FILM
‘ಆದಿಪುರುಷ’ ನಿಗೆ ಆರಂಭದಲ್ಲೇ ಕಂಟಕ : ರಾಮಾಯಣಕ್ಕೆ ಅವಮಾನ ಮಾಡಿದಕ್ಕೆ ಬಾಹುಬಲಿ ನಟ ಪ್ರಭಾಸ್ ಅಂಡ್ ಟೀಮ್ ವಿರುದ್ದ ಗೃಹ ಸಚಿವರು ಗರಂ..!
ಹೈದ್ರಾಬಾದ್ : ಬಾಹುಬಲಿ ಫೇಮ್ ನ ಪ್ರಭಾಸ್ ನಟಿಸಿರುವ ‘ಆದಿಪುರುಷ್’ ಸಿನಿಮಾದಲ್ಲಿ ರಾಮಾಯಣಕ್ಕೆ ಅಪಮಾನ ಮಾಡಿದ್ದಾರೆಂದು ಹಿಂದೂ ಪರ ಸಂಘಟನೆಗಳು ಆರೋಪಿಸಿದ್ದು ಸಿನಿಮಾವನ್ನು ಬಹಿಷ್ಕರಿಸಲು ಕರೆ ನೀಡಿವೆ .
ರಾಮಾಯಣದ ಪಾತ್ರಗಳನ್ನು ತಿರುಚಿ ತಮಗಿಷ್ಟ ಬಂದಂತೆ ಪ್ರೆಸೆಂಟ್ ಮಾಡಿರುವುದಕ್ಕಾಗಿ ಭಾರೀ ಆಕ್ರೋಶ ವ್ಯಕ್ಯವಾಗುತ್ತಿದೆ. ಟೀಸರ್ ಕೂಡ ಕಳಪೆ ಮಟ್ಟದ್ದಾಗಿದೆ ಎಂದು ಟ್ರೋಲಿಗರು ಸಿನಿಮಾದ ಬೆನ್ನು ಬಿದ್ದಿದ್ದಾರೆ.
ಈ ನಡುವೆ ಮಧ್ಯ ಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಚಿತ್ರತಂಡಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.
ಆದಿಪುರುಷ್ ಸಿನಿಮಾದಲ್ಲಿ ಹಿಂದೂಗಳ ಭಾವನೆ ಧಕ್ಕೆ ಮಾಡಲಾಗಿದೆ ಎಂದು ಗೃಹ ಸಚಿವರು ಆರೋಪಿಸಿದ್ದು, ಈಗಾಗಲೇ ಬಿಡುಗಡೆಗೊಂಡ ಟೀಸರ್ ನಲ್ಲಿ ಹನುಮಂತ ಪಾತ್ರಧಾರಿಗೆ ಲೆದರ್ ಬಟ್ಟೆಗಳನ್ನು ತೊಡಿಸಲಾಗಿದೆ.
ಹನುಮನ ಸೈನಕ್ಕೂ ಲೆದರ್ ಬಟ್ಟೆ ಇದೆ. ಹೀಗಾಗಿ ಹನುಮ ದೇವರಿಗೆ ಅಪಮಾನ ಮಾಡಲಾಗಿದೆ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ (Narottam Mishra) ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಅದನ್ನು ಸರಿ ಮಾಡದೇ ಇದ್ದರೆ ಪರಿಣಾಮ ಸರಿ ಇರಲ್ಲ ಎಂದು ಚಿತ್ರತಂಡಕ್ಕೆ ತಿಳಿಸಿದ್ದಾರೆ.
ಲೆದರ್ ಬಟ್ಟೆಗಳನ್ನು ಹಾಕಿರುವ ಕುರಿತು ನಿರ್ದೇಶಕರಿಗೆ ಮತ್ತು ನಿರ್ಮಾಪಕರಿಗೆ ಪತ್ರ ಬರೆಯುವುದಾಗಿ ತಿಳಿಸಿರುವ ಅವರು, ಒಂದು ವೇಳೆ ಆ ದೃಶ್ಯಗಳನ್ನು ತಗೆದು ಹಾಕದೇ ಇದ್ದರೆ ಕಾನೂನು ಕ್ರಮಕ್ಕೂ ತಾವು ಹಿಂಜರಿಯುವುದಿಲ್ಲ ಎನ್ನುತ್ತಾರೆ.
