ ಒಂದೇ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಬಹಳ ಜಾಗರೂಕರಾಗಿರುವುದು ಒಳ್ಳೆಯದು.
ನಿರ್ದಿಷ್ಟವಾಗಿ ಕೆಲವು ರೀತಿಯ ಅಭ್ಯಾಸಗಳು ವೀರ್ಯಾಣುಗಳ ಸಂಖ್ಯೆಯನ್ನು ಕಡಿಮೆ ಮಾಡಲು ಕಾರಣವಾಗಬಹುದು. ಇದಲ್ಲದೆ, ಬಂಜೆತನದ ಸಮಸ್ಯೆಗೂ ಕಾರಣವಾಗಬಹುದು. ಅದರಲ್ಲಿಯೂ ಕಡಿಮೆ ವೀರ್ಯಾಣುಗಳ ಸಂಖ್ಯೆಯು ಹೆಣ್ಣಿಗೆ ಗರ್ಭಿಣಿಯಾಗಲು ತುಂಬಾ ಕಷ್ಟಕರವಾಗಿಸುತ್ತದೆ. ಹಾಗಾಗಿ ತಂದೆಯಾಗಲು ಬಯಸುವ ಮೊದಲು ಈ 5 ಅಭ್ಯಾಸಗಳಿಂದ ದೂರವಿರಬೇಕಾಗುತ್ತದೆ. ಹಾಗಾದರೆ ಅವು ಯಾವುವು? ಯಾಕಾಗಿ ಅವುಗಳಿಂದ ದೂರವಿರಬೇಕು? ಎಂಬೆಲ್ಲಾ ಪ್ರಶ್ನೆಗೆ ಉತ್ತರ ಇಲ್ಲಿದೆ.
ಮುಖ್ಯವಾಗಿ ದೂರವಿಡಬೇಕಾದ 5 ಅಭ್ಯಾಸಗಳು :
ಧೂಮಪಾನ: ಸಿಗರೇಟು ಸೇದುವುದು ಕೆಲವು ಪುರುಷರಲ್ಲಿ ಸಾಮಾನ್ಯವಾಗಿದೆ. ಆದರೆ, ಧೂಮಪಾನವು ಕೇವಲ ಶ್ವಾಸಕೋಶಕ್ಕೆ ಸಂಬಂಧಿಸಿದ್ದಲ್ಲ. ಇದು ಲೈಂಗಿಕ ಆರೋಗ್ಯಕ್ಕೂ ಹಾನಿಕಾರಕ. ಧೂಮಪಾನ ಮಾಡುವ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆ ಇರುತ್ತದೆ ಎಂದು ಅಧ್ಯಯನಗಳಿಂದ ತಿಳಿದು ಬಂದಿದೆ.
ಮದ್ಯಪಾನ: ಕೆಲವು ಹುಡುಗರು ಚಿಕ್ಕ ವಯಸ್ಸಿನಿಂದಲೇ ಮದ್ಯಪಾನ ಮಾಡಲು ಪ್ರಾರಂಭಿಸುತ್ತಾರೆ. ಇದು ಒಳ್ಳೆಯದಲ್ಲ ಎಂದು ವೈದ್ಯಕೀಯ ತಜ್ಞರು ಎಚ್ಚರಿಸುತ್ತಾರೆ. ಅಲ್ಲದೆ ಅತಿಯಾಗಿ ಆಲ್ಕೋಹಾಲ್ ಸೇವನೆಯು ಪುರುಷರ ಫಲವತ್ತತೆಯ ಮೇಲೆ ಪರಿಣಾಮ ಬೀರುತ್ತದೆ. ಈ ಕಾರಣದಿಂದಾಗಿ, ಸಾಕಷ್ಟು ವೀರ್ಯಾಣು ಉತ್ಪತ್ತಿಯಾಗುವುದಿಲ್ಲ ಎಂದು ಹೇಳಲಾಗುತ್ತದೆ.
