Tuesday, May 30, 2023

ಹುಬ್ಬಳ್ಳಿಯಲ್ಲಿ ಬಾಲಕನನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ ದುಷ್ಕರ್ಮಿಗಳು..!

ಶಾಲೆಗೆ ರಜೆ ಘೋಷಿಸಿದ್ದ ಹಿನ್ನೆಲೆಯಲ್ಲಿ ಅಜ್ಜಿಯ ಮನೆಗೆ ಬಂದಿದ್ದ ಬಾಲಕನ ಮೇಲೆ ದುಷ್ಕರ್ಮಿಗಳು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿ: ಶಾಲೆಗೆ ರಜೆ ಘೋಷಿಸಿದ್ದ ಹಿನ್ನೆಲೆಯಲ್ಲಿ ಅಜ್ಜಿಯ ಮನೆಗೆ ಬಂದಿದ್ದ ಬಾಲಕನ ಮೇಲೆ ದುಷ್ಕರ್ಮಿಗಳು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ನದೀಂ ಹಸನಸಾಬ್ ಮೃತಪಟ್ಟ ಬಾಲಕನಾಗಿದ್ದಾನೆ.

ನದೀಂ ಬೆಂಡಿಗೇರಿ ಪೊಲೀಸ್ ಠಾಣೆ ಸಮೀಪದ ದೊಡ್ಡನೆ ಚಾಳದಲ್ಲಿರುವ ಅಜ್ಜಿಯ ಮನೆಗೆ ಬಂದಿದ್ದ ಬಾಲಕನನ್ನು ದುಡ್ಡು ಕೊಡುತ್ತೇವೆ ಎಂದು ಹೇಳಿ ಕರೆದುಕೊಂಡು ಹೋದ ದುಷ್ಕರ್ಮಿಗಳು ಹತ್ಯೆ ನಡಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಬಾಲಕ ನದೀಂ ಗುರುವಾರದಿಂದ ನಾಪತ್ತೆಯಾಗಿದ್ದ. ಈ ಬಗ್ಗೆ ಪೋಷಕರು ಬೆಂಡಿಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇಂದು ಮಧ್ಯಾಹ್ನ ಮುಳ್ಳಿನ ಕಂಟಿಯಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಬೆಂಡಿಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಡಿಸಿಪಿ ರಾಜೀವ್ ಎಂ ಭೇಟಿ ನೀಡಿ ಹತ್ಯೆ ನಡೆಸಿದ ಆರೋಪಿಗಳನ್ನು ಶೀಘ್ರ ಬಂಧಿಸುವುದಾಗಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

Hot Topics