Connect with us

DAKSHINA KANNADA

ಪುತ್ರನ ಸಿನಿಮಾದ ಪ್ರಮೋಶನ್‌ಗೆ ಖುದ್ದು ಫೀಲ್ಡಿಗಿಳಿದ ಬಾಲಿವುಡ್ ಐರನ್ ಮ್ಯಾನ್ ತುಳುವ ಸುನೀಲ್ ಶೆಟ್ಟಿ..!

Published

on

ಮಂಗಳೂರು : ಬಾಲಿವುಡ್‌ ನ ಐರನ್ ಮ್ಯಾನ್ ತುಳುವ ಸುನಿಲ್ ಶೆಟ್ಟಿ ಪುತ್ರ ಅಹನ್ ಶೆಟ್ಟಿ ಬಾಲಿವುಡ್​​​ನಲ್ಲಿ ಅದೃಷ್ಟ ಪರೀಕ್ಷೆ ಮಾಡಲು ಹೊರಟಿದ್ದಾರೆ. ಅಹನ್ ಶೆಟ್ಟಿ ತಮ್ಮ ಚೊಚ್ಚಲ ಸಿನಿಮಾ ‘ತಡಪ್’ ಮೂಲಕ ಬಾಲಿವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ.

ಈ ಸಿನಿಮಾ ಇದೇ ಡಿಸೆಂಬರ್ 3ರಂದು ತೆರೆಗೆ ಬರಲಿದೆ.

ತಮ್ಮ ಪುತ್ರನ ಸಿನಿಮಾ ಪ್ರಮೋಷನ್​ಗೆ ನಟ ಸುನಿಲ್ ಶೆಟ್ಟಿ ಖುದ್ದಾಗಿ ಮಂಗಳೂರಿಗೆ ಆಗಮಿಸಿ, ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಜೊತೆಗೆ ಅಹನ್ ಶೆಟ್ಟಿಯೂ ತಮ್ಮ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ

.30 ವರ್ಷಗಳ ಹಿಂದೆ ನನ್ನನ್ನು ಬಾಲಿವುಡ್‌ಗೆ ಪರಿಚಯಿಸಿರುವ ಸಾಜಿದ್ ನಾಡಿಯಾಡ್ ವಾಲ ಅವರೇ ಇದೀಗ ನನ್ನ ಪುತ್ರ ಅಹನ್ ಶೆಟ್ಟಿಯ ‘ತಡಪ್’ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ.‌

ನನಗೂ ಮೊದಲ ಚೆಕ್ ಕೊಟ್ಟ ಸಾಜಿದ್ ಅವರು ಅಹನ್ ಶೆಟ್ಟಿಯನ್ನು ಬಾಲಿವುಡ್‌ಗೆ ಪರಿಚಯಿಸಿದ್ದಾರೆ. ಈ ಮೂಲಕ ಓರ್ವ ನಿರ್ಮಾಪಕ ಎರಡು ತಲೆಮಾರನ್ನು ಬಾಲಿವುಡ್‌ಗೆ ಪರಿಚಯ ಮಾಡಿ ಇತಿಹಾಸ ಸೃಷ್ಟಿಸಿದ್ದಾರೆ‌ ಎಂದರು.

‘ತಡಪ್’ ಲವ್ ಸ್ಟೋರಿಯಿರುವ ಗಟ್ಟಿ ಕಥಾನಕದ ಸಿನಿಮಾ. ಡಿಸೆಂಬರ್ 3ರಂದು ಭಾರತ ಮಾತ್ರವಲ್ಲ ವಿಶ್ವಾದ್ಯಂತ ಸಿನಿಮಾ ರಿಲೀಸ್ ಆಗಲಿದೆ. ಸಿನಿಮಾ ಕೆಲಸ ಸಾಕಷ್ಟು ಹಿಂದೆಯೇ ಪೂರ್ಣಗೊಂಡಿದ್ದರೂ, ಕೊರೊನಾ ಕಾರಣದಿಂದ ಒಂದು ವರ್ಷದ ಬಳಿಕ ಇದೀಗ ರಿಲೀಸ್ ಮಾಡುತ್ತಿದ್ದೇವೆ.ಸಿನಿಮಾ ರಿಲೀಸ್ ಮಾಡಲು ಏಕಾಏಕಿ ಒಂದು ಒಳ್ಳೆಯ ಡೇಟ್ ಸಿಕ್ಕಿದ್ದು,

ಪ್ರೊಮೋಷನ್‌ಗೆ ಒಂದು ತಿಂಗಳು ಮಾತ್ರ ಸಮಯ ದೊರಕಿದೆ. ನಾನು ಮುಂಬೈಯಲ್ಲಿಯೇ ನೆಲೆಸಿದ್ದರೂ ಯಾವತ್ತೂ ಕರಾವಳಿಯ ಸಂಪರ್ಕ ಕೊಂಡಿಯನ್ನು ಕಳಚಿಕೊಂಡಿಲ್ಲ.ವರ್ಷ ವರ್ಷವೂ ಕರಾವಳಿಗೆ ಬಂದು ಇಲ್ಲಿನ ದೇವಸ್ಥಾನಗಳಿಗೆ ಭೇಟಿ ಕೊಡುತ್ತಿರುತ್ತೇನೆ.