ಉದ್ವೇಗ (ಒತ್ತಡ): ಅಧಿಕ ಒತ್ತಡವು ದೇಹದಲ್ಲಿ ಕಾರ್ಟಿಸೋಲ್ ನಂತಹ ಒತ್ತಡದ ಹಾರ್ಮೋನುಗಳ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಟೆಸ್ಟೋಸ್ಟೆರಾನ್ ಉತ್ಪಾದನೆಯ ಮೇಲೆ ಪರಿಣಾಮ ಬೀರುತ್ತದೆ. ಇದು ವೀರ್ಯಾಣುಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ. ಆದ್ದರಿಂದ, ಯೋಗ, ಧ್ಯಾನ, ದೈಹಿಕ ವ್ಯಾಯಾಮ ಮುಂತಾದ ಒತ್ತಡ ನಿರ್ವಹಣಾ ವಿಧಾನಗಳನ್ನು ಅನುಸರಿಸುವುದು ಬಹಳ ಮುಖ್ಯ.
ಅನಾರೋಗ್ಯಕರ ಆಹಾರಗಳು: ಆಹಾರ ಫಲವತ್ತತೆಯ ಮೇಲೂ ಪರಿಣಾಮ ಬೀರುತ್ತದೆ. ಫಾಸ್ಟ್ ಫುಡ್, ಸಕ್ಕರೆ ಮತ್ತು ಕೊಬ್ಬಿನ ಪದಾರ್ಥಗಳನ್ನು ಸೇವಿಸುವುದರಿಂದ ದೇಹದಲ್ಲಿ ಊತ ಮತ್ತು ತೂಕ ಹೆಚ್ಚಾಗಬಹುದು, ಇದು ವೀರ್ಯಾಣು ಉತ್ಪಾದನೆಯ ಮೇಲೆ ಪರಿಣಾಮ ಬೀರುತ್ತದೆ. ಜೀವಸತ್ವಗಳು ಮತ್ತು ಖನಿಜಗಳ ಕೊರತೆಗಳು, ವಿಶೇಷವಾಗಿ ಸತು, ಸೆಲೆನಿಯಂ, ಫೋಲಿಕ್ ಆಮ್ಲ, ವೀರ್ಯಾಣುಗಳ ಗುಣಮಟ್ಟದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ಸೇವನೆ ಮಾಡುವ ಆಹಾರದ ಬಗ್ಗೆ ಗಮನವಹಿಸಬೇಕು.
ವಿಪರೀತ ಶಾಖ: ಪುರುಷರಿಗೆ, ದೇಹದ ಕೆಳಭಾಗದಲ್ಲಿ ಅತಿಯಾದ ಶಾಖ ಅಥವಾ ಬಿಸಿಯ ಅನುಭವ ಆಗುವುದು ವೀರ್ಯಾಣುಗಳ ಸಂಖ್ಯೆಯ ಮೇಲೂ ಪರಿಣಾಮ ಬೀರುತ್ತದೆ. ಹಾಗಾಗಿ ಇಂತಹ ಪರಿಸ್ಥಿತಿಯಲ್ಲಿ, ನೀವು ಬಿಸಿ ನೀರಿನ ಸ್ನಾನ, ಬಿಗಿಯಾದ ಒಳ ಉಡುಪುಗಳು, ಲ್ಯಾಪ್ಟಾಪ್ ಅನ್ನು ನಿಮ್ಮ ತೊಡೆಯ ಮೇಲೆ ದೀರ್ಘಕಾಲ ಇರಿಸಿಕೊಂಡು ಕೆಲಸ ಮಾಡುವುದನ್ನು ತಪ್ಪಿಸಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಇಲ್ಲದಿದ್ದರೆ, ವೃಷಣಗಳ ತಾಪಮಾನದ ಹೆಚ್ಚಳದಿಂದಾಗಿ ವೀರ್ಯಾಣು ಹಾನಿಯಾಗುವ ಅಪಾಯವೂ ಇರುತ್ತದೆ.
DAKSHINA KANNADA
‘ನನ್ನ ಜತೆ ಬಾ ಇಲ್ಲಾಂದ್ರೆ 24 ತುಂಡು ಮಾಡುವೆ : ಯುವತಿಗೆ ಬೆದರಿಕೆ; ಆರೋಪಿ ವಶಕ್ಕೆ
ಸುರತ್ಕಲ್: ‘ನನ್ನ ಜತೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ’ ಎಂದು ಸುರತ್ಕಲ್ ಇಡ್ಯಾ ಅನ್ಯ ಸಮುದಾಯದ ನಿವಾಸಿ ಸಮೀಪದಲ್ಲೇ ವಾಸಿಸುವ ಯುವತಿಯೊಬ್ಬಳಿಗೆ ವಾಟ್ಸಪ್ ಮೆಸೇಜ್ ಮಾಡಿ ಸಂಚಲನ ಸೃಷ್ಟಿಸಿದ್ದಾನೆ.
