Connect with us

    DAKSHINA KANNADA

    ಬೋಳಿಯಾರ್‌ ಚೂರಿ ಇರಿತ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

    Published

    on

    ಉಳ್ಳಾಲ: ಬೋಳಿಯಾರ್‌ ಬಿಜೆಪಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಚೂರಿ ಇರಿತಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಘಟನೆಗೆ ಸಂಬಂಧಿಸಿ ಬಂಧಿತರಾದವರ ಸಂಖ್ಯೆ ಆರಕ್ಕೆ ಏರಿದೆ.

    Read More..;  ಬಜರಂಗದಳ ಕಾರ್ಯಕರ್ತನಿಗೆ ಮಾರಣಾಂತಿಕ ಹ*ಲ್ಲೆ..!

    ಬೋಳಿಯಾರಿನ ಬಶೀರ್‌ ಬಂಧಿತನಾದ 6 ನೇ ಆರೋಪಿಯಾಗಿದ್ದಾನೆ. ಬಿಜೆಪಿ ಕಾರ್ಯಕರ್ತರಾದ ಹರೀಶ್‌ ಧರ್ಮನಗರ ಮತ್ತು ನಂದನ್‌ಗೆ ಶನಿವಾರ(ಜೂ.9) ರಾತ್ರಿ ಚೂರಿಯಿಂದ ಇರಿಯಲಾಗಿತ್ತು. ಈ ಬಗ್ಗೆ ಆರೋಪಿಗಳಾದ  ಬೋಳಿಯಾರ್‌ನ ಶಾಕೀರ್‌(28), ಅಬ್ದುಲ್‌ ರಜಾಕ್‌(40), ಅಬೂಬಕ್ಕರ್‌ ಸಿದ್ದಿಕ್‌(35), ಸವಾದ್‌(18) ಮತ್ತು ಹಫೀಝ್(24) ಅವರನ್ನು ಬಂಧಿಸಲಾಗಿತ್ತು. ಇದೀಗ ಬಶೀರ್‌ನನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದಾರೆ. ಎಲ್ಲಾ ಆರು ಜನ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

     

     

     

     

     

     

     

     

    DAKSHINA KANNADA

    ದತ್ತಿ ಇಲಾಖೆ ದೇವಸ್ಥಾನದಲ್ಲಿ ನಂದಿನಿ ತುಪ್ಪ ಬಳಕೆಗೆ ಸೂಚನೆ..!

    Published

    on

    ಮಂಗಳೂರು : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಕರ್ನಾಟಕದ ದತ್ತಿ ಇಲಾಖೆ ಫುಲ್ ಅರ್ಲರ್ಟ್‌ ಆಗಿದೆ. ಕರ್ನಾಟಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಕೆ ಮಾಡಬೇಕು ಎಂದು ಆದೇಶ ಹೊರಡಿಸಲಾಗಿದೆ.

    ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಅವರು ಈ ಬಗ್ಗೆ ಇಲಾಖೆಗೆ ಸೂಚನೆ ನೀಡಿದ್ದಾರೆ. ಈ ಕುರಿತು ಸುತ್ತೋಲೆ ಹೊರಡಿಸಿರುವ ದತ್ತಿ ಇಲಾಖೆ ದೇವಸ್ಥಾನದ ಸೇವೆಗಳಿಗೆ , ದೀಪಗಳಿಗೆ, ಪ್ರಸಾದ ತಯಾರಿಗೆ ಮತ್ತು ಅನ್ನಛತ್ರದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚಿಸಿದೆ.

    ತಿರುಪತಿ ದೇವಾಲಯದ ಲಡ್ಡು ತಯಾರಿಗೆ ಕರ್ನಾಟಕದ ನಂದಿನಿ ತುಪ್ಪವೇ ರವಾನೆ ಆಗುತ್ತಿದೆ. ಆದ್ರೆ ಜಗನ್‌ ರೆಡ್ಡಿಯ ಸರ್ಕಾರದ ನಾಲ್ಕು ವರ್ಷ ನಂದಿನಿ ತುಪ್ಪ ತಿರುಪತಿಗೆ ಪೂರೈಕೆ ಮಾಡಿರಲಿಲ್ಲ. ಹೀಗಾಗಿ ತಿರುಪತಿ ಲಡ್ಡುವಿಗೆ ಬಳಕೆ ಮಾಡಿದ ತುಪ್ಪಕ್ಕೂ ನಂದಿನಿ ತುಪ್ಪಕ್ಕೂ ಯಾವುದೇ ಸಂಭಂಧ ಇಲ್ಲ ಎಂದು ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ್‌ ಹೇಳಿದ್ದಾರೆ.

    Continue Reading

    BELTHANGADY

    ಬೆಳ್ತಂಗಡಿ : ನೇಣು ಬಿಗಿದು ದಂಪತಿ ಆತ್ಮ*ಹತ್ಯೆ

    Published

    on

    ಬೆಳ್ತಂಗಡಿ : ದಂಪತಿ ನೇ*ಣು ಬಿಗಿದು ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ಉರ್ದುಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ (63) ಹಾಗೂ ಬೇಬಿ (46) ಆತ್ಮ*ಹತ್ಯೆ ಮಾಡಿಕೊಂಡವರು.