ಇಂತಹ ಅಪಮಾನಗಳನ್ನು ಯಾವತ್ತಿಗೂ ಹಿಂದೂಗಳ ಸಹಿಸುವುದಿಲ್ಲ ಎಂದೂ ಅವರು ಹೇಳಿದ್ದಾರೆ. ಸೈಫ್ ಅಲಿ ಖಾನ್ (Saif Ali Khan) ಅವರಿಗೆ ರಾವಣನ ಪಾತ್ರ ಕೊಟ್ಟಿದ್ದಕ್ಕೂ ಹಲವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಸೈಫ್ ಆಲಿ ಖಾನ್ ರಾವಣನ ರೀತಿಯಲ್ಲಿ ಕಾಣುತ್ತಿಲ್ಲ ಯಾವೋದು ಮೊಗಲ್ ರಾಜನಂತೆ ಕಾಣಿಸುತ್ತಿದ್ದು ಇದು ಹಿಂದೂಗಳಿಗೆ ಮಾಡಿದ ಅವಮಾನ ಎಂದು ಆಖ್ರೋಶ ವ್ಯಕ್ತಪಡಿಸಿ ಟ್ರೋಲ್ ಮಾಡುತ್ತಿದ್ದಾರೆ.
FILM
ಚಿತ್ರೋದ್ಯಮಕ್ಕೆ ದ್ವಾರಕೀಶ್ ಕೊಡುಗೆ ಅಪಾರ ಎಂದ ಪ್ರಧಾನಿ ಮೋದಿ
ಬೆಂಗಳೂರು : ಹೃದಯಾ*ಘಾತದಿಂದ ಮಂಗಳವಾರ(ಏ.16) ಹಿರಿಯ ನಟ ದ್ವಾರಕೀಶ್ ಇಹಲೋಕ ತ್ಯಜಿಸಿದ್ದಾರೆ. ಅವರ ಅಗಲಿಕೆಗೆ ಚಿತ್ರರಂಗವೇ ಮರುಗಿದೆ. ಅನೇಕರು ಕಂಬನಿ ಮಿಡಿದಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ದ್ವಾರಕೀಶ್ ಅವರ ನಿ*ಧನಕ್ಕೆ ಸಂತಾಪ ಸೂಚಿಸಿದ್ದಾರೆ.
ದ್ವಾರಕೀಶ್ ಕೊಡುಗೆ ಅಪಾರ :
ದ್ವಾರಕೀಶ್ ಅವರ ಬಗ್ಗೆ ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಚಲನಚಿತ್ರೋದ್ಯಮಕ್ಕೆ ದ್ವಾರಕೀಶ್ ಅವರ ಕೊಡುಗೆ ಅಪಾರವಾಗಿದೆ. ದಶಕಗಳ ಕಾಲ ಸದಾ ನೆನಪಿನಲ್ಲಿ ಉಳಿಯುವ ನಟನೆ ಹಾಗೂ ಸಿನಿಮಾಗಳನ್ನು ನೀಡಿದ್ದಾರೆ.
ಪ್ರೇಕ್ಷಕರನ್ನು ಸೆಳೆದಿಟ್ಟುಕೊಳ್ಳುವ ಹಾಗೂ ಹೊಸಬರನ್ನು ಬೆಂಬಲಿಸುವ ಮೂಲಕ ಕನ್ನಡ ಚಿತ್ರರಂಗವನ್ನು ರೂಪಿಸುವಲ್ಲಿ ಅವರ ಪಾತ್ರ ದೊಡ್ಡದು. ಅವರ ನಿಧನದಿಂದ ದುಃಖವಾಗಿದೆ. ಅವರ ಅದ್ಭುತ ಜರ್ನಿಯನ್ನು ನಾವು ಸ್ಮರಿಸುತ್ತೇವೆ. ಅವರ ಕುಟುಂಬಕ್ಕೆ ಮತ್ತು ಆತ್ಮೀಯರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ಬ್ರಹ್ಮಾವರ : ಮನೆಯಲ್ಲಿ ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ಇಹಲೋಕ ತ್ಯಜಿಸಿದ ವೃದ್ಧೆ
ಅಂತಿಮ ದರ್ಶನ ಪಡೆದ ಗಣ್ಯರು :
ದ್ವಾರಕೀಶ್ ಅವರ ಪಾರ್ಥೀ*ವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಗ್ಗೆ 11.30ರವರೆಗೂ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಕಿಚ್ಚ ಸುದೀಪ್, ಕೆ.ಮಂಜು, ಮಾಳವಿಕಾ ಅವಿನಾಶ್, ಸುಧಾರಾಣಿ, ರಾಘವೇಂದ್ರ ರಾಜ್ ಕುಮಾರ್, ಶ್ರೀ ಮುರಳಿ ಸೇರಿದಂತೆ ಚಿತ್ರರಂಗದ ಹಲವರು ಅಂತಿಮ ನಮನ ಸಲ್ಲಿಸಿದರು.