ಅಲ್ಲದೆ ನಮ್ಮ ಕುಟುಂಬದ ದೈವಾರಾಧನೆ, ನಾಗಾರಾಧನೆಗಳಲ್ಲಿ ಭಾಗವಹಿಸುತ್ತಿರುತ್ತೇನೆ.

ಇದೀಗ ಅಹನ್ ಶೆಟ್ಟಿ ತಾನೂ ಈ ಸಲ ಊರಿಗೆ ಬರುತ್ತೇನೆಂದು ಹೇಳಿದ್ದರಿಂದ ಒತ್ತಡದ ನಡುವೆ ಇಂದು ಮಂಗಳೂರಿಗೆ ಆಗಮಿಸಿದ್ದೇವೆ.ಇಂದು ಸಿನಿಮಾದ ಫಸ್ಟ್ ಪ್ರಿಂಟ್‌ನ ಪರಿಶೀಲನೆ ಇರುವುದರಿಂದ ಇಂದು ಮತ್ತೆ ಬಾಂಬೆಗೆ ಹೊರಡುತ್ತೇವೆ ಎಂದು ಹೇಳಿದರು.

ಅಹನ್ ಶೆಟ್ಟಿಯ ಮನದ ಬಯಕೆಯಂತೆ ನಗರದ ಮುಲ್ಕಿ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಿಯ ಹಾಗೂ ಶಿಮಂತೂರು ಶ್ರೀ ಆದಿ ಜನಾರ್ದನ ದೇವರ ದರ್ಶನ ಮಾಡಿ ಬಂದಿದ್ದೇವೆ. ನನಗೆ ಬಪ್ಪನಾಡು ಶ್ರೀದುರ್ಗೆಯ ಅನುಗ್ರಹ ಸದಾ ಇತ್ತು.

ಎಂತಹ ಕಷ್ಟದ ಸಂದರ್ಭದಲ್ಲಿಯೂ ಆಕೆಯ ಅಭಯ ಯಾವತ್ತೂ ನನ್ನ ಮೇಲೆ ಇದೆ. ನನ್ನ ತಂದೆ ಅನಾರೋಗ್ಯದಿಂದ ಬಳಲುತ್ತಿದ್ದಾಗ ಐದಾರು ವರ್ಷಗಳ ಕಾಲ ಸಿನಿಮಾದಿಂದ ದೂರ ಇದ್ದೆ.

ಇದೀಗ ಸಿನಿಮಾದತ್ತ ಮತ್ತೆ ಮುಖ ಮಾಡಿದ್ದೇನೆ.ನಾನು ಆ್ಯಕ್ಷನ್ ಹೀರೋ ಆದರೂ ತುಳುನಾಡಿನವರ ಪ್ರೋತ್ಸಾಹ ನನ್ನ ಮೊದಲ ಸಿನಿಮಾದಿಂದಲೇ ದೊರಕಿದೆ. ಇದೇ ಪ್ರೋತ್ಸಾಹ ಅಹನ್ ಶೆಟ್ಟಿ ಮೇಲೆಯೂ ಇರಲಿ‌ ಎಂದು‌ ಆಶಿಸುತ್ತೇನೆ ಎಂದು ಸುನಿಲ್ ‌ಶೆಟ್ಟಿ ಹೇಳಿದರು.

ಅಹನ್ ಶೆಟ್ಟಿ ಮಾತನಾಡಿ, ನನ್ನ ಪಾತ್ರ ಉತ್ತಮವಾಗಿ ಮೂಡಿ ಬಂದಿದೆ. ನಿಜವಾಗಿಯೂ ಇಂತಹ ಪಾತ್ರವನ್ನು ನೀಡಿರುವ ನಿರ್ಮಾಪಕ ಸಾಜಿದ್, ನಿರ್ದೇಶಕ ಮಿಲನ್ ಲುಥ್ರಿಯಾ ಹಾಗೂ ಸಿನಿಮಾ ನಾಯಕಿ ತಾರಾ ಸುತಾರಿಯಾ, ಸೌರಭ್ ಶುಕ್ಲಾ, ಕುಮುದ್ ಮಿಶ್ರಾ ಎಲ್ಲರೂ ಉತ್ತಮವಾಗಿ ಅಭಿನಯಿಸಿದ್ದಾರೆ ಎಂದು ಹೇಳಿದರು.

DAKSHINA KANNADA

ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

Published

on

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್‌ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್‌ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

mobile not allowed

ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

ಮತದಾನ ಮಾಡುವಾಗ ಫೋನ್‌ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್‌ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್‌ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

LATEST NEWS

Trending