ಇತ್ತೀಚಿನ ದಿನಗಳಲ್ಲಿ ಅನೇಕ ಕೋಮು ಗಲಭೆಗಳು ನಡೆಯುತ್ತಿದ್ದು ಇದೀಗ ಅಂತಹದ್ದೇ ಮತ್ತೊಂದು ಘಟನೆ ಕೋಮು ಸಂಘರ್ಷಕ್ಕೆ ಕಿಡಿ ಕಾರಿದೆ.
ಸುರತ್ಕಲ್ ಇಡ್ಯಾ ನಿವಾಸಿ, ಸದಾಶಿವನಗರದ ಶಾರಿಕ್ ನೂರ್ಜಹಾನ್ ಮೆಸೆಜ್ ಮಾಡಿದ ಆರೋಪಿ ಎಂದು ತಿಳಿದು ಬಂದಿದೆ.
ಕಿರುಕುಳ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಯುವತಿಯ ಸಹೋದರನಿಗೆ ವಾಟ್ಸಪ್ ಮೆಸೇಜ್ ಮಾಡಿ ಈ ಧಮಕಿ ಹಾಕಿದ್ದಾನೆ. ಯುವತಿಯ ಕುಟುಂಬ ಆತಂಕಗೊಂಡು ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯುವಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
BIG BOSS
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಸಾಕಷ್ಟು ಟಾಸ್ಕ್ಗಳನ್ನು ನೀಡಲಾಗುತ್ತಿದೆ. ಈ ಬಾರಿ ರಾಜಕೀಯ ಮಾಡೋಕೆ ಓಪನ್ ಆಗಿ ಅವಕಾಶ ನೀಡಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.
ಬಿಗ್ ಬಾಸ್’ ಮನೆಯಲ್ಲಿ ರಾಜಕೀಯ ಒಳಗೊಳಗೆ ನಡೆಯೋದು ಕಾಮನ್. ಯಾವುದೂ ಎದುರಿಗೆ ಬರೋದಿಲ್ಲ. ಆದರೆ, ಈಗ ಹಾಗಿಲ್ಲ. ಓಪನ್ ಆಗಿ ರಾಜಕೀಯ ಆರಂಭ ಆಗಿದೆ. ಇದಕ್ಕೆ ಕಾರಣ ಆಗಿರೋದು ‘ಬಿಗ್ ಬಾಸ್’ ಮನೆಯಲ್ಲಿ ನೀಡಿರೋ ಟಾಸ್ಕ್. ಈ ವಾರ ಬಿಗ್ ಬಾಸ್ ಮನೆ ಬಿಗ್ ಬಾಸ್ ಸೌಧವಾಗಿ ಮಾರ್ಪಾಡಾಗಿದೆ. ಎಲ್ಲರೂ ರಾಜಕಾರಣಿಗಳ ಅವತಾರ ತಾಳಿದ್ದಾರೆ. ಆ ಪ್ರೋಮೋವನ್ನು ಕಲರ್ಸ್ ಕನ್ನಡ ಪೇಜ್ನಲ್ಲಿ ಹಾಕಿದ್ದಾರೆ.
- BIG BOSS5 days ago
ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ: ಬಿಗ್ ಬಾಸ್ ನಿಂದ ಹೊರಬಂದ ಜಗದೀಶ್ ಫಸ್ಟ್ ರಿಯಾಕ್ಷನ್!
- BIG BOSS6 days ago
ಕೊನೆಗೂ ಸುದೀಪ್ ಹೇಳಿದ ಬದಲಾವಣೆಯನ್ನು ಜಾರಿಗೆ ತಂದ ಬಿಗ್ ಬಾಸ್; ಏನದು ?
- FILM2 days ago
ಇರಲು ಮನೆ ಇರಲಿಲ್ಲ; ಮೆಜೆಸ್ಟಿಕ್ನಲ್ಲೇ ಸುತ್ತಾಡಿದ್ದ ಸಿಹಿ ಕುಟುಂಬ; ಕಷ್ಟಗಳ ನೆನೆದು ಪುಟಾಣಿ ಕಣ್ಣೀರು
- BIG BOSS4 days ago
ಮತ್ತೆ ಜೈಲು ಸೇರಿದ ಚೈತ್ರಾ ಕುಂದಾಪುರ