BELTHANGADY
ಬೈಕ್ಗೆ ಗುದ್ದಿ ಎಸ್ಕೇಪ್ ಆದ ಬೊಲೆರೋ..! ಮಗು ಸಾ*ವು..!
ಬೆಳ್ತಂಗಡಿ : ಬೊಲೆರೋ ವಾಹನವೊಂದು ಬೈಕ್ಗೆ ಡಿ*ಕ್ಕಿ ಹೊಡೆದು ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ನಡೆದಿದೆ. ಮುಂಡಾಜೆಯ ಸೀಟು ಬಳಿ ಈ ಅಪಘಾ*ತ ನಡೆದಿದ್ದು ಬೈಕ್ ಸವಾರ ಕಲ್ಮಂಜ ಕುಡೆಂಚಿಯ ಗುರುಪ್ರಸಾದ್ ಗೋಖಲೆ ಹಾಗೂ ಅವರ ಮಗು ಅನರ್ಘ್ಯ ಗಂಭೀ*ರ ಗಾಯಗೊಂಡಿದ್ದಾರೆ. ಗುರುಪ್ರಸಾದ್ ಗೋಕಲೆಯವರು ಕಾಲು ಮುರಿದಿದ್ದು, ಮಗುವಿನ ತಲೆಗೆ ತೀವ್ರ ಸ್ವರೂಪದ ಗಾ*ಯವಾಗಿದೆ. ಮಗುವಿನ ತಲೆಯ ಮೇಲೆ ಬೊಲೆರೋ ಟಯರ್ ಹರಿದಿದ್ದು, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃ*ತಪಟ್ಟಿದೆ.
ಅಪಘಾ*ತ ನಡೆಸಿದ ಬೊಲೇರೋ ವಾಹನ ನಿಲ್ಲಿಸದೇ ಪರಾರಿಯಾಗಿದ್ದು, ಸ್ಥಳೀಯರು ವಾಹನವನ್ನು ಹಿಂಬಾಲಿಸಿಕೊಂಡು ಹೋಗಿದ್ದಾರೆ. ನೆರಿಯಾ ಗ್ರಾಮದ ನಾಲ್ವರು ಬೊಲೆರೋದಲ್ಲಿ ಪ್ರಯಾಣಿಸುತ್ತಿದ್ದು ಅವರನ್ನು ಸಾರ್ವಜನಿಕರು ಹಿಡಿದಿದ್ದಾರೆ.
ಮಗು ಅನರ್ಘ್ಯ ಉಜಿರೆ ಎಸ್ಡಿಎಂ ಶಾಲೆಯಲ್ಲಿ ನಾಲ್ಕನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಬೊಲೆರೋ ಡಿಕ್ಕಿಯ ರಭಸಕ್ಕೆ ಚಕ್ರದ ಅಡಿಗೆ ತಲೆ ಬಿದ್ದಿರುವುದಾಗಿ ಮಾಹಿತಿ ಲಭ್ಯವಾಗಿದೆ.
BELTHANGADY
ಎರಡು ತಿಂಗಳಿನಿಂದ ಆತಂಕ ಸೃಷ್ಟಿ ಮಾಡಿದ್ದ ಚಿರತೆ ಸೆರೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದಲ್ಲಿ ಸ್ಥಳೀಯರಿಗೆ ಆತಂಕ ಸೃಷ್ಟಿ ಮಾಡಿದ್ದ ಚಿರತೆಯೊಂದು ಬೋನಿಗೆ ಬಿದ್ದಿದೆ. ಎರಡು ತಿಂಗಳ ಹಿಂದೆ ಚಿರತೆ ಸ್ಥಳೀಯರಿಗೆ ಕಾಣಿಸಿಕೊಂಡಿದ್ದು ಭಯವನ್ನು ಸೃಷ್ಟಿಮಾಡಿತ್ತು. ಇದೀಗ ಈ ಚಿರತೆ ಬೋನಿಗೆ ಬಿದ್ದಿದ್ದು ಜನರ ಆತಂಕ ದೂರವಾಗಿದೆ.
ಊರಿನಲ್ಲಿ ಚಿರತೆ ಕಾಣಿಸಿಕೊಂಡಿರುವುದಾಗಿ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದು ಈ ಕುರಿತು ಇಲಾಖಾ ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸಿದ್ದಾರೆ. ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆಯ ಬಳಿ ಎರಡು ತಿಂಗಳ ಹಿಂದೆ ಚಿರತೆ ಹಿಡಿಯಲು ಬೋನ್ ಅಳವಡಿಸಿ ಅದರಲ್ಲಿ ಕೋಳಿ ಇಡಲಾಗಿತ್ತು.