FILM
ರಿಲೀಸ್ ಗೂ ಮುನ್ನ ಭರ್ಜರಿ ಬೇಟೆಯಾಡಿದ ಪುಷ್ಪ-2..; ಎಷ್ಟು ಕೋಟಿ ಗೊತ್ತಾ..?
ಅಲ್ಲು ಅರ್ಜುನ್ ನಟನೆಯ ಪುಷ್ಪ ಮೂವಿ ಬಾಕ್ಸ್ ಅಫೀಸ್ನಲ್ಲಿ ಧೂಳೆಬ್ಬಿಸಿತ್ತು. ಇದೀಗ ಅದರ ಎರಡನೇ ಭಾಗವಾಗಿರುವ ಪುಷ್ಟ-2 ಕೂಡಾ ನಿರೀಕ್ಷೆಯನ್ನು ದಾಟಿ ಮುಂದೆ ಸಾಗ್ತಾ ಇದೆ. ಈಗಾಗಲೇ ಪುಷ್ಟಾ-2 ಸಿನೆಮಾ ರಿಲೀಸ್ ಗೂ ಮುನ್ನ ದೊಡ್ಡ ಮಟ್ಟದಲ್ಲಿ ಯಶಸ್ಸನ್ನು ಕಾಣುವ ಸೂಚನೆ ಸಿಕ್ಕಿದೆ.
ಪುಷ್ಪಾ-2 ಸಿನಿಮಾ ರಿಲೀಸ್ಗೂ ಮೊದಲೇ ಸಾಕಷ್ಟು ಹಕ್ಕುಗಳು ಮಾರಾಟ ಆಗಿದೆ ಎಂದು ವರದಿ ಆಗಿದೆ. ಹೀಗಾಗಿ ಸಿನಿಮಾ ರಿಲೀಸ್ಗೂ ಮೊದಲೇ 1000 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆಯಂತೆ. ಇದರಿಂದ ನಿರ್ಮಾಪಕರು ಭರ್ಜರಿ ಲಾಭ ಪಡೆದುಕೊಂಡಿದ್ದು, ಈ ಚಿತ್ರದ ಮೂರನೇ ಪಾರ್ಟ್ ಕೂಡಾ ಬರಲಿದೆ ಎಂದು ಈಗಾಗಲೆ ಸುದ್ದಿಯಾಗಿದೆ.
ಈ ಹಿಂದೆ ಬಾಕ್ಸ್ ಆಫೀಸ್ನಲ್ಲಿ ಸಿನೆಮಾ 100 ಕೋಟಿ ಲಾಭವನ್ನು ಗಳಿಸಿದ್ರೆ ಅದು ದೊಡ್ಡ ವಿಷಯ. ವರ್ಷಗಳು ಕಳೆದಂತೆ ನಿರ್ಮಾಣ ವೆಚ್ಚ ಹೆಚ್ಚಾಗುತ್ತಿದೆ. ಸಿನೆಮಾ ಟಿಕಿಟ್ ಬೆಲೆ ಕೂಡಾ ಏರುತ್ತಿದೆ. ಹೀಗಾಗಿ ಸಿನೆಮಾದ ಗೆಲುವನ್ನು 500 ಕೋಟಿಯಿಂದ 1000 ಕೋಟಿ ತನಕ ಬೆಂಚ್ ಮಾರ್ಕ್ ನಿಂದ ಅಳೆಯಲಾಗಿದೆ. ಈಗಾಗಲೇ ಶಾರುಖ್ ಖಾನ್ ನಟನೆಯ ಎರಡು ಸಿನಿಮಾಗಳು 2023ರಲ್ಲಿ ರಿಲೀಸ್ ಆಗಿ ಸಾವಿರ ಕೋಟಿ ರೂಪಾಯಿ ಕಲೆಕ್ಷನ್ ಮಾಡಿವೆ. ಈಗ ‘ಪುಷ್ಪ 2’ ಸಿನಿಮಾ ರಿಲೀಸ್ಗೂ ಮೊದಲೇ 1000 ಕೋಟಿ ರೂಪಾಯಿ ಬಿಸ್ನೆಸ್ ಮಾಡಿರುವುದು ವಿಶೇಷವಾಗಿದೆ.