    ಮನೆ ಸಮೀಪ ಇರುವ ಕಾಡಿನಲ್ಲಿ ದಂಪತಿ ನೇ*ಣಿಗೆ ಶರಣಾಗಿದ್ದಾರೆ. ಕಳೆದ 5 ವರ್ಷಗಳಿಂದ ನೋಣಯ್ಯ ಪೂಜಾರಿ ತಲೆ ನೋವಿನಿಂದ ಬಳಲುತ್ತಿದ್ದು, ಬೇಬಿ ಅವರಿಗೆ ಮಕ್ಕಳಿಲ್ಲದ ಕೊರಗು ಇತ್ತು ಎಂದು ತಿಳಿದು ಬಂದಿದೆ.
    ನೋಣಯ್ಯ ಪೂಜಾರಿಯವರಿಗೆ ಇದು ಎರಡನೇ ವಿವಾಹವಾಗಿದ್ದು , ಮೊದಲ ಪತ್ನಿ 10 ವರ್ಷದ ಹಿಂದೆಯೇ ಸಾವನ್ನಪ್ಪಿದ್ದು, ಮೊದಲ ಪತ್ನಿಗೆ 5 ಜನ ಗಂಡು ಮಕ್ಕಳು ಇದ್ದರು ಎಂದು ತಿಳಿದುಬಂದಿದೆ. ಆತ್ಮ*ಹತ್ಯೆ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    DAKSHINA KANNADA

    ಉದ್ಯಮಿ ಮನೆ ದರೋಡೆ ಪ್ರಕರಣ; ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರ ಬಂಧನ

    Published

    on

    ಮಂಗಳೂರು : ಉದ್ಯಮಿ ಐಕಳ ಹರೀಶ್‌ ಶೆಟ್ಟಿ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿದ್ದಕಟ್ಟೆ ನಿವಾಸಿ ಹುಸೈನಬ್ಬ ಯಾನೆ ಸುಹೈಲ್ , ಕೊಲ್ನಾಡು ನಿವಾಸಿ ಝುಬೈರ್‌ ಹಾಗೂ ಕಾಸರಗೋಡು ನಿವಾಸಿ ಕಲಾಮ್‌  ಬಂಧಿತರು.  ಈ ಪೈಕಿ ಸುಹೈಲ್ ಹಾಗೂ ಝುಬೈರ್‌ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಕಲಾಮ್‌ ಆರೋಪಿಗಳು ತಲೆ ಮರೆಸಿಕೊಳ್ಳಲು ನಕಲಿ ಪಾಸ್‌ ಪೋರ್ಟ್‌ ಮಾಡಿಸಿಕೊಟ್ಟ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

    ಬಂಧಿತರಿಂದ ನಕಲಿ ಪಾಸ್‌ ಪೋರ್ಟ್‌, ಮೊಬೈಲ್‌ ಫೋನ್‌, ಪಿಸ್ತೂಲು, ಸಜೀವ ಮದ್ದುಗುಂಡುಗಳು, ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು 2023ರಲ್ಲಿ ಉದ್ಯಮಿ ಹರೀಶ್‌ ಶೆಟ್ಟಿ ಐಕಳ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ಕಾಸರಗೋಡು ನಿವಾಸಿ ಕಲಾಮ್‌ನ ಸಹಕಾರದಲ್ಲಿ ನಕಲಿ ಪಾಸ್‌ ಪೋರ್ಟ್‌ ಮಾಡಿಸಿಕೊಂಡು  ವಿದೇಶಕ್ಕೆ ತೆರಳಿ ಅಲ್ಲಿ ತಲೆ ಮರೆಸಿಕೊಂಡಿದ್ದರು. ಇತ್ತೀಚೆಗೆ ಊರಿಗೆ ಬಂದಿದ್ದ ಆರೋಪಿಗಳು ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಲ್ನಾಡು ಕೋರ್ದಬ್ಬು ದೈವಸ್ಥಾನ ಬಳಿ ಮುಲ್ಕಿ ಸುಂದರರಾಮ ಶೆಟ್ಟಿ ಸಭಾಭವನದ ಬಳಿ ಇರುವುದನ್ನು ಖಚಿತ ಪಡಿಸಿಕೊಂಡ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

    ಇದನ್ನೂ ಓದಿ : ಕಿನ್ನಿಗೋಳಿ : ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿಗಳು

    ಈಗಾಗಲೇ ಮುಲ್ಕಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬುಧವಾರ ಸಿಸಿಬಿ ಪೊಲೀಸರು ಮತ್ತಿಬ್ಬರನ್ನು ಬಂದಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 5ಕ್ಕೇರಿದೆ.

    Continue Reading

    LATEST NEWS

    Trending