ಕುಡ್ಲ ತುಳುಕೂಟದ ಅಧ್ಯಕ್ಷ ದಾಮೋದರ ನಿಸರ್ಗ ವಿಧಿವಶ
ಕಳೆದ ಮಧ್ಯರಾತ್ರಿ ಚಿರತೆ ಕೋಳಿ ಹಿಡಿಯಲು ಬೋನಿನೊಳಗೆ ನುಗ್ಗಿ ಸೆರೆಯಾಗಿದೆ. ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಚಿರತೆ ಸೆರೆಯಾಗಿದ್ದು ಸ್ಥಳೀಯ ಆತಂಕ ಕೊಂಚ ಮಟ್ಟಿಗೆ ದೂರವಾಗಿದೆ.
BELTHANGADY
ಅಳದಂಗಡಿ ಗ್ರಾ.ಪಂ. ಮಾಜಿ ಸದಸ್ಯೆ ಕಮಲಮ್ಮ ನಿಧನ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಅಳದಂಗಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ, ಕೃಷಿ ತಜ್ಞರೂ ಆಗಿದ್ದ ಅಳದಂಗಡಿ ನಿವಾಸಿ ಕಮಲಮ್ಮ ಅವರು ಆಗಸ್ಟ್ 30ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 80 ವರ್ಷವಾಗಿತ್ತು. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಮಾವು ಮತ್ತು ಗುಲಾಬಿ ಕಸಿ ಕಟ್ಟುವಿಕೆಗೆ ಹೆಸರಾಗಿದ್ದ ಅವರು, ಮಾವಿನ ತೋಟ ಅಭಿವೃದ್ಧಿ ಪಡಿಸಿದ್ದರು. ವೈವಿಧ್ಯಮಯ ಕೃಷಿ ಸಾಧನೆಗಾಗಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು. ಹಲವು ವರ್ಷ ಅಂಗನವಾಡಿ ಸಹಾಯಕಿಯಾಗಿ ಕೂಡಾ ಕೆಲಸ ಮಾಡಿದ್ದರು. ಅವರು ಉದಯವಾಣಿ ಮಣಿಪಾಲ ಆವೃತ್ತಿಯ ಸ್ಥಾನೀಯ ಸಂಪಾದಕ ಕೃಷ್ಣ ಭಟ್ ಅವರ ತಾಯಿ ಆಗಿದ್ದರು.
BANTWAL
ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲಿ?
ಮಂಗಳೂರು : ರಾಜ್ಯದ ಹಲವು ಭಾಗಗಳು ಭಾರಿ ಮಳೆಯಿಂದ ಹೈರಾಣಾಗಿದ್ದವು. ಆ ಬಳಿಕ ಕೊಂಚ ವಿರಾಮ ಪಡೆದಿದ್ದ ಮಳೆ ಮತ್ತೆ ಆರ್ಭಟಿಸುವ ಲಕ್ಷಣ ಕಾಣುತ್ತಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಎಲ್ಲೆಲ್ಲಿ ಮಳೆ ?
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ರಭಸವಾಗಿ ಗಾಳಿ ಬೀಸಲಿದೆ. ಜೊತೆಗೆ ಭಾರೀ ಮಳೆ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ.
ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ ನೀಡಿದೆ.
- LATEST NEWS4 days ago
ಪೇಟಿಎಂ ಮೂಲಕ ಲಕ್ಷ ಹಣ ವರ್ಗಾವಣೆ..! ಆರೋಪಿಯ ಬಂಧನ
- FILM7 days ago
ಬಳ್ಳಾರಿ ಜೈಲಿಗೆ ಮೂರು ಬ್ಯಾಗ್ನೊಂದಿಗೆ ಬಂದ ದರ್ಶನ್ ಪತ್ನಿ..! ಒಂದು ವಸ್ತುವನ್ನು ಹಿಂದೆ ಕಳುಹಿಸಿದ ಪೊಲೀಸರು
- DAKSHINA KANNADA7 days ago
ಶಾಪಿಂಗ್ ವೇಳೆ ಕುಸಿದು ಬಿದ್ದ ಡಿ.ವಿ ಪತ್ನಿ..! ಆಸ್ಪತ್ರೆ ದಾಖಲು
- LATEST NEWS7 days ago
ಕಂಟೈನರ್ ನಿಂದ 11 ಕೋಟಿ ರೂ. ಮೌಲ್ಯದ 1,500 ಐಫೋನ್ ಗಳ ಲೂಟಿ