ಮುಂದೆ ಓದಿ..; ದೀಪಿಕಾ ಪಡುಕೋಣೆ ಜೊತೆ ಒಪ್ಪಂದ ಮಾಡಿಕೊಂಡ ನಿಶಾ ಅಂಬಾನಿ..! ಏನು ಗೊತ್ತಾ?
‘ಪುಷ್ಪ 2’ ಸಿನಿಮಾದ ಬಜೆಟ್ 500 ಕೋಟಿ ರೂಪಾಯಿ ದಾಟಿದೆ ಎಂದು ಮೂಲಗಳು ತಿಳಿಸಿದೆ. ಈ ಚಿತ್ರದ ಆಂಧ್ರ ಹಾಗೂ ತೆಲಂಗಾಣ ಭಾಗದ ಹಂಚಿಕೆ ಹಕ್ಕು 200 ಕೋಟಿ ರೂಪಾಯಿಗೆ ಮಾರಾಟ ಆಗಿದೆ. ಹಿಂದಿಯಲ್ಲಿ ಈ ಸಿನಿಮಾ ದೊಡ್ಡ ಗೆಲುವು ಕಂಡಿದೆ. ಹೀಗಾಗಿ, ಆ ಭಾಗದಲ್ಲೂ ಸಿನಿಮಾದ ಹಂಚಿಕೆ ಹಕ್ಕು ದೊಡ್ಡ ಮಟ್ಟಕ್ಕೆ ಮಾರಾಟ ಆಗಿದೆ ಎನ್ನಲಾಗುತ್ತಿದೆ. ಇದರ ಜೊತೆಗೆ ಟಿವಿ ಹಕ್ಕು, ಒಟಿಟಿ ಹಕ್ಕು, ಸಾಂಗ್ ರೈಟ್ಸ್ ಕೂಡ ದೊಡ್ಡ ಮಟ್ಟಕ್ಕೆ ಮಾರಾಟ ಆಗಿದ್ದು, ಸಿನಿಮಾದ ಬಿಸ್ನೆಸ್ 1000 ಕೋಟಿ ರೂಪಾಯಿ ದಾಟಿದೆ.
ಸುಕುಮಾರ್ ಅವರು ‘ಪುಷ್ಪ 2’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರು ಚಿತ್ರದ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಆಗಸ್ಟ್ 15ರಂದು ಐದು ಭಾಷೆಗಳಲ್ಲಿ ಪುಷ್ಪಾ-2 ಸಿನಿಮಾ ರಿಲೀಸ್ ಆಗುತ್ತಿದೆ.
FILM
ದೀಪಿಕಾ ಪಡುಕೋಣೆ ಜೊತೆ ಒಪ್ಪಂದ ಮಾಡಿಕೊಂಡ ನಿಶಾ ಅಂಬಾನಿ..! ಏನು ಗೊತ್ತಾ?
ಮುಂಬೈ: ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿಯವರ ಪುತ್ರಿ ನಿಶಾ ಅಂಬಾನಿ ಇದೀಗ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ. ಹೌದು, ನಿಶಾ ಅಂಬಾನಿ ರಿಲಾಯನ್ಸ್ ರಿಟೇಲ್ ಬೇಳವಣಿಗೆಗೆ ಇವರೂ ಕೂಡಾ ಮೂಲ ಕಾರಣ. ಇತ್ತೀಚೆಗೆ ದೀಪಿಕಾ ಪಡುಕೋಣೆ ಜೊತೆ 820000 ಕೋಟಿ ರೂಪಾಯಿಗಳ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ಅಂಬಾನಿ ರಿಲಯನ್ಸ್ ರಿಟೇಲ್ ಅನ್ನು ಮುಕೇಶ್ ಅಂಬಾನಿ 2022ರ ಆಗಸ್ಟ್ ನಲ್ಲಿ ಪುತ್ರಿ ನಿಶಾ ಅಂಬಾನಿಗೆ ಹಸ್ತಾಂತರಿಸಿದ್ರು. ಬಳಿಕ ಪುತ್ರಿ ನಿಶಾ ಅಂಬಾನಿ ಕಂಪೆನಿಯ ಬೆಳವಣಿಗೆಗೆ ಎಲ್ಲಾ ರೀತಿಯ ಕಾರ್ಯತಂತ್ರಗಳನ್ನು ಉಪಯೋಗಿಸುತ್ತಿದ್ದಾರೆ.
ನಿಶಾ ಅಂಬಾನಿ ನೇತೃತ್ವದ ರಿಲಯನ್ಸ್ ರಿಟೇಲ್ ಪ್ರಸ್ತುತ 820000ಕೋಟಿ ರೂ. ಮೌಲ್ಯ ಹೊಂದಿದ್ದು ಸುಮಾರು ಟಾಪ್ ಬ್ರ್ಯಾಂಡ್ಗಳೊಂದಿಗೆ ಪಾಲುದಾರಿಕೆ ಮಾಡಿಕೊಂಡಿದ್ದಾರೆ. ನಿಶಾ ಮಾಲಕತ್ವದ ರಿಲಯನ್ಸ್ ರಿಟೇಲ್ ನ ತಿರಾ, ದೀಪಿಕಾ ಪಡುಕೋಣೆಯ ಬ್ರ್ಯಾಂಡ್ ಬ್ಯೂಟಿ 82° E ನಿಂದ ಐಟಮ್ಗಳನ್ನು ಮಾರಾಟ ಮಾಡಲು ಮುಂದಾಗಿದ್ದಾರೆ. ಈ ಇಟ್ಟಿನಲ್ಲಿಇನ್ನುಮುಂದೆ ದೀಪಿಕಾ ಬ್ರ್ಯಾಂಡ್ ಎಲ್ಲಾ ಮಾರುಕಟ್ಟೆಯಲ್ಲಿ ವಿಸ್ತರಿಸಲಿದೆ.
ಈ ಒಪ್ಪದಿಂದಾಗಿ ಪ್ರೀಮಿಯಂ ತ್ವಚೆ ಉತ್ಪನ್ನಗಳನ್ನು ಒದಗಿಸಲು ಅವಕಾಶವಿದೆ. ಇಶಾ ಅಂಬಾನಿ ನಿರ್ವಹಿಸುತ್ತರುವ ಅಂಬಾನಿ ಗ್ರೂಪ್ನ್ನು ಬ್ಯೂಟಿ ಪ್ರಾಡಕ್ಟ್ ತಿರಾದ ಬ್ರ್ಯಾಂಡ್ ಅಂಬಾಸಿಡರ್ ಆಗಿ ಕರೀನಾ ಕಪೂರ್, ಕಿಯಾರ ಅಡ್ವಾಣಿ, ಶಾರುಖಾನ್ ಪುತ್ರಿ ಸುಹಾನ ಖಾನ್ ಕಾಣಿಸಿಕೊಂಡಿದ್ದರು.
- LATEST NEWS6 days ago
‘ಬಿಗ್ ಬಾಸ್’ ಮತ್ತೆ ಆರಂಭ.. ಇಲ್ಲಿದೆ ಸ್ಪರ್ಧಿಗಳ ಲಿಸ್ಟ್..!
- DAKSHINA KANNADA6 days ago
ಬತ್ತೇರಿ ಹೆಸರು ‘ಗಣಪತಿ ವೆಟ್ಟಂ’… ಟೀಕೆಗೆ ಗುರಿಯಾದ ಸುರೇಂದ್ರನ್ ಹೇಳಿಕೆ.
- LATEST NEWS6 days ago
ಮತ್ತೆ ಕಿರುತೆರೆಗೆ ಕಂಬ್ಯಾಕ್ ಮಾಡಿದ ಸೂಪರ್ ಹಿಟ್ ಧಾರಾವಾಹಿ ‘ಕೃಷ್ಣ ರುಕ್ಮಿಣಿ’ ನಟಿ
- chikkamagaluru6 days ago
ರಾಜ್ಯದ ಹಲವೆಡೆ ಮಳೆಯ ಸಿಂಚನ.. ಸಿಡಿಲಿನ ಅಬ್ಬರಕ್ಕೆ ಇಬ್ಬರ ಬ*ಲಿ